ಪತ್ತೆಯಾಗದ ಹೇಮಂತ್ ನೇತ್ರಾವತಿ ನದಿಯಲ್ಲಿ ಶೋಧ ಕಾರ್ಯ ಮುಂದುವರಿಕೆ

ಮೂರು ದಿನಗಳಿಂದ ನಾಪತ್ತೆಯಾಗಿದ್ದಾನೆ ಎನ್ನಲಾದ ಹೇಮಂತ್ ಗಾಗಿ ಇಂದು ಕೂಡ ಶೋಧ ಕಾರ್ಯ ಮುಂದುವರಿದಿದೆ.ಕಡೇಶಿವಾಲಯ ನಿವಾಸಿ ಹೇಮಂತ್ ಆಚಾರ್ಯ ( 21) ಎಂಬಾತ ಜುಲೈ 28 ರಂದು ಮನೆಯಿಂದ ಕೆಲಸಕ್ಕೆ ಹೋದವ ನಾಪತ್ತೆಯಾಗಿದ್ದ.ಹೇಮಂತ್ ನಿಗೆ ಸೇರಿದ ದ್ವಿಚಕ್ರ ವಾಹನವೊಂದು ರಾಷ್ಟ್ರೀಯ ಹೆದ್ದಾರಿ ರಸ್ತೆಯ ಬಂಟ್ವಾಳದ ಜಕ್ರಿಬೆಟ್ಟು ಎಂಬಲ್ಲಿ ನೇತ್ರಾವತಿ ನದಿ ತೀರದಲ್ಲಿ ಅನಾಥವಾಗಿ ಸಿಕ್ಕಿತ್ತು. ಹಾಗಾಗಿ ಈತ ಇಲ್ಲಿಯೇ ನಾಪತ್ತೆಯಾಗಿರುವ ಬಗ್ಗೆ ಸಂಶಯಗೊಂಡ ಪೋಲೀಸ್ ಇಲಾಖೆ ಅಗ್ನಿಶಾಮಕ ದಳದ ಸಿಬ್ಬಂದಿ ಮೂಲಕ ನಿನ್ನೆ ಮಧ್ಯಾಹ್ನ ದಿಂದ ಸಂಜೆ…

Read More

ಕೆಪಿಸಿಸಿ ಪ್ರಚಾರ ಸಮಿತಿ: ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾಗಿ ಡೆನಿಸ್ ಡಿ’ಸಿಲ್ವಾ ನೇಮಕ

ಮಂಗಳೂರು: ಕಳೆದ 25 ವರ್ಷಗಳಿಂದ ಪಕ್ಷದ ಸಂಘಟನೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಡೆನಿಸ್ ಡಿ’ಸಿಲ್ವಾ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯ ಕರ್ನಾಟಕ ಪ್ರದೇಶ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ. ಕೆಪಿಸಿಸಿ ಪ್ರಚಾರ ಸಮಿತಿ ರಾಜ್ಯಾಧ್ಯಕ್ಷರಾದ ವಿನಯಕುಮಾರ್ ಸೊರಕೆ ಅವರು ಈ ನೇಮಕಾತಿ ಮಾಡಿದ್ದು, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರು ಇದನ್ನು ಅನುಮೋದಿಸಿದ್ದಾರೆ. ಈ ತಕ್ಷಣದಿಂದಲೇ ಜಾರಿಗೆ ಬರುವಂತೆ ಜವಾಬ್ದಾರಿ ನಿರ್ವಹಣೆಯಲ್ಲಿ ತೊಡಗಲು ಡೆನಿಸ್ ಅವರಿಗೆ ಸೂಚಿಸಲಾಗಿದೆ. ಜಿಲ್ಲಾಮಟ್ಟ, ಕ್ಷೇತ್ರವಾರು, ಬ್ಲಾಕ್ ಮಟ್ಟ, ಪಂಚಾಯತ್ ಮಟ್ಟದಲ್ಲಿ ಪ್ರಚಾರ…

Read More

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆಂಪು ಕಲ್ಲು ಹಾಗೂ ಮರಳು ಅಭಾವಸಮಸ್ಯೆ ಪರಿಹಾರಕ್ಕೆ ಮುಖ್ಯಮಂತ್ರಿಯನ್ನು ಭೇಟಿಯಾದ ದ.ಕ ಬಿಜೆಪಿ ಸಮಿತಿ

