ಜ್ಞಾನಿಗಳ ಗೌರವ ದೇವರಿಗೆ ಸಲ್ಲುತ್ತದೆ- ಕೃಷ್ಣಾಪುರಶ್ರೀ ಅಗ್ರಹಾರ ನಾರಾಯಣ ತಂತ್ರಿಗಳ ಸುವರ್ಣ ಸಂಸ್ಮರಣೆ

ಉಡುಪಿ: ಜ್ಞಾನಿಗಳಿಗೆ ಪರಮಾತ್ಮ, ಪರಮಾತ್ಮನಿಗೆ ಜ್ಞಾನಿಗಳು ಪ್ರಿಯರಾಗಿದ್ದು ಜ್ಞಾನಿಗಳ ಗೌರವ ದೇವರಿಗೂ ಸಲ್ಲುತ್ತದೆ ಎಂದು ಕೃಷ್ಣಾಪುರ ಮಠದ ಶ್ರೀ ವಿದ್ಯಾಸಾಗರ ತೀರ್ಥ ಶ್ರೀಪಾದರು ಹೇಳಿದರು. ಅವರು ಬೆಂಗಳೂರಿನ ಅಗ್ರಹಾರ ನಾರಾಯಣ ತಂತ್ರಿ ಟ್ರಸ್ಟ್ ವತಿಯಿಂದ ಉಡುಪಿ ರಥಬೀದಿಯ ಶ್ರೀಕೃಷ್ಣ ಸಭಾ ಮಂದಿರದಲ್ಲಿ ಆಯೋಜಿಸಿದ ಅಗ್ರಹಾರ ನಾರಾಯಣ ತಂತ್ರಿಗಳ ಸುವರ್ಣ ಸಂಸ್ಮರಣೆ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿದರು. ನಿಯಮದಲ್ಲಿ ಬದುಕಿದ ಧರ್ಮಿಷ್ಠರಿಗೆ ಆಯ್ಕೆಗಳು ಕಡಿಮೆ, ಆದರೆ ಅಧರ್ಮಿಷ್ಠರಿಗೆ ಆಯ್ಕೆಗಳು ಬಹಳವಿರುತ್ತವೆ. ಆಚಾರ್ಯ ಎನಿಸಿಕೊಂಡವರು ಆಚಾರವಂತರಾಗಿರಬೇಕು. ಮಧ್ವ ಶಾಸ್ತ್ರ, ಗ್ರಂಥಗಳ ಅನುವಾದಕ್ಕೆ…

Read More

ಮಣಿಪಾಲ: ಮಹಿಳಾ ಪೊಲೀಸ್ ಅಧಿಕಾರಿ ಮೇಲೆ ಹಲ್ಲೆಗೆ ಯತ್ನ; ಆರೋಪಿಯ ಬಂಧನ

ಉಡುಪಿ: ರಾತ್ರಿ ರೌಂಡ್ಸ್ ಕರ್ತವ್ಯದಲ್ಲಿದ್ದ ಮಹಿಳಾ ಪೊಲೀಸ್ ಅಧಿಕಾರಿಗೆ ಏಕವಚನದಲ್ಲಿ ನಿಂದಿಸಿ ಹಲ್ಲೆಗೆ ಯತ್ನಿಸಿ, ಸರಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ವ್ಯಕ್ತಿಯನ್ನು ಮಣಿಪಾಲ ಪೊಲೀಸರು ಬಂಧಿಸಿದ್ದಾರೆ. ಉಡುಪಿಯ ಕೊಡವೂರು ಗ್ರಾಮದ ಜುಮಾದಿನಗರದ ಸಾಗರ್ (25) ಬಂಧಿತ ಆರೋಪಿ. ಜು.26ರ ಶನಿವಾರ ಬೆಳಿಗ್ಗೆ ಸುಮಾರು 2.30 ಕ್ಕೆ ಅನುಮಾನಸ್ಪದವಾಗಿ ಓಡಾಡುತ್ತಿದ್ದ ಸಾಗರ್ ನನ್ನು ಮಹಿಳಾ ಪೊಲೀಸ್ ಅಧಿಕಾರಿ ವಿಚಾರಣೆ ನಡೆಸಿದ್ದಾರೆ. ಈ ವೇಳೆ ಆತ ಮಹಿಳಾ ಪೊಲೀಸ್ ಅಧಿಕಾರಿಗೆ ಹಲ್ಲೆ ನಡೆಸಲು ಪ್ರಯತ್ನಿಸಿದ್ದಾನೆ ಎನ್ನಲಾಗಿದೆ‌. ಬಂಧಿತನನ್ನು ಉಡುಪಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು,…

