ಕರಾವಳಿ ಜಿಲ್ಲೆಗಳಲ್ಲಿ ಕೆಂಪು ಕಲ್ಲು ಹಾಗೂ ಮರಳಿನ ಸಮಸ್ಯೆಗೆ ಸೂಕ್ತ ಪರಿಹಾರಕ್ಕೆ ಕರ್ನಾಟಕ ಸರಕಾರದ ಮಾಜಿ ಮಂತ್ರಿಗಳಾದ ಬಿ ನಾಗರಾಜ ಶೆಟ್ಟಿ ಆಗ್ರಹ

ಮಂಗಳೂರು: ನಮ್ಮ ಅವಿಬಾಜ್ಯ ದ. ಕ. ಜಿಲ್ಲೆ (ಮಂಗಳೂರು ಜಿಲ್ಲೆ ಮತ್ತು ಉಡುಪಿ ಜಿಲ್ಲೆ ) ಸುಮಾರು 50-60 ವರ್ಷಗಳಿಂದ ನಮ್ಮ ಕಟ್ಟಡಗಳು, ಮನೆಗಳು, ಬಹುಮಹಡಿ ಕಟ್ಟಡಗಳನ್ನು ಸ್ಥಳೀಯ ಕೆಂಪು ಕಲ್ಲು ಮರಳು ಹಾಗೂ ನಿಮಂಟ್ ಮೂಲಕ ಕಟ್ಟುತ್ತಾ ಇದ್ದೇವೆ ಕಳೆದ 2-3 ತಿಂಗಳಿಂದ ಮರಳು ಹಾಗೂ ಕೆಂಪು ಕಲ್ಲಿನ ಅಭಾವ ಜಾಸ್ತಿ ಆಗಿದ್ದು 2 ಜಿಲ್ಲೆಯಲ್ಲಿ ಎಲ್ಲಿಯೂ ಸಿಗಲಾರದ ಪರಿಸ್ಥಿತಿಯಲ್ಲಿ ನಾವಿದ್ದೇವೆ. ಸ್ಥಳೀಯ ಕೆಂಪು ಕಲ್ಲು ಹಾಗೂ ಮರಳಿನಿಂದ ಅತೀ ಕಡಿಮೆ ಖರ್ಚಿನಲ್ಲಿ ಬಡವರು, ಹಿಂದುಳಿದ…

Read More

ಮುಲ್ಕಿ: ಕಾರಿಗೆ ಲಾರಿ ಡಿಕ್ಕಿ; ಇಬ್ಬರು ಪವಾಡ ಸದೃಶ ಪಾರು

ಮುಲ್ಕಿ: ರಾಷ್ಟ್ರೀಯ ಹೆದ್ದಾರಿ 66ರ ಮುಲ್ಕಿ ವಿಜಯ ಸನ್ನಿಧಿ ಹೆದ್ದಾರಿ ಜಂಕ್ಷನ್ ಬಳಿ ಕಾರಿಗೆ ಲಾರಿ ಡಿಕ್ಕಿಯಾಗಿ ಕಾರಿನಲ್ಲಿದ್ದ ಇಬ್ಬರು ಪವಾಡ ಸದೃಶ ಪಾರಾಗಿದ್ದಾರೆ. ಕಿನ್ನಿಗೋಳಿ ಕಡೆಯಿಂದ ಮುಲ್ಕಿ ಕಡೆಗೆ ಬರುತ್ತಿದ್ದ ಕಾರು ಮೂಲಕ ರಾಷ್ಟ್ರೀಯ ಹೆದ್ದಾರಿ ಜಂಕ್ಷನ್ ಬಳಿ ಹೆದ್ದಾರಿ ಕ್ರಾಸ್ ಮಾಡುತ್ತಿದ್ದಾಗ ಮಂಗಳೂರು ಕಡೆಯಿಂದ ಉಡುಪಿ ಕಡೆಗೆ ಹೋಗುತ್ತಿದ್ದ ಲಾರಿ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಕಾರಿನ ಎದುರು ಭಾಗ ಹಾನಿಯಾಗಿದ್ದು ಕಾರಿನ ಚಾಲಕ ಮುಲ್ಕಿ ಕೊಳಚಿ ಕಂಬಳ ನಿವಾಸಿ ಅಲ್ತಾಫ್ ಮತ್ತೋರ್ವ ಮಹಿಳೆ…

