ಬೆಳ್ತಂಗಡಿ ನಡ ಕನ್ಯಾಡಿಯಲ್ಲಿ ಅರಣ್ಯ ಇಲಾಖೆಯ ಬೋನಿಗೆ ಚಿರತೆ ಸಿಲುಕಿ ಸೆರೆ

ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ ಚಿರತೆಯೊಂದು ಬಿದ್ದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ‌ ಬೆಳ್ತಂಗಡಿ ತಾಲೂಕಿನ ನಡ ಕನ್ಯಾಡಿ ಪರಿಸರ ಪ್ರದೇಶದಲ್ಲಿ ನಡೆದಿದೆ.ಚಿರತೆಯನ್ನು ಹಿಡಿಯಲು ಅರಣ್ಯ ಇಲಾಖೆ ವಿಶೇಷ ತಂಡವನ್ನು ರಚಿಸಿ, ಚಿರತೆ ಹೋಗುತ್ತಿದ್ದ ಸ್ಥಳಗಳನ್ನು ಗುರುತಿಸಿ ಬೆಳ್ತಂಗಡಿ ತಾಲೂಕಿನ ವಿವಿಧ ಪ್ರದೇಶಗಳಲ್ಲಿ ವಿಶೇಷ ಬೋನುಗಳನ್ನು ಇಟ್ಟಿತ್ತು. ಇದರ ಫಲವಾಗಿ ಇದೀಗ ಒಂದು ಚಿರತೆ ಬೋನಿಗೆ ಸಿಲುಕಿದೆ. ಈ ಪ್ರದೇಶದಲ್ಲಿ ಚಿರತೆಯ ಓಡಾಟ ತೀವ್ರವಾಗಿದ್ದು, ಈ ಹಿಂದೆ ವ್ಯಕ್ತಿಯೊಬ್ಬರ ಮೇಲೆ ದಾಳಿ ನಡೆಸಿದ್ದಲ್ಲದೆ, ಹಲವು ಸಾಕು ಪ್ರಾಣಿಗಳ…

Read More

ಉಡುಪಿ: ಗಣರಾಜ್ಯೋತ್ಸವ ದಿನದಂದೇ ಯೋಧನಿಗೆ ಅವಮಾನ- ವ್ಯಾಪಕ ಆಕ್ರೋಶ

ಉಡುಪಿ: ದೇಶಕ್ಕಾಗಿ ಹೋರಾಡಿದ ನಿವೃತ್ತ ಸೈನಿಕನಿಗೆ ಗಣರಾಜ್ಯೋತ್ಸವ ದಿನದಂದೇ ಅವಮಾನಪಡಿಸಿದ ಘಟನೆ ಬ್ರಹ್ಮಾವರ ಸಾಸ್ತಾನ ಟೋಲ್‌ ಪ್ಲಾಜಾದಲ್ಲಿ ನಡೆದಿದೆ. ಸಾಸ್ತಾನ ಟೋಲ್ ಮೂಲಕ ಪ್ರಯಾಣಿಸುತ್ತಿದ್ದ ವೇಳೆ ಯುದ್ಧದಲ್ಲಿ ಗಾಯಗೊಂಡ ಸೈನಿಕರಿಗೆ ನೀಡಲಾಗುವ ಟೋಲ್‌ ವಿನಾಯಿತಿ ಪತ್ರವನ್ನು ತೋರಿಸಿದ್ದರೂ, ಟೋಲ್ ಸಿಬ್ಬಂದಿ ವಿನಾಯಿತಿ ನೀಡಲು ನಿರಾಕರಿಸಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಸ್ವತಃ ನಿವೃತ್ತ ಸೈನಿಕ ಶ್ಯಾಮರಾಜ್ ಅವರು ವಿಡಿಯೋ ದಾಖಲಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದು, ಘಟನೆ ದೇಶಾದ್ಯಂತ ಭಾರೀ ಚರ್ಚೆಗೆ ಗ್ರಾಸವಾಗಿದೆ. ಶ್ಯಾಮರಾಜ್ ಅವರು ಇವಿ-21ನೇ ಪ್ಯಾರಾ ಸ್ಪೆಷಲ್…

