ವಿವಾಹದ ತಯಾರಿಯಲ್ಲಿದ್ದ ಮನೆಯಿಂದ ಮದುಮಗಳು ನಾಪತ್ತೆ.. !

ಬಂಟ್ವಾಳ: ಮದುವೆಯ ತಯಾರಿಯಲ್ಲಿದ್ದ ಮನೆಯಿಂದ ಮದುಮಗಳು ನಾಪತ್ತೆಯಾದ ಘಟನೆ ಬಿಸಿರೋಡಿನ ಪಲ್ಲಮಜಲು ಎಂಬಲ್ಲಿ ನಡೆದಿದ್ದು ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಅಶ್ಪಿಯ ( 21) ನಾಪತ್ತೆಯಾದ ಯುವತಿಯಾಗಿದ್ದಾಳೆ ಡಿ.14 ರಂದು ಅಶ್ಪಿಯಳನ್ನು . ಬಿ ಮೂಡ ಗ್ರಾಮದ ಬಂಟ್ವಾಳದ ಯುವಕನೋರ್ವನಿಗೆ ಮದುವೆ ಮಾಡುವುದಾಗಿ ಹಿರಿಯರೊಂದಿಗೆ ಮಾತುಕತೆ ಮಾಡಿ ಯುನಿಟಿ ಹಾಲ್ ಅಲ್ಲಿ ಮದುವೆ ನಿಶ್ಷಯಿಸಿರುತ್ತಾರೆ.ಡಿ‌. 14 ರಂದು ಬೆಳಗ್ಗೆ ಸುಮಾರು 03:30 ಗಂಟೆ ತನಕ ಮನೆಯಲ್ಲೇ ಮಲಗಿದ್ದು ಆ ಬಳಿಕ ಬೆಳಿಗ್ಗೆ ಸುಮಾರು 04:30 ಗಂಟೆಗೆ…

Read More

ಎಕೆಎಂಎಸ್ ಬಸ್‌ ಮಾಲೀಕ ಸೈಫುದ್ದೀನ್‌ ಹತ್ಯೆ ಪ್ರಕರಣ: ಐದನೇ ಆರೋಪಿಯ ಬಂಧನ.. !

ಉಡುಪಿ: ಎಕೆಎಂಎಸ್ ಬಸ್‌ ಮಾಲೀಕ ಸೈಫುದ್ದೀನ್‌ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐದನೇ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.ಉಡುಪಿ ಮಿಶನ್ ಕಂಪೌಂಡ್ ಬಳಿಯ ಶಾಂತಿ ನಗರದ ನಿವಾಸಿ ಮಾಲಿ ಮೊಹಮ್ಮದ್‌ ಸಿಯಾನ್‌(31) ಬಂಧಿತ ಆರೋಪಿ. ಈತನನ್ನು ಸೋಮವಾರ ಬೆಳಿಗ್ಗೆ 10.30ಕ್ಕೆ ಎಂಜಿಎಂ ಕಾಲೇಜಿನ ಬಸ್‌ ಸ್ಟ್ಯಾಂಡ್‌ ಬಳಿಯಲ್ಲಿ ಪೊಲೀಸರು ಬಂಧಿಸಿ, ಕೃತ್ಯಕ್ಕೆ ಬಳಸಿದ KA20MF207ನೇ ಗ್ಲಾಂಜಾ ಕಾರನ್ನು ಹಾಗೂ ಕೃತ್ಯಕ್ಕೆ ಬಳಸಿದ ಮೊಬೈಲ್‌ ಪೋನ್‌ನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ 4 ಜನ ಆರೋಪಿಗಳನ್ನು ಬಂಧಿಸಲಾಗಿದ್ದು,…

Read More

ಬೆಂಗಳೂರಿನಿಂದ ಮಾದಕ ವಸ್ತು ತಂದು ಮಂಗಳೂರಿನ ಡ್ರಗ್ ಪೆಡ್ಲರ್‌ಗಳಿಗೆ ಪೂರೈಕೆ ಮಾಡುತ್ತಿದ್ದ ಮೂವರ ಬಂಧನ … !

