ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: ಕರಾವಳಿ ಜಿಲ್ಲೆಗಳಿಗೂ ವಿಸ್ತರಿಸಲು ವಿಹಿಂಪ ಆಗ್ರಹ

ಮಂಗಳೂರು: ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಸುರತ್ಕಲ್, ಉರ್ವ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾದೇಶಿ ವಲಸಿಗರು ಪತ್ತೆಯಾದ ಹಿನ್ನೆಲೆಯಲ್ಲಿ, ಕಮಿಷನರೇಟ್ ವ್ಯಾಪ್ತಿಯ ಎಲ್ಲಾ ಪೊಲೀಸ್ ಠಾಣೆಗಳಲ್ಲಿ ವ್ಯಾಪಕ ತಪಾಸಣೆ ಮತ್ತು ಕಾರ್ಯಾಚರಣೆ ನಡೆಸುವಂತೆ ಆದೇಶಿಸಿರುವ ನಗರ ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಅವರ ಕ್ರಮವನ್ನು ವಿಶ್ವ ಹಿಂದೂ ಪರಿಷತ್ (ವಿಹಿಂಪ) ಸ್ವಾಗತಿಸಿದೆ. ಈ ಕುರಿತು ಪ್ರಕಟಣೆ ನೀಡಿರುವ ವಿಹಿಂಪ ಕರ್ನಾಟಕ ದಕ್ಷಿಣ ಪ್ರಾಂತ ಸಹಕಾರ್ಯದರ್ಶಿ ಶರಣ್ ಕುಮಾರ್ ಪಂಪುವೆಲ್, ಕರಾವಳಿ ಭಾಗದಲ್ಲಿ…

Read More

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಹಲವು ಲೋಪದೋಷ: ಎಸ್‌ಡಿಪಿಐ ಆರೋಪ

ಮಂಗಳೂರು: ಕೇಂದ್ರ ಚುನಾವಣಾ ಆಯೋಗವು 2025ರ ಜೂನ್‌ನಲ್ಲಿ ಜಾರಿಗೆ ತಂದಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಲ್ಲಿ ಹಲವು ಲೋಪದೋಷಗಳಿದ್ದು, ಮತದಾರರು ಹಾಗೂ ಬೂತ್ ಮಟ್ಟದ ಅಧಿಕಾರಿಗಳು (ಬಿಎಲ್‌ಒ) ವಿವಿಧ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ ಎಂದು ಎಸ್‌ಡಿಪಿಐ ಮಂಗಳೂರು ನಗರ ಜಿಲ್ಲಾಧ್ಯಕ್ಷ ಅಶ್ರಫ್ ಅಡ್ಡೂರು ಆರೋಪಿಸಿದರು. ನಗರದ ಎಸ್‌ಡಿಪಿಐ ಜಿಲ್ಲಾ ಕಚೇರಿಯಲ್ಲಿ ಮಂಗಳವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಎಸ್‌ಐಆರ್ ಪ್ರಕ್ರಿಯೆಯನ್ನು ಮೊದಲಿಗೆ 2025ರ ಜೂನ್ 26ರಂದು ಬಿಹಾರದಲ್ಲಿ ಜಾರಿಗೊಳಿಸಲಾಗಿತ್ತು. ಅಲ್ಲಿ ಹಲವು ಗೊಂದಲಗಳು ಉಂಟಾದ ಹಿನ್ನೆಲೆಯಲ್ಲಿ ಸುಪ್ರೀಂ…

