ದಕ್ಷಿಣ ಕನ್ನಡ ಎಸ್ಡಿಪಿಐ ಕಾರ್ಯಕರ್ತರ ಮನೆಗಳಿಗೆ NIA ದಾಳಿ ರಾಜಕೀಯ ಪ್ರೇರಿತವಾಗಿದ್ದು ಇದು ಖಂಡನೀಯ-ಎಸ್ಟಿಪಿಐ ದ.ಕ ಜಿಲ್ಲಾ ಅಧ್ಯಕ್ಷ ಜಲೀಲ್ ಕೃಷ್ಣಪುರ

ದಕ್ಷಿಣ ಕನ್ನಡ ಎಸ್ಡಿಪಿಐ ಕಾರ್ಯಕರ್ತರ ಮನೆಗಳಿಗೆ NIA ದಾಳಿ ರಾಜಕೀಯ ಪ್ರೇರಿತವಾಗಿದ್ದು ಇದು ಖಂಡನೀಯ ಎಂದು ಎಸ್ಟಿಪಿಐ ದ.ಕ ಜಿಲ್ಲಾ ಅಧ್ಯಕ್ಷ ಜಲೀಲ್ ಕೃಷ್ಣಪುರ ತಿಳಿಸಿದರು . ಪಕ್ಷದ ಜಿಲ್ಲಾ ಕಛೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಅವರು, ಎಸ್ಡಿಪಿಐ‌ ಕಾರ್ಯಕರ್ತರನ್ನು ಉದ್ದೇಶಪೂರ್ವಕವಾಗಿ ಸಿಲುಕಿಸುವ ಪ್ರಯತ್ನಗಳು ನಡೆಯುತ್ತಿದೆ . ನಮ್ಮ ಕಾರ್ಯಕರ್ತರನ್ನು ವಿಚಲಿತ ಮಾಡಲು ಪ್ರಯತ್ನಿಸಿದರೆ ಕಾನೂನು ಹೋರಾಟ ಮತ್ತು ಬೀದಿಗೆ ಇಳಿದು ಹೋರಾಟ ಮಾಡುತ್ತೇವೆ ಎಂದು ಎಚ್ಚರಿಕೆಯನ್ನು ನೀಡಿದರು. ಕೇಂದ್ರ ಸರಕಾರ ಕೆಲವು ಆಡಳಿತ ಸಂಸ್ಥೆಯನ್ನು ತನ್ನ…

Read More

ಬಂಟ್ವಾಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಆರ್ ಎ ಎಫ್ ಪಡೆಯಿಂದ ಪಥ ಸಂಚಲನ

ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಬಂಟ್ವಾಳ ನಗರ‌ ಪೊಲೀಸ್ ಠಾಣೆ ವ್ಯಾಪ್ತಿಯ ತುಂಬೆ ಜಂಕ್ಷನ್, ಪಾಣೆಮಂಗಳೂರು, ಶಾಂತಿಯಂಗಡಿ, ಬಿ. ಸಿ ರೋಡ್ & ಇತರೆ ಪ್ರಮುಖ ಪ್ರದೇಶಗಳಲ್ಲಿ ಹಾಗೂ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಪರಂಗಿಪೇಟೆ, ಕಂಪನಮಜಲು ಹಾಗೂ ಇತರೆ ಪ್ರಮುಖ ಸ್ಥಳಗಳಲ್ಲಿ ಆರ್. ಎ. ಎಫ್ ಪಡೆಯಿಂದ ಮತ್ತು ಸ್ಥಳೀಯ ಠಾಣಾ ಅಧಿಕಾರಿ/ಸಿಬ್ಬಂದಿಗಳಿಂದ ಪಥಸಂಚಲನ ನಡೆಸಲಾಯಿತು.