ಮಂಗಳೂರು: ಮಂಗಳೂರು ಸಿಸಿಬಿ ಘಟಕದ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಬೆಂಗಳೂರಿನಿಂದ ಮಾದಕ ವಸ್ತು ತಂದು ಮಂಗಳೂರಿನ ಡ್ರಗ್ ಪೆಡ್ಲರ್‌ಗಳಿಗೆ ಪೂರೈಕೆ ಮಾಡುತ್ತಿದ್ದ ತಂಡದ ಮೂವರನ್ನು ಬಂಧಿಸಿದ್ದಾರೆ. ಮಂಗಳೂರು ಮಲ್ಲೂರಿನ ಅಹಮ್ಮದ್ ಶಾಬೀತ್ ( 35), ಬಂಟ್ವಾಳ ಪರ್ಲಿಯಾದ ಮಹಮ್ಮದ್ ಶಂಶೀರ್ (36) ಮತ್ತು ಸರಪಡಿಯ ನೌಶೀನ(27) ಬಂಧಿತ ಆರೋಪಿಗಳು ಎಂದು ನಗರ ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.ಸಿಸಿಬಿ ಘಟಕದ ಪೊಲೀಸರು ಡಿ.13ರಂದು ಕಾರಿನಲ್ಲಿ ಬರುತ್ತಿದ್ದ ಅಹಮ್ಮದ್ ಶಾಬೀತ್, ಮತ್ತು ಆತನ ತಂಡವನ್ನು ಅರ್ಕುಳ ಬಳಿ ವಶಕ್ಕೆ ಪಡೆದು ದಸ್ತಗಿರಿ…

Read More

ತಲ್ವಾರ್ ಹಿಡಿದು ಡಾನ್ಸ್ ಮಾಡಿ ರೀಲ್ಸ್ ಮಾಡಿ ಜಾಲತಾಣದಲ್ಲಿ ಪೋಸ್ಟ್ ಮಾಡಿದ ಆರೋಪಿಗಳ ಬಂಧನ… !

ಮಂಗಳೂರು: ತಲ್ವಾರ್ ಹಿಡಿದು ಡಾನ್ಸ್ ಮಾಡಿ ರೀಲ್ಸ್ ಮಾಡಿ ಜಾಲತಾಣದಲ್ಲಿ ಪೋಸ್ಟ್ ಮಾಡಿದ ಆರೋಪಿಗಳ ಬಂಧನವಾಗಿದೆ.ಬಂಧಿತರನ್ನು ಬಂದರು ನಿವಾಸಿ ಅಮೀರ್ ಸುಹೇಲ್ (28) ಹಾಗೂ ಉರುಂದಾಡಿಗುಡ್ಡೆ ಕಾವೂರು ನಿವಾಸಿ ಸುರೇಶ (29) ಎಂದು ತಿಳಿದುಬಂದಿದೆ. ಆರೋಪಿಗಳು ದಿ.13 ರಂದು ಸಾಮಾಜಿಕ ಜಾಲತಾಣವಾದ ಪೇಸಬುಕ್ ಖಾತೆಯಲ್ಲಿ ಅಮೀರ್ ಸುಹೇಲನು ತಲ್ವಾರ್ ಹಿಡಿದು ಹಾಡಿಗೆ ಡ್ಯಾನ್ಸ್ ಮಾಡಿದ ವಿಡಿಯೋ ಮೇಲೆ VIBES ಮತ್ತು ಬಿಳಿ ಬಣ್ಣದ ಹಾರ್ಟ್ ಗುರುತಿನ ಚಿಹ್ನೆಯೊಂದಿಗೆ ಸ್ಟೋರಿಗೆ ಹಾಕಿದ್ದು ಈ ವಿಡಿಯೋ ವೈರಲ್ ಆಗಿದೆ.ಸಾಮಾಜಿಕ ಜಾಲತಾಣದ…

Read More

ನನ್ನ ಮೇಲಿನ ಕಳ್ಳತನದ ಆರೋಪ ಸಾಬೀತು ಮಾಡಿ… ! ರವಿ ಪ್ರಸನ್ನರಿಗೆ ಓಪನ್ ಚಾಲೆಂಜ್ ಹಾಕಿದ ತಮ್ಮಣ್ಣ ಶೆಟ್ಟಿ ….. !

