ದ. ಕ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಸಾರಥ್ಯದ 9ನೇ ವರ್ಷದ ರಾಮ-ಲಕ್ಷ್ಮಣ ಜೋಡುಕರೆ ಕಂಬಳಕ್ಕೆ ವಿದ್ಯುತ್ವ ಚಾಲನೆ … !

ಮಂಗಳೂರು: ಕರಾವಳಿಯ ಸಂಸ್ಕೃತಿ, ಪರಂಪರೆ ಹಾಗೂ ಜಾನಪದ ಕ್ರೀಡಾ ವೈಭವಕ್ಕೆ ಪ್ರತೀಕವಾದ ಕಂಬಳ ಸಮಿತಿ ಅಧ್ಯಕ್ಷರು ಹಾಗೂ ದಕ್ಷಿಣ ಕನ್ನಡ ಸಂಸದರಾದ ಕ್ಯಾ. ಬ್ರಿಜೇಶ್ ಚೌಟಿ ಅವರ ನೇತೃತ್ವದಲ್ಲಿ 9ನೇ ವರ್ಷದ ಮಂಗಳೂರು ಕಂಬಳ ನಗರದ ಬಂಗ್ರಕೂಳೂರಿನ ಗೋಲ್ಡ್ ಪಿಂಚ್ ಸಿಟಿಯ ರಾಮ-ಲಕ್ಷ್ಮಣ ಜೋಡುಕರೆಯಲ್ಲಿ ಭಾರೀ ಜನಸಾಗರದ ನಡುವೆ ಅದ್ದೂರಿಯಾಗಿ ಆರಂಭಗೊಂಡಿತು. .ಬೆಳಿಗ್ಗೆ 8.30ಕ್ಕೆ ಕಂಕನಾಡಿ ಶ್ರೀಬ್ರಹ್ಮಬೈದರ್ಕಳ ಗರಡಿಯ ಅಧ್ಯಕ್ಷ ಕೆ. ಚಿತ್ತರಂಜನ್ ಅವರು ದೀಪ ಪ್ರಜ್ವಲನೆ ಮಾಡುವ ಮೂಲಕ ಕಂಬಳಕ್ಕೆ ಅಧಿಕೃತ ಚಾಲನೆ ನೀಡಿದರು. ಕಟೀಲು…

Read More

15 ದಿನಗಳೊಳಗೆ ಸೂಲಡ್ಪು- ಮಡಿವಾಳ ಸಾಲು ನದಿಯ ಹೂಳೆತ್ತದಿದ್ದರೆ ಬೃಹತ್ ಪ್ರತಿಭಟನೆ- ಕೋಟದ ರೈತರ ಸಂಘಟನೆ ರೈತಧ್ವನಿ ಎಚ್ಚರಿಕೆ ಕರೆ …. !

ಉಡುಪಿ:ಬ್ರಹ್ಮಾವರ ತಾಲೂಕಿನ ಏಳು ಗ್ರಾಮಗಳಲ್ಲಿ ಹಾದು ಹೋಗುವ ಸೂಲಡ್ಪು- ಮಡಿವಾಳಸಾಲು ಹೊಳೆಯ ಹೂಳೆತ್ತುವ ಕಾರ್ಯವನ್ನು 15 ದಿನಗಳೊಳಗೆ ಕೈಗೆತ್ತಿಕೊಳ್ಳಬೇಕು. ಇಲ್ಲದಿದ್ದರೆ ಬ್ರಹ್ಮಾವರ ತಾಲೂಕು ಕಚೇರಿಯ ಎದುರು ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಳ್ಳುತ್ತೇವೆ ಎಂದು ಕೋಟದ ರೈತರ ಸಂಘಟನೆ ರೈತಧ್ವನಿಯ ಅಧ್ಯಕ್ಷ ಮಣೂರು ಜಯರಾಮ ಶೆಟ್ಟಿ ತಿಳಿಸಿದರು. ಈ ಕುರಿತು ಸುದ್ದಿಗೋಷ್ಠಿಯಲ್ಲಿ‌ ಮಾತನಾಡಿದ ಅವರು, ಸಂಘಟನೆಯ ಪದಾಧಿಕಾರಿಗಳು ಈ ಕುರಿತು ಉಡುಪಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದು,15 ದಿನಗಳ ಕಾಲಾವಕಾಶವನ್ನು ನೀಡಲಾಗಿದೆ. 15 ದಿನಗಳಲ್ಲಿ ಹೂಳೆತ್ತುವ ಪ್ರಕ್ರಿಯೆಗೆ ಸಕಾರಾತ್ಮಕ ಸ್ಪಂದನೆ ಸಿಗದಿದ್ದರೆ…

