ಶೀಘ್ರವಾಗಿ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಿ :- ಶಾಸಕ ಕಾಮತ್

ಮನಪಾ ವ್ಯಾಪ್ತಿಯಲ್ಲಿ ಬೇಸಿಗೆಗೂ ಮುನ್ನವೇ ಕುಡಿಯುವ ನೀರಿನ ಸಮಸ್ಯೆ ತಲೆದೋರಿದ್ದು ಒಂದು ವಾರದೊಳಗೆ ಸ್ಥಳಕ್ಕೆ ಭೇಟಿ ನೀಡಿ ತುರ್ತು ಕ್ರಮ ಕೈಗೊಳ್ಳಿ ಎಂದು ಪಾಲಿಕೆ ಅಧಿಕಾರಿಗಳಿಗೆ ಶಾಸಕ ವೇದವ್ಯಾಸ ಕಾಮತ್ ರವರು ಸೂಚನೆ ನೀಡಿದರು. ಪಾಲಿಕೆಯ ವಾರ್ಡ್ ಸಂಖ್ಯೆ 25, 26, 27, 41 ಹಾಗೂ 53 ರಲ್ಲಿ ಕುಡಿಯುವ ನೀರಿನ ಅಭಾವವುಂಟಾಗಿದ್ದು ಸ್ಥಳೀಯರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಈ ಹಿಂದೆ ಪಾಲಿಕೆಯಲ್ಲಿ ಬಿಜೆಪಿ ಆಡಳಿತದಲ್ಲಿದ್ದಾಗ ಕುಡಿಯುವ ನೀರಿನ ಸಮಸ್ಯೆ ಎದುರಾದ ತಕ್ಷಣ ಜನರ ಸಮಸ್ಯೆಗೆ ತುರ್ತಾಗಿ…

Read More

ಕುಡ್ಲದ ಪೋರನಿಗೆ “ಐಕಾನ್ ಆಫ್ ಇಂಡಿಯಾ 2025” ಪಟ್ಟ … !

ಮಂಗಳೂರು : ಶಿವಮೊಗ್ಗದ ಶಿರಳಕೊಪ್ಪದಲ್ಲಿ ಎಸ್.ಜಿ.ಪ್ಯಾಷನ್ ದಿವಾ ಸ್ಮಾರ್ ಸಂಸ್ಥೆ ಆಯೋಜಿಸಿದ್ದ ಪ್ಯಾಶನ್ ಶೋ ಐಕಾನ್ ಆಫ್ ಇಂಡಿಯಾ 2025 ರಲ್ಲಿ ಪೊಲೀಸ್ ಲೈನ್ ಪಾಂಡೇಶ್ವರ ಮಂಗಳೂರಿನ ಶೌರ್ಯಾ ಎಂ ಚಂದ್ರ sub junior kid ವಿಭಾಗದಲ್ಲಿ ಐಕಾನ್ ಆಫ್ ಇಂಡಿಯಾ ವಿನ್ನರ್ ಪಟ್ಟವನ್ನು ಮುಡಿಗೇರಿಸಿಕೊಂಡಿದ್ದಾನೆ . ಈತ ಮಂಗಳೂರು ಶಾರದಾ ವಿದ್ಯಾಲಯ ಕೊಡಿಯಾಲ್ ಬೈಲ್ ನ ಯು.ಕೆ.ಜಿ ವಿದ್ಯಾರ್ಥಿ ಹಾಗೂ Pathway modling ballabhag ನಲ್ಲಿ ವಿದ್ಯಾರ್ಥಿ ಆಗಿದ್ದಾರೆ. ಇವರು ಮುಖೇಶ್ ಚಂದ್ರ ಹಾಗೂ ಅಖಿಲ.ಕೆ…

Read More

ಜ. 4ರಂದು ಮಂಗಳೂರಿನ ಕುದ್ಮಲ್ ರಂಗರಾವ್ ಪುರಭವನದಲ್ಲಿ ‘ಕುಂಭಕಲಾವಳಿ-ಕುಲಾಲ ಕಲಾ ಸೇವಾಂಜಲಿ’ ಕಾರ್ಯಕ್ರಮ .. !