Read More

ಮಂಗಳೂರಿನಿಂದ ಭಾರತ ಗೌರವ ವಿಶೇಷ ಪ್ರವಾಸಿ ರೈಲು, ವಿಮಾನ ಪ್ರವಾಸ ಪ್ಯಾಕೇಜ್‌ಗಳು: ಐಆರ್‌ಸಿಟಿಸಿ

ಮಂಗಳೂರು:ಭಾರತೀಯ ರೈಲ್ವೆ ಕೇಟರಿಂಗ್ ಮತ್ತು ಪ್ರವಾಸೋದ್ಯಮ ನಿಗಮ (ಐಆರ್‌ಸಿಟಿಸಿ) ಮಂಗಳೂರಿನಿಂದ ಹೊರಡುವ ‘ಭಾರತ ಗೌರವ’ ವಿಶೇಷ ಪ್ರವಾಸಿ ರೈಲು ಹಾಗೂ ದೇಶೀಯ ವಿಶೇಷ ವಿಮಾನ ಪ್ರವಾಸ ಪ್ಯಾಕೇಜ್‌ಗಳನ್ನು ಪ್ರಕಟಿಸಿದೆ. ನಗರದ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಐಆರ್‌ಸಿಟಿಸಿ ಜಂಟಿ ಜನರಲ್ ಮ್ಯಾನೇಜರ್ (ಟೂರಿಸಂ) ಸ್ಯಾಮ್ ಜೋಸೆಫ್ ಪಿ. ಈ ಕುರಿತು ಮಾಹಿತಿ ನೀಡಿ, ಓಣಂ ರಜಾ ಪ್ರಯುಕ್ತ ಆಯೋಜಿಸಲಾಗಿರುವ ‘ಅಹಮದಾಬಾದ್ ಸಹಿತ ಗೋಲ್ಡನ್ ಟ್ರಯಾಂಗಲ್ ಭಾರತ ಗೌರವ ವಿಶೇಷ ಪ್ರವಾಸಿ ರೈಲು’ ಆಗಸ್ಟ್ 22, ರಂದು ಮಂಗಳೂರಿನ ಮೂಲಕ…

Read More

ಅಕ್ರಮ ವಲಸಿಗರನ್ನು ಗಡಿಪಾರು ಮಾಡುವುದು ಕೇಂದ್ರದ ಜವಾಬ್ದಾರಿ: ಐವನ್ ಡಿ’ಸೋಜಾ

ಮಂಗಳೂರು:ಬಾಂಗ್ಲಾದೇಶಿ ಅಕ್ರಮ ನುಸುಳುಕೋರರ ವಿಚಾರದಲ್ಲಿ ಬಿಜೆಪಿ ರಾಜಕೀಯ ಮಾಡುತ್ತಿದ್ದು, ಅಕ್ರಮ ವಲಸಿಗರನ್ನು ಪತ್ತೆಹಚ್ಚಿ ದೇಶದಿಂದ ಹೊರಹಾಕುವುದು ಕೇಂದ್ರ ಸರ್ಕಾರದ ಜವಾಬ್ದಾರಿಯಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಐವನ್ ಡಿ’ಸೋಜಾ ಆರೋಪಿಸಿದರು.ನಗರದ ಮಹಾನಗರ ಪಾಲಿಕೆ ಕಚೇರಿಯಲ್ಲಿ ಮಂಗಳವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ನಾಯಕರು ಇತಿಹಾಸ ಹಾಗೂ ಅಂಕಿ-ಅಂಶಗಳ ಆಧಾರದ ಮೇಲೆ ಮಾತನಾಡಬೇಕು ಎಂದು ಆಗ್ರಹಿಸಿದರು. ಕೇಂದ್ರದಲ್ಲಿ ಬಿಜೆಪಿ ಹಲವು ವರ್ಷಗಳಿಂದ ಅಧಿಕಾರದಲ್ಲಿದ್ದರೂ ದೇಶದಿಂದ ಎಷ್ಟು ಅಕ್ರಮ ವಲಸಿಗರನ್ನು ಗಡಿಪಾರು ಮಾಡಲಾಗಿದೆ ಎಂಬುದರ ಕುರಿತು ಶ್ವೇತಪತ್ರ ಪ್ರಕಟಿಸಬೇಕು….