Read More

ತಂದೆಗೆ ಚೂರಿಯಿಂದ ಇರಿದು, ಬಳಿಕ ಕೋವಿಯಿಂದ ಗುಂಡು ಹಾರಿಸಿಕೊಂಡು ಮಗ ಆತ್ಮಹತ್ಯೆ

ಕಡಬ: ಕ್ಷುಲ್ಲಕ ಕಾರಣಕ್ಕೆ ತಂದೆಯೊಂದಿಗೆ ಜಗಳವಾಡಿದ ಮಗನೊಬ್ಬ, ತಂದೆಗೆ ಚೂರಿಯಿಂದ ಇರಿದು ಬಳಿಕ ತಾನೂ ಕೋವಿಯಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ರಾಮಕುಂಜ ಗ್ರಾಮದ ಪಾದೆ ಎಂಬಲ್ಲಿ ಶನಿವಾರ ಸಂಜೆ ನಡೆದಿದೆ.ರಾಮಕುಂಜ ಗ್ರಾಮದ ಪಾದೆ ನಿವಾಸಿ ವಸಂತ ಅಮೀನ್ ಅವರ ಪುತ್ರ, ಮಂಗಳೂರಿನ ಖಾಸಗಿ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿ ಮೋಕ್ಷ ಮೃತಪಟ್ಟ ದುರ್ದೈವಿ. ಘಟನೆಯಲ್ಲಿ ತಂದೆ ವಸಂತ ಅಮೀನ್ ಅವರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಮಂಗಳೂರಿನ ಎಜೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೂಲತಃ ಕೇರಳದವರಾದ ವಸಂತ ಅಮೀನ್…

Read More

ಸೂರಿಕುಮೇರು : ರಾಷ್ಟ್ರೀಯ ಹೆದ್ದಾರಿಯಲ್ಲಿ ಡಿವೈಡರ್ ಹತ್ತಿ ನಿಂತ ಸರಕಾರಿ ಬಸ್

ಮಾಣಿ : ಇಲ್ಲಿನ ಸೂರಿಕುಮೇರು ರಾಜ್ ಕಮಲ್ ಹಾಲ್ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಸರಕಾರಿ ಬಸ್ ಡಿವೈಡರ್ ಹತ್ತಿ ನಿಂತ ಘಟನೆ ಸೋಮವಾರ ಬೆಳಗ್ಗಿನ ಜಾವ ನಡೆದಿದೆ. ಘಟನೆಯಿಂದ ಬಸ್‌ಗೆ ಭಾಗಶಃ ಹಾನಿ ಉಂಟಾಗಿದೆ, ಅತೀವೇಗದ ಚಾಲನೆಯಿಂದ ಈ ಘಟನೆ ಸಂಭವಿಸಿದೆ ಎನ್ನಲಾಗಿದ್ದು ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿರುತ್ತಾರೆ.

Read More

ಜನವರಿ 26ರಿಂದ ಬೃಹತ್ ಕಮ್ಯುನಿಟಿ ಫೆಸ್ಟ್ , ಸಪ್ತ ದಿನಗಳ ಕ್ರೀಡಾ ಕೂಟ, ಉದ್ಯೋಗ ಮೇಳ, ರಕ್ತದಾನ ಶಿಬಿರ ಹಾಗೂ ಫುಡ್ ಫೆಸ್ಟ್ ಮೆರುಗಿಗೆ ಕಡಲ ನಗರಿ ಉಳ್ಳಾಲ ಸಾಕ್ಷಿ…. !

