ಇ-ಖಾತಾ ಅವ್ಯವಸ್ಥೆ, ಹದಗೆಟ್ಟ ರಸ್ತೆ–ಚರಂಡಿ ಸಮಸ್ಯೆ: ಅಧಿವೇಶನದಲ್ಲಿ ಶಾಸಕ ವೇದವ್ಯಾಸ ಕಾಮತ್ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ
ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ವಿಪರೀತವಾಗಿದ್ದಲ್ಲದೇ, ಕಳೆದ ಮಳೆಗಾಲದಲ್ಲಿ ಸುರಿದ ಭಾರೀ ಮಳೆಗೆ ನಗರ ಭಾಗದ ರಸ್ತೆಗಳು ಸಂಪೂರ್ಣ ಹದಗೆಟ್ಟಿದ್ದು, ಚರಂಡಿ ಮತ್ತು ಒಳಚರಂಡಿ ಕಾಮಗಾರಿಗಾಗಿ ಅನುದಾನ ಸೇರಿದಂತೆ ಹಲವು ವಿಷಯಗಳ ಬಗ್ಗೆ ಅಧಿವೇಶನದಲ್ಲಿ ಶಾಸಕ ವೇದವ್ಯಾಸ ಕಾಮತ್ ರವರು ಧ್ವನಿ ಎತ್ತಿದರು. ಸದನದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಯಾವುದೇ ಹೊಸ ನಿಯಮ ಬಂದರೂ ಮಂಗಳೂರಿನಲ್ಲೇ ಮೊದಲು ಪ್ರಾಯೋಗಿಕವಾಗಿ ಜಾರಿಗೆ ತರಲು ನೋಡುತ್ತಾರೆ. ಈ ಹಿಂದೆ ನಗರದಲ್ಲಿ ಜಿಪಿಎಸ್ ಆಧಾರದಲ್ಲಿ ಇ-ಖಾತಾ ಆರಂಭಿಸಲಾಗಿದ್ದು…
