ಈ ನೆಲದ ಕಲೆ ಮತ್ರು ಸಂಸ್ಜೃತಿಯನ್ನು ಉಳಿಸುವ ಕೆಲಸ ಯಕ್ಷಗಾನ‌ ಮಾಡಿದೆ: ಕ್ಯಾಪ್ಟನ್ ಬ್ರಿಜೇಶ್ ಚೌಟ

ಸಹ್ಯಾದ್ರಿಯಲ್ಲಿ ಯಕ್ಷಧ್ರುವ ಯಕ್ಷಶಿಕ್ಷಣ ಯೋಜನೆಯ ವಿದ್ಯಾರ್ಥಿಗಳಿಂದ ಯಕ್ಷಧ್ರುವ ವಿದ್ಯಾರ್ಥಿ ಸಮ್ಮಿಲನ 2025-26 ಮಂಗಳೂರು: ಈ ನೆಲದ ಅಸ್ಮಿತೆ ಸನಾತನ ಸಂಸ್ಕೃತಿಯನ್ನು ಜೀವನದಲ್ಲಿ ಅಳವಡಿಸಿಕೊಂಡು ಬದುಕುತ್ತಿರುವವರು ಕರಾವಳಿಗರು. ಇಲ್ಲಿ ಕಲೆ ಮತ್ತು ಸಂಸ್ಕೃತಿ ದೊಡ್ಡ ಪಾತ್ರವನ್ನು ವಹಿಸಿಕೊಂಡಿದೆ. ಈ ನೆಲದ ಕಲೆ ಮತ್ತು ಸಂಸ್ಜೃತಿಯನ್ನು ಉಳಿಸುವ ಕೆಲಸ ಯಕ್ಷಗಾನ ಮಾಡಿದೆ ಎಂದು ದಕ್ಷಿಣ ಕನ್ನಡ ಜಿಲ್ಲೆಯ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ತಿಳಿಸಿದರು. ಅಡ್ಯಾರ್ ಸಹ್ಯಾದ್ರಿ ಕಾಲೇಜು ಆವರಣದಲ್ಲಿ ಯಕ್ಷಧ್ರುವ ಪಟ್ಲ ಫೌಂಡೇಶನ್ ಘಟಕಗಳ ಸಹಯೋಗದೊಂದಿಗೆ ನಡೆದ ಯಕ್ಷಧ್ರುವ-ಯಕ್ಷ…

Read More

ಹಸಿವಿನ ಬಳಲಿಕೆ ಉಳ್ಳವರಿಗೆ ಅವಮಾನ.ವೆನ್ಲಾಕ್ ಆಸ್ಪತ್ರೆಯ ಕಾರುಣ್ಯ ಯೋಜನೆಗೆ ನೆರವು ನೀಡಿದ ರೊನಾಲ್ಡ್ ಮಾರ್ಟಿಸ್

ಮಂಗಳೂರು: ನಾಡಿನಲ್ಲಿ ಯಾರೂ ಹಸಿವಿನಿಂದ ಮಲಗುವ ಪರಿಸ್ಥಿತಿ ಇರಬಾರದು. ಒಂದು ವೇಳೆ ಹಸಿವಿನಿಂದ ಬಳಲುತ್ತಿದ್ದರೆ, ಅದು ಉಳ್ಳವರಿಗೆ ಅವಮಾನ ಎಂದು ದುಬಾಯಿಯ ಬ್ಲೂ ರೋಯಲ್ ಗ್ರೂಪ್ ಆಫ್ ಕಂಪನೀಸ್‌ನ ಆಡಳಿತ ನಿರ್ದೇಶಕ ರೊನಾಲ್ಡ್ ಮಾರ್ಟಿಸ್ ಹೇಳಿದರು.ನಗರದ ಸರಕಾರಿ ವೆನ್ಲಾಕ್ ಆಸ್ಪತ್ರೆಯ ಫಿಸಿಯೋಥೆರಪಿ ಸೆಂಟರ್ ಬಳಿ ಶನಿವಾರ ಎಂಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ನಿಂದ ವೆನ್ಲಾಕ್ ಆಸ್ಪತ್ರೆಯ ಒಳರೋಗಿಗಳ ಜತೆಗಾರರಿಗೆ ರಾತ್ರಿ ಊಟ ನೀಡುವ ಕಾರುಣ್ಯ ಯೋಜನೆಗೆ ಒಂದು ತಿಂಗಳ ಪ್ರಾಯೋಕತ್ವಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಇಲ್ಲಿ ನಿರಂತರ…

