ಜನಾರ್ದನ ಚೆಂಡ್ತಿಮಾರ್ ನಿಧನಕ್ಕೆ ಜಿಲ್ಲಾ ಕಾಂಗ್ರೆಸ್ ಸಂತಾಪ
ಮಂಗಳೂರು: ಕಾಂಗ್ರೆಸ್ ಪಕ್ಷದ ಹಿರಿಯ ಮುಂದಾಳು, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ, ಬಂಟ್ವಾಳ ಪುರಸಭೆ ಸದಸ್ಯ ಜನಾರ್ದನ ಚೆಂಡ್ತಿಮಾರ್ ಅವರ ನಿಧನಕ್ಕೆ ದ.ಕ.ಜಿಲ್ಲಾ ಕಾಂಗ್ರೆಸ್ ಸಮಿತಿ ತೀವ್ರ ಸಂತಾಪ ಸೂಚಿಸಿದೆ. ಜನಾರ್ದನ ಚೆಂಡ್ತಿಮಾರ್ ಅವರ ನಿಧನದಿಂದ ಜಿಲ್ಲಾ ಕಾಂಗ್ರೆಸ್ ಆಘಾತಕ್ಕೊಳಗಾಗಿದೆ. ಅವರ ದೂರದರ್ಶಿತ್ವ, ಶಿಸ್ತುಬದ್ಧ ಜೀವನ, ಸಜ್ಜನಿಕೆಯ ನಡವಳಿಕೆ ಮತ್ತು ಅಧ್ಯಯನಶೀಲ ಪ್ರವೃತ್ತಿ ಉದಯೋನ್ಮುಖ ರಾಜಕಾರಣಿಗಳಿಗೆ ಮಾದರಿಯಾಗಿದ್ದರು. ಜನಪರ, ಜೀವಪರ ಚಳವಳಿಗಳಲ್ಲಿ ಭಾಗಿಯಾಗುತ್ತಾ ಜನಸಾಮಾನ್ಯರ ಧ್ವನಿಯಾಗಿದ್ದರು. ರಾಜಕೀಯದ ಜೊತೆಗೆ ಸಾಮಾಜಿಕ ಸೇವೆಯೂ ಅನುಪಮವಾದುದು. ಭ್ರಷ್ಟಾಚಾರ ರಹಿತ ನಾಯಕರಾಗಿದ್ದ…