Read More

ಧರ್ಮಸ್ಥಳ ಕೊಲೆಗಳ ತನಿಖೆಗೆ ನೇಮಕವಾದ SIT ಮುಂದಾಳತ್ವ ವಹಿಸಿರುವ ಐಪಿಎಸ್ ಅಧಿಕಾರಿ ಮೊಹಾಂತಿಯನ್ನು ಕೈಬಿಡುವಂತೆ ಮಾಜಿ ಡಿ ವೈ ಎಸ್ ಸ್ಪಿ ಅನುಪಮ ಶೆಣೈ ಆಗ್ರಹ

ಮಂಗಳೂರು : ಧರ್ಮಸ್ಥಳ ಕೊಲೆಗಳ ತನಿಖೆಗೆ ನೇಮಕವಾದ SIT ತಂಡದ ಮುಂದಾಳತ್ವ ವಹಿಸಿರುವ ಐಪಿಎಸ್ ಅಧಿಕಾರಿ ಪ್ರನಬ್ ಮೊಹಾಂತಿಯವರ ಬದಲು ಇದರ ಮುಂದಾಳತ್ವವನ್ನು ಡಾ.ಕೆ. ರಾಮಚಂದ್ರ ರಾವ್ ಅಥವಾ ದಯಾನಂದರಂತಹ ಐಪಿಎಸ್ ಅಧಿಕಾರಿಗಳಿಗೆ ನೀಡಬೇಕೆಂದು ಆಗ್ರಹಿಸಿ ಮಾಜಿ ಡಿ ವೈ ಎಸ್ ಸ್ಪಿ ಅನುಪಮ ಶೆಣೈ ನಗರದ ಪತ್ರಿಕಾಭವನದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಸರಕಾರಕ್ಕೆ ಆಗ್ರಹಿಸಿದರು . ಸುದ್ದಿಗಾರೊಂದಿಗೆ ಮಾತನಾಡಿದ ಅವರು , ”ಪ್ರನಬ್ ಮೊಹಾಂತಿಯವರನ್ನು SITಯ ಮುಖ್ಯಸ್ಥರಾಗಿ ನೇಮಿಸುವ ಕುರಿತು ಮಾನ್ಯ ಘನ ಉಚ್ಚ ನ್ಯಾಯಾಲಯದ ರಿಟ್…

Read More

ಉಡುಪಿ: ಭಾರೀ ಗಾಳಿ ಮಳೆಗೆ ಮನೆ ಕುಸಿತ- ಶಾಸಕ ಯಶ್ ಪಾಲ್ ಸುವರ್ಣ ಭೇಟಿ, ಪರಿಶೀಲನೆ

ಉಡುಪಿ: ಉಡುಪಿ ವಿಧಾನಸಭಾ ಕ್ಷೇತ್ರದ ಕೆಂಜೂರು ಮತ್ತು ವಾರಂಬಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನಿನ್ನೆ ಸುರಿದ ಭಾರೀ ಗಾಳಿ ಮಳೆಗೆ ಹಾಗೂ ಮರ ಬಿದ್ದು ಮನೆ ಕುಸಿತವಾಗಿರುವ ಸ್ಥಳಗಳಿಗೆ ಉಡುಪಿ ಶಾಸಕರಾದ ಯಶ್ ಪಾಲ್ ಸುವರ್ಣ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಕೆಂಜೂರು ಗ್ರಾಮದ ಗೋಪಾಲ ನಾಯ್ಕ, ದಾಮೋದರ ನಾಯ್ಕ್ ಹಾಗೂ ವಾರಂಬಳ್ಳಿ ಗ್ರಾಮದ ಕಿಣಿಯರಬೆಟ್ಟುವಿನಲ್ಲಿ ಮರಬಿದ್ದು ಹಾನಿಗೀಡಾದ ಗಿರಿಜಾ ಮತ್ತು ಯಶೋಧ ಅವರ ಮನೆಗೆ ಭೇಟಿ ನೀಡಿ ಘಟನೆಯಿಂದ ಗಾಯಗೊಂಡವರ ಆರೋಗ್ಯ ವಿಚಾರಿಸಿ ವೈಯುಕ್ತಿಕ ನೆಲೆಯಲ್ಲಿ ಪರಿಹಾರ…

Read More

ಜ್ಞಾನಿಗಳ ಗೌರವ ದೇವರಿಗೆ ಸಲ್ಲುತ್ತದೆ- ಕೃಷ್ಣಾಪುರಶ್ರೀ ಅಗ್ರಹಾರ ನಾರಾಯಣ ತಂತ್ರಿಗಳ ಸುವರ್ಣ ಸಂಸ್ಮರಣೆ