Read More

ಉಪ್ಪಳ ನಿವಾಸಿ ಯುವಕನೊಬ್ಬ ದುಬೈಯಲ್ಲಿ ಸಾವು

ಮಂಜೇಶ್ವರ: ಉಪ್ಪಳ ನಿವಾಸಿಯಾದ ಯುವಕನೊಬ್ಬ ದುಬೈಯಲ್ಲಿ ಸಾವನ್ನಪ್ಪಿದ್ದಾನೆ. ಉಪ್ಪಳ ಹಿದಾಯತ್ ಬಜಾರ್ ನಿವಾಸಿ ಅಬ್ದುಲ್ ರಹ್ಮಾನ್ ಎಂಬವರ ಪುತ್ರ ಮುಹಮ್ಮದ್ ರಫೀಕ್ (27) ಸಾವನ್ನಪ್ಪಿದ ದುರ್ದೈವಿ. ಇವರು ದುಬೈಯ ಸೂಪರ್ ಮಾರ್ಕೆಟ್‌ವೊಂದರಲ್ಲಿ ಕೆಲಸ ನಿರ್ವಹಿಸುತ್ತಿದ್ದರು. ಕಳೆದ ದಿವಸ ವಾಸಸ್ಥಳದಲ್ಲಿ ಅಸ್ವಸ್ಥ ಸ್ಥಿತಿಯಲ್ಲಿ ಕಂಡುಬಂದ ಇವರನ್ನು ಅಲ್ಲಿನ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿ ಯಾಗದೆ ಸಾವು ಸಂಭವಿಸಿರುವ ಬಗ್ಗೆ ಮನೆಯವರಿಗೆ ಮಾಹಿತಿ ಲಭಿಸಿದೆ.ಕೆಎಂಸಿಸಿ ಸಂಘಟನೆಯ ನೇತೃತ್ವದಲ್ಲಿ ಶವ ಶರೀರ ಊರಿಗೆ ತರಲಿರುವ ಕ್ರಮ ಆರಂಭಿಸಲಾಗಿದೆಯೆಂದು ಸಂಬಂಧಿಕರು ಮಾಹಿತಿ ನೀಡಿದ್ದಾರೆ.

Read More

ಬೋಳೂರು ವಾರ್ಡಿನಲ್ಲಿ 40 ಲಕ್ಷ ರೂ. ಅನುದಾನದ ರಸ್ತೆ–ಒಳಚರಂಡಿ ಕಾಮಗಾರಿಗೆ ಗುದ್ದಲಿ ಪೂಜೆ

ಮಂಗಳೂರು ಮಹಾನಗರ ಪಾಲಿಕೆಯ 27ನೇ ಬೋಳೂರು ವಾರ್ಡಿನಲ್ಲಿ 40 ಲಕ್ಷ ರೂ ವಿಶೇಷ ಅನುದಾನಲ್ಲಿ ಸುನೀಲ್ ಕುಮಾರ್ ರಸ್ತೆಯಿಂದ ಚಾರಂದಾಯ ದೈವಸ್ಥಾನ ಹಾಗೂ ಕುಚ್ಚಿಕಾಡು ಸಂಪರ್ಕಿಸುವ ರಸ್ತೆ ಅಭಿವೃದ್ಧಿ ಹಾಗೂ ಒಳಚರಂಡಿ ಕಾಮಗಾರಿಯ ಗುದ್ದಲಿ ಪೂಜೆಯು ಶಾಸಕ ವೇದವ್ಯಾಸ ಕಾಮತ್ ರವರ ನೇತೃತ್ವದಲ್ಲಿ ನಡೆಯಿತು. ಈ ವೇಳೆ ಮಾತನಾಡಿದ ಶಾಸಕರು, ಹದಗೆಟ್ಟಿರುವ ಈ ರಸ್ತೆಯ ಅಭಿವೃದ್ಧಿ ಕಾರ್ಯವು ಶೀಘ್ರವಾಗಿ ಮುಗಿದು ಜನರ ಬಳಕೆಗೆ ಸಿಗಬೇಕೆಂಬ ಉದ್ದೇಶದಿಂದ ವಿಶೇಷ ಮುತುವರ್ಜಿ ವಹಿಸಿ ಅನುದಾನವನ್ನು ಹೊಂದಿಸಿಕೊಂಡು ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ. ಎಂದರು….