Read More

ಜೆಪ್ಪುವಿನ ಪಾಲೇಮಾರ್ ಗಾರ್ಡನ್ ನಲ್ಲಿ ಆಟಿದ ಐಸಿರ ಕಾರ್ಯಕ್ರಮ

ಬಿಜೆಪಿ ಮಂಗಳೂರು ನಗರ ದಕ್ಷಿಣ ವತಿಯಿಂದ ನಗರದ ಜೆಪ್ಪುವಿನ ಪಾಲೇಮಾರ್ ಗಾರ್ಡನ್ ನಲ್ಲಿ ಆಟಿದ ಐಸಿರ ಕಾರ್ಯಕ್ರಮವು ನಡೆಯಿತು. ಉಪಸ್ಥಿತರಿದ್ದ ಹಲವು ಗಣ್ಯರು ತುಳುನಾಡಿನ ಹಿಂದಿನ ಶೈಲಿಯಂತೆ ಕಡೆಯುವ ಕಲ್ಲಿನಲ್ಲಿ ಮಸಾಲೆ ಅರೆಯುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ನಂತರ ಮಾತನಾಡಿದ ಶಾಸಕ ವೇದವ್ಯಾಸ ಕಾಮತ್ ರವರು, ಜಾನಪದ ವೈಶಿಷ್ಟ್ಯಗಳಿಗೆ ಹೆಸರುವಾಸಿಯಾಗಿರುವ ತುಳುನಾಡಿನಲ್ಲಿ ಜುಲೈ-ಆಗಸ್ಟ್ ನಲ್ಲಿ ಆಟಿ ಕಳಂಜದ್ದೇ ಸುದ್ದಿ. ಮನೆ ಮನೆಯ ರೋಗ-ರುಜಿನಗಳನ್ನು ದೂರ ಮಾಡಲೆಂದೇ ಆಟಿ ಕಳಂಜ ಬರುವನೆಂಬ ನಮ್ಮ ಹಿರಿಯರ ನಂಬಿಕೆ ಯಾವುದೇ…

Read More

ಅಕ್ರಮವಾಗಿ ಕೆಂಪು ಕಲ್ಲು ಸಾಗಾಟ-ಲಾರಿ ವಶಕ್ಕೆ

ಮಂಗಳೂರು ದಕ್ಷಿಣ ಕನ್ನಡ: ಅಕ್ರಮವಾಗಿ ಕೆಂಪು ಕಲ್ಲನ್ನು ಸಾಗಾಟ ಮಾಡ್ತಿದ್ದ ಲಾರಿಯನ್ನು ವಶಪಡಿಸಿಕೊಂಡ ಘಟನೆ ಸುಳ್ಯ ಆಲೆಟ್ಟಿ ಗ್ರಾಮದ ನಾರ್ಕೊಡು ಎಂಬಲ್ಲಿ ನಿನ್ನೆ ನಡೆದಿದೆ. ಕಾನೂನು ಬಾಹಿರವಾಗಿ ಯಾವುದೇ ಪರವಾನಿಗೆ ಇಲ್ಲದೇ ಕೆಂಪು ಕಲ್ಲನ್ನು ಎಲ್ಲಿಂದಲೋ ಕದ್ದು ಸಾಗಾಟ ಮಾಡುತ್ತಿದ್ದಾಗ ಸುಳ್ಯ ಪೊಲೀಸರು ಪತ್ತೆ ಮಾಡಿ ಲಾರಿ ಹಾಗೂ ಚಾಲಕರನ್ನು ವಶಕ್ಕೆ ಪಡೆದು ಸುಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.

Read More

ಧಾರ್ಮಿಕ ಕೇಂದ್ರದ ಕಾಣಿಕೆ ಹುಂಡಿಯನ್ನು ಒಡೆದು ಹಣ ದೋಚಿದ ಪ್ರಕರಣ

ಮಂಗಳೂರು ದಕ್ಷಿಣ ಕನ್ನಡ: ಧಾರ್ಮಿಕ ಕೇಂದ್ರದ ಕಾಣಿಕೆ ಹುಂಡಿಯನ್ನು ಒಡೆದು ಹಣ ದೋಚಿದ ಪ್ರಕರಣಕ್ಕೆ ಸಂಬಂಧಿಸಿ ಮೂವರು ಯುವಕರನ್ನು ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ಪೊಲೀಸರು ಬಂಧಿಸಿದ್ದಾರೆ‌. ಬಂಧಿತರನ್ನು ತ್ವಾಹಿದ್‌ (19), ಉಮ್ಮರ್‌ ಫಾರೂಕ್‌ (18), ನಬೀಲ್‌( 18) ಎಂದು ಗುರುತಿಸಲಾಗಿದೆ. ಕನ್ಯಾನ ಗ್ರಾಮದ ದೇಲಂತಬೆಟ್ಟು ನಿವಾಸಿ ಡಿ.ನಾರಾಯಣ ರಾವ್ ನೀಡಿದ ದೂರಿನಂತೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ನಾರಾಯಣ ಅವರು ಅಧ್ಯಕ್ಷರಾಗಿದ್ದ ಧಾರ್ಮಿಕ ಶ್ರಧ್ದಾ ಕೇಂದ್ರಕ್ಕೆ ಸಂಬಂಧಿಸಿದ ಕಾಣಿಕೆ ಕಟ್ಟೆಯನ್ನು ಕನ್ಯಾನ ಗ್ರಾಮದ ದೇಲಂತ…