Read More

ಮಂಗಳೂರು ಲಿಫ್ಟ್ ದುರಂತ: ಮೃತ ಕಾರ್ಮಿಕ ನೌಫಾಲ್ ಕುಟುಂಬಕ್ಕೆ ₹15 ಲಕ್ಷ ಪರಿಹಾರ

ಮಂಗಳೂರು: ನಗರದ ಕುಂಟಿಕಾನದಲ್ಲಿರುವ ಇನ್‌ಸ್ಟಾಮಾರ್ಟ್ ಸರಬರಾಜು ಕೇಂದ್ರದಲ್ಲಿ ಲಿಫ್ಟ್ ದುರಂತದಲ್ಲಿ ಮೃತಪಟ್ಟ ಬೆಳ್ತಂಗಡಿ ತಾಲೂಕಿನ ಬೆಳಾಲು ಗ್ರಾಮದ ಪೂಂಜಕೆರೆ ನಿವಾಸಿ, 28 ವರ್ಷದ ಕಾರ್ಮಿಕ ನೌಫಾಲ್ ಅವರ ಕುಟುಂಬಕ್ಕೆ ಕಂಪೆನಿಯು ₹15 ಲಕ್ಷ ಪರಿಹಾರ ನೀಡಿದೆ. ಈ ಕುರಿತು ಎಸ್.ಡಿ.ಟಿ.ಯು (ಸೋಶಿಯಲ್ ಡೆಮಾಕ್ರಟಿಕ್ ಟ್ರೇಡ್ ಯೂನಿಯನ್) ಮಂಗಳೂರು ನಗರ ಜಿಲ್ಲಾ ಸಮಿತಿ ಪ್ರಕಟಣೆ ಹೊರಡಿಸಿದ್ದು, ಘಟನೆ ನಡೆದ ದಿನದಿಂದಲೇ ಮೃತ ಕಾರ್ಮಿಕನ ಕುಟುಂಬಕ್ಕೆ ನ್ಯಾಯ ಒದಗಿಸುವ ಉದ್ದೇಶದಿಂದ ನಿರಂತರ ಹೋರಾಟ ನಡೆಸಲಾಗಿತ್ತು ಎಂದು ತಿಳಿಸಿದೆ. ಈ ಸಂಬಂಧ…

Read More

ಮಂಗಳೂರಿನಲ್ಲಿ 11 ಅಕ್ರಮ ಬಾಂಗ್ಲಾ ಪ್ರಜೆಗಳ ಬಂಧನ; ನಾಲ್ವರು ಅಪ್ರಾಪ್ತರು

ಮಂಗಳೂರು ನಗರದ ಉರ್ವ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ನೆಲೆಸಿ ಎರಡು ಕಡೆ ಕಟ್ಟಡ ನಿರ್ಮಾಣ ಕೆಲಸ ಮಾಡುತ್ತಿದ್ದ ನಾಲ್ವರು ಅಪ್ರಾಪ್ತ ಬಾಲಕರು ಸಹಿತ 11 ಮಂದಿ ಬಾಂಗ್ಲಾ ಪ್ರಜೆಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಮುಹಮ್ಮದ್ ಕೌಸರ್ ಅಲಿ (21), ಮುಹಮ್ಮದ್ ನೂರ್ ಅಮೀನ್ (34), ಮುಹಮ್ಮದ್ ನಾಹಿದುಲ್ ಇಸ್ಲಾಂ (22), ಮುಹಮ್ಮದ್ ಹುಮಾಯೂನ್ ಕಬೀರ್ (22), ಮುಹಮ್ಮದ್ ರಂಝಾನ್ ಅಲಿ (23), ಮುಹಮ್ಮದ್ ಅಬ್ದುಲ್ ರಹ್ಮಾನ್ ರಾಯಲ್ (19), ಮುಹಮ್ಮದ್ ನೋಯಾನ್ (24) ಮತ್ತು ನಾಲ್ವರು…

