ಮಂಗಳೂರಿನ ರಥಬೀದಿಯ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ 25 ಲಕ್ಷ ರೂ ವೆಚ್ಚದ ವಿವೇಕ ಕೊಠಡಿಯ ಗುದ್ದಲಿ ಪೂಜೆ ಹಾಗೂ ನೂತನ ವಿವೇಕ ಕೊಠಡಿಯ ಉದ್ಘಾಟನೆ:

ಮಂಗಳೂರಿನ ರಥಬೀದಿಯ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ 25 ಲಕ್ಷ ರೂ ವೆಚ್ಚದ ವಿವೇಕ ಕೊಠಡಿಯ ಗುದ್ದಲಿ ಪೂಜೆ ಹಾಗೂ ನೂತನ ವಿವೇಕ ಕೊಠಡಿಯ ಉದ್ಘಾಟನೆಯನ್ನು ಶಾಸಕ ವೇದವ್ಯಾಸ ಕಾಮತ್ ರವರು ನೆರವೇರಿಸಿದರು. ನಂತರ ಮಾತನಾಡಿದ ಶಾಸಕರು, 2022-23ನೇ ಸಾಲಿನ ವಿವೇಕ ಯೋಜನೆಯ ಕೊಠಡಿಗಳು ಇದಾಗಿದೆ. ಈ ಕಾಲೇಜಿನ ವಿಜ್ಞಾನ ಪ್ರಯೋಗ ಶಾಲೆಯ ಉನ್ನತೀಕರಣಕ್ಕೆ ಬೇಡಿಕೆಯಿದ್ದು, ಎಂ.ಆರ್.ಪಿ.ಎಲ್, ಎಂ.ಸಿ.ಎಫ್ ನಂತಹ ಕಂಪನಿಗಳೊಂದಿಗೆ ಮಾತುಕತೆ ನಡೆಸಿ ಸಿಎಸ್ಆರ್ ಅನುದಾನದ ಮೂಲಕ ಬೇಡಿಕೆಯನ್ನು ಪೂರ್ಣ ಗೊಳಿಸಲು ಪ್ರಯತ್ನಿಸಲಾಗುವುದು. ಇದೇ ವೇಳೆ…

Read More

ಅರಂತೋಡು ಘನ ತ್ಯಾಜ್ಯ ಘಟಕ ಮರುಸ್ಥಾಪನೆಗೆ ಶಾಸಕ ಕಿಶೋರ್ ಕುಮಾರ್ ಪುತ್ತೂರು ನೆರವು – ₹5 ಲಕ್ಷ ಅನುದಾನ ಮಂಜೂರು

ಮಂಗಳೂರು : ಆಕಸ್ಮಿಕ ಬೆಂಕಿಯಿಂದ ಸಂಪೂರ್ಣವಾಗಿ ಹಾನಿಗೊಳಗಾದ ಸುಳ್ಯದ ಅರಂತೋಡು ಘನ ತ್ಯಾಜ್ಯ ನಿರ್ವಹಣಾ ಘಟಕದ ಮರುಸ್ಥಾಪನೆಗೆ ವಿಧಾನ ಪರಿಷತ್ ಸದಸ್ಯ ಶ್ರೀ ಕಿಶೋರ್ ಕುಮಾರ್ ಪುತ್ತೂರು ಅವರು ತಮ್ಮ ಶಾಸಕರ ಅಭಿವೃದ್ಧಿ ನಿಧಿಯ ಅನುದಾನದಿಂದ ₹5 ಲಕ್ಷ ಹಣವನ್ನು ಮಂಜೂರು ಮಾಡಿದ್ದಾರೆ.ಈ ಕುರಿತು ಜಿಲ್ಲಾ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಯನ್ನು ಭೇಟಿ ಮಾಡಿದ ಶಾಸಕರು, ಈ ಘಟಕದ ಪುನರ್ ನಿರ್ಮಾಣಕ್ಕೆ ಬೇಕಾದ ಎಲ್ಲಾ ಕ್ರಮಗಳನ್ನು ತಕ್ಷಣ ಕೈಗೊಳ್ಳಲು ಸೂಚನೆ ನೀಡಿದರು. ಈ ಸಂದರ್ಭದಲ್ಲಿ ಸಂಸದ ಶ್ರೀ ಬೃಜೇಶ್…