Read More

ಅಮೆರಿಕದ ಕ್ಯಾಲಿಫೋರ್ನಿಯಾದ ಸ್ಕ್ಯಾನ್ ಫೋರ್ಡ್ ವಿವಿ ಗೆ ಕರ್ನಾಟಕ ಸ್ವೀಕರ್ ಭೇಟಿ

ಕರ್ನಾಟಕ ವಿಧಾನಸಭೆಯಿಂದ ಗೌರವಾನ್ವಿತ ಸ್ಪೀಕರ್ ಶ್ರೀ ಯು.ಟಿ. ಖಾದರ್ ನೇತೃತ್ವದ ನಿಯೋಗವು, ಶ್ರೀ ಮಂಜುನಾಥ್ ಭಂಡಾರಿ, ಶ್ರೀ ಪಿ.ಎಂ. ಅಶೋಕ್ ಪಟ್ಟಣ್, ಶ್ರೀ ದಿನೇಶ್ ಗೂಳಿ ಗೌಡ, ಶ್ರೀ ಶ್ರೀನಿವಾಸ್ ಮಾನೆ, ಶ್ರೀ ಗುರುರಾಜ್ ಗಂಟೆಹೊಳೆ, ಶ್ರೀ ಸುರೇಶ್ ಬಾಬು, ಶ್ರೀ ಅಶೋಕ್ ರೈ ಮತ್ತು ಶ್ರೀ ಗುರ್ಮೆ ಸುರೇಶ್ ಶೆಟ್ಟಿ ಅವರೊಂದಿಗೆ ಅಮೆರಿಕದ ಕ್ಯಾಲಿಫೋರ್ನಿಯಾದ ಸ್ಟ್ಯಾನ್‌ಫೋರ್ಡ್ ವಿಶ್ವವಿದ್ಯಾಲಯಕ್ಕೆ ಭೇಟಿ ನೀಡಿತು. ತಮ್ಮ ಭೇಟಿಯ ಭಾಗವಾಗಿ, ನಿಯೋಗವು ಸ್ಟ್ಯಾನ್‌ಫೋರ್ಡ್ ಸ್ಕೂಲ್ ಆಫ್ ಮೆಡಿಸಿನ್‌ನ ಸಹಾಯಕ ಪ್ರಾಧ್ಯಾಪಕ ಮತ್ತು…

Read More

ಪ್ರಜ್ವಲ್ ರೇವಣ್ಣನಿಗೆ ಜೀವಾವಧಿ ಶಿಕ್ಷೆ

ಬೆಂಗಳೂರು: ಮನೆ ಕೆಲಸದ ಮಹಿಳೆಯ ಮೇಲೆ ಅತ್ಯಾಚಾರ ಪ್ರಕರಣ ಸಂಬಂಧ ನಿನ್ನೆ ಜನಪ್ರತಿನಿಧಿಗಳ ನ್ಯಾಯಾಲಯವು ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ದೋಷಿ ಎಂಬುದಾಗಿ ಆದೇಶ ಪ್ರಕಟಿಸಿತ್ತು.ಇಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಮೂರ್ತಿ ಸಂತೋಷ್ ಗಜಾನನ ಭಟ್ ಅವರು ಶಿಕ್ಷೆಯ ತೀರ್ಪು ಪ್ರಕಟಿಸಲಾಗಿದ್ದು ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಜೀವಾವಧಿ ಶಿಕ್ಷೆಯನ್ನು ವಿಧಿಸಲಾಗಿದೆ. ಅಲ್ಲದೇ 5 ಲಕ್ಷ ದಂಡವನ್ನು ವಿಧಿಸಿ ಆದೇಶಿಸಿದ್ದಾರೆ. ಈ ಮೂಲಕ ಕೋರ್ಟ್ ಮಹತ್ವದ ತೀರ್ಪು ನೀಡಿದ್ದಾರೆ. ಜೀವನ ಪರ್ಯಂತ ಜೈಲು…

Read More

ಪುತ್ತೂರು: 2024-25 ನೇ ಸಾಲಿನ ತಾಲೂಕು ಅಂಕಿ ಅಂಶಗಳ ಸಂಗ್ರಹ ಕಾರ್ಯಾಗಾರ-ಪುತ್ತೂರು ತಾಲೂಕಿನಲ್ಲಿ ಪ್ರಾಯೋಗಿಕವಾಗಿ‌ ಅಂಕಿ-ಅಂಶಗಳ ಕೈಪಿಡಿ ತಯಾರಿ: ಸಂಧ್ಯಾ ಕೆ.ಎಸ್.