Read More

ಉಡುಪಿ: ಜು. 15ರಂದು ‘ವಂದೇ ಮಾತರಂ’ 150ನೇ ವರ್ಷದ ಸಂಭ್ರಮ, ರಾಷ್ಟ್ರೀಯ ನಾಟಕೋತ್ಸವ

ಉಡುಪಿ: ಕೇಂದ್ರ ಸರ್ಕಾರದ ಸಂಸ್ಕೃತಿ ಸಚಿವಾಲಯದ ಅಧೀನದಲ್ಲಿರುವ ನವದೆಹಲಿಯ ಕೇಂದ್ರ ಸಂಗೀತ ನಾಟಕ ಅಕಾಡೆಮಿಯ ಆಶ್ರಯದಲ್ಲಿ ‘ವಂದೇ ಮಾತರಂ’ 150ನೇ ವರ್ಷದ ಸಂಭ್ರಮ ಹಾಗೂ ಕವಿ ಚಕ್ರವರ್ತಿ ಕಾಳಿದಾಸ ಜಯಂತಿ ಅಂಗವಾಗಿ ರಾಷ್ಟ್ರವ್ಯಾಪಿ ರಾಷ್ಟ್ರೀಯ ನಾಟಕೋತ್ಸವ ಜುಲೈ 15ರಂದು ನಡೆಯಲಿದ್ದು, ಉಡುಪಿಯಲ್ಲಿ ಎಂಜಿಎಂ ಕಾಲೇಜಿನ ಮುದ್ದಣ ಮಂಟಪದಲ್ಲಿ ವಿಶೇಷ ಕಾರ್ಯಕ್ರಮ ಆಯೋಜಿಸಲಾಗಿದೆ.ಉಡುಪಿ ರಂಗಭೂಮಿ ಹಾಗೂ ಮಹಾತ್ಮ ಗಾಂಧಿ ಮೆಮೋರಿಯಲ್ ಕಾಲೇಜಿನ ಸಹಭಾಗಿತ್ವದಲ್ಲಿ ‘ವಂದೇ ಮಾತರಂ’ ಉತ್ಸವ, ಯುವ ರಂಗೋತ್ಸವ ಹಾಗೂ ‘ಸ್ವಾತಂತ್ರ್ಯ ಶರಧಿ’ ಕನ್ನಡ ನಾಟಕ ಪ್ರದರ್ಶನ…

Read More

ಉಡುಪಿ: ಪೊಲೀಸರು ಕಾನೂನು ಪಾಲನೆಗೆ ಮೊದಲ ಪ್ರಾಶಸ್ತ್ಯ ನೀಡಬೇಕು – ಪಶ್ಚಿಮ ವಲಯ ಪೊಲೀಸ್ ಮಹಾ ನಿರೀಕ್ಷಕ ಅಮಿತ್ ಸಿಂಗ್

ಉಡುಪಿ: ಪೊಲೀಸರು ಸದಾಕಾಲ ತಮ್ಮ ವೃತ್ತಿಯಲ್ಲಿ ಸಂವಿಧಾನವನ್ನು ಎತ್ತಿ ಹಿಡಿಯುವುದರೊಂದಿಗೆ ಕಾನೂನು ಪಾಲನೆಗೆ ಮೊದಲ ಪ್ರಾಶಸ್ತ್ಯ ನೀಡಬೇಕು ಎಂದು ಪಶ್ಚಿಮ ವಲಯ ಪೊಲೀಸ್ ಮಹಾ ನಿರೀಕ್ಷಕರಾದ ಅಮಿತ್ ಸಿಂಗ್ ಹೇಳಿದರು. ಅವರು ನಗರದ ಡಿಎ ಆರ್ ಮೈದಾನದಲ್ಲಿ ಉಡುಪಿ ಜಿಲ್ಲಾ ತಾತ್ಕಾಲಿಕ ಪೊಲೀಸ್ ತರಬೇತಿ ಶಾಲೆ ವತಿಯಿಂದ ಸಶಸ್ತ್ರ ಮೀಸಲು ಪೊಲೀಸ್ ಕಾನ್ ಸ್ಟೇಬಲ್ ಗಳ 14ನೇ ತಂಡದ ನಿರ್ಗಮನ ಪಥ ಸಂಚಲನದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಗೌರವ ರಕ್ಷೆ ಸ್ವೀಕರಿಸಿ ಮಾತನಾಡಿದರು. ಪೊಲೀಸ್ ವೃತ್ತಿಯಲ್ಲಿ…