Read More

ಅನಾಹುತಕ್ಕೆ ಆಹ್ವಾನಿಸುತ್ತಿರುವ ಮಂಗಳೂರು ಸೆಂಟ್ರಲ್ ರೈಲ್ವೇ ನಿಲ್ದಾಣಕ್ಕೆ ಹೋಗುವ ಫೂಟ್ ಪಾತ್

ಮಂಗಳೂರು : ಮಂಗಳೂರು ಸೆಂಟ್ರಲ್ ರೈಲ್ವೇ ನಿಲ್ದಾಣಕ್ಕೆ ಹೋಗುವ ಫೂಟ್ ಪಾತ್ ರಸ್ತೆಯು ಜರಿದು ಗುಂಡಿಯಾಗಿದ್ದು ಪಾದಚಾರಿಗಳ ಅನಾಹುತಕ್ಕೆ ಆಸ್ಪದವನ್ನು ನೀಡುವಂತಿದೆ. ದಿನವೂ ಕಿಕ್ಕಿರಿದು ನೆರೆದು ಸಂಚರಿಸುವ ರಸ್ತೆಯು ಮಳೆಯಿಂದ ಹಾನಿಯಾಗಿದೆ. ಮಾತ್ರವಲ್ಲದೆ ಈ ಮೊದಲೇ ಅಲ್ಲಿ ಇದ್ದ ಡ್ರೈನೇಜ್ ಗುಂಡಿಯು ಬಾಯಿ ತೆರೆದಿದ್ದು ಅಪಾಯವನ್ನು ಹೆಚ್ಚಿಸುತ್ತಿದೆ . ಸ್ಥಳೀಯರು ಹೇಳುವಂತೆ ಈ ಗುಂಡಿಯಲ್ಲಿ ರೈಲ್ವೆ ನಿಲ್ದಾಣಕ್ಕೆ ಸಂಚರಿಸುತ್ತಿದ್ದ ವ್ಯಕ್ತಿಯೋರ್ವ ಬಿದ್ದ ಘಟನೆ ಕೆಲವೇ ದಿನಗಳ ಹಿಂದೆ ನಡೆದಿದೆ. ಅಪಾಯ ಕಣ್ಣೆದುರಿಗೇ ಇದ್ದರೂ ಅಧಿಕಾರಿಗಳು ಯಾವುದೇ ಕ್ರಮವನ್ನು…

Read More

ಕುಂದಾಪುರ ಸರಕಾರಿ ಆಸ್ಪತ್ರೆಯಲ್ಲಿ ವಿಶೇಷಚೇತನರ ಸಮಸ್ಯೆ ಪರಿಹಾರಕ್ಕೆ ಶಾಸಕ ಮಂಜುನಾಥ ಭಂಡಾರಿ ಒತ್ತಾಯ!

ಕುಂದಾಪುರ: ಕುಂದಾಪುರ ಸರಕಾರಿ ಉಪವಿಭಾಗ ಆಸ್ಪತ್ರೆಯಲ್ಲಿ ವಿಶೇಷಚೇತನರ ಪ್ರಮಾಣಪತ್ರ ಮಾಡಿಸಲು ಕುಂದಾಪುರ ಮತ್ತು ಬೈಂದೂರಿನ ಬೇರೆ ಬೇರೆ ಕಡೆಗಳಿಂದ ಬಂದಿದ್ದ ವಿಶೇಷಚೇತನರು ಪ್ರಮುಖ ಶಸ್ತ್ರಚಿಕಿತ್ಸಕ ವೈದ್ಯರು ಲಭ್ಯವಾಗದ ಕಾರಣ ಪ್ರಮಾಣಪತ್ರ ಸಿಗದೆ ನಿರಾಶರಾಗಿ ವಾಪಸ್ ಆದ ಘಟನೆ ಇತ್ತೀಚಿಗೆ ನಡೆದಿದ್ದು ಕೂಡಲೇ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸಕ ವೈದ್ಯರನ್ನು ನೇಮಿಸುವ ಮೂಲಕ ಸಮಸ್ಯೆ ಪರಿಹರಿಸಬೇಕು ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ದಿನೇಶ್ ಗುಂಡೂರಾವ್ ಅವರಿಗೆ ವಿಧಾನ ಪರಿಷತ್ ಶಾಸಕ ಮಂಜುನಾಥ ಭಂಡಾರಿ ಅವರು ಪತ್ರಮುಖೇನ ಒತ್ತಾಯಿಸಿದ್ದಾರೆ….