Read More

ಡಿ. 30ರಂದು ಡೊಂಗರಕೇರಿ ವೆಂಕಟರಮಣ ದೇವಸ್ಥಾನದಲ್ಲಿ ವೈಕುಂಠ ಏಕಾದಶೀ ಸಂಭ್ರಮ , ಕ್ಷೇತ್ರಕ್ಕೆ ಭೇಟಿ ನೀಡುವ ಕುಟುಂಬದ ಓರ್ವ ಭಕ್ತರಿಗೆ ಪ್ರಸಾದ ರೂಪದಲ್ಲಿ ತುಳಸಿ ಗಿಡ ವಿತರಣೆ …. !

ಮಂಗಳೂರು:ಡೊಂಗರಕೇರಿ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಸ್ವಸ್ತಿ ಶ್ರೀ ವಿಶ್ವಾವಸು ನಾಮ ಸಂವತ್ಸರದ ಧನುರ್ಮಾಸದ ವೈಕುಂಠ ಏಕಾದಶಿಯನ್ನು ಡಿಸೆಂಬರ್ 30ರಂದು ಭಕ್ತಿಪೂರ್ವಕವಾಗಿ ಆಚರಿಸಲಾಗುವುದು, ಕ್ಷೇತ್ರಕ್ಕೆ ಭೇಟಿ ನೀಡುವ ಕುಟುಂಬದ ಓರ್ವ ಭಕ್ತರಿಗೆ ಪ್ರಸಾದ ರೂಪದಲ್ಲಿ ತುಳಸಿ ಗಿಡ ವಿತರಣೆ ಮಾಡಲಾಗುವುದೆಂದು ಗಣೇಶ್ ನಾಗ್ವೇಕರ್ ತಿಳಿಸಿದ್ದಾರೆ. ದೇವಸ್ಥಾನದ ಆವರಣದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು , ‘ನೈಕಾದಶ್ಯಾಃ ಪರಂ ವ್ರತಂ ಎಂಬ ಪುರಾಣ ವಚನದಂತೆ ಏಕಾದಶಿ ವ್ರತವೇ ಶ್ರೇಷ್ಠವೆಂದು ಶಾಸ್ತ್ರಗಳು ಹೇಳುತ್ತವೆ. ಈ ದಿನ ವೈಕುಂಠದ್ವಾರ ತೆರೆದಿರುತ್ತದೆ ಎಂಬ ಭಕ್ತರ…

Read More

ವಿಶ್ವ ಹಿಂದೂ ಪರಿಷದ್, ಹಾಗೂ ಹಿಂದು ಜಾಗರಣ ವೇದಿಕೆಯು ಶ್ರೀ ಕ್ಷೇತ್ರ ಸಂರಕ್ಷಣಾ ಸಮಿತಿಯ ನೇತೃತ್ವದಲ್ಲಿ ನಡೆಸಿದ ಜಂಟಿ ಹೋರಾಟ ಯಶಸ್ವಿ.

ಸುಬ್ರಹ್ಮಣ್ಯ: ಹಿಂದೂ ಧಾರ್ಮಿಕ ಕ್ಷೇತ್ರವಾಗಿರುವ ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಕಾರ್ಯಕ್ರಮಗಳಿಗೆ ಪ್ರೋಟೋಕಾಲ್ ನೆಪದಲ್ಲಿ ಅನ್ಯಧರ್ಮಿಯರನ್ನು ಆಹ್ವಾನಿಸುವುದು ಸಂಪ್ರದಾಯ ಹಾಗೂ ಹಿಂದೂ ಧಾರ್ಮಿಕ ಕಾಯ್ದೆಗೆ ವಿರುದ್ಧವಾಗಿದೆ ಹಾಗಾಗಿ ಕೂಡಲೇ ತಿದ್ದುಪಡಿ ಮಾಡಬೇಕು ಎಂದು ವಿಶ್ವ ಹಿಂದೂ ಪರಿಷದ್, ಹಿಂದು ಜಾಗರಣ ವೇದಿಕೆಯ ಜಂಟಿ ಹೋರಾಟವು ಶ್ರೀ ಕ್ಷೇತ್ರ ಸಂರಕ್ಷಣ ಸಮಿತಿಯ ಮೂಲಕ ಪ್ರತಿಭಟನೆ ಮಾಡಿ ಅಗ್ರಹಮಾಡಿತ್ತು. ಹಿಂದೂ ಭಾವನೆಗಳಿಗೆ ಮನ್ನಣೆಯನ್ನು ಕೊಟ್ಟು ಹಿಂದೂ ಪರ ಸಂಘಟನೆಗಳ ಹೋರಾಟದ ಫಲವಾಗಿ ಇವತ್ತು ಡಿ. 26 ರ ನಡೆದ ಧಾರ್ಮಿಕ ಕಾರ್ಯಕ್ರಮ…