ರಾಜ್ಯ ಕಾಂಗ್ರೆಸ್ ಸರ್ಕಾರದ ಅವೈಜ್ಞಾನಿಕ ನೀತಿಯಿಂದಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆಂಪು ಕಲ್ಲು ಹಾಗೂ ಮರಳು ಅಭಾವ ಸೃಷ್ಟಿಯಾಗಿದ್ದು ಜನಸಾಮಾನ್ಯರು, ಕೂಲಿ ಕಾರ್ಮಿಕರು, ಸೇರಿದಂತೆ ಸಾರ್ವಜನಿಕರೆಲ್ಲರಿಗೂ ತೀವ್ರ ತೊಂದರೆಯುಂಟಾಗಿದ್ದು ಕೂಡಲೇ ಮಧ್ಯಪ್ರವೇಶಿಸಿ ಸಮಸ್ಯೆ ಬಗೆಹರಿಸುವಂತೆ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ನಿಯೋಗದಿಂದ ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ನವರನ್ನು ಭೇಟಿ ಮಾಡಿ ಆಗ್ರಹಿಸಲಾಯಿತು. ಕೆಂಪು ಕಲ್ಲು ಮತ್ತು ಮರಳಿನ ಪೂರೈಕೆಯಲ್ಲಿ ತೀವ್ರ ಅಭಾವವುಂಟಾಗಿದ್ದರಿಂದಾಗಿ ಜಿಲ್ಲೆಯಲ್ಲಿ ಸಾಮಾನ್ಯ ಜನರ ಗೃಹ ನಿರ್ಮಾಣ ಸೇರಿದಂತೆ ಯಾವುದೇ ರೀತಿಯ ಕಾಮಗಾರಿಗಳು ಸ್ಥಗಿತಗೊಂಡಿದೆ. ಇದು…

Read More

ಕಡಲ್ಕೊರೆತ ತಡೆಗೆ 300 ಕೋಟಿ ರೂ.ಗಳ ಯೋಜನೆ: ಕಂದಾಯ ಸಚಿವ ಕೃಷ್ಣ ಭೈರೇಗೌಡ.ಮೂಳೂರು ಗ್ರಾಮದ ತೊಟ್ಟಂನಲ್ಲಿ ಕಡಲ್ಕೊರೆತದಿಂದ ಹಾನಿಗೊಂಡ ಪ್ರದೇಶಗಳ ವೀಕ್ಷಣೆ

ಉಡುಪಿ: ರಾಜ್ಯ ಕರಾವಳಿಯ ಪ್ರಮುಖ ಸಮಸ್ಯೆ‌ಯಾಗಿರುವ ಕಡಲು ಕೊರೆತದ ಕುರಿತಂತೆ ಮುಖ್ಯ ಮಂತ್ರಿ‌ಗಳ ಸೂಚನೆಯಂತೆ ತಜ್ಞರ ತಂಡದಿಂದ ವೈಜ್ಞಾನಿಕ ಅಧ್ಯಯನ ನಡೆಸಿ 300 ಕೋಟಿ ರೂಗಳ ಯೋಜನೆಯನ್ನು ಅನುಷ್ಠಾನಗೊಳಿಸಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ಹೇಳಿದ್ದಾರೆ. ಬುಧವಾರ ಇಲಾಖೆಯ ಪ್ರಗತಿ ಪರಿಶೀಲನೆಗಾಗಿ ಉಡುಪಿ ಜಿಲ್ಲೆಗೆ ಆಗಮಿಸಿದ ಸಚಿವರು ಕಾಪು ತಾಲೂಕು ಮೂಳೂರು ಗ್ರಾಮದ ತೊಟ್ಟಂನಲ್ಲಿ ಕಡಲ್ಕೊರೆತದಿಂದ ಹಾನಿಗೊಂಡ ಪ್ರದೇಶಗಳನ್ನು ವೀಕ್ಷಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡುತಿದ್ದರು.ಕಳೆದ 20-30 ವರ್ಷಗಳಿಂದ ಪ್ರತಿಮಳೆಗಾಲದಲ್ಲಿ ನಿರಂತರ ಸಮಸ್ಯೆಗೆ ಕಾರಣವಾಗುತ್ತಿರುವ ಕಡಲ್ಕೊರೆತಕ್ಕೆ ಶಾಶ್ವತ…