ಮಂಗಳೂರು: ದ.ಕ. ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕರ್ನಾಟಕ ರಾಜ್ಯ ಕುಲಾಲ ಕುಂಬಾರರ ಯುವವೇದಿಕೆ ಮತ್ತು ಮಹಿಳಾ ಸಂಘಟನೆಗಳ ಒಕ್ಕೂಟ (ರಿ.) ದ.ಕ ಜಿಲ್ಲಾ ಸಮಿತಿ ಹಾಗೂ ದಾಸ್ ಚಾರಿಟೇಬಲ್ ಸೇವಾ ಟ್ರಸ್ಟ್ (ರಿ.) ಮಂಗಳೂರು ಸಹಯೋಗದಲ್ಲಿ ‘ಕುಂಭಕಲಾವಳಿ-ಕುಲಾಲ ಕಲಾ ಸೇವಾಂಜಲಿ’ ಅದ್ಧೂರಿ ಕಾರ್ಯಕ್ರಮವು ಜ. 4ರಂದು ಮಂಗಳೂರು ಕುದ್ಮಲ್ ರಂಗರಾವ್ ಪುರಭವನದಲ್ಲಿ ಅದ್ದೂರಿಯಾಗಿ ನಡೆಯಲಿದೆ ಎಂದು ಸಮಿತಿಯ ಜಿಲ್ಲಾಧ್ಯಕ್ಷರಾದ ಲ| ಅನಿಲ್‌ ದಾಸ್ ತಿಳಿಸಿದರು . ಅವರು ನಗರದ ಪತ್ರಿಕಾಭವನದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ…

Read More

“37 ವರ್ಷಗಳ ಆದರ್ಶ ಶಿಕ್ಷಕ ಸೇವೆ ಸಲ್ಲಿಸಿದ ಕಾಡುಮಠ ಶಾಲೆಯ ಕುಸುಮ ಎನ್. ಅವರಿಗೆ ಬೀಳ್ಕೊಡುಗೆ”

ಬಂಟ್ವಾಳ: ಬಂಟ್ವಾಳ ತಾಲೂಕಿನ ದ.ಕ.ಜಿ.ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ಕಾಡುಮಠ,ಕೊಳ್ನಾಡು ಇಲ್ಲಿನ ಶಿಕ್ಷಕಿಗೆ ಬಿಳ್ಕೋಡುಗೆ ಸಮಾರಂಭವು ದಿನಾಂಕ 31/12/2025 ರಂದು ಶಾಲೆಯಲ್ಲಿ ನಡೆಯಿತು. “ಶಿಕ್ಷಣಕ್ಕೆ ಬದುಕನ್ನೇ ಅರ್ಪಿಸಿದ ಆದರ್ಶ ಶಿಕ್ಷಕಿ” – ಆಶಾ ನಾಯಕ್ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದ ಕ್ಷೇತ್ರದ ದೈಹಿಕ ಶಿಕ್ಷಣಾಧಿಕಾರಿಯೂ,ಪ್ರಭಾರ ಕ್ಷೇತ್ರ ಶಿಕ್ಷಣಾಧಿಕಾರಿ ಆಶಾ ನಾಯಕ್, ಶಿಕ್ಷಣ ಕ್ಷೇತ್ರಕ್ಕೆ ತಮ್ಮ ಬದುಕನ್ನೇ ಸಮರ್ಪಿಸಿದ ಒಬ್ಬ ಉತ್ತಮ ಶಿಕ್ಷಕಿ ನಿವೃತ್ತಿಯಾಗುತ್ತಿರುವುದು ಹೆಮ್ಮೆಯ ಜೊತೆಗೆ ನೋವಿನ ಕ್ಷಣವೂ ಹೌದು. ಮಕ್ಕಳ ಸರ್ವಾಂಗೀಣ ಬೆಳವಣಿಗೆಗೆ ಶ್ರಮಿಸಿದ ಕುಸುಮ ಎನ್….