Read More

ಅಮೆರಿಕಾದ ಅಂತರಾಷ್ಟ್ರೀಯ ವಿಧಾಯಕರುಗಳ ಸಮ್ಮೇಳನಕ್ಕೆ ಶಾಸಕ ಮಂಜುನಾಥ ಭಂಡಾರಿ ಆಯ್ಕೆ

ಮಂಗಳೂರು: ರಾಷ್ಟ್ರೀಯ ಶಾಸಕರ ಸಮಾವೇಶ ಸಂಸ್ಥೆಯ (NLC) ಆಶ್ರಯದಲ್ಲಿ ಅಮೆರಿಕಾದ ಬೋಸ್ಟನ್ ನಲ್ಲಿ ಕರ್ನಾಟಕ ವಿಧಾನಸಭಾ ಅಧ್ಯಕ್ಷರ (ಸ್ಪೀಕರ್) ನೇತೃತ್ವದಲ್ಲಿ ನಡೆಯುವ ಅಂತರರಾಷ್ಟ್ರೀಯ ಮಟ್ಟದ ವಿಧಾಯಕರುಗಳ ಸಮ್ಮೇಳನಕ್ಕೆ ಹಿರಿಯ ರಾಜಕಾರಣಿ ವಿಧಾನ ಪರಿಷತ್ ಶಾಸಕರಾದ ಮಂಜುನಾಥ ಭಂಡಾರಿ ಅವರು ಅವಕಾಶ ಪಡೆದಿದ್ದಾರೆ. ಕರ್ನಾಟಕದ ವಿಧಾನಸಭೆಯ 224 ಸದಸ್ಯರುಗಳಲ್ಲಿ 14 ಶಾಸಕರು ಆಯ್ಕೆಯಾಗಿದ್ದು ಅದರಲ್ಲಿ ಭಂಡಾರಿ ಓರ್ವರಾಗಿರುತ್ತಾರೆ.ಸಚಿವರು, ಶಾಸಕರು, ವಿಧಾನ ಪರಿಷತ್ ಸದಸ್ಯರು, ನೀತಿ ನಿರೂಪಕರು ಈ ಸಮ್ಮೇಳನದಲ್ಲಿ ಪಾಲ್ಗೊಳ್ಳಲಿದ್ದು ಪ್ರಜಾತಂತ್ರ ಗಟ್ಟಿಗೊಳಿಸುವಿಕೆಯಲ್ಲಿ ಶಾಸನ ಸಭೆಗಳ ಪಾತ್ರ ಶಾಸನ…

Read More

“ಎಲ್ಟು ಮುತ್ತಾ ಕನ್ನಡ ಚಲನಚಿತ್ರ ತೆರೆಗೆ ಸಿದ್ದ

ಮಂಗಳೂರು: “ಎಲ್ಟು ಮುತ್ತಾ ಎಂಬ ಕೊಡಗಿನ ಹಿನ್ನಲೆಯುಳ್ಳ ಕನ್ನಡ ಚಲನಚಿತ್ರವು ಹೈ ಫೈವ್ ಸ್ಟುಡಿಯೋಸ್ ಮತ್ತು ಎಸಿಇ 22 ಪ್ರೊಡಕ್ಷನ್ಸ್ ಲಾಂಛನದಲ್ಲಿ ಬಿಡುಗಡೆಗೆ ಸಿದ್ಧಗೊಂಡಿದ್ದು ಇದರ ಟೀಸರ್ ನವಿಲು ಮತ್ತು ಕಾಳಿಂಗ ಹಾವಿನ ಕಥೆ ಹೇಳಿ ಬಹಳ ದೊಡ್ಡಮಟ್ಟದಲ್ಲಿ ಸದ್ದು ಮಾಡುತ್ತಾ ಇದೆ. ಹುಬ್ಬಳ್ಳಿಯಲ್ಲಿ ಅದ್ಧೂರಿಯಾಗಿ ಆಡಿಯೋ ಲಾಂಚ್ ಕಾರ್ಯಕ್ರಮ ನಡೆದಿದ್ದು ಸಿನಿಮಾದ ಟ್ರೈಲರ್ ಯೂಟ್ಯೂಬ್ ನಲ್ಲಿ ಭಾರೀ ಸದ್ದು ಮಾಡುತ್ತಿದೆ. ಈ ಸಿನಿಮಾದ ಕಥಾವಸ್ತುವನ್ನು ತೆರೆಯ ಮೇಲೆ ತರಲು ನಿರ್ದೇಶಕ ರಾ ಸೂರ್ಯ ಬಹಳಷ್ಟು ಶ್ರಮವಹಿಸಿದ್ದಾರೆ“…