Read More

“ಕ್ರೀಡಾಕೂಟಗಳಲ್ಲಿ ಭಾಗವಹಿಸುವುದರಿಂದ ದೈಹಿಕ ಮತ್ತು ಮಾನಸಿಕ ಶಕ್ತಿ ಹೆಚ್ಚಾಗುತ್ತದೆ ” -ಡಾ.ಎಂ.ಎನ್‌.ರಾಜೇಂದ್ರ ಕುಮಾರ್

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನೌಕರರ ಒಕ್ಕೂಟ ಮಂಗಳೂರು ವತಿಯಿಂದ ಕ್ರೀಡಾಕೂಟವು ಇಂದು ಬೆಳಗ್ಗೆ, ಮಂಗಳಾ ಕ್ರೀಡಾಂಗಣದಲ್ಲಿ ಜರುಗಿತು. ಕಾರ್ಯಕ್ರಮವನ್ನು ಎಸ್ ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅವರು ದೀಪ ಬೆಳಗಿಸಿ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, “ಕ್ರೀಡಾಕೂಟಗಳಲ್ಲಿ ಭಾಗವಹಿಸುವುದರಿಂದ ದೈಹಿಕ ಮತ್ತು ಮಾನಸಿಕ ಶಕ್ತಿ ಹೆಚ್ಚಾಗುತ್ತದೆ. ನೌಕರರಿಗಾಗಿ ಕ್ರೀಡಾಕೂಟ ಏರ್ಪಡಿಸಿ ಅವರಲ್ಲಿ ಹುಮ್ಮಸ್ಸು ತುಂಬುವ ಕಾರ್ಯಕ್ರಮ ಶ್ಲಾಘನೀಯವಾದುದು. ಸದಾಕಾಲ ಕೆಲಸದ ಒತ್ತಡದಲ್ಲಿ ಇರುವ ನೌಕರರು ತಮ್ಮ ಒತ್ತಡವನ್ನು ಮರೆತು ಸೌಹಾರ್ದಯುತವಾಗಿ…

Read More

ಹಿಂದೂ ಮುಸ್ಲಿಂ ಭಾವೈಕತೆ ಮೆರೆದ ಹಝ್ರತ್ ಅಸಯ್ಯದ್ ಇಸ್ಮಾಯಿಲ್ ವಲಿಯುಲ್ಲಾಹಿಲ್ ಬುಖಾರಿ ಮಂಜನಾಡಿ ಉರೂಸ್