Read More

ಶೀರೂರು ಮಠಾಧೀಶರಾದ ಶ್ರೀ ಶ್ರೀ ವೇದವರ್ಧನ ತೀರ್ಥ ಶ್ರೀಪಾದರ ಜನವರಿ 4 ರಿಂದ 8 ರ ವರೆಗೆ ಮಂಗಳೂರಿನ ವಿವಿಧ ಧಾರ್ಮಿಕ ಕಾರ್ಯದಲ್ಲಿ ಭಾಗಿ …. ! ಭಕ್ತರಿಗೆ ಪಾದ ಪೂಜೆಗೆ ಅವಕಾಶ

ಮಂಗಳೂರು:ಪ್ರಥಮ ಬಾರಿಗೆ ಪರ್ಯಾಯ ಸರ್ವಜ್ಞ ಪೀಠವನ್ನು ಅಲಂಕರಿಸಲಿರುವ ಹಾಗೂ ಪ್ರಸ್ತುತ ಪರ್ಯಾಯ ಪೂರ್ವಭಾವಿ ಸಂಚಾರದಲ್ಲಿರುವ ಉಡುಪಿಯ ಶೀರೂರು ಮಠಾಧೀಶರಾದ ಶ್ರೀ ಶ್ರೀ ವೇದವರ್ಧನ ತೀರ್ಥ ಶ್ರೀಪಾದರು ಜನವರಿ 4 ರಂದು ಸಂಜೆ 4:00 ಗಂಟೆಗೆ ಸರಿಯಾಗಿ ಉರ್ವಸ್ಟೋರ್ ಶ್ರೀ ಮಹಾಗಣಪತಿ ದೇವಸ್ಥಾನದ ರಾಜಾಂಗಣದಲ್ಲಿ ಮಂಗಳೂರಿಗೆ ಪುರ ಪ್ರವೇಶ ಮಾಡಲಿರುವರು ಎಂದು ಗೌರವಾಧ್ಯಕ್ಷರಾದ ಡಾ.ಎಂ ಬಿ ಪುರಾಣಿಕ್ ತಿಳಿಸಿದರು . ಅವರು ನಗರದ ಪತ್ರಿಕಾಭವನದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ , ಮಠಾಧೀಶರ ಆಗಮನದ ಈ ಸಂದರ್ಭದಲ್ಲಿ ಪರ್ಯಾಯದ ಮಂಗಳೂರು’…

Read More

ಕುದ್ರೋಳಿಯಲ್ಲಿ ವಿಶೇಷ ಗುರುಪೂಜೆ, ರಥೋತ್ಸವ

ಮಂಗಳೂರು: ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಗುರುವಾರ ಕ್ಯಾಲೆಂಡರ್ ಹೊಸ ವರ್ಷದ ಪ್ರಯುಕ್ತ ವಿಶೇಷ ಗುರುಪೂಜೆ, ಗಣಪತಿ ಹೋಮ ಹಾಗು ರಥೋತ್ಸವ ನೆರವೇರಿತು. ಕ್ಷೇತ್ರಾಡಳಿತ ಮಂಡಳಿ ಅಧ್ಯಕ್ಷ ಜೈರಾಜ್ ಎಚ್.ಸೋಮಸುಂದರಂ, ಉಪಾಧ್ಯಕ್ಷೆ ಊರ್ಮಿಳಾ ರಮೇಶ್, ಕೋಶಾಧಿಕಾರಿ ಪದ್ಮರಾಜ್ ಆರ್. ಪೂಜಾರಿ, ಅಭಿವೃದ್ಧಿ ಸಮಿತಿ ಅಧ್ಯಕ್ಷ ದೇವೇಂದ್ರ ಪೂಜಾರಿ, ಉಪಾಧ್ಯಕ್ಷ ಡಾ.ಬಿ.ಜಿ.ಸುವರ್ಣ,ಸದಸ್ಯರಾದ ವೇದಕುಮಾರ್, ಪಿ.ಕೆ.ಗೌರವಿ, ರಾಧಾಕೃಷ್ಣ, ಗೆಜ್ಜೆಗಿರಿ ಕ್ಷೇತ್ರಾಡಳಿತ ಸಮಿತಿ ಅಧ್ಯಕ್ಷ ರವಿ ಪೂಜಾರಿ ಚಿಲಿಂಬಿ, ಗೋಕರ್ಣನಾಥ ಕೋ ಆಪರೇಟಿವ್ ಬ್ಯಾಂಕ್ ಅಧ್ಯಕ್ಷ ಚಂದ್ರಶೇಖರ್ ಕಾವೂರು, ಜಯರಾಮ‌ ಕಾರಂದೂರು,…