Read More

“ಇಡಿ ಇಲಾಖೆ ದುರ್ಬಳಕೆ ಮಾಡಿದ ಬಿಜೆಪಿ ಸರಕಾರದ ವಿರುದ್ಧ ಪ್ರತಿಭಟನೆ ಖಚಿತ ”

ಮಂಗಳೂರು: “ಇಡಿ ಇಲಾಖೆಯನ್ನು ರಾಜಕೀಯ ದುರುದ್ದೇಶಕ್ಕೆ ಬಳಸಿರುವ ಬಿಜೆಪಿ ದೇಶದ ಸಂವಿಧಾನವನ್ನು ಗಾಳಿಗೆ ತೂರಿದೆ. ಬಿಜೆಪಿಗೆ ದೇಶದಲ್ಲಿ ಆಡಳಿತ ನಡೆಸಲು ಅರ್ಹತೆ ಇಲ್ಲ. ಸುಪ್ರೀಂ ಕೋರ್ಟ್ ಇಡಿ ದುರ್ಬಳಕೆ ಮಾಡಿರುವುದನ್ನು ಹೇಳಿದ್ದರಿಂದ ಬಿಜೆಪಿ ಹಣೆಬರಹ ಜಗಜ್ಜಾಹೀರಾಗಿದೆ“ ಎಂದು ವಿಧಾನ ಪರಿಷತ್ ಶಾಸಕ ಐವನ್ ಡಿಸೋಜ ಪತ್ರಿಕಾಗೋಷ್ಟಿಯಲ್ಲಿ ಹೇಳಿದರು. ”ಇಡಿಯನ್ನು ಮುಂದಿಟ್ಟುಕೊಂಡು ಮುಡಾ ಹಗರಣದಲ್ಲಿ ಮುಖ್ಯಮಂತ್ರಿಯವರ ಶ್ರೀಮತಿಯವರ ಹೆಸರನ್ನು ದುರ್ಬಳಕೆ ಮಾಡಲಾಯಿತು. ಮುಡಾ ಪ್ರಕರಣದಲ್ಲಿ ಮನಿ ಲ್ಯಾಂಡಿಂಗ್ ನಡೆದಿಲ್ಲ, ಹಣ ತೆಗೆದುಕೊಂಡ ದೂರಿಲ್ಲ ಹೀಗಿರುವಾಗ ಮುಖ್ಯಮಂತ್ರಿಯವರ ಶ್ರೀಮತಿ ವಿರುದ್ಧ…

Read More

ಕೆಪಿಟಿಗೆ ಲಭ್ಯವಾಗದ ಫ್ಲೈಓವರ್ ಭಾಗ್ಯ…

ಮಂಗಳೂರು: ದಿನ ನಿತ್ಯವೂ ವಾಹನ ದಟ್ಟಣೆ , ಒಮ್ಮೆ ಸಿಗ್ನಲ್ ನಲ್ಲಿ ಸಿಕ್ಕಿ ಹಾಕಿಕೊಂಡರಂತೂ ತ್ರಿಶಂಕು ಸ್ಥಿತಿ , ನಾಲ್ಕೂ ಮಾರ್ಗಗಳು ಸೇರುವ ವೃತ್ತ ಇದಾಗಿದ್ದರೂ ಇನ್ನು ಫ್ಲೈ ಓವರ್ ಭಾಗ್ಯ ದೊರೆತಿಲ್ಲ. ಕೆ.ಪಿ.ಟಿ. ಜಂಕ್ಷನ್ ಅಥವಾ ವಿಶ್ವೇಶ್ವರಯ್ಯ ವೃತ್ತ ಎಂದು ಕರೆಯಲ್ಪಡುವ ‌ಪ್ರಮುಖ ಜಂಕ್ಷನ್ ಸದಾ ಟ್ರ್ರಾಫಿಕ್ ಜಾಮ್ ನಿಂದ ಬಾಧೆ ಕೊಡುತ್ತಿರುತ್ತದೆ . ಇಲ್ಲಿ ಫ್ರೀ ಲೆಷ್ಟ್ ಇದೆಯಾದರೂ ಅದಕ್ಕೆ ಅಡ್ಡವಾಗಿ ನಿಂತು ವಾಹನ ಸಂಚಾರಕ್ಕೆ ಅಡ್ಡಿಯುಂಟು ಮಾಡದಿದ್ದರೆ ಖಾಸಗಿ ಬಸ್ಸುಗಳ ಚಾಲಕರಿಗೆ ಉಂಡ…

Read More

ಬೈಂದೂರು ತಾಲೂಕಿನ ನದಿಗಳಲ್ಲಿ ನೀರಿನ ಮಟ್ಟ ಹೆಚ್ಚಳ.