ಮಂಗಳೂರು: ನಿತ್ಯಾನಂದ ಸೇವಾ ಸಮಿತಿ ನಿತ್ಯಾನಂದ ನಗರ, ಹನುಮಾನ್ ಫ್ರೆಂಡ್ಸ್ ಹಿಂದೂಪುರ ಅಸೈಗೋಳಿ, ಟೀಮ್ ಅಸೈಗೋಳಿ,ಶಕ್ತಿ ಫ್ರೆಂಡ್ಸ್ ಆಕಾಶಭವನ ಮಂಗಳೂರು, ಸ್ನೇಹ ಬಳಗ ಮಂಗಳೂರು, ಓಂ ಶಕ್ತಿ ಮಂಗಳೂರು, ಬರ್ಕೆ ಫ್ರೆಂಡ್ಸ್ ಕುದ್ರೋಳಿ,ಬ್ರರ‍್ಸ್ ಕೊಲ್ಯ, ಸಾಯಿ ಫ್ರೆಂಡ್ಸ್ ಅಸೈಗೋಳಿ ಅವರಿಂದ ಮಂಜನಾಡಿ ಉರೂಸ್ ಗೆ ಅಸೈಗೋಳಿ ಜಂಕ್ಷನ್ ನಿಂದ ಮಂಜನಾಡಿ ಕೇಂದ್ರ ಮಸೀದಿ ತನಕ ಹೊರೆಕಾಣಿಕೆ ಮೆರವಣಿಗೆಯ ಮೂಲಕ ೧೫ ಕ್ವಿಂಟಾಲ್ ಅಕ್ಕಿ, ಸಕ್ಕರೆ, ತರಕಾರಿ ಇತರ ಸಾಮಾಗ್ರಿಯನ್ನು ತರಲಾಯಿತು. ಸಾಯಿ ಫ್ರೆಂಡ್ಸ್ ಅಸೈಗೋಳಿ ಅಧ್ಯಕ್ಷ ಸುನಿಲ್…

Read More

ಮಿಸೆಸ್ ಇಂಡಿಯಾ -2025 ಕಿರೀಟ ಮುಡಿಗೇರಿಸಿದ ಕನ್ನಡತಿ ಡಾ. ರಶ್ಮಾ ಎಂ. ಶೆಟ್ಟಿ

ಮಂಗಳೂರು : ಮುಲುಂಡ್‌ನ ಪ್ರಕೃತಿ ಚಿಕಿತ್ಸಕಿ ವೈದ್ಯೆ ಡಾ. ರಶ್ಮಾ ಮೋಹಿತ್ ಶೆಟ್ಟಿ ಅವರು ಡಿ. 18 ರಿಂದ ಡಿ 21 ವರಗೆ ನಡೆದ ಜೈಪುರದ ಜೈಬಾಗ್ ಪ್ಯಾಲೇಸ್‌ನಲ್ಲಿ ದೀಪಾಳಿ ಫಡ್ನಿಸ್ (ನ್ಯಾಷನಲ್ ಡೈರೆಕ್ಟರ್, ಮಿಸೆಸ್ ಇಂಡಿಯಾ) ಅವರ ಆಯೋಜನೆಯಲ್ಲಿ ನಡೆದ ಭವ್ಯ ಅಂತಿಮ ಸ್ಪರ್ಧೆಯಲ್ಲಿ ಮಿಸೆಸ್ ಇಂಡಿಯಾ – ಸೀಸನ್ 15 ಕಿರೀಟವನ್ನು ಮುಡಿಗೇರಿಸಿಕೊಂಡಿದ್ದಾರೆ. ಮಿಸೆಸ್ ಇಂಡಿಯಾ ಭಾರತದಲ್ಲಿನ ಅತ್ಯಂತ ಪ್ರತಿಷ್ಠಿತ ಹಾಗೂ ದೀರ್ಘಕಾಲದಿಂದ ನಡೆದ ಸೌಂದರ್ಯ ಸ್ಪರ್ಧೆಗಳಲ್ಲಿ ಒಂದಾಗಿದೆ. ದೇಶದ ವಿವಿಧ ಭಾಗಗಳಿಂದ ಆಯ್ಕೆಯಾದ…

Read More

ಮಹಿಳೆಯ ಗೋಲ್ಡ್ ಚೈನ್ ಕಸಿದು ಕಂಪೌಂಡ್ ಹಾರಿ ಎಸ್ಕೇಪ್ ಆದ ಖದೀಮ …. !

