ಪುತ್ತೂರು ತಾಲೂಕಿನ ಕೆದಂಬಾಡಿ MRF ಘಟಕಕ್ಕೆ ಮಾನ್ಯ ವಿಧಾನ ಪರಿಷತ್ ಸದಸ್ಯ ಶ್ರೀ ಕಿಶೋರ್ ಕುಮಾರ್ ಪುತ್ತೂರು ಅವರ ಪರಿಶೀಲನಾ ಮತ್ತು ಅಧ್ಯಯನ ತಂಡ ಭೇಟಿ
ಪುತ್ತೂರು, ಸುಳ್ಯ ಹಾಗೂ ಕಡಬ ತಾಲೂಕುಗಳ ವ್ಯಾಪ್ತಿಯ 68 ಗ್ರಾಮ ಪಂಚಾಯತಿಗಳಿಂದ ಒಣ ಕಸವನ್ನು ಸಂಗ್ರಹಿಸುತ್ತಿರುವ ಸಮಗ್ರ ಘನತ್ಯಾಜ್ಯ ನಿರ್ವಹಣಾ ಕೇಂದ್ರ (MRF – Material Recovery Facility) ಪುತ್ತೂರು ತಾಲೂಕಿನ ಕೆದಂಬಾಡಿಯಲ್ಲಿ ಕಾರ್ಯನಿರ್ವಹಿಸುತ್ತಿದೆ. ಗ್ರಾಮ ಪಂಚಾಯತಿಗಳಿಂದ ನಿರಂತರವಾಗಿ ಒಣ ಕಸ ಸಂಗ್ರಹಣೆ ಆಗದಿರುವುದರಿಂದ ಉಂಟಾಗುತ್ತಿರುವ ಸಮಸ್ಯೆಗಳನ್ನು ಸ್ಥಳದಲ್ಲೇ ಪರಿಶೀಲಿಸುವ ಹಾಗೂ ಘಟಕದ ಕಾರ್ಯವೈಖರಿಯನ್ನು ಅಧ್ಯಯನ ಮಾಡುವ ಉದ್ದೇಶದಿಂದ, ಮಾನ್ಯ ವಿಧಾನ ಪರಿಷತ್ ಸದಸ್ಯ ಶ್ರೀ ಕಿಶೋರ್ ಕುಮಾರ್ ಪುತ್ತೂರು ಅವರು ಇಂದು MRF ಘಟಕಕ್ಕೆ ಭೇಟಿ…