ಮಂಗಳೂರು:ಯುನೈಟೆಡ್ ಎಂಪವರ್‌ಮೆಂಟ್ ಅಸೋಸಿಯೇಶನ್ ವತಿಯಿಂದ ನಗರದ ಉಳ್ಳಾಲದಲ್ಲಿ ಏಳು ದಿನಗಳ ಕಾಲ ಬೃಹತ್ ಕಮ್ಯುನಿಟಿ ಫೆಸ್ಟ್ ನಡೆಯಲಿದೆ. ಯುವ ನಾಯಕತ್ವ, ವೃತ್ತಿ ಮಾರ್ಗದರ್ಶನ ಮತ್ತು ಉತ್ತಮ ಸಮಾಜ ನಿರ್ಮಾಣದಲ್ಲಿ ಯುವಕರ ಪಾಲ್ಗೊಳ್ಳುವಿಕೆಯನ್ನು ಬಲಪಡಿಸುವ ನಿಟ್ಟಿನಲ್ಲಿ ಜನವರಿ 26ರಿಂದ ಫೆ:01 ರ ತನಕ ಏಳು ದಿನಗಳ ವಿವಿಧ ಕ್ರೀಡಾಕೂಟಗಳ ಜೊತೆಗೆ ಉದ್ಯೋಗ ಮೇಳ, ರಕ್ತದಾನ ಶಿಬಿರ ಹಾಗೂ ಆಹಾರ ಮೇಳ ನಡೆಯಲಿದ ಎಂದು ಸಂಸ್ಥೆಯ ರಾಜ್ಯ ಅಧ್ಯಕ್ಷರಾದ ಸಿರಾಜ್ ಎರ್ಮಾಳ್ ತಿಳಿಸಿದರು. ಅವರು ಖಾಸಗಿ ಮಾಲ್ ನಲ್ಲಿ ನಡೆಸಿದ…

Read More

ಚುನಾವಣೆ ಸಮಯದಲ್ಲಿ ಮಾತ್ರ ರಾಜಕೀಯ, ಅಭಿವೃದ್ಧಿಗಿಲ್ಲ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಉಡುಪಿ ಚುನಾವಣೆ ಸಂದರ್ಭದಲ್ಲಿ ಮಾತ್ರ ರಾಜಕೀಯ ಮಾಡೋಣ, ಉಳಿದ ಸಂದರ್ಭದಲ್ಲಿ ಅಭಿವೃದ್ಧಿ ಕಡೆಗಷ್ಟೆ ಗಮನ ಹರಿಸಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.ಬೈಂದೂರು ಉತ್ಸವದಲ್ಲಿ ಮಾತನಾಡಿದ ಸಚಿವರು, ಅಭಿವೃದ್ಧಿ ವಿಚಾರದಲ್ಲಿ ನಾನು ಎಂದಿಗೂ ರಾಜಕಾರಣ ಮಾಡಿಲ್ಲ, ಮಾಡುವುದೂ ಇಲ್ಲ, ಅಭಿವೃದ್ಧಿಗಷ್ಟೇ ಆದ್ಯತೆ ನೀಡುತ್ತೇನೆ ಎಂದರು. ಮಹಾತ್ಮ ಗಾಂಧಿಯವರ ಅವರ ಪರಿಕಲ್ಪನೆಯಂತೆ ಶಾಸಕ ಗುರುರಾಜ್ ಗಂಟಿಹೊಳೆ ಅವರು ಕ್ಷೇತ್ರದಲ್ಲಿ ಕೆಲಸ ಮಾಡುತ್ತಿದ್ದಾರೆ. ಗ್ರಾಮ ಸ್ವರಾಜ್,…