Read More

ನಿಟ್ಟೆ ಕುಲಪತಿ ಡಾ.ವಿನಯ್ ಹೆಗ್ಡೆ ನಿಧನಕ್ಕೆ ಶಾಸಕ ಮಂಜುನಾಥ ಭಂಡಾರಿ ಸಂತಾಪ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ‌ಶೈಕ್ಷಣಿಕ-ಕೈಗಾರಿಕಾ ಕ್ರಾಂತಿ ನಡೆಸಿದ ನಿಟ್ಟೆ ಡೀಮ್ಡ್ ವಿಶ್ವವಿದ್ಯಾಲಯದ ಕುಲಪತಿ ಡಾ.ಎನ್.ವಿನಯ ಹೆಗ್ಡೆ ಅವರ ನಿಧನಕ್ಕೆ ಕೆಪಿಸಿಸಿ ಕಾರ್ಯಾಧ್ಯಕ್ಷ, ವಿಧಾನ ಪರಿಷತ್ ಶಾಸಕ ಮಂಜುನಾಥ ಭಂಡಾರಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.ವಿನಯ್ ಹೆಗ್ಡೆ ಅವರು ಶಿಕ್ಷಣ ತಜ್ಞ ಮಾತ್ರವಲ್ಲದೆ ಉದ್ಯಮಿ, ಸಮಾಜ ಸೇವಕರಾಗಿ ಹೆಸರು ಪಡೆದಿದ್ದರು. ಅವರು ನಿಟ್ಟೆ ಶಿಕ್ಷಣ ಸಂಸ್ಥೆಗಳ ವಿಸ್ತರಣೆಯಲ್ಲಿ ಗಮನಾರ್ಹ ಪಾತ್ರ ವಹಿಸಿದ್ದರು. ಶಿಕ್ಷಣ ಮತ್ತು ಸಮಾಜ ಸೇವೆಗಾಗಿ ಅವರು ರಾಜ್ಯೋತ್ಸವ ಪ್ರಶಸ್ತಿ, ಗೌರವ ಡಾಕ್ಟರೇಟ್ ಸಹಿತ ಹಲವು…

Read More

ರಾಜ್ಯ ಸರಕಾರಿ ಸಾರಿಗೆ ನೌಕರರು ಮುಂದಿನ ಆರು ತಿಂಗಳವರೆಗೆ ಯಾವುದೇ ರೀತಿಯ ಮುಷ್ಕರ ನಡೆಸದಂತೆ ಕಟ್ಟುನಿಟ್ಟಿನ ಆದೇಶ ಹೊರಡಿಸಿದ ಸರಕಾರ.. !

ಬೆಂಗಳೂರು : ಹೊಸ ವರ್ಷದ ಸಂಭ್ರಮದಲ್ಲಿರುವ ಸಾರಿಗೆ ನೌಕರರಿಗೆ ರಾಜ್ಯ ಸರ್ಕಾರವು ಬಿಗ್ ಶಾಕ್ ನೀಡಿದೆ. ಸಾರ್ವಜನಿಕರ ಸಂಚಾರಕ್ಕೆ ತೊಂದರೆಯಾಗದಂತೆ ಮುನ್ನೆಚ್ಚರಿಕೆ ವಹಿಸಿರುವ ಸರ್ಕಾರ, ಸಾರಿಗೆ ನೌಕರರು ಮುಂದಿನ ಆರು ತಿಂಗಳವರೆಗೆ ಯಾವುದೇ ರೀತಿಯ ಮುಷ್ಕರ ನಡೆಸದಂತೆ ಕಟ್ಟುನಿಟ್ಟಿನ ಆದೇಶ ಹೊರಡಿಸಿದೆ. 2026ರ ಜನವರಿ 1 ರಿಂದ ಜೂನ್ ತಿಂಗಳವರೆಗೆ ಸಾರಿಗೆ ನೌಕರರು ಪ್ರತಿಭಟನೆ ಅಥವಾ ಮುಷ್ಕರ ನಡೆಸುವಂತಿಲ್ಲ. ಸರ್ಕಾರದ ಈ ಆದೇಶವನ್ನು ಉಲ್ಲಂಘಿಸಿ ಮುಷ್ಕರಕ್ಕೆ ಮುಂದಾದಲ್ಲಿ, ಅಗತ್ಯ ಸೇವೆಗಳ ನಿರ್ವಹಣಾ ಕಾಯ್ದೆ ಅಡಿಯಲ್ಲಿ ಕಠಿಣ ಕಾನೂನು…