ಮಂಗಳೂರು: ನನ್ನ ಮೇಲಿನ ಆರೋಪ ಶುದ್ಧ ಸುಳ್ಳು ನಾನು ಕೊಂಡಾಣ , ಷಣ್ಮುಖ ದೇವಾಲಯದ ಭಂಡಾರ ಕದ್ದಿಲ್ಲ. ಒಂದು ವೇಳೆ ರವಿ ಪ್ರಸನ್ನರ ಆರೋಪ ಸತ್ಯ ಆಗಿದ್ದರೆ ನಾನು ಕೊಂಡಾಣದ ಮಣ್ಣಿನಲ್ಲಿ ಇನ್ನು ಮುಂದೆ ದೈವದ ಬಗ್ಗೆ ಮಾತನಾಡುವುದಿಲ್ಲ ಎಂದು ಶಪಥ ಮಾಡುತ್ತೇನೆ. ಒಂದು ವೇಳೆ ಪ್ರಸನ್ನ ರವಿ ಹೇಳಿರುವುದು ಸುಳ್ಳು ಎಂದು ಸಾಬೀತಾದರೆ ಆತನನ್ನು ತಂತ್ರಿ ಕಂತ್ರಿ ಕುತಂತ್ರಿ ಎಂದು ಕರೆಯುತ್ತೇನೆ ಎಂಬುದಾಗಿ ತಮ್ಮಣ್ಣ ಶೆಟ್ಟಿ ಹೇಳಿದ್ದಾರೆ.ಅವರು ನಗರದ ಪತ್ರಿಕಾ ಭವನದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ,…

Read More

ಡಿ.16ರಂದು “ಕೊಂದವರು ಯಾರು ?” ಆಂದೋಲನ- ಸಾವಿರಾರು ಮಹಿಳೆಯರಿಂದ ಮೌನ ಮೆರವಣಿಗೆ

ಉಡುಪಿ:ಧರ್ಮಸ್ಥಳ ಗ್ರಾಮದಲ್ಲಿ ನಡೆದಿದೆ ಎನ್ನಲಾದ ಅಪರಾಧ ಪ್ರಕರಣಗಳ ತನಿಖೆಗೆ ರಚನೆಯಾಗಿರುವ ಎಸ್‌ಐಟಿ , ಆ ವ್ಯಾಪ್ತಿಯಲ್ಲಿ ದಾಖಲಾಗಿರುವ ಎಲ್ಲ ಅಪರಾಧ ಪ್ರರಕಣಗಳ ಸಮಗ್ರ ತನಿಖೆ ನಡೆಸಬೇಕು ಎಂದು ಆಗ್ರಹಿಸಿ ಇದೇ ಡಿ. 16ರಂದು ಬೆಳ್ತಂಗಡಿಯಲ್ಲಿ ‘ಮಹಿಳೆಯರ ಮೌನ ಮೆರವಣಿಗೆ ಮತ್ತು ಮಹಿಳಾ ನ್ಯಾಯ ಸಮಾವೇಶ’ ಆಯೋಜಿಸಲಾಗಿದೆ ಎಂದು ‘ಕೊಂದವರು ಯಾರು?’ ಆಂದೋಲನದ ಜ್ಯೋತಿ ಎ ತಿಳಿಸಿದರು. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಹೋರಾಟಕ್ಕೆ ರಾಜ್ಯದ ವಿವಿಧೆಡೆಯ ಮಹಿಳೆಯರು ಆಗಮಿಸಲಿದ್ದಾರೆ. ಈಗಾಗಲೇ ಹೋರಾಟಕ್ಕೆ ಉತ್ತಮ ಸ್ಪಂದನೆ…

Read More

ಉಡುಪಿ ನಗರಸಭೆ ಕಚೇರಿಯ ಶೌಚಾಲಯದ ಕೊಳಚೆ ನೀರಿನಿಂದ ವೈರಸ್ ಭೀತಿ … !

