ಸಾವಿನಲ್ಲೂ ಸಾರ್ಥಕತೆ ಮೆರೆದ ಸಿಂಧು.. ! ಅಂಗಾಗ ದಾನದಿಂದ ಹಲವರಿಗೆ ಜೀವಧಾನ ….. !
ಮಂಗಳೂರು: ಮೆದುಳಿನ ರಕ್ತಸ್ರಾವದಿಂದ ಯುವತಿಯೊಬ್ಬಳು ಮೃತಪಟ್ಟ ದುರ್ಘಟನೆ ನಡೆದಿದ್ದು, ಆಕೆಯ ಕುಟುಂಬದ ಮಹತ್ವದ ನಿರ್ಧಾರದಿಂದ ಹಲವು ರೋಗಿಗಳಿಗೆ ಹೊಸ ಬದುಕಿನ ಆಶಾಕಿರಣ ಮೂಡಿದೆ. ಮೃತ ಯುವತಿ ಸುಳ್ಯದ ರಥಬೀದಿ ನಿವಾಸಿ ಮಮತಾ ಅವರ ಪುತ್ರಿ ಸಿಂಧು ಎಂದು ಗುರುತಿಸಲಾಗಿದೆ. ಪುತ್ತೂರು ಆದರ್ಶ ಸೊಸೈಟಿಯಲ್ಲಿ ಉದ್ಯೋಗಿಯಾಗಿದ್ದ ಸಿಂಧು ಡಿಸೆಂಬರ್ 16ರಂದು ಪುತ್ತೂರಿನಿಂದ ಸುಳ್ಯಕ್ಕೆ ಬಸ್ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಅಡ್ಯಾರ್ ಬಳಿ ಬಸ್ ಸೀಟಿನಿಂದ ಜಾರಿ ಬಿದ್ದಿದ್ದಾರೆ ಎನ್ನಲಾಗಿದೆ. ಬಸ್ನಲ್ಲಿದ್ದವರು ಆಕೆಯನ್ನು ಹಿಡಿದುಕೊಂಡು ಪ್ರಾಥಮಿಕವಾಗಿ ಸುಳ್ಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದು,…