ಮಂಗಳೂರು: ಕೊಂಚಾಡಿ, ಕೊಪ್ಪಲಕಾಡು ಪ್ರದೇಶದಲ್ಲಿ ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ಮಹಿಳೆಯೊಬ್ಬಳ ಕತ್ತಿನಲ್ಲಿ ಇದ್ದ ಸುಮಾರು ಮೂರುವರೆ ಪವನ್ ತೂಕದ ಚಿನ್ನದ ಸರವನ್ನು ಕಳ್ಳನು ಎಗರಿಸಿ ಪರಾರಿಯಾದ ಘಟನೆ ದಾಖಲಾಗಿದ್ದು ಪೊಲೀಸರು ಪ್ರಾಥಮಿಕ ತನಿಖೆ ಆರಂಭಿಸಿದ್ದಾರೆ. ಮಹಿಳೆಯ ಬೊಬ್ಬೆ ಕೇಳಿದಂತೆ ಅಕ್ಕಪಕ್ಕದ ನಿವಾಸಿಗಳು ಓಡಿ ಬಂದಿದ್ದು, ಕಳ್ಳನು ಸಮೀಪದ ಮನೆಯ ಕಂಪೌಂಡ್ ಹಾರಿ ವರಾರಿಯಾದನು. ಬಳಿಕ ಆತ ಬೇರೆ ಕಡೆ ಹೋಗಿ ಬಟ್ಟೆ ಬದಲಾಯಿಸಿಕೊಂಡು, ಅನುಮಾನ ಮೂಡದಂತೆ ತೆರಳಿದ್ದಾನೆ. ಘಟನೆಯ ದೃಶ್ಯಗಳು ಸಮೀಪದ ಮನೆಯ ಸಿಸಿ ಕ್ಯಾಮರಾ…

Read More

ಉಡುಪಿ: ಡಿ. 29- 30ರಂದು ರಂಗಭೂಮಿ ರಂಗಶಿಕ್ಷಣ ಮಕ್ಕಳ ನಾಟಕ ವೈಭವ

ಉಡುಪಿ: ರಂಗಭೂಮಿ‌ ಉಡುಪಿ ಇದರ ವತಿಯಿಂದ “ರಂಗಭೂಮಿ ರಂಗಶಿಕ್ಷಣ ಮಕ್ಕಳ ನಾಟಕೋತ್ಸವ” ಡಿ. 29 ಮತ್ತು 30ರಂದು ಉಡುಪಿ ಎಂಜಿಎಂ ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ನಡೆಯಲಿದೆ ಎಂದು ರಂಗಭೂಮಿ ಅಧ್ಯಕ್ಷ ಡಾ. ತಲ್ಲೂರು ಶಿವರಾಮ ಶೆಟ್ಟಿ ತಿಳಿಸಿದರು‌.ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಉಡುಪಿ ನಗರದ ಆಯ್ದ 11 ಪ್ರೌಢಶಾಲೆಗಳ 250ಕ್ಕೂ ಅಧಿಕ ಮಕ್ಕಳು ನಾಟಕೋತ್ಸವದಲ್ಲಿ ಭಾಗವಹಿಸಲಿದ್ದಾರೆ. ಡಿ.29ರಂದು ಬೆಳಿಗ್ಗೆ 9.30ಕ್ಕೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ. ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಉದ್ಯಮಿಗಳಾದ ಭುವನೇಂದ್ರ…

Read More

ಜ.4ರಂದು ಉಡುಪಿ ಜಿಲ್ಲಾ ಉಪ ವಲಯ ಅರಣ್ಯಾಧಿಕಾರಿಗಳ ಸಂಘದ ರಜತ ಮಹೋತ್ಸವ ಸಂಭ್ರಮ … !

ಉಡುಪಿ: ಉಡುಪಿ ಜಿಲ್ಲಾ ಉಪ ವಲಯ ಅರಣ್ಯಾಧಿಕಾರಿಗಳ ಸಂಘದ ರಜತ ಮಹೋತ್ಸವ ಕಾರ್ಯಕ್ರಮ ಜ.4ರಂದು ಕಿದಿಯೂರು ಹೋಟೆಲ್ ನ ಶೇಷಶಯನ ಹಾಲ್ ನಲ್ಲಿ ನಡೆಯಲಿದೆ. ಹಾಗೆಯೇ ಇದೇ ಸಂದರ್ಭದಲ್ಲಿ ಸಂಘದ ನೂತನ ವರ್ಷದ ಡೈರಿ ಬಿಡುಗಡೆ, ನಿವೃತ್ತ ಉಪ ವಲಯ ಅರಣ್ಯ ಅಧಿಕಾರಿಗಳಿಗೆ ಸನ್ಮಾನ, ಚಿತ್ರಕಲಾ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಣೆ, ರಕ್ತದಾನಿಗಳಿಗೆ ಗೌರವ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಸಂಘದ ಅಧ್ಯಕ್ಷ ನಾಗೇಶ ಬಿಲ್ಲವ ತಿಳಿಸಿದರು. ಉಡುಪಿ ಪತ್ರಿಕಾಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ…

Read More
error: Content is protected !!