ಉಡುಪಿ: ಜ್ಞಾನಿಗಳಿಗೆ ಪರಮಾತ್ಮ, ಪರಮಾತ್ಮನಿಗೆ ಜ್ಞಾನಿಗಳು ಪ್ರಿಯರಾಗಿದ್ದು ಜ್ಞಾನಿಗಳ ಗೌರವ ದೇವರಿಗೂ ಸಲ್ಲುತ್ತದೆ ಎಂದು ಕೃಷ್ಣಾಪುರ ಮಠದ ಶ್ರೀ ವಿದ್ಯಾಸಾಗರ ತೀರ್ಥ ಶ್ರೀಪಾದರು ಹೇಳಿದರು. ಅವರು ಬೆಂಗಳೂರಿನ ಅಗ್ರಹಾರ ನಾರಾಯಣ ತಂತ್ರಿ ಟ್ರಸ್ಟ್ ವತಿಯಿಂದ ಉಡುಪಿ ರಥಬೀದಿಯ ಶ್ರೀಕೃಷ್ಣ ಸಭಾ ಮಂದಿರದಲ್ಲಿ ಆಯೋಜಿಸಿದ ಅಗ್ರಹಾರ ನಾರಾಯಣ ತಂತ್ರಿಗಳ ಸುವರ್ಣ ಸಂಸ್ಮರಣೆ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿದರು. ನಿಯಮದಲ್ಲಿ ಬದುಕಿದ ಧರ್ಮಿಷ್ಠರಿಗೆ ಆಯ್ಕೆಗಳು ಕಡಿಮೆ, ಆದರೆ ಅಧರ್ಮಿಷ್ಠರಿಗೆ ಆಯ್ಕೆಗಳು ಬಹಳವಿರುತ್ತವೆ. ಆಚಾರ್ಯ ಎನಿಸಿಕೊಂಡವರು ಆಚಾರವಂತರಾಗಿರಬೇಕು. ಮಧ್ವ ಶಾಸ್ತ್ರ, ಗ್ರಂಥಗಳ ಅನುವಾದಕ್ಕೆ…

Read More

ಮಣಿಪಾಲ: ಮಹಿಳಾ ಪೊಲೀಸ್ ಅಧಿಕಾರಿ ಮೇಲೆ ಹಲ್ಲೆಗೆ ಯತ್ನ; ಆರೋಪಿಯ ಬಂಧನ

ಉಡುಪಿ: ರಾತ್ರಿ ರೌಂಡ್ಸ್ ಕರ್ತವ್ಯದಲ್ಲಿದ್ದ ಮಹಿಳಾ ಪೊಲೀಸ್ ಅಧಿಕಾರಿಗೆ ಏಕವಚನದಲ್ಲಿ ನಿಂದಿಸಿ ಹಲ್ಲೆಗೆ ಯತ್ನಿಸಿ, ಸರಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ವ್ಯಕ್ತಿಯನ್ನು ಮಣಿಪಾಲ ಪೊಲೀಸರು ಬಂಧಿಸಿದ್ದಾರೆ. ಉಡುಪಿಯ ಕೊಡವೂರು ಗ್ರಾಮದ ಜುಮಾದಿನಗರದ ಸಾಗರ್ (25) ಬಂಧಿತ ಆರೋಪಿ. ಜು.26ರ ಶನಿವಾರ ಬೆಳಿಗ್ಗೆ ಸುಮಾರು 2.30 ಕ್ಕೆ ಅನುಮಾನಸ್ಪದವಾಗಿ ಓಡಾಡುತ್ತಿದ್ದ ಸಾಗರ್ ನನ್ನು ಮಹಿಳಾ ಪೊಲೀಸ್ ಅಧಿಕಾರಿ ವಿಚಾರಣೆ ನಡೆಸಿದ್ದಾರೆ. ಈ ವೇಳೆ ಆತ ಮಹಿಳಾ ಪೊಲೀಸ್ ಅಧಿಕಾರಿಗೆ ಹಲ್ಲೆ ನಡೆಸಲು ಪ್ರಯತ್ನಿಸಿದ್ದಾನೆ ಎನ್ನಲಾಗಿದೆ‌. ಬಂಧಿತನನ್ನು ಉಡುಪಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು,…

