ಬಿಜೆಪಿ ಪ್ರಶಿಕ್ಷಣ ಮಹಾಭಿಯಾನ ಸಮಾಪ್ತಿ: ‘ವ್ಯಕ್ತಿಗಿಂತ ಪಕ್ಷ, ಪಕ್ಷಕ್ಕಿಂತ ದೇಶ ಮುಖ್ಯ’ – ನಳಿನ್ ಕುಮಾರ್ ಕಟೀಲ್
ಭಾರತೀಯ ಜನತಾ ಪಾರ್ಟಿ ಮಂಗಳೂರು ನಗರ ದಕ್ಷಿಣ ಮಂಡಲದ ವತಿಯಿಂದ ಒಡ್ಡೂರು ಪಾರ್ಮ್ಸ್ ನಲ್ಲಿ ನಡೆದ ಎರಡು ದಿನಗಳ ಪಂ.ದೀನ್ ದಯಾಳ್ ಉಪಾಧ್ಯಾಯ ಪ್ರಶಿಕ್ಷಣ ಮಹಾಭಿಯಾನ-2026 ವರ್ಗವು ಯಶಸ್ವಿಯಾಗಿ ಸಮಾಪ್ತಿಗೊಂಡಿತು. ಸಮಾರೋಪ ಸಮಾರಂಭದಲ್ಲಿ ಪ್ರಶಿಕ್ಷಣಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ರವರು, ಅಭ್ಯಾಸ ವರ್ಗ, ಕಾರ್ಯಕಾರಿಣಿ ಸಭೆ, ಪದಾಧಿಕಾರಿಗಳ ಸಭೆ, ಪ್ರಶಿಕ್ಷಣ, ಹೀಗೆ ನಿರಂತರ ಕಾರ್ಯ ಚಟುವಟಿಕೆಗಳೇ ಬಿಜೆಪಿ ಜಗತ್ತಿನ ಅತ್ಯಂತ ದೊಡ್ಡ ರಾಜಕೀಯ ಪಕ್ಷವಾಗಿ ಬೆಳೆಯಲು ಕಾರಣ. ವ್ಯಕ್ತಿಗಿಂತ ಪಕ್ಷ,ಮುಖ್ಯ, ಪಕ್ಷಕ್ಕಿಂತ…