ಶೀಘ್ರವಾಗಿ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಿ :- ಶಾಸಕ ಕಾಮತ್
ಮನಪಾ ವ್ಯಾಪ್ತಿಯಲ್ಲಿ ಬೇಸಿಗೆಗೂ ಮುನ್ನವೇ ಕುಡಿಯುವ ನೀರಿನ ಸಮಸ್ಯೆ ತಲೆದೋರಿದ್ದು ಒಂದು ವಾರದೊಳಗೆ ಸ್ಥಳಕ್ಕೆ ಭೇಟಿ ನೀಡಿ ತುರ್ತು ಕ್ರಮ ಕೈಗೊಳ್ಳಿ ಎಂದು ಪಾಲಿಕೆ ಅಧಿಕಾರಿಗಳಿಗೆ ಶಾಸಕ ವೇದವ್ಯಾಸ ಕಾಮತ್ ರವರು ಸೂಚನೆ ನೀಡಿದರು. ಪಾಲಿಕೆಯ ವಾರ್ಡ್ ಸಂಖ್ಯೆ 25, 26, 27, 41 ಹಾಗೂ 53 ರಲ್ಲಿ ಕುಡಿಯುವ ನೀರಿನ ಅಭಾವವುಂಟಾಗಿದ್ದು ಸ್ಥಳೀಯರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಈ ಹಿಂದೆ ಪಾಲಿಕೆಯಲ್ಲಿ ಬಿಜೆಪಿ ಆಡಳಿತದಲ್ಲಿದ್ದಾಗ ಕುಡಿಯುವ ನೀರಿನ ಸಮಸ್ಯೆ ಎದುರಾದ ತಕ್ಷಣ ಜನರ ಸಮಸ್ಯೆಗೆ ತುರ್ತಾಗಿ…