Read More

ಅಮೆರಿಕಾದ ಅಂತರಾಷ್ಟ್ರೀಯ ವಿಧಾಯಕರುಗಳ ಸಮ್ಮೇಳನಕ್ಕೆ ಶಾಸಕ ಮಂಜುನಾಥ ಭಂಡಾರಿ ಆಯ್ಕೆ

ಮಂಗಳೂರು: ರಾಷ್ಟ್ರೀಯ ಶಾಸಕರ ಸಮಾವೇಶ ಸಂಸ್ಥೆಯ (NLC) ಆಶ್ರಯದಲ್ಲಿ ಅಮೆರಿಕಾದ ಬೋಸ್ಟನ್ ನಲ್ಲಿ ಕರ್ನಾಟಕ ವಿಧಾನಸಭಾ ಅಧ್ಯಕ್ಷರ (ಸ್ಪೀಕರ್) ನೇತೃತ್ವದಲ್ಲಿ ನಡೆಯುವ ಅಂತರರಾಷ್ಟ್ರೀಯ ಮಟ್ಟದ ವಿಧಾಯಕರುಗಳ ಸಮ್ಮೇಳನಕ್ಕೆ ಹಿರಿಯ ರಾಜಕಾರಣಿ ವಿಧಾನ ಪರಿಷತ್ ಶಾಸಕರಾದ ಮಂಜುನಾಥ ಭಂಡಾರಿ ಅವರು ಅವಕಾಶ ಪಡೆದಿದ್ದಾರೆ. ಕರ್ನಾಟಕದ ವಿಧಾನಸಭೆಯ 224 ಸದಸ್ಯರುಗಳಲ್ಲಿ 14 ಶಾಸಕರು ಆಯ್ಕೆಯಾಗಿದ್ದು ಅದರಲ್ಲಿ ಭಂಡಾರಿ ಓರ್ವರಾಗಿರುತ್ತಾರೆ.ಸಚಿವರು, ಶಾಸಕರು, ವಿಧಾನ ಪರಿಷತ್ ಸದಸ್ಯರು, ನೀತಿ ನಿರೂಪಕರು ಈ ಸಮ್ಮೇಳನದಲ್ಲಿ ಪಾಲ್ಗೊಳ್ಳಲಿದ್ದು ಪ್ರಜಾತಂತ್ರ ಗಟ್ಟಿಗೊಳಿಸುವಿಕೆಯಲ್ಲಿ ಶಾಸನ ಸಭೆಗಳ ಪಾತ್ರ ಶಾಸನ…

Read More

“ಎಲ್ಟು ಮುತ್ತಾ ಕನ್ನಡ ಚಲನಚಿತ್ರ ತೆರೆಗೆ ಸಿದ್ದ

ಮಂಗಳೂರು: “ಎಲ್ಟು ಮುತ್ತಾ ಎಂಬ ಕೊಡಗಿನ ಹಿನ್ನಲೆಯುಳ್ಳ ಕನ್ನಡ ಚಲನಚಿತ್ರವು ಹೈ ಫೈವ್ ಸ್ಟುಡಿಯೋಸ್ ಮತ್ತು ಎಸಿಇ 22 ಪ್ರೊಡಕ್ಷನ್ಸ್ ಲಾಂಛನದಲ್ಲಿ ಬಿಡುಗಡೆಗೆ ಸಿದ್ಧಗೊಂಡಿದ್ದು ಇದರ ಟೀಸರ್ ನವಿಲು ಮತ್ತು ಕಾಳಿಂಗ ಹಾವಿನ ಕಥೆ ಹೇಳಿ ಬಹಳ ದೊಡ್ಡಮಟ್ಟದಲ್ಲಿ ಸದ್ದು ಮಾಡುತ್ತಾ ಇದೆ. ಹುಬ್ಬಳ್ಳಿಯಲ್ಲಿ ಅದ್ಧೂರಿಯಾಗಿ ಆಡಿಯೋ ಲಾಂಚ್ ಕಾರ್ಯಕ್ರಮ ನಡೆದಿದ್ದು ಸಿನಿಮಾದ ಟ್ರೈಲರ್ ಯೂಟ್ಯೂಬ್ ನಲ್ಲಿ ಭಾರೀ ಸದ್ದು ಮಾಡುತ್ತಿದೆ. ಈ ಸಿನಿಮಾದ ಕಥಾವಸ್ತುವನ್ನು ತೆರೆಯ ಮೇಲೆ ತರಲು ನಿರ್ದೇಶಕ ರಾ ಸೂರ್ಯ ಬಹಳಷ್ಟು ಶ್ರಮವಹಿಸಿದ್ದಾರೆ“…