Read More

ಹಿಂಸಾತ್ಮಕ ಚಟುವಟಿಕೆಗಳಿಗೆ ಪ್ರೋತ್ಸಾಹ ನೀಡಿದರೆ ಕಠಿಣ ಕ್ರಮ ಖಚಿತ: ದಿನೇಶ್ ಗುಂಡೂರಾವ್

ಮಂಗಳೂರು:ಯಾವುದೇ ಶಕ್ತಿ ಅಥವಾ ವ್ಯಕ್ತಿ ತಮ್ಮ ವೈಯಕ್ತಿಕ ಲಾಭಕ್ಕಾಗಿ ಇಲ್ಲಿನ ಯುವಕರನ್ನು ದಾರಿ ತಪ್ಪಿಸಿ ಹಿಂಸಾತ್ಮಕ ಚಟುವಟಿಕೆಗಳಲ್ಲಿ ತೊಡಗಲು ಪ್ರೋತ್ಸಾಹಿಸುವುದನ್ನು ಸರ್ಕಾರ ಸಹಿಸುವುದಿಲ್ಲ. ಇಂತಹ ಕೃತ್ಯಗಳು ಕಂಡುಬಂದಲ್ಲಿ ಅವುಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಸರ್ಕಾರ ಯಾವುದೇ ಹಿಂಜರಿಕೆಯನ್ನು ತೋರುವುದಿಲ್ಲ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್‌ ಸ್ಪಷ್ಟಪಡಿಸಿದರು. ನಗರದ ನೆಹರೂ ಮೈದಾನದಲ್ಲಿ ಇಂದು ಜಿಲ್ಲಾ ಮಟ್ಟದ ಗಣರಾಜ್ಯೋತ್ಸವದ ಅಂಗವಾಗಿ ರಾಷ್ಟ್ರಧ್ವಜಾರೋಹಣ ನೆರವೇರಿಸಿ ಸಂದೇಶ ನೀಡಿದ ಅವರು .ಪ್ರತಿಯೊಬ್ಬರೂ ತಮ್ಮ ತಮ್ಮ ಧರ್ಮಗಳ…

Read More

ಮೂಡಬಿದ್ರೆಯಲ್ಲಿ ದಿಶಾ ಟ್ರಸ್ಟ್–ತೋಟಗಾರಿಕಾ ಇಲಾಖೆ ಜಂಟಿ ಬೆಳೆ ಸಂರಕ್ಷಣೆ ಮಾಹಿತಿ ಕಾರ್ಯಾಗಾರ

ಮಂಗಳೂರು:ದಿಶಾ ಟ್ರಸ್ಟ್ ರಿ. ಕೈಕಂಬ ಮಂಗಳೂರು ಮತ್ತು ಮಂಗಳೂರು ತಾಲೂಕು ತೋಟಗಾರಿಕಾ ಇಲಾಖೆ ಜಂಟಿ ಸಹಭಾಗಿತ್ವದಲ್ಲಿ  ಬೆಳೆ ಸಂರಕ್ಷಣೆ ಕುರಿತ ಮಾಹಿತಿ ಕಾರ್ಯಾಗಾರ ಮೂಡಬಿದ್ರೆಯಲ್ಲಿ ನಡೆಯಿತು.ಕೃಷಿಕರ ನೆಲ ಜಲ ಅಭಿವೃದ್ಧಿ ಸಂಘ ಶಿರ್ತಾಡಿ , ಮಕ್ಕಿ ಕಜೆ ಇವರ ಸಹಕಾರದೊಂದಿಗೆ   ಮೂಡಬಿದ್ರೆ ತಾಲೂಕಿನ  ಶಿರ್ತಾಡಿ  ಗ್ರಾಮ ಪಂಚಾಯತ್  ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮವನ್ನು  ದಿಶಾ ಟ್ರಸ್ಟ್ ನ  ಯೋಜನಾ ನಿರ್ದೇಶಕರಾದ ಡಾ. ಐರಿನ್ ವೇಗಸ್ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ಮುಂದಿನ ಮೂರು ವರ್ಷಗಳಲ್ಲಿ  ನೈಸರ್ಗಿಕ ಸಂಪನ್ಯೂಲ   ಯೋಜನೆಯನ್ನು…

