ದ. ಕ ಜಿಲ್ಲಾ ಪಂಚಾಯತ್ ಸರಕಾರಿ ಪ್ರೌಢ ಶಾಲೆ ಅತ್ತಾವರ, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಅತ್ತಾವರ ಮಂಗಳೂರು ದಕ್ಷಿಣ ವಲಯದ ವಾರ್ಷಿಕ ಕ್ರೀಡಾಕೂಟ

ದ. ಕ ಜಿಲ್ಲಾ ಪಂಚಾಯತ್ ಸರಕಾರಿ ಪ್ರೌಢ ಶಾಲೆ ಅತ್ತಾವರ, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಅತ್ತಾವರ ಮಂಗಳೂರು ದಕ್ಷಿಣ ವಲಯದ ವಾರ್ಷಿಕ ಕ್ರೀಡಾಕೂಟ ಶಾಲಾ ಮೈದಾನದಲ್ಲಿ ನಡೆಯಿತು.ಉದ್ಯಮಿ ಸತೀಶ್ ಕುಮಾರ್ ಕ್ರೀಡಾಕೂಟಕ್ಕೆ ಚಾಲನೆ ನೀಡಿದರು, ಬಳಿಕ ಮಾತನಾಡಿದ ಅವರು ಸರಕಾರಿ ಶಾಲೆಗಳಲ್ಲಿ ಧನಾತ್ಮಕ ಶಕ್ತಿ ಇದೆ ಆದ್ದರಿಂದ ಎಲ್ಲರೂ ಭಾಗವಹಿಸಿ ಸಹಕಾರ ನೀಡುತ್ತಾರೆ ಎಂದರು.ಶಿಕ್ಷಣ ಶಿಕ್ಷಕ ಮಹಾವಿದ್ಯಾಲಯದ ಪ್ರಾಂಶುಪಾಲ ಪುಷ್ಪಲತಾ ಮಾತನಾಡಿ ಪಾಠದ ಜೊತೆಗೆ ಕ್ರೀಡೆಯ ಮೂಲಕ ಮಕ್ಕಳ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸಬೇಕು ಆವಾಗ ಮಕ್ಕಳು…

Read More

ಡಿ. 14 ರಂದು ಕುದ್ಮುಲ್ ರಂಗರಾವ್ ಟೌನ್ ಹಾಲ್‌ನಲ್ಲಿ ಲತಾಕಿ ಆವಾಜ್ ಶೋಭಾ ಕೆ ಸಾಥ್ ಸಂಗೀತೋತ್ಸವ … !

ಮಂಗಳೂರು: ಖ್ಯಾತಗಾಯಕಿ ಲತಾ ಮಂಗೇಶ್ವರ್ ಅವರ ಹಿಂದಿ ಹಾಡುಗಳನ್ನೊಳಗೊಂಡ ಒಟ್ಟು 24 Solo ಮತ್ತು Duet ಹಾಡುಗಳನ್ನು ಆಯ್ಕೆ ಮಾಡಿ ಲತಾಕಿ ಆವಾಜ್ ಶೋಭಾ ಕೆ ಸಾಥ್ ಎಂಬ ಕಾರ್ಯಕ್ರಮವನ್ನು ಡಿ 14 ರಂದು ನಗರದ ಕುದ್ಮುಲ್ ರಂಗರಾವ್ ಟೌನ್ ಹಾಲ್‌ನಲ್ಲಿ ಆಯೋಜಿಸಲಾಗಿದೆ ಎಂದು ಕಾರ್ಯಕ್ರಮದ ಆಯೋಜಕರಾದ ಶೋಭಾ ಭಾಸ್ಕರನ್ ತಿಳಿಸಿದರು .ಅವರು ನಗರದ ಪತ್ರಿಕಾಭವನದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ , ಈ ಕಾರ್ಯಕ್ರಮದ ವಿಶೇಷವೇನೆಂದರೆ, ನಾನು ನಡೆಸುತ್ತಿರುವ ಸಿಂಚನಮೆಲೊಡಿಸ್ ತಂಡದ ಗಾಯಕರನ್ನೇ ಗಾಯನ ಸ್ಪರ್ಧೆಯಲ್ಲಿ ಧ್ವನಿಯಾಗಲಿದ್ದಾರೆ…

