ಪಾಣೆಮಂಗಳೂರಿನಲ್ಲಿ ಕಾರು ಡಿಕ್ಕಿ: ಗಾಯಾಳು ಪಾದಚಾರಿ ಚಿಕಿತ್ಸೆ ಫಲಿಸದೆ ಸಾವು
ಬಂಟ್ವಾಳ: ರಸ್ತೆ ದಾಟುತ್ತಿದ್ದ ವೇಳೆ ಕಾರು ಡಿಕ್ಕಿಯಾಗಿ ಆಸ್ಪತ್ರೆಗೆ ದಾಖಲಾಗಿದ್ದ ಪಾದಾಚಾರಿಯೊರ್ವರು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಪಾಣೆಮಂಗಳೂರು ಎಂಬಲ್ಲಿ ರವಿವಾರ ಸಂಜೆ ವೇಳೆ ನಡೆದಿದೆ. ಪುತ್ತೂರು ನಿವಾಸಿ ವಿಶ್ವನಾಥ ರೈ ( 63) ಅವರು ಮೃತಪಟ್ಟ ವ್ಯಕ್ತಿಯಾಗಿದ್ದಾರೆ.ವಿಶ್ವನಾಥ ಅವರು ಪಾಣೆಮಂಗಳೂರಿನ ನೆಹರು ನಗರದಲ್ಲಿರುವ ಸಾಗರ್ ಅಡಿಟೋರಿಯಂ ನಲ್ಲಿ ಸಂಬಂಧಿಕರ ಮದುವೆ ಕಾರ್ಯಕ್ರಮಕ್ಕೆ ಬಂದು ವಾಪಸು ಮನೆಗೆ ಹೋಗುವರಿದ್ದು, ರಸ್ತೆಯನ್ನು ದಾಟುತ್ತಿದ್ದ ವೇಳೆ ಬಿಸಿರೋಡಿನಿಂದ ಮೆಲ್ಕಾರ್ ಕಡೆಗೆ ಅತೀ ವೇಗದಿಂದ ಬಂದ ಕಾರೊಂದು ಡಿಕ್ಕಿಯಾಗಿದೆ. ಅಪಘಾತದಲ್ಲಿ…