Read More

ಸಾಹಿತಿ, ಕಿರುತೆರೆ ನಿರ್ದೇಶಕ ಟಿ.ಎನ್. ಸೀತಾರಾಂ ಅವರಿಗೆ ಪಂಚಮಿ ಪುರಸ್ಕಾರ ಪ್ರದಾನ

ಉಡುಪಿ: ಉಡುಪಿ ಸಂಸ್ಕೃತಿ ವಿಶ್ವ ಪ್ರತಿಷ್ಠಾನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಇವುಗಳ ಸಹಕಾರದೊಂದಿಗೆ ಉಡುಪಿ ಯಕ್ಷಗಾನ ಕಲಾರಂಗದ ಐವೈಸಿ ಸಭಾಂಗಣದಲ್ಲಿ ಹಮ್ಮಿಕೊಂಡ ಸಂಸ್ಕೃತಿ ಉತ್ಸವದ ಎರಡನೆ ದಿನದ ಕಾರ್ಯಕ್ರಮದಲ್ಲಿ ಉಡುಪಿ ಪಂಚಮಿ ಟ್ರಸ್ಟ್ ಪ್ರಾಯೋಜಿತ ಪಂಚಮಿ ಪುರಸ್ಕಾರವನ್ನು ಸಾಹಿತಿ, ಕಿರುತೆರೆ ನಿರ್ದೇಶಕ ಟಿ.ಎನ್. ಸೀತಾರಾಂ ಅವರಿಗೆ ಪ್ರದಾನ ಮಾಡಲಾಯಿತು.ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಟಿ.ಎನ್. ಸೀತಾರಾಂ ಅವರು, ಕೃತಕ ಬುದ್ದಿಮತ್ತೆ ಸಾಹಿತ್ಯ, ಸಂಸ್ಕೃತಿಗಳ ಕ್ಷೇತ್ರಕ್ಕೆ ಕಾಲಿಟ್ಟರೆ ಸೃಷ್ಠಿಶೀಲ ಮನಸ್ಸುಗಳು ನಾಶವಾಗಿ ದೊಡ್ಡ ಅಪಾಯ ಉಂಟು ಮಾಡುವ…

Read More

ಜ.28, 29: ಸಂತ ಅಲೋಶಿಯಸ್ ವಿವಿಯಲ್ಲಿ ಅಂತ‌ರ್ ರಾಷ್ಟ್ರೀಯ ಸಮ್ಮೇಳನ …. !

ಮಂಗಳೂರು,:ಮಂಗಳೂರಿನ ಸಂತ ಅಲೋಶಿಯಸ್ ಪರಿಗಣಿತ ವಿಶ್ವ ವಿದ್ಯಾನಿಲಯದಲ್ಲಿ ಸ್ಕೂಲ್ ಆಫ್ ಆರ್ಟ್ಸ್ ಆಂಡ್ ಹ್ಯುಮಾನಿಟೀಸ್ ವತಿ ಯಿಂದ ‘ಸುಸ್ಥಿರ ಅಭಿವೃದ್ಧಿಗಾಗಿ ಶಾಂತಿ ಮತ್ತು ಸಮಾ ವೇಶಿತ ಸಮಾಜಗಳ ಉತ್ತೇಜನ’ ಎಂಬ ವಿಷಯ ದಲ್ಲಿ ಜ.28 ಮತ್ತು 29ರಂದು ಎರಡು ದಿನಗಳ ಅಂತ‌ರ್ ರಾಷ್ಟ್ರೀಯ ಸಮ್ಮೇಳನ ಆಯೋಜಿ ಸಲಾಗಿದೆ. ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಮ್ಮೇಳನದ ಅಧ್ಯಕ್ಷೆ ಡಾ.ರೋಸ್‌ವೀರ ಡಿಸೋಜ, ಜ.28ರಂದು ಬೆಳಗ್ಗೆ 10ಕ್ಕೆ ಎಲ್.ಎಫ್.ರಸ್ಕಿನ್ಹಾ ಸಭಾಂ ಗಣದಲ್ಲಿ ಡಿಸಿ ಎಚ್.ವಿ. ದರ್ಶನ್ ಕಾರ್ಯಕ್ರಮ ಉದ್ಘಾಟಿಸಲಿದ್ದು, ಸಂತ ಅಲೋಶಿಯಸ್ ವಿವಿಯ…

Read More
error: Content is protected !!