Read More

ಕೋಳಿ ಅಂಕ ವಿವಾದದ ಬಗ್ಗೆ ಸ್ಪೀಕರ್ ಯು ಟಿ ಖಾದರ್

ಮಂಗಳೂರು:ದಕ್ಷಿಣ ಕನ್ನಡ ಜಿಲ್ಲೆಯ ಕೋಳಿ ಅಂಕ ನಿಷೇಧ ವಿವಾದದ ಕುರಿತು ಪ್ರತಿಕ್ರಿಯಿಸಿರುವ ಸ್ಪೀಕರ್ ಖಾದರ್ ಅವರು, ‘ಕೋಳಿ ಅಂಕದಲ್ಲಿ ಜೂಜು ನಡೆಯುತ್ತದೆ ಎಂಬುದು ಪೊಲೀಸ್ ಇಲಾಖೆಯ ಆರೋಪ. ಜೂಜು ನಡೆದರೆ, ಅದರಲ್ಲಿ ತೊಡಗಿದವರ ವಿರುದ್ಧ ಕ್ರಮ ಕೈಗೊಳ್ಳಲಿ ಎಂದರು. ಸಾಂಪ್ರದಾಯಿಕ ಕೋಳಿ ಅಂಕವನ್ನೇ ತಡೆಯುವುದು ಸರಿಯಲ್ಲ ಎಂಬುದು ಆಯೋಜಕರ ವಾದ. ಈ ಸಮಸ್ಯೆಯನ್ನು ಸೂಕ್ತ ನಿಯಮಗಳನ್ನು ರೂಪಿಸುವ ಮೂಲಕವೇ ಬಗೆಹರಿಸಬೇಕಿದೆ. ಈ ಬಗ್ಗೆ ಕಾನೂನು ಸಚಿವರು ಮತ್ತು ಸರ್ಕಾರದ ಕಾನೂನು ಸಲಹೆಗಾರರ ಜೊತೆ ಮಾತನಾಡಿ, ಸಲಹೆಗಳನ್ನು ಕೊಟ್ಡಿದ್ದೇನೆ….

Read More

ಹಳ್ಳಿ ಅಧಿಕಾರ ಕಸಿದುಕೊಂಡ ಮೋದಿ ಸರ್ಕಾರ: ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ

ಬೆಂಗಳೂರು ಜ3: ಕೇಂದ್ರದಲ್ಲಿರುವ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಹಳ್ಳಿ ಅಧಿಕಾರ ಕಸಿದುಕೊಂಡು, ಗ್ರಾಮೀಣ ಆರ್ಥಿಕತೆಯನ್ನು ನಾಶ ಪಡಿಸಲು ಮುಂದಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು.‌ಗೃಹ ಕಚೇರಿ ಕೃಷ್ಣಾದಲ್ಲಿ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ರದ್ಧತಿ ಕುರಿತು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಮೋದಿ ಸರ್ಕಾರ ಮಹಾತ್ಮಾ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯನ್ನು ಹಿಂಪಡೆಯುವ ಮೂಲಕ ವಿಬಿ ಜಿ ರಾಮ್ ಜಿ ಹೆಸರಿನಲ್ಲಿ ಹೊಸ ಕಾಯ್ದೆ ಜಾರಿಗೆ ತರುವಾಗ, ರಾಜ್ಯ ಸರ್ಕಾರಗಳ ಅಭಿಪ್ರಾಯ…

Read More

ಕೃಷ್ಣ ನಗರಿಯಲ್ಲಿ “ಅಕ್ಕ ಪಡೆ ವಾಹನ”ಕ್ಕೆ ಚಾಲನೆ… !