Read More

ಬೆಂಗರೆ ಪಲ್ಗುಣಿ ನದಿಯಲ್ಲಿ ಅಪರಿಚಿತ ವ್ಯಕ್ತಿಯ ಶವಪತ್ತೆ

ಮಂಗಳೂರು:ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯ ಬೆಂಗರೆ ಪಲ್ಗುಣಿ ನದಿಯಲ್ಲಿ ಅಪರಿಚಿತ ವ್ಯಕ್ತಿಯ ಶವಪತ್ತೆಯಾಗಿದೆ. ಅಪರಿಚಿತ ವ್ಯಕ್ತಿ ಸುಮಾರು 40-43 ವರ್ಷದವರಾಗಿದ್ದು, ನೀಲಿ ಬಣ್ಣದ ಉದ್ದ ತೋಳಿನ ಜೀನ್ಸ್ ಅಂಗಿ ಅದರ ಒಳಗೆ ಹಳದಿ ಮತ್ತು ನೀಲಿ ಬಣ್ಣದ ದಪ್ಪಗೆರೆಗಳ ಟೀ ಶರ್ಟ್, ಬಳಿ ಬಣ್ಣದ ಬರಹಗಳಿರುವ ಕಪ್ಪು ಬಣ್ಣದ ಸ್ಪೋರ್ಟ್ಸ್ ಪ್ಯಾಂಟ್ ಧರಿಸಿದ್ದಾರೆ. ಸದ್ಯ ಮೃತದೇಹವನ್ನು ಮೇಲೆತ್ತಿರುವ ಪಣಂಬೂರು ಪೊಲೀಸರು ವೆನ್ ಲಾಕ್ ಆಸ್ಪತ್ರೆಗೆ ರವಾನಿಸಿದ್ದಾರೆ ಎಂದು ತಿಳಿದು ಬಂದಿದೆ. ಈ ಚಹರೆಯ ವ್ಯಕ್ತಿಯ ಪರಿಚಯಸ್ಯರು, ವಾರೀಸುದಾರರು…

Read More

ವರ್ಷದ ಮೊದಲ ದಿನವೇ ಎಲ್‌ಪಿಜಿ ಬೆಲೆ ಏರಿಕೆ ಬಿಸಿ … !

ಮಂಗಳೂರು : ಹೊಸ ಕ್ಯಾಲೆಂಡರ್ ವರ್ಷದ ಮೊದಲ ದಿನವೇ ಎಲ್‌ಪಿಜಿ ಬಳಕೆದಾರರಿಗೆ ಬೆಲೆ ಏರಿಕೆಯ ಶಾಕ್‌ ತಟ್ಟಿದೆ. ಈ ಬಾರಿ ಕೇಂದ್ರ ಸರ್ಕಾರವು 19 ಕೆಜಿ ವಾಣಿಜ್ಯ ಬಳಕೆ ಸಿಲಿಂಡರ್ ಬೆಲೆಯನ್ನು ಹೆಚ್ಚಿಸಿದೆ. ಇಂಡಿಯನ್ ಆಯಿಲ್ ಪ್ರಕಾರ, ದೆಹಲಿಯಲ್ಲಿ 19 ಕೆಜಿ ಎಲ್‌ಪಿಜಿ ಸಿಲಿಂಡರ್ ಮೊದಲು ರೂ.1580.50ಕ್ಕೆ ಲಭ್ಯವಾಗುತ್ತಿದ್ದರೆ, ಈಗ ರೂ.1691.50ಕ್ಕೆ ಲಭ್ಯವಾಗಲಿದೆ. ಕೋಲ್ಕತ್ತಾದಲ್ಲಿ ಬೆಲೆ ರೂ.1795ಕ್ಕೆ ಏರಿದ್ದು, ರೂ.111 ರಷ್ಟು ಹೆಚ್ಚಳವಾಗಿದೆ. ಚೆನ್ನೈ ಮತ್ತು ಬೆಂಗಳೂರಿನಲ್ಲಿ ಅನುಕ್ರಮವಾಗಿ ರೂ.1849.50 ಮತ್ತು ರೂ.1700 ರುಪಾಯಿಗಳಲ್ಲಿ ಸಿಲಿಂಡರ್ ಲಭ್ಯವಾಗಲಿದೆ….

Read More
error: Content is protected !!