ಉಡುಪಿ:ಉಡುಪಿ ನಗರಸಭೆ ಕಚೇರಿಯ ಶೌಚಾಲಯದ ತ್ಯಾಜ್ಯ ನೀರಿನ ಕೊಳವೆಯ ಜೋಡಣೆ ಕಳಚಿಕೊಂಡಿದ್ದು, ಇದರಿಂದಾಗಿ ಶೌಚತ್ಯಾಜ್ಯಗಳು ಹೊರಬೀಳುತ್ತಿದ್ದು, ಪರಿಸರದಲ್ಲಿ ರೋಗ ಹರಡುವ‌ ಭೀತಿ ಎದುರಾಗಿದೆ. ಮಾರಕ ಸೊಳ್ಳೆಗಳ ಉತ್ಪತ್ತಿಗೆ ಕಾರಣವಾಗುವ ಸಾಧ್ಯತೆ ಇದೆ. ಸನಿಹದಲ್ಲಿ ಕವಿ ಮುದಣ್ಣ ಮಾರ್ಗದಿಂದ ನಿತ್ಯಾನಂದ ಮಂದಿರಕ್ಕೆ ಸಂಪರ್ಕಿಸುವ ರಸ್ತೆ ಹಾದುಹೋಗುತ್ತಿದ್ದು,‌ ಈ ರಸ್ತೆಯಲ್ಲಿ ಭಕ್ತಾದಿಗಳು,‌ ಶಾಲಾ ವಿದ್ಯಾರ್ಥಿಗಳು, ಸಾರ್ವಜನಿಕರು ಸಂಚರಿಸುತ್ತಿರುತ್ತಾರೆ. ಪಕ್ಕದಲ್ಲಿ ನಗರ ಪ್ರಾಥಮಿಕ ಆರೋಗ್ಯ ಕೇಂದ್ರವು ಇದೆ. ಹೊರಹೊಮ್ಮಿತ್ತಿರುವ ಗಬ್ಬು‌ವಾಸನೆಗೆ ಮೂಗು ಮುಚ್ಚಿ‌ ತಿರುಗಾಡ ಬೇಕಾದ ಸಮಸ್ಯೆಯು ಇಲ್ಲಿ ಎದುರಾಗಿದೆ. ತಕ್ಷಣ…

Read More

ಡಿಸೆಂಬರ್ 16 ರಂದು ನಗರದ ಕದ್ರಿ ಹಿಲ್ಸ್‌ ನಲ್ಲಿ “ವಿಜಯ ದಿವಸ” ವೀರಯೋಧರ ಸ್ಮರಣೆ … !

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಮಾಜಿ ಸೈನಿಕರ ಸಂಘ , ನಿಟ್ಟೆ ಶಿಕ್ಷಣ ಸಂಸ್ಥೆ , ರೋಟರಿ ಇಂಟರ್ನ್ಯಾಷನಲ್ ಡಿಸ್ಟ್ರಿಕ್ಟ್ 3181 , ಲಯನ್ಸ್ ಇಂಟರ್ನ್ಯಾಷನಲ್ ಡಿಸ್ಟ್ರಿಕ್ಟ್ 317 ಡಿ ಇದರ ಸಂಯುಕ್ತ ಆಶ್ರಯದಲ್ಲಿ ಭಾರತೀಯ ವೀರಯೋಧರು ಮಾಡಿದ ತ್ಯಾಗ ಮತ್ತು ಬಲಿದಾನವನ್ನು ಸ್ಮರಿಸುತ್ತಾ ಡಿಸೆಂಬರ್ 16 ರಂದು ಬೆಳಿಗ್ಗೆ 9:00 ಗಂಟೆಗೆ, “ವಿಜಯ ದಿವಸ” ವನ್ನು ಮಂಗಳೂರು ನಗರದ ಕದ್ರಿ ಹಿಲ್ಸ್‌ ನಲ್ಲಿರುವ ಯೋಧರ ಯುದ್ಧಸ್ಮಾರಕದಲ್ಲಿ ಹೂಹಾರವನ್ನು ಅರ್ಪಿಸಿ, ಪ್ರಾರ್ಥನೆಯೊಂದಿಗೆ ನಮನ ಸಲ್ಲಿಸಲಾಗುವುದೆಂದು ದಕ್ಷಿಣ ಕನ್ನಡ…

Read More

ಹಳಿಯಲ್ಲಿ ಓಡಲಿದೆಯೇ ಬೆಂಗಳೂರು ಮಂಗಳೂರು, ಉಡುಪಿ, ಕಾರವಾರದ ನಡುವೆ ವಂದೇ ಭಾರತ್ ರೈಲು… ?!