Read More

ಕೆನರಾ ಅಸೋಸಿಯೇಷನ್ (ರಿ) ಇಲೆಕ್ಟ್ರಾನಿಕ್ ಸಿಟಿ ಬೆಂಗಳೂರು ಇವರ ಆಶ್ರಯದಲ್ಲಿ-ಆಟಿಡೊಂಜಿ ಕೂಟ

ಕೆನರಾ ಅಸೋಸಿಯೇಷನ್ (ರಿ) ಇಲೆಕ್ಟ್ರಾನಿಕ್ ಸಿಟಿ ಬೆಂಗಳೂರು ಇವರ ಆಶ್ರಯದಲ್ಲಿ 26 ಜೂಲೈ 2025 ರಂದು ಅಮೃತಾಮಯ ಹಾಲ್ ಅನಂತನಗರ ದಲ್ಲಿ ಆಟಿಡೊಂಜಿ ಕೂಟ ವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಕಾರ್ಯಕ್ರಮವನ್ನು ಕುಮಾರಿ ದೀಪಾಶ್ರೀ ಪ್ರಾರ್ಥನೆ ಯಿಂದ ಪ್ರಾರಂಭಿಸಿ, ದೀಪ ಬೆಳಗಿಸುವ ಮೂಲಕ ಸಂಘದ ಹಿರಿಯ ಸದಸ್ಯರಾದ ಶ್ರೀ ಪದ್ಮನಾಭ ಶೆಟ್ಟಿ ಯವರು ಉದ್ಘಾಟನೆ ಮಾಡಿದರು. ಸಂಘದ ಅಧ್ಯಕ್ಷರಾದ ಶ್ರೀ ಸತೀಶ್ ಸುವರ್ಣ ರವರು ಸ್ವಾಗತ ಭಾಷಣ ದ ಜೊತೆಗೆ ಸಂಘವು ಏರ್ಪಡಿಸುವ ಈ ವರುಷದ ಕಾರ್ಯಕ್ರಮದ ಬಗ್ಗೆ…

Read More

ಧರ್ಮಸ್ಥಳ ಗ್ರಾಮದಲ್ಲಿ ಎರಡನೇ ದಿನವೂ ಸಿಗದ ಕುರುಹು …..!

ದಕ್ಷಿಣಕನ್ನಡ : ಧರ್ಮಸ್ಥಳ ಗ್ರಾಮದಲ್ಲಿ ಅನೇಕ ಶವಗಳನ್ನು ಹೂತುಹಾಕಿರುವ ಬಗ್ಗೆ ಅನಾಮಿಕ ವ್ಯಕ್ತಿ ದೂರುಕೊಟ್ಟ ಬಳಿಕ, ಎಸ್‌ಐಟಿ ತಂಡ ತನಿಖೆ ನಡೆಸುತ್ತಿದ್ದು, ಮಂಗಳವಾರ ದೂರುದಾರ ತೋರಿಸಿದ ಜಾಗದಲ್ಲಿ ಅಗೆಯಲು ಆರಂಭ ಮಾಡಿತ್ತು. ಆದರೆ ಮೊದಲ ದಿನ ಆತ ತೋರಿಸಿದ ಜಾಗದಲ್ಲಿ ಯಾವುದೇ ಕುರುಹು ಸಿಕ್ಕಿಲ್ಲ. ಇಂದು ಸಹ ಶೋಧ ಕಾರ್ಯ ಮುಂದುವರೆದಿದ್ದು ಯಾವುದೇ ಅಸ್ತಿಪಂಜರ ದೊರೆತಿಲ್ಲ.ಇಂದು ಎರಡನೇ ಜಾಗದಲ್ಲಿ ಕಾರ್ಯಾಚರಣೆ ಆರಂಭ ಆಗಲಿದೆ. ಇಂದು ಏಕಕಾಲದಲ್ಲಿ 3 ಕಡೆ ಅಗೆಯುವ ತೀರ್ಮಾನ ಮಾಡಲಾಗಿದೆ ಎನ್ನಲಾಗಿದೆ. ಈಗಾಗಲೇ ನೇತ್ರಾವತಿ…