Read More

ಮಂಗಳೂರು ಬೋಳಾರ ಶ್ರೀ ಮಂಗಳಾದೇವಿ ದೇವಸ್ಥಾನ ಶ್ರೀ ಮೂಕಾಂಬಿಕಾ ಯಕ್ಷಗಾನ ತರಬೇತಿ ಕೇಂದ್ರ ಇದರ 12ನೇ ವಾರ್ಷಿಕೋತ್ಸವ

ಮಂಗಳೂರು ಬೋಳಾರ ಶ್ರೀ ಮಂಗಳಾದೇವಿ ದೇವಸ್ಥಾನ ಶ್ರೀ ಮೂಕಾಂಬಿಕಾ ಯಕ್ಷಗಾನ ತರಬೇತಿ ಕೇಂದ್ರ ಇದರ 12ನೇ ವಾರ್ಷಿಕೋತ್ಸವ ನಿರ್ದೇಶಕ ಜಯಕರ ಪಂಡಿತ್ ಬಜಾಲ್ ನಿರ್ದೇಶನದಲ್ಲಿ, ಸಭೆ ಸನ್ಮಾನ ಕಾರ್ಯಕ್ರಮ, ದಕ್ಷ ಯಜ್ಞ, ಗಿರಿಜಾ ಕಲ್ಯಾಣ, ಕಾರ್ತಿಕೇಯ ಕಲ್ಯಾಣ, ಯಕ್ಷಗಾನ ಪ್ರದರ್ಶನದೊಂದಿಗೆ ಶ್ರೀಮಂಗಳದೇವಿ ದೇವಸ್ಥಾನದ ವಠಾರದಲ್ಲಿ ನಡೆಯಿತು.ವೀರನಗರ ಪೆರ್ಲ ಶ್ರೀ ದುರ್ಗಾಪರಮೇಶ್ವರಿ ಸುಬ್ರಮಣ್ಯ ದೇವಸ್ಥಾನದ ಅಧ್ಯಕ್ಷ, ಉದ್ಯಮಿ, ಕೇಶವ ಪೂಜಾರಿ ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಯಕ್ಷಗಾನ ಕಲಾವಿದ, ಉದ್ಯಮಿ, ಬೋಳಾರ ಸುರಭಿ ಏಜೆನ್ಸಿ ಮಾಲಕ ಶಿವಪ್ರಸಾದ್ ಪ್ರಭು,…

Read More

ಉಪ್ಪಳಿಗೆಯಲ್ಲಿ ಕೋಮು ದ್ವೇಷ ಭಾಷಣ ಪ್ರಕರಣ; ಕಲ್ಲಡ್ಕ ಭಟ್ ಗೆ ಜಾಮೀನು

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಉಪ್ಪಳಿಗೆಯಲ್ಲಿ ಅಕ್ಟೋಬರ್ 20ರಂದು ನಡೆದಿದ್ದ ದೀಪೋತ್ಸವ ಕಾರ್ಯಕ್ರಮದಲ್ಲಿ ಕೋಮು ದ್ವೇಷದ ಮತ್ತು ಅಪಮಾನಕಾರಿಯಾಗಿ ಭಾಷಣ ಮಾಡಿರುವ ಆರೋಪದಡಿಯಲ್ಲಿ ದಾಖಲಾಗಿರುವ ಪ್ರಕರಣದಲ್ಲಿ ಹಿಂದೂ‌ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಅವರಿಗೆ ಜಾಮೀನು ಮಂಜೂರಾಗಿದೆ. 5ನೇ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯ ಪುತ್ತೂರು ಜಾಮೀನು ಮಂಜೂರು ಮಾಡಿದೆ. ಪ್ರಭಾಕರ್ ಭಟ್ ಪರವಾಗಿ ಹಿರಿಯ ವಕೀಲ ಮಹೇಶ್ ಕಜೆ ವಾದ ಮಂಡಿಸಿದರು. ಪುತ್ತೂರು ತಾಲೂಕಿನ ಉಪ್ಪಳಿಗೆ ಎಂಬಲ್ಲಿ ಅ.22ರಂದು ನಡೆದ ದೀಪೋತ್ಸವ ಮತ್ತು ಗೋಪೂಜೆಯಲ್ಲಿ…