ಉಡುಪಿ|: ಕರಾವಳಿ ಕರ್ನಾಟಕದ ರೈಲ್ವೆ ಪ್ರಯಾಣಿಕರ ಹಿತದೃಷ್ಟಿಯಿಂದ, ಘಾಟ್ ವಿಭಾಗದಲ್ಲಿ ವಿದ್ಯುದ್ದೀಕರಣ ಕಾರ್ಯ ಪೂರ್ಣಗೊಂಡ ನಂತರ ಬೆಂಗಳೂರಿನಿಂದ ಮಂಗಳೂರು, ಉಡುಪಿ ಮತ್ತು ಕಾರವಾರಕ್ಕೆ ವಂದೇ ಭಾರತ್ ಎಕ್ಸ್‌ಪ್ರೆಸ್ ಅನ್ನು ಓಡಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಹೇಳಿದ್ದಾರೆ. ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ್ ಪೂಜಾರಿ ಅವರು ನವದೆಹಲಿಯಲ್ಲಿ ಕೇಂದ್ರ ರೈಲ್ವೆ ಸಚಿವರನ್ನು ಭೇಟಿಯಾಗಿ ಈ ಸಂಬಂಧ ಒಂದು ಮನವಿ ಪತ್ರವನ್ನು ಸಲ್ಲಿಸಿ, ಈ ರೈಲು ಮಾರ್ಗದಲ್ಲಿ ವಂದೇ ಭಾರತ್ ರೈಲನ್ನು ಓಡಿಸುವ…

Read More

ಡಿ.20ರಂದು ರೋಶನಿ ನಿಲಯ ಸ್ಕೂಲ್ ಆಫ್ ಸೋಶಿಯಲ್ ವರ್ಕ್‌ ರೋಶ್ನಿ ಅಲುಮ್ನಿ ಅಸೋಸಿಯೇಶನ್ ಮೊತ್ತ ಮೊದಲ ‘ ರೋಶ್ನಿ ಇಂಪ್ಯಾಕ್ಟ್ ಅವಾರ್ಡ್’ ಪ್ರಧಾನ … !

ಮಂಗಳೂರು: ನಗರದ ರೋಶನಿ ನಿಲಯ ಸ್ಕೂಲ್ ಆಫ್ ಸೋಶಿಯಲ್ ವರ್ಕ್‌ ರೋಶ್ನಿ ಅಲುಮ್ನಿ ಅಸೋಸಿಯೇಶನ್ ಮೊದಲ ಬಾರಿಗೆ ‘ರೋಶ್ನಿ ಇಂಪ್ಯಾಕ್ಟ್ಅ ವಾರ್ಡ್-202’5ನ್ನು ಘೋಷಿಸಿದೆ. ಡಿ.20ರಂದು ಸಂಜೆ 5ಕ್ಕೆ ರೋಶನಿ ನಿಲಯ ಕ್ಯಾಂಪಸ್‌ನಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ ಎಂದು ಅಸೋಸಿಯೇಶನ್ ಅಧ್ಯಕ್ಷ ಆನಂದ್ ಡಿಸಿಲ್ವ ತಿಳಿಸಿದ್ದಾರೆ. ನಗರದ ಪತ್ರಿಕಾಭವನದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು , ಕಮ್ಯೂನಿಟಿ ಕ್ಯಾಟಲಿಸ್ಟ್ ಅವಾರ್ಡ್‌ಗೆ ಮದ್ರಾಸ್ ಕ್ರಿಶ್ಚಿಯನ್ ಕಾಲೇಜಿನ ಡಾ.ಎನ್.ಜೋಶ್ಚು ಜಯಶೀಲನ್ ರನ್ನು, ಮೈಂಡ್ ಮ್ಯಾಟರ್ಸ್ ಅವಾರ್ಡ್‌ಗೆ ನಿಮ್ಹಾನ್ಸ್‌ನ ಡಾ.ಅನಿಷ್ ವಿ. ಚೆರಿಯನ್,…

Read More
error: Content is protected !!