ಒಮಾನ್ ಕರಾವಳಿ ದಾಳಿ: ಬಂಟ್ವಾಳದ ಯುವಕ ಅಪಾಯದಿಂದ ಪಾರು
ಬಂಟ್ವಾಳ: ಒಮಾನ್ ಕರಾವಳಿ ಸಮೀಪ ಸಂಚರಿಸುತ್ತಿದ್ದ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯ ವೇಳೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಯುವಕರೊಬ್ಬರು ಅಪಾಯದಿಂದ ಪಾರಾಗಿದ್ದು, ಸುರಕ್ಷಿತರಾಗಿದ್ದಾರೆ. ಈ ಮಾಹಿತಿ ಕುಟುಂಬಕ್ಕೆ ತಲುಪುತ್ತಿದ್ದಂತೆ ಆತಂಕದ ವಾತಾವರಣ ನಿವಾರಣೆಯಾಗಿ ನೆಮ್ಮದಿ ಮೂಡಿದೆ. ಬಂಟ್ವಾಳ ತಾಲೂಕಿನ ಪೆರ್ನೆ ಗ್ರಾಮದ ಬಿಳಿಯೂರು ನಿವಾಸಿ ರಚನ್ ಕಳೆದ ಹಲವು ವರ್ಷಗಳಿಂದ ವಾಣಿಜ್ಯ ಹಡಗಿನಲ್ಲಿ ಉದ್ಯೋಗ ನಿರ್ವಹಿಸುತ್ತಿದ್ದಾರೆ. ಅವರು ಕರ್ತವ್ಯದಲ್ಲಿದ್ದ ಹಡಗು ಒಮಾನ್ ಕರಾವಳಿ ಸಮೀಪ ಸಾಗುತ್ತಿದ್ದ ವೇಳೆ ದಾಳಿ ಸಂಭವಿಸಿದೆ ಎಂದು ಕುಟುಂಬದ…