Read More

ಮಂಗಳೂರು ಏರ್‌ಪೋರ್ಟ್‌ಗೆ ತುರ್ತಾಗಿ “ಪಾಯಿಂಟ್ ಆಫ್ ಕಾಲ್ʼ ಸ್ಥಾನಮಾನ ನೀಡಲು ನಿಯಮ 377ರಡಿಯಲ್ಲಿ ಸಂಸದ ಚೌಟ ಲೋಕಸಭೆಯಲ್ಲಿ ಒತ್ತಾಯ

ಮಂಗಳೂರು: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತುರ್ತಾಗಿ “ಪಾಯಿಂಟ್ ಆಫ್ ಕಾಲ್ (PoC)” ಸ್ಥಾನ-ಮಾನ ನೀಡುವ ಅಗತ್ಯತೆಯನ್ನು ದಕ್ಷಿಣ ಕನ್ನಡ ಸಂಸದ ಬ್ರಿಜೇಶ್ ಚೌಟ ಅವರು ಇಂದು ಸಂಸತ್ತಿನಲ್ಲಿ ಪ್ರಸ್ತಾಪಿಸಿದ್ದಾರೆ. ಲೋಕಸಭೆಯಲ್ಲಿ ನಿಯಮ 377ರಡಿಯಲ್ಲಿ ಈ ವಿಷಯದ ಬಗ್ಗೆ ಧ್ವನಿಯೆತ್ತಿರುವ ಸಂಸದ ಕ್ಯಾ. ಚೌಟ ಅವರು, ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು ಕರಾವಳಿ ಕರ್ನಾಟಕ ಮತ್ತು ನೆರೆಯ ಕೇರಳಕ್ಕೆ ಪ್ರಮುಖ ವಾಯುಯಾನ ಹೆಬ್ಬಾಗಿಲಾಗಿದೆ. ಈ ಏರ್‌ಪೋರ್ಟ್‌ 2024-25ರ ಅವಧಿಯಲ್ಲಿ 7.15 ಲಕ್ಷ ಅಂತಾರಾಷ್ಟ್ರೀಯ ಪ್ರಯಾಣಿಕರು ಸೇರಿದಂತೆ ಒಟ್ಟು…

Read More

ಡಿಸೆಂಬರ್ .12ರಂದು ‘ಪಿಲಿಪಂಜ’ ತುಳುಚಿತ್ರ ಕರಾವಳಿ ಜಿಲ್ಲೆಯಾದ್ಯಂತ ಬಿಡುಗಡೆ

ಉಡುಪಿ:ಯಸ್ ಬಿ ಗ್ರೂಪ್ ಅರ್ಪಿಸುವ ಶಿಯಾನ ಪ್ರೊಡಕ್ಷನ್ ಹೌಸ್ ಬ್ಯಾನರ್ ನಡಿ ತಯಾರಾದ ಪ್ರತೀಕ್ ಯು ಪೂಜಾರಿ ಕಾವೂರು ನಿರ್ಮಾಣದ ‘ಪಿಲಿಪಂಜ’ ತುಳು ಸಿನಿಮಾ ಡಿಸೆಂಬರ್ 12ರಂದು ಕರಾವಳಿ ಜಿಲ್ಲೆಯಾದ್ಯಂತ ತೆರೆಕಾಣಲಿದೆ ಎಂದು ಚಿತ್ರದ ನಿರ್ದೇಶಕ ಭರತ್ ಶೆಟ್ಟಿ ತಿಳಿಸಿದರು.ಈ ಕುರಿತು ಉಡುಪಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಿಲಿಪಂಜ ಸಿನಿಮಾ ಮಂಗಳೂರಿನಲ್ಲಿ ಪಿವಿಆರ್, ಸಿನಿಪೊಲಿಸ್, ಭಾರತ ಸಿನಿಮಾನ್, ಸುರತ್ಕಲ್ ನಲ್ಲಿ ಸಿನಿಗ್ಯಾಲಕ್ಸಿ, ಪಡುಬಿದ್ರೆಯಲ್ಲಿ ಭಾರತ ಸಿನಿಮಾಸ್, ಉಡುಪಿಯಲ್ಲಿ ಕಲ್ಪನಾ, ಭಾರತ್ ಸಿನಿಮಾಸ್, ಮಣಿಪಾಲದಲ್ಲಿ ಭಾರತ ಸಿನಿಮಾಸ್,…

Read More

ಅಕ್ರಮವಾಗಿ ವಾಸವಿದ್ದ 10 ಮಂದಿ ಬಾಂಗ್ಲಾ ಪ್ರಜೆಗಳಿಗೆ 2 ವರ್ಷ ಶಿಕ್ಷೆ!