Read More

ಔಷಧ ಎಂದು ಇಲಿ ಪಾಷಾಣ ಸೇವನೆ- ಹೆಡ್ ಕಾನ್‌ಸ್ಟೆಬಲ್ ಸಾವು

ಮಂಗಳೂರು:ಮಂಗಳೂರು ಉತ್ತರ ಸಂಚಾರ ಪೊಲೀಸ್ ಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಪೊಲೀಸ್ ಹೆಡ್ ಕಾನ್‌ಸ್ಟೆಬಲ್ ಒಬ್ಬರು ಇಲಿ ಪಾಷಾಣವನ್ನು ಔಷಧಿ ಎಂದು ತಪ್ಪಾಗಿ ಭಾವಿಸಿ ಸೇವಿಸಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.ಮೃತರನ್ನು ಸುರತ್ಕಲ್ ಬಳಿಯ ಚೆಲಾರು ನಿವಾಸಿ ಮತ್ತು ಹರೇಕಳ ಮೂಲದ ಮಂಜುನಾಥ ಹೆಗ್ಡೆ (44) ಎಂದು ಗುರುತಿಸಲಾಗಿದೆ. ಅವರು ಆರೋಗ್ಯ ಸಮಸ್ಯೆಗೆ ಆಯುರ್ವೇದ ಚಿಕಿತ್ಸೆ ಪಡೆಯುತ್ತಿದ್ದರು ಮತ್ತು ಆಕಸ್ಮಿಕವಾಗಿ ಅವರು ಔಷದ ಎಂದು ಇಲಿ ವಿಷ ಸೇವಿಸಿದ್ದಾರೆ.ಗಂಭೀರ ಸ್ಥಿತಿಯಲ್ಲಿದ್ದ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟರು. ಅವರು ಪತ್ನಿ…

Read More

ಕಡಬ ಪಟ್ಟಣ ಪಂಚಾಯಿತಿ ಚುನಾವಣೆ;ನೀತಿ ಸಂಹಿತೆ ಜಾರಿಚುನಾವಣಾದಿಕಾರಿಗಳ ನೇಮಕ;ರಾಜಕೀಯ ಪಕ್ಷಗಳ ಪ್ರಮುಖರ ಸಭೆ

ಕಡಬ ಪಟ್ಟಣ ಪಂಚಾಯಿತಿ ಚುನಾವಣೆಗೆ ಅದಿಸೂಚನೆ ಪ್ರಕಟವಾಗಿದ್ದು, ಜಿಲ್ಲಾಧಿಕಾರಿಗಳು ಚುನಾವಣಾಧಿಕಾರಿಗಳನ್ನು ನೇಮಕಗೊಳಿಸಿ ಆದೇಶ ಹೊರಡಿಸಿದ್ದಾರೆ. ಮಂಗಳವಾರದಿoದಲೇ (ಜು. ೨೯ ) ಚುನಾವಣಾ ನೀತಿ ಸಂಹಿತೆ ಜಾರಿಯಾಗಿದೆ.ಚುನಾವಣಾ ಪ್ರಕ್ರಿಯೆಗಳ ಕುರಿತು ಮಾಹಿತಿ ನೀಡುವ ಸಲುವಾಗಿ ಮಂಗಳವಾರ ಸಂಜೆ ಕಡಬ ತಾಲೂಕು ಆಡಳಿತ ಸೌಧದಲ್ಲಿ ತಹಶೀಲ್ದಾರ್ ಪ್ರಭಾಕರ ಖಜೂರೆ ಅವರು ಪ್ರಮುಖ ರಾಜಕೀಯ ಪಕ್ಷಗಳ ಸಭೆ ನಡೆಸಿದರು. ಬಳಿಕ ಪತ್ರಕರ್ತರೊಂದಿಗೆ ಮಾತನಾಡಿದ ಅವರು ಈಗಾಗಲೇ ನೀತಿ ಸಂಹಿತೆ ಜಾರಿಯಾಗಿದೆ. ಚುನಾವಣಾ ಅಧಿಕಾರಿಗಳನ್ನು ನೇಮಿಸಲಾಗಿದ್ದು, ಕಡಬ ಪಟ್ಟಣ ಪಂಚಾಯಿತಿ ಸಭಾಂಗಣದಲ್ಲಿ ನಾಮಪತ್ರ…