ಉಡುಪಿ ಜಿಲ್ಲೆಯ ಬೈಂದೂರು ಹಾಗೂ ಕುಂದಾಪುರ ತಾಲೂಕಿನಲ್ಲಿ ಮಳೆ ಆರ್ಭಟ ಮುಂದುವರಿದಿದೆ. ಬೈಂದೂರು ತಾಲೂಕಿನಲ್ಲಿ ಎಡೆಬಿಡದೆ ಮಳೆಯಾಗುತ್ತಿದ್ದು, ಪ್ರಮುಖ ನದಿಗಳು ತುಂಬಿ ಹರಿಯುತ್ತಿವೆ. ಬೈಂದೂರಿನ ಸೌಪರ್ಣಿಕಾ, ಸುಮನಾವತಿ, ಸಂಕದ ಗುಂಡಿ, ಎಡ ಮಾವಿನ ಹೊಳೆ ತುಂಬಿ ಹರಿಯುತ್ತಿವೆ, ನದಿ ಪಾತ್ರ, ನಾಡ, ನಾವುಂದ, ಮರವಂತೆ, ಬಡಾಕೆರೆ ಚಿಕ್ಕಳ್ಳಿ ಪಡುಕೋಣೆ ಆನಗಳ್ಳಿ ಹಳಗೇರಿ ಜನರು ಎಚ್ಚರ ವಹಿಸುವಂತೆ‌ ಜಿಲ್ಲಾಡಳಿತ ಸೂಚಿಸಿದೆ. ಪಶ್ಚಿಮ ಘಟ್ಟದಲ್ಲಿ ಮಳೆ ಮುಂದುವರಿದರೆ ಪರಿಸ್ಥಿತಿ ಇನ್ನಷ್ಟು ಹದಗೆಡಲಿದೆ.ಪ್ರತಿ ವರ್ಷ ಮಳೆಗಾಲ ಬಂದರೆ ನಮಗೆ ಸಮಸ್ಯೆ ತಪ್ಪಿದ್ದಲ್ಲ….

Read More

ಸೂಕ್ತ ಗಣಿ ನೀತಿ ರೂಪಿಸಿ ಪರಿಹರಿಸದಿದ್ದಲ್ಲಿ ಹೋರಾಟ ಇನ್ನಷ್ಟು ತೀವ್ರಗೊಳ್ಳಲಿದೆ : ಅಶ್ರಫ್ ತಲಪಾಡಿ

ಮಂಗಳೂರು:ಜು. 25 – ಮರಳು ಮತ್ತು ಕೆಂಪು ಕಲ್ಲು ಗಣಿಗಾರಿಕೆ ನಿಷೇದಿಂದಾಗಿ ಕಟ್ಟಡದ ಮಾಲೀಕರು, ಗುತ್ತಿಗೆದಾರರು ಹಾಗೂ ಕಾರ್ಮಿಕರು ಸಂಕಷ್ಟದಲ್ಲಿದ್ದಾರೆ. ಇದರಿಂದಾಗಿ ಜಿಲ್ಲೆಯಲ್ಲಿ ಆರ್ಥಿಕತೆಯು ದುರ್ಬಲಗೊಂಡಿದೆ. ದಿನಾ ಕೂಲಿ ಕೆಲಸ ಮಾಡಿ ಸಂಬಳ ಪಡೆದು ಮನೆಗೆ ಹೋಗುತ್ತಿದ್ದ ಕಾರ್ಮಿಕ ಎರಡು ತಿಂಗಳುಗಳಿಂದ ಸಂಜೆ ಹೊತ್ತಿಗೆ ಇಂದು ಬರಿಗೈಯ್ಯಲ್ಲಿ ಮನೆಗೆ ಹೇಗೆ ಹೋಗಲಿ ಎಂಬ ಚಿಂತೆಯಲ್ಲಿದ್ದಾನೆ. ಅಧಿಕಾರಿಗಳು, ಸಂಬಂಧಪಟ್ಟ ಚುನಾಯಿತ ಪ್ರತಿನಿಧಿಗಳು ಸಮಸ್ಯೆ ಪರಿಹರಿಸುವಲ್ಲಿ ವಿಫಲರಾಗಿದ್ದಾರೆ. ಈ ಸಮಸ್ಯೆಗೆ ಸೂಕ್ತ ಗಣಿ ನೀತಿ ರೂಪಿಸಿ ಕೂಡಲೇ ಪರಿಹರಿಸಬೇಕು. ಇಲ್ಲದಿದ್ದಲ್ಲಿ…