ಉಡುಪಿ:ಅಕ್ರಮವಾಗಿ ಭಾರತಕ್ಕೆ ಬಂದು ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನೆಲೆಸಿದ್ದ 10 ಮಂದಿ ಬಾಂಗ್ಲಾ ವಲಸಿಗರಿಗೆ ಉಡುಪಿಯ ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಸಿಜೆಎಂ ನ್ಯಾಯಾಲಯ ಡಿ.8ರಂದು ಶಿಕ್ಷೆ ವಿಧಿಸಿ ಆದೇಶ ನೀಡಿದೆ.ಬಾಂಗ್ಲಾ ದೇಶದ ಪ್ರಜೆಗಳಾದ ಹಕೀಮ್ ಆಲಿ, ಸುಜೋನ್ ಎಸ್.ಕೆ ಯಾನೆ ಫಾರೂಕ್, ಇಸ್ಮಾಯಿಲ್ ಎಸ್.ಕೆ., ಮುಹಮ್ಮದ್ ಇಸ್ಮಾಯಿಲ್ ಹಾಕ್, ಕರೀಮ್ ಎಸ್.ಕೆ ಯಾನೆ ಅಬ್ದುಲ್ ಕರೀಮ್, ಸಲಾಂ ಎಸ್.ಕೆ ಯಾನೆ ಅಬ್ದುಲ್ ಅಜೀಜ್, ರಾಜಿಕುಲ್ ಎಸ್.ಕೆ., ಮುಹಮ್ಮದ್ ಸೋಜಿಬ್ ಯಾನೆ ಎಂ.ಡಿ.ಅಲ್ಲಾಂ ಅಲಿ,…

Read More

ಸಾಮಾಜಿಕ ಮಾದ್ಯಮದಲ್ಲಿ ಮತ್ತೆ ‘ಪ್ರತೀಕಾರ’ ಪೋಸ್ಟ್‌ಗಳ ಅಬ್ಬರ … !?

ಮಂಗಳೂರು :ಪೊಲೀಸರ ಕಟ್ಟುನಿಟ್ಟಿನ ಕ್ರಮದ ಬಳಿಕ ಸೋಷಿಯಲ್ ಮೀಡಿಯಾದಲ್ಲಿ ಗಲಭೆ, ಹಿಂಸೆಗೆ ಪ್ರೇರಣೆ ನೀಡುವ ಪೋಸ್ಟ್‌ಗಳು ಕಡಿಮೆಯಾಗಿದ್ದವು. ಇದೀಗ ಮತ್ತೆ ಸೋಷಿಯಲ್ ಮೀಡಿಯಾದಲ್ಲಿ ಇಂತಹಾ ಪೋಸ್ಟ್‌ಗಳು ಕಾಣಿಸಿದ್ದು ಆತಂಕಕ್ಕೆ ಕಾರಣವಾಗಿದೆ.ಸಾಮಾಜಿಕ ಜಾಲತಾಣದಲ್ಲಿ ಕಲಾಯಿ ಅಶ್ರಫ್ ಹತ್ಯೆಗೆ ಪ್ರತೀಕಾರದ ಬಗ್ಗೆ ಸಂದೇಶಗಳು ಓಡಾಡುತ್ತಿದ್ದು, Target 900, Team Target Boys, Immu Bai ಇನ್ನಾ ಗ್ರಾಮ್ ಪೇಜ್‌ಗಳಲ್ಲಿ ಭಯ ಹುಟ್ಟಿಸುತ್ತಿರುವ ರೀತಿಯಲ್ಲಿ ಪೋಸ್ಟ್ ಮಾಡಲಾಗಿದೆ. 2017ರಲ್ಲಿ ನಡೆದ ಎಸ್‌ಡಿಪಿಐ ಮುಖಂಡ ಕಲಾಯಿ ಅಶ್ರಫ್ ಹತ್ಯೆ ಪ್ರಮುಖ ಆರೋಪಿ, ಹಿಂದೂ…

Read More

ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಉರುಳಿಬಿದ್ದ ಕಾರು: ಮಂಗಳೂರಿನ ಗೌಜಿ ಇವೆಂಟ್ಸ್ ಮಾಲೀಕ ಅಭಿಷೇಕ್ ದುರಂತ ಅಂತ್ಯ .. !