ಉಡುಪಿ:ದೌರ್ಜನ್ಯ, ತೊಂದರೆಗೊಳಗಾಗುವ ಹೆಣ್ಣುಮಕ್ಕಳಿಗೆ ರಕ್ಷಣೆ ಒದಗಿಸುವ ನಿಟ್ಟಿನಲ್ಲಿ ರಾಜ್ಯ ಸರಕಾರವು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಾಗೂ ಪೊಲೀಸ್ ಇಲಾಖೆಯ ಮೂಲಕ‌ ಜಾರಿಗೊಳಿಸಿರುವ ಅಕ್ಕ ಪಡೆ ವಾಹನಕ್ಕೆ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿಯಲ್ಲಿ ಇಂದು ಚಾಲನೆ ನೀಡಲಾಯಿತು. ಅಕ್ಕ ಪಡೆ ವಾಹನಕ್ಕೆ ಚಾಲನೆ ನೀಡಿ ಜಿಲ್ಲಾಧಿಕಾರಿ ಸ್ವರೂಪ ಟಿಕೆ ಮಾತನಾಡಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಾಗೂ ಪೊಲೀಸ್ ಇಲಾಖೆಯ ಸಹಭಾಗಿತ್ವದಲ್ಲಿ ಈ ಅಕ್ಕ ಪಡೆ ಕಾರ್ಯನಿರ್ವಹಿಸಲಿದೆ. ನಗರ ಪ್ರದೇಶದಲ್ಲಿ ದೌರ್ಜನ್ಯಕ್ಕೊಳಗಾಗುವ ಹೆಣ್ಣುಮಕ್ಕಳಿಗೆ ತ್ವರಿತಗತಿಯಲ್ಲಿ…

Read More

ಜಿಲ್ಲಾ ಮುಸ್ಲಿಂ ಸೌಹಾರ್ದ ಪರ್ಯಾಯ ಸಮಿತಿ 2026ರಿಂದ ಹೊರೆಕಾಣಿಕೆ ನೀಡಿಕೆ … !

ಉಡುಪಿ : ಶ್ರೀ ಕೃಷ್ಣಮಠದ ಇತಿಹಾಸದಲ್ಲಿ ಹಿಂದೂ-ಮುಸ್ಲಿಮರ ಸೌಹಾರ್ದತೆಯ ಬಗ್ಗೆ ಹಲವಾರು ಘಟನೆಗಳನ್ನು ನಾವು ನೀವೆಲ್ಲರೂ ಕೇಳಿರುತ್ತೇವೆ. ಪುರಾತನ ಕಾಲದಿಂದಲೂ ಶ್ರೀ ಕೃಷ್ಣ ಮಠದಲ್ಲಿ ನಡೆದು ಬರುತ್ತಿರುವ ಹಿಂದೂ-ಮುಸ್ಲಿಮರ ಸೌಹಾರ್ದತೆ ಹಾಗೂ ಐಕ್ಯತೆಯನ್ನು ಜೀವಂತವಾಗಿರಿಸುವ ನಿಟ್ಟಿನಲ್ಲಿ ಉಡುಪಿ ಜಿಲ್ಲಾ ಮುಸ್ಲಿಂ ಸೌಹಾರ್ದ ಪರ್ಯಾಯ ಸಮಿತಿ ಹಲವಾರು ವರ್ಷಗಳಿಂದ ಪರ್ಯಾಯ ಹಾಗೂ ಇನ್ನಿತರ ಸಂದರ್ಭದಲ್ಲಿ ಹಲವಾರು ಕಾರ್ಯಕ್ರಮವನ್ನು ಹಮ್ಮಿಕೊಂಡು ಬಂದಿದೆ.ಈ ಸಲದ ಶೀರೂರು ಮಠದ ಪರ್ಯಾಯ ಸಂದರ್ಭದಲ್ಲೂ ಸಮಿತಿ ವತಿಯಿಂದ ಕಾರ್ಯಕ್ರಮಗಳನ್ನುಹಮ್ಮಿಕೊಳ್ಳಲಾಗಿದೆ. ಜನವರಿ 9 ರಂದು ನಡೆಯುವ ಪುರಪ್ರವೇಶ…