Read More

ಮದುವೆಯಾಗುವುದಾಗಿ ನಂಬಿಸಿ ಯುವತಿಗೆ ವಂಚಿಸಿದ ಪ್ರಕರಣ, ಆರೋಪಿ ಕೃಷ್ಣ ಜೆ.ರಾವ್ ಜಾಮೀನು ಅರ್ಜಿ ತಿರಸ್ಕೃತ

ಪುತ್ತೂರು : ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ನಡೆಸಿ ವಿದ್ಯಾರ್ಥಿನಿಯನ್ನು ಗರ್ಭವತಿಯನ್ನಾಗಿಸಿ ವಂಚಿಸಿರುವ ಪ್ರಕರಣದ ಆರೋಪಿ ಶ್ರೀಕೃಷ್ಣ ಜೆ ರಾವ್ ನ ಬೇಲ್ ಅರ್ಜಿಯ ವಿಚಾರಣೆ ನಡೆಸಿರುವ ದ.ಕ.ಆರನೇ ನ್ಯಾಯಾಲಯ ಜಾಮೀನು ಅರ್ಜಿ ತಿರಸ್ಕೃತಗೊಳಿಸಿದೆ. ಜು.19 ರಂದು ವಾದ-ಪ್ರತಿವಾದ ಆಲಿಸಿದ ನ್ಯಾಯಾಧೀಶರು, ಜು. 25 ರಂದು ತೀರ್ಪು ನೀಡುವುದಾಗಿ ಪ್ರಕಟಿಸಿದ್ದರು. 6ನೇ ಜಿಲ್ಲಾ ನ್ಯಾಯಾಲಯದಲ್ಲಿ ಶುಕ್ರವಾರ ಜಾಮೀನು ಅರ್ಜಿ ತಿರಸ್ಕೃತ ಗೊಳಿಸಲಾಗಿದೆ.

Read More

ಸುಬ್ರಹ್ಮಣ್ಯ – ನಾಪತ್ತೆಯಾಗಿದ್ದ ಆಂಬ್ಯುಲೆನ್ಸ್ ಡ್ರೈವರ್ ಮೃತದೇಹ ಪತ್ತೆ

ಕಳೆದ ಕೆಲವು ದಿನಗಳ ಹಿಂದೆ ನಾಪತ್ತೆಯಾಗಿದ್ದ ಸುಬ್ರಹ್ಮಣ್ಯ ಪ್ರಾಥಮಿಕ ಆರೋಗ್ಯಕೇಂದ್ರದ ಆಂಬ್ಯುಲೆನ್ಸ್ ಡ್ರೈವರ್ ಮೃತದೇಹ ಕುಮಾರಧಾರ ನದಿಯಲ್ಲಿ ನೆನ್ನೆ ಪತ್ತೆಯಾಗಿದೆ.ಮೃತರನ್ನು ಸುಬ್ರಹ್ಮಣ್ಯ ದೇವರಗದ್ದೆ ನಿವಾಸಿ ಹೊನ್ನಪ್ಪ (52) ಎಂದು ಗುರುತಿಸಲಾಗಿದೆ. ಸುಬ್ರಹ್ಮಣ್ಯ ಪ್ರಾಥಮಿಕ ಆರೋಗ್ಯಕೇಂದ್ರದ ಆಂಬ್ಯುಲೆನ್ಸ್ ಡ್ರೈವರ್ ಆಗಿ ಕೆಲಸ ನಿರ್ವಹಿಸುತ್ತಿದ್ದ ಹೊನ್ನಪ್ಪ ಅವರು ಮಂಗಳವಾರದಿಂದ ನಾಪತ್ತೆಯಾಗಿದ್ದರು. ಅವರು ಕುಮಾರಧಾರ ನದಿ ಕಡೆಗೆ ಓಡುತ್ತಿರುವ ದೃಶ್ಯ ಸಿಸಿ ಕೆಮರಾದಲ್ಲಿ ಸೆರೆಯಾಗಿತ್ತು. ಈ ಹಿನ್ನಲೆ ನದಿಗೆ ಹಾರಿರಬಹುದು ಎಂಬ ಶಂಕೆ ಮೇರೆಗೆ ಕುಮಾರಧಾರ ನದಿಯಲ್ಲಿ ಅಂದು ರಾತ್ರಿಯಿಂದಲೇ ಹುಡುಕಾಟ…

Read More
error: Content is protected !!