ಉಡುಪಿ:ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ತೋಟಕ್ಕೆ ಉರುಳಿಬಿದ್ದ ಪರಿಣಾಮ ಉದ್ಯಮಿಯೋರ್ವರು ದಾರುಣವಾಗಿ ಮೃತಪಟ್ಟ ಘಟನೆ ಪಡುಬಿದ್ರಿ ರಾ.ಹೆ.66 ರಲ್ಲಿ ಡಿ.10ರಂದು ತಡರಾತ್ರಿ 2 ಗಂಟೆಯ ಸುಮಾರಿಗೆ ಎರ್ಮಾಳು ತೆಂಕ ಸೇತುವೆ ಬಳಿ ನಡೆದಿದೆ.ಮೃತರನ್ನು ಮಂಗಳೂರಿನ ಗೌಜಿ ಇವೆಂಟ್ಸ್ ಮಾಲಿಕ ಅಭಿಷೇಕ್ ಎಂದು ಗುರುತಿಸಲಾಗಿದೆ. ಉಡುಪಿಯಿಂದ ಮಂಗಳೂರು ಕಡೆಗೆ ಸಾಗುತ್ತಿದ್ದ ಕಾರನ್ನು ಅವರೇ ಚಲಾಯಿಸುತ್ತಿದ್ದು, ಸಹಪ್ರಯಾಣಿಕರು ಯಾರೂ ಇರಲಿಲ್ಲ. ಹಿಂದಿನ ವಾಹನಗಳಲ್ಲಿ ಅವರ ಗೆಳೆಯರು ಇದ್ದರು ಎಂದು ತಿಳಿದು ಬಂದಿದೆ. ಡಿಕ್ಕಿಯ ರಭಸಕ್ಕೆ…

Read More

ರಾಜಕೀಯ ವ್ಯಕ್ತಿಗಳಿಗೆ ಸಿಗುವ ಸೌಲಭ್ಯ , ಸೈನಿಕರಿಗೆ ಏಕೆ ಇಲ್ಲ… ? ,ಮಾಜಿ ಸೈನಿಕರಾದ ಸೆಬಾಸ್ಟೀನ್ ಪ್ರಶ್ನೆ .. ?

ಮಂಗಳೂರು: ನಮ್ಮ ಹೆಚ್ಚಿನ ಯವ್ವನವನ್ನು ಗಡಿಯಲ್ಲೇ ಕಳೆಯುತ್ತೇವೆ ಅಲ್ಲಿಂದ ನಿವೃತ್ತಿ ಪಡೆದು ಇಲ್ಲಿಗೆ ಬರುವಾಗ ಯಾವುದೇ ರೀತಿಯ ಮರ್ಯಾದೆ ಸಿಗುವುದಿಲ್ಲ . ಇದು ತುಂಬಾನೇ ನೋವು ಉಂಟು ಮಾಡುತ್ತದೆ . ಸರಕಾರವು ಯಾವುದೇ ಸವಲತ್ತನ್ನು ನೀಡುವುದಿಲ್ಲ ಎಂದುಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘ ಕಡಬ ತಾಲ್ಲೂಕು ಘಟಕದ ಅಧ್ಯಕ್ಷರು ,ಮಾಜಿ ಸೈನಿಕರಾದ ಸೆಬಾಸ್ಟೀನ್ ತಮ್ಮ ಅಳಲನ್ನು ತೋಡಿಕೊಂಡರು . ಅವರು ನಗರದ ಪತ್ರಿಕಾಭವನದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ , ಸಂವಿಧಾನ ಹೇಳುತ್ತದೆ ಸೈನಿಕರಿಗೆ ಗೌರವ, ಅನುಕೂಲವನ್ನು ನೀಡಬೇಕೆಂದು…

Read More
error: Content is protected !!