Read More

49ನೇಯ ಸರಣಿ ಕೃತಿ ಬಿಡುಗಡೆ ಕಾರ್ಯಕ್ರಮ ಜನವರಿ 10ರಂದು ಮಂಗಳೂರಿನ ಪತ್ರಿಕಾ ಭವನದಲ್ಲಿ

49ನೇಯ ಸರಣಿ ಕೃತಿ ಬಿಡುಗಡೆ ಕಾರ್ಯಕ್ರಮ * ಡಾ.ಮಾಲತಿ ಶೆಟ್ಟಿ ಮಾಣೂರು ಸಾರಥ್ಯದ ಅಮೃತ ಪ್ರಕಾಶ ಪತ್ರಿಕೆ ಸಾಹಿತ್ಯಕ್ಕೆ ಹೆಚ್ಚಿನ ಆದ್ಯತೆ ನೀಡುತ್ತಾ ಬಂದಿದೆ . ಪತ್ರಿಕೆಯ ವತಿಯಿಂದ ನಡೆಯುವ 49ನೇ ಸರಣಿ ಕೃತಿ ಬಿಡುಗಡೆ ಹಿರಿಯ ಸಾಹಿತಿ ಬಿ .ಸತ್ಯವತಿ ಭಟ್ ಕೊಳಚಪ್ಪುರವರ ಕೌಟುಂಬಿಕ ಕಥಾಸಂಕಲನ * ಹೆಜ್ಜಾಲದ ಬಿಳಲುಗಳು ಕೃತಿ ಲೋಕಾರ್ಪಣೆಯೂ ಜನವರಿ 10ರಂದು ಶನಿವಾರ 10.30ಕ್ಕೆ ಮಂಗಳೂರಿನ ಪತ್ರಿಕಾ ಭವನದಲ್ಲಿ ನಡೆಯಲಿರುವುದು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹಿರಿಯ ಸಾಹಿತಿ ಡಾ. ಅರುಣ ನಾಗರಾಜ್ ವಹಿಸುವರು…

Read More

ಸಿಎಂ ಆಗ್ಲಿಕ್ಕೆ ಅರ್ಜೆಂಟ್ ಇಲ್ಲ…20 ವರ್ಷ ನಂತರ ನೋಡುವಾ – ಸ್ಪೀಕರ್ ಖಾದರ್

ಮಂಗಳೂರು: ಸಿಎಂ ಆಗ್ಲಿಕ್ಕೆ ಅರ್ಜೆಂಟ್ ಇಲ್ಲ..ಅದಕ್ಕಿನ್ನೂ 20 ವರ್ಷ ಕಾಲಾವಕಾಶ ಇದೆ‌. ಕ್ಷೇತ್ರದ ಮತದಾರರು ಇನ್ನೂ ನಾಲ್ಕು ಸಲ ಗೆಲ್ಲಿಸಿ ಕಳುಹಿಸಿದರೆ, ಅಮೇಲೆ ನೋಡುವ ಎಂದು ಸ್ಪೀಕರ್ ಖಾದರ್ ಹೇಳಿದ್ದಾರೆ. ಮಂಗಳೂರಿನಲ್ಲಿ ಮಾತನಾಡಿದ ಅವರು ಮುಖ್ಯಮಂತ್ರಿ ಹುದ್ದೆಗೆ ತಾವೂ ಆಕಾಂಕ್ಷಿಯೇ ಎಂಬ ಪ್ರಶ್ನೆಗೆ, ‘ಅದಕ್ಕೆ ತರಾತುರಿ ಇಲ್ಲ. ಅದಕ್ಕಿನ್ನೂ 20 ವರ್ಷ ಕಾಲಾವಕಾಶ ಇದೆ‌ ಎಂದರು. ಬಳ್ಳಾರಿ ಗಲಾಟೆ ಬಗ್ಗೆ ಪ್ರತಿಕ್ರಿಯಿಸಿದ ಅವರು ಶಾಸಕರು ಸಿನಿಮೀಯ ಶೈಲಿಯಲ್ಲಿ ಪರಸ್ಪರ ಕಚ್ಚಾಡುವುದು, ರಾಜಕೀಯ ದ್ವೇಷ ಸಾಧಿಸುವುದು ಸರಿಯಲ್ಲ. ಇ‌ಂತಹ…

Read More
error: Content is protected !!