Read More

ರಾಮಮಂದಿರ ಆರೋಪ: ಪೇಜಾವರ ಶ್ರೀಗಳು ಮೌನ ಯಾಕೆ? – ವಿ.ಎಸ್. ಉಗ್ರಪ್ಪ ಪ್ರಶ್ನೆ

ಉಡುಪಿ: ರಾಮಮಂದಿರಕ್ಕೆ ಸಂಬಂಧಿಸಿದಂತೆ ಕೇಳಿಬಂದಿರುವ ಹಗರಣಗಳ ಆರೋಪಗಳ ಬಗ್ಗೆ ಪೇಜಾವರ ಶ್ರೀಗಳು ಮೌನ ವಹಿಸಿರುವುದು ಏಕೆ ಎಂದು ಮಾಜಿ ಸಂಸದ ವಿ.ಎಸ್. ಉಗ್ರಪ್ಪ ಪ್ರಶ್ನಿಸಿದರು. ಸೋಮವಾರ ಉಡುಪಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಕಾಮ, ಕ್ರೋಧ, ಲೋಭ, ಮೋಹ ತ್ಯಜಿಸಿರುವ ಪೇಜಾವರ ಶ್ರೀಗಳು ರಾಮಮಂದಿರ ಹಗರಣದ ಬಗ್ಗೆ ಯಾಕೆ ಬಾಯಿಬಿಡುತ್ತಿಲ್ಲ? ಈ ಪ್ರಕರಣದಲ್ಲಿ ನಿಮ್ಮ ಪಾತ್ರವೂ ಇದೆಯೇ?” ಎಂದು ಪ್ರಶ್ನಿಸಿದರು. ರಾಮಮಂದಿರಕ್ಕೆ ಸಂಬಂಧಿಸಿದ ಆರೋಪಗಳಿಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ನೇರ ಹೊಣೆ ಎಂದು…

Read More

11 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿ ಶಾಹುಲ್ ಹಮೀದ್ ಬಂಧನ

ಮಂಗಳೂರು, ಜುಲೈ 14: ಮಂಗಳೂರಿನ ಕಾಂಚನಾ ಟೆಕ್ಸ್‌ಟೈಲ್ಸ್ ಮ್ಯಾನೇಜರ್ ದಿನೇಶ್ ರಾಜ್ ಕೊಲೆ ಪ್ರಕರಣ ಸೇರಿದಂತೆ ಒಟ್ಟು ಆರು ಗಂಭೀರ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ ಕಳೆದ 11 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿ ಶಾಹುಲ್ ಹಮೀದ್ ಎಂಬಾತನನ್ನು ಮಂಗಳೂರು ನಗರ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಆರೋಪಿ ವಿರುದ್ಧ ದಿನೇಶ್ ರಾಜ್ ಕೊಲೆ ಪ್ರಕರಣ ಸೇರಿದಂತೆ ಮೂರು ಪ್ರಮುಖ ಪ್ರಕರಣಗಳಲ್ಲಿ ನ್ಯಾಯಾಲಯ ಈಗಾಗಲೇ ದಸ್ತಗಿರಿ ವಾರಂಟ್ ಜಾರಿಗೊಳಿಸಿತ್ತು. ಶಾಹುಲ್ ಹಮೀದ್ ವಿರುದ್ಧ ಅಪಹರಣ, ಸುಲಿಗೆ, ಸರ್ಕಾರಿ ನೌಕರರ ಕರ್ತವ್ಯಕ್ಕೆ…

Read More
error: Content is protected !!