ಸಾಂಖ್ಯಿಕ ಇಲಾಖೆಯ ಸಹಯೋಗದಲ್ಲಿ ಪ್ರತಿ ವರ್ಷ ಜಿಲ್ಲಾ ಮಟ್ಟದಲ್ಲಿ “ಜಿಲ್ಲಾ ಅಂಕಿ-ಅಂಶಗಳ ನೋಟ” ಪ್ರಕಟಣೆಯ ಮಾದರಿಯಲ್ಲಿ ಜಿಲ್ಲೆಗೆ ಒಂದರಂತೆ “ತಾಲೂಕು ಅಂಕಿ-ಅಂಶಗಳ ನೋಟ” ಹೊರತರಲು ಪ್ರಥಮವಾಗಿ ಪುತ್ತೂರು ತಾಲೂಕನ್ನು ಆಯ್ಕೆ ಮಾಡಲಾಗಿದೆ ಎಂದು ದ.ಕ.ಜಿ.ಪಂ.ನ ಯೋಜನಾಧಿಕಾರಿ ಹಾಗೂ ಪುತ್ತೂರು ತಾಲೂಕು ಪಂಚಾಯತ್ ಆಡಳಿತಾಧಿಕಾರಿ ಸಂಧ್ಯಾ ಕೆ.ಎಸ್. ಅವರು ಹೇಳಿದರು. ಅವರು ಆ.2 ರಂದು ಪುತ್ತೂರು ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್‌ ಇಲಾಖೆ, ದ.ಕ.ಜಿ.ಪಂ. ಸಹಯೋಗದಲ್ಲಿ ತಾಲೂಕು ಮಟ್ಟದ ಇಲಾಖಾ ಅಧಿಕಾರಿಗಳ ಹಾಗೂ ಪಂಚಾಯತ್…

Read More

ಏಳು ದಿನ, ನಿರಂತರ ನೃತ್ಯ –ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಸಾಧನೆ ಮಾಡಿದ ಮಂಗಳೂರಿನ ಯುವತಿಗೆ , ರೋಹನ್ ಕಾರ್ಪೋರೇಶನ್ ಸಂಸ್ಥೆಯಿಂದ ಗೌರವ ಸನ್ಮಾನ.

ಮಂಗಳೂರು, ಆ.1: ಮಂಗಳೂರಿನ ಭರತನಾಟ್ಯ ಕಲಾವಿದೆಯಾದ ರೆಮೋನಾ ಎವೆಟ್ ಪಿರೇರಾ ಅವರು 7 ದಿನಗಳ ಕಾಲ ನಿರಂತರ ಭರತನಾಟ್ಯ ಪ್ರದರ್ಶನ ನೀಡಿ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ದಾಖಲಿಸಿದ ಹಿನ್ನೆಲೆಯಲ್ಲಿ, ರೋಹನ್ ಕಾರ್ಪೋರೇಶನ್ ಸಂಸ್ಥೆ ಅವರ ಸಾಧನೆಯನ್ನು ಗುರುತಿಸಿ ಶುಕ್ರವಾರ ವಿಶೇಷವಾಗಿ ಸನ್ಮಾನಿಸಿದೆ. ಈ ಸನ್ಮಾನ ಕಾರ್ಯಕ್ರಮವು ಮಂಗಳೂರಿನ ಬಿಜೈ ಮುಖ್ಯ ರಸ್ತೆಯ ರೋಹನ್ ಸಿಟಿಯಲ್ಲಿರುವ ಕಚೇರಿಯಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಸಂಸ್ಥೆಯ ಸ್ಥಾಪಕರಾದ ಡಾ.ರೋಹನ್ ಮೊಂತೇರೊರವರು ರೆಮೋನಾ ಪಿರೇರಾ ಅವರಿಗೆ ಪ್ರಶಸ್ತಿ ಪತ್ರ ಹಾಗೂ ಸ್ಮರಣಿಕೆ…

Read More

ಬ್ರಹ್ಮಾವರ: ಲಾಡ್ಜ್ ನಲ್ಲಿ‌ ಅಂದರ್ ಬಾಹರ್- ಆರು ಮಂದಿಯ‌ ಬಂಧನ

ಉಡುಪಿ: ಬ್ರಹ್ಮಾವರ ಲಾಡ್ಜ್‌ವೊಂದರ ರೂಮಿನಲ್ಲಿ ಜು.31ರಂದು ಅಂದರ್ ಬಾಹರ್ ಇಸ್ಪೀಟ್ ಜುಗಾರಿ ಆಡುತ್ತಿದ್ದ ಆರು ಮಂದಿ ಆರೋಪಿಗಳನ್ನ್ನು ಬ್ರಹ್ಮಾವರ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಗೋಪಾಲ, ರಮೇಶ್, ಅಭಿಲಾಷ, ವಿಕ್ರಮ್, ರತ್ನಾಕರ, ಹುಸೇನ್ ಎಂದು ಗುರುತಿಸಲಾಗಿದೆ. ಬಂಧಿತರಿಂದ ಒಟ್ಟು ನಗದು 2,38,000ರೂ. ನಗದು, ಐದು ಮೊಬೈಲ್ ಫೋನ್‌ ಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More
error: Content is protected !!