Read More

ಭೂ ಸರ್ವೇ ಕ್ಷಣಕ್ಕಾಗಿ ನಿಸಾರ್‌ ಉಪಗ್ರಹ ಇಂದು ಶ್ರೀಹರಿಕೋಟೆಯಿಂದ ನಭಕ್ಕೆ

ಬೆಂಗಳೂರು: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಮತ್ತು ಅಮೆರಿಕದ ನಾಸಾ ಜಂಟಿಯಾಗಿ ಅಭಿವೃದ್ಧಿಪಡಿಸಿರುವ ನಾಸಾ – ಇಸ್ರೋ ಸಿಂಥೆಟಿಕ್ ಅಪರ್ಚರ್ ರೇಡಾರ್ ನಿಸಾರ್ ಉಪಗ್ರಹ ಇಂದು ಶ್ರೀಹರಿಕೋಟಾದಿಂದ ಉಡಾವಣೆಗೆ ಸಜ್ಜಾಗಿದೆ. ʻನಿಸಾರ್ʼ ಭಾರತೀಯ ಕಾಲಮಾನದ ಪ್ರಕಾರ ಇಂದು ಸಂಜೆ 5:40ಕ್ಕೆ ಇಸ್ರೋದ GSLV-F16 ಉಪಗ್ರಹದ ಬೆನ್ನೇರಿ ಬಾಹ್ಯಾಕಾಶಕ್ಕೆ ತೆರಳಲಿದೆ. ಈ ಉಪಗ್ರಹವು ಶ್ರೀಹರಿಕೋಟದಿಂದ ಉಡಾವಣೆ ಆಗುತ್ತಿರುವ 102ನೇ ಉಪಗ್ರಹವಾಗಿದೆ. ಹವಾಮಾನ ಬದಲಾವಣೆ, ನೈಸರ್ಗಿಕ ವಿಕೋಪ ನಿರ್ವಹಣೆ ಮತ್ತು ಕೃಷಿ ಕ್ಷೇತ್ರಗಳಿಗೆ ಅಮೂಲ್ಯವಾದ ಮಾಹಿತಿ ಒದಗಿಸಲಿದೆ. ಅಲ್ಲದೇ ನಿರ್ಗಲ್ಲು,…

Read More

ಭೂಗತ ಕೇಬಲ್ ಮಾರ್ಗ ಅಳವಡಿಕೆ

ಮಂಗಳೂರು: ಮಂಗಳೂರು ವಿದ್ಯುಚ್ಛಕ್ತಿ ಸರಬರಾಜು ಕಂಪೆನಿ ನಿಯಮಿತ ( ಮೆಸ್ಕಾಂ ) ಉಡುಪಿ ಉಪವಿಭಾಗದ ನಿಟ್ಟೂರು-ಮಲ್ಪೆ 33 ಕೆವಿ ಎ.ಬಿ ಕೇಬಲ್ ಮಾರ್ಗಕ್ಕೆ ಹೆಚ್ಚುವರಿಯಾಗಿ ಪಾಳೆಕಟ್ಟೆಯಿಂದ ಮಲ್ಪೆ 33/11ಕೆವಿ ವಿದ್ಯುತ್ ಉಪಕೇಂದ್ರದ ತನಕ 33ಕೆವಿ ಯು.ಜಿ ಕೇಬಲ್‌ಅಳವಡಿಸುವ ಕಾಮಗಾರಿಯು ಪೂರ್ಣಗೊಂಡಿದ್ದು, ಯಾವುದೇ ಕ್ಷಣದಲ್ಲಿ 2.2 ಕಿ.ಮೀ ಉದ್ದದ 33ಕೆವಿ ಭೂಗತ ಕೇಬಲ್ ಮಾರ್ಗವನ್ನು ಜು.30 ರ ನಂತರ ಚಾಲನೆಗೊಳಿಸಲಿದೆ. ಅದುದರಿಂದ ಪಾಳೆಕಟ್ಟೆ, ತೆಂಕನಿಡಿಯೂರು ಜಂಕ್ಷನ್, ವೈಷ್ಣವಿ ಲೇ ಔಟ್, ಉದ್ದಿನ ಹಿತ್ತು, ವಡಬಾಂಡೇಶ್ವರ ಪ್ರದೇಶಗಳಲ್ಲಿ ಯಾವುದೇ ರೀತಿಯ…

Read More
error: Content is protected !!