Read More

“ಇಡಿ ಇಲಾಖೆ ದುರ್ಬಳಕೆ ಮಾಡಿದ ಬಿಜೆಪಿ ಸರಕಾರದ ವಿರುದ್ಧ ಪ್ರತಿಭಟನೆ ಖಚಿತ ”

ಮಂಗಳೂರು: “ಇಡಿ ಇಲಾಖೆಯನ್ನು ರಾಜಕೀಯ ದುರುದ್ದೇಶಕ್ಕೆ ಬಳಸಿರುವ ಬಿಜೆಪಿ ದೇಶದ ಸಂವಿಧಾನವನ್ನು ಗಾಳಿಗೆ ತೂರಿದೆ. ಬಿಜೆಪಿಗೆ ದೇಶದಲ್ಲಿ ಆಡಳಿತ ನಡೆಸಲು ಅರ್ಹತೆ ಇಲ್ಲ. ಸುಪ್ರೀಂ ಕೋರ್ಟ್ ಇಡಿ ದುರ್ಬಳಕೆ ಮಾಡಿರುವುದನ್ನು ಹೇಳಿದ್ದರಿಂದ ಬಿಜೆಪಿ ಹಣೆಬರಹ ಜಗಜ್ಜಾಹೀರಾಗಿದೆ“ ಎಂದು ವಿಧಾನ ಪರಿಷತ್ ಶಾಸಕ ಐವನ್ ಡಿಸೋಜ ಪತ್ರಿಕಾಗೋಷ್ಟಿಯಲ್ಲಿ ಹೇಳಿದರು. ”ಇಡಿಯನ್ನು ಮುಂದಿಟ್ಟುಕೊಂಡು ಮುಡಾ ಹಗರಣದಲ್ಲಿ ಮುಖ್ಯಮಂತ್ರಿಯವರ ಶ್ರೀಮತಿಯವರ ಹೆಸರನ್ನು ದುರ್ಬಳಕೆ ಮಾಡಲಾಯಿತು. ಮುಡಾ ಪ್ರಕರಣದಲ್ಲಿ ಮನಿ ಲ್ಯಾಂಡಿಂಗ್ ನಡೆದಿಲ್ಲ, ಹಣ ತೆಗೆದುಕೊಂಡ ದೂರಿಲ್ಲ ಹೀಗಿರುವಾಗ ಮುಖ್ಯಮಂತ್ರಿಯವರ ಶ್ರೀಮತಿ ವಿರುದ್ಧ…

Read More

ಕೆಪಿಟಿಗೆ ಲಭ್ಯವಾಗದ ಫ್ಲೈಓವರ್ ಭಾಗ್ಯ…

ಮಂಗಳೂರು: ದಿನ ನಿತ್ಯವೂ ವಾಹನ ದಟ್ಟಣೆ , ಒಮ್ಮೆ ಸಿಗ್ನಲ್ ನಲ್ಲಿ ಸಿಕ್ಕಿ ಹಾಕಿಕೊಂಡರಂತೂ ತ್ರಿಶಂಕು ಸ್ಥಿತಿ , ನಾಲ್ಕೂ ಮಾರ್ಗಗಳು ಸೇರುವ ವೃತ್ತ ಇದಾಗಿದ್ದರೂ ಇನ್ನು ಫ್ಲೈ ಓವರ್ ಭಾಗ್ಯ ದೊರೆತಿಲ್ಲ. ಕೆ.ಪಿ.ಟಿ. ಜಂಕ್ಷನ್ ಅಥವಾ ವಿಶ್ವೇಶ್ವರಯ್ಯ ವೃತ್ತ ಎಂದು ಕರೆಯಲ್ಪಡುವ ‌ಪ್ರಮುಖ ಜಂಕ್ಷನ್ ಸದಾ ಟ್ರ್ರಾಫಿಕ್ ಜಾಮ್ ನಿಂದ ಬಾಧೆ ಕೊಡುತ್ತಿರುತ್ತದೆ . ಇಲ್ಲಿ ಫ್ರೀ ಲೆಷ್ಟ್ ಇದೆಯಾದರೂ ಅದಕ್ಕೆ ಅಡ್ಡವಾಗಿ ನಿಂತು ವಾಹನ ಸಂಚಾರಕ್ಕೆ ಅಡ್ಡಿಯುಂಟು ಮಾಡದಿದ್ದರೆ ಖಾಸಗಿ ಬಸ್ಸುಗಳ ಚಾಲಕರಿಗೆ ಉಂಡ…

Read More
error: Content is protected !!