Read More

ಪೊಲೀಸರ ಮಿಂಚಿನ ಕಾರ್ಯಕ್ಕೆ ತಗಲು ಹಾಕಿಕೊಂಡ ಮಾಸ್ಟರ್ ಮೈಂಡ್ ರೋಹನ್ ಸಾಲ್ಡಾನ ಬಂಧನ

ಮಂಗಳೂರು: ಸಾಲ ಕೊಡುವ ಆಮಿಷವೊಡ್ಡಿ ಶ್ರೀಮಂತ ವ್ಯಕ್ತಿಗಳು ಮತ್ತು ಉದ್ಯಮಿಗಳಿಂದ 200 ಕೋಟಿಗೂ ಅಧಿಕ ಹಣವನ್ನು ವಂಚಿಸಿದ ಆರೋಪಿ ರೋಹನ್ ಸಲ್ಡಾನಾ (45) ಎಂಬಾತನನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಗುರುವಾರ ರಾತ್ರಿ ತನ್ನ ಐಷಾರಾಮಿ ಬಂಗಲೆಯಲ್ಲಿ ವಿದೇಶಿ ಯುವತಿಯರೊಂದಿಗೆ ಪಾರ್ಟಿ ಮಾಡುತ್ತಿದ್ದಾಗ ಪೊಲೀಸರು ಆತನನ್ನು ವಶಕ್ಕೆ ಪಡೆದಿದ್ದಾರೆ. ಆರೋಪಿಯ ಬಂಗಲೆಯಲ್ಲಿ ಗುಪ್ತ ಕೊಠಡಿ (ಹೈಡ್ ಔಟ್ ರೂಮ್) ಇರುವುದು ಕೂಡ ಪತ್ತೆಯಾಗಿದೆ. ರೋಹನ್ ಸಲ್ಡಾನಾ ಶ್ರೀಮಂತ ವ್ಯಕ್ತಿಗಳು ಮತ್ತು ಉದ್ಯಮಿಗಳನ್ನು ಗುರಿಯಾಗಿಸಿಕೊಂಡು, ಭೂ ವ್ಯವಹಾರ ಮತ್ತು ಉದ್ಯಮದಲ್ಲಿ…

Read More

ಮಂಗಳೂರಿನ ಶಿಕ್ಷಣ ಸಂಸ್ಥೆಗಳಲ್ಲಿ ಡ್ರಗ್ಸ್ ವ್ಯಾಪಕ , ರಾಜಕೀಯ ನಾಯಕರು ಶಾಮೀಲಾಗಿರುವ ಸಾಧ್ಯತೆ .ಪತ್ರಿಕಾಗೋಷ್ಠಿಯಲ್ಲಿ ಆತಂಕ ವ್ಯಕ್ತಪಡಿಸಿದ ಶಾಸಕ ವೈ ಭರತ್ ಶೆಟ್ಟಿ :

ಶಿಕ್ಷಣ ಕಾಶಿ ಮಂಗಳೂರಿನಲ್ಲಿ ಸಾಕಷ್ಟು ವಿದ್ಯಾ ಕೇಂದ್ರಗಳಿವೆ.ಆದರೆ ಈ ಭಾಗದಲ್ಲಿನ ಡ್ರಗ್ಸ್ ಹಾವಳಿಗೆ ಅನೇಕ ಯುವಕರು ಬಲಿಯಾಗುತ್ತಿದ್ದಾರೆ ಇದನ್ನು ಸರಕಾರ ತಡೆಯುವಲ್ಲಿ ವಿಫಲವಾಗಿದೆ. ಈ ಭಾಗಗಳಿಗೆ ತೆಲಂಗಾಣ,ಮಹಾರಾಷ್ಟ್ರ,ಕೇರಳ ಭಾಗದಿಂದ ಡ್ರಗ್ಸ್ ಪೂರೈಕೆಯಾಗುತ್ತಿದೆ.ಕರ್ನಾಟಕ ಸರಕಾರದಿಂದ ಡ್ರಗ್ಸ್ ಜಾಲವನ್ನು ಸರಿಯಾಗಿ ಬೇಧಿಸುವ ಪ್ರಯತ್ನಗಳು ನಡೆಯುತ್ತಿಲ್ಲ ಜೊತೆಗೆ ರಾಜಕೀಯ ನಾಯಕರು ಇದರಲ್ಲಿ ಶಾಮೀಲಾಗಿರುವ ಸಾಧ್ಯತೆಗಳು ಆತಂಕಕಾರಿ ವಿಷವಾಗಿದೆ ಎಂದು ಜಿಲ್ಲಾ ಬಿಜೆಪಿ ಕಛೇರಿಯಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಂಗಳೂರು ಉತ್ತರ ವಲಯದ ಶಾಸಕರಾದ ವೈ ಭರತ್ ಶೆಟ್ಟಿ ಆತಂಕ ವ್ಯಕ್ತಪಡಿಸಿದರು . ಸುದ್ದಿಗೋಷ್ಠಿಯಲ್ಲಿ…

Read More

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮರಳುಗಾರಿಕೆ ಮತ್ತು ಕೆಂಪು ಕಲ್ಲು ಸಮಸ್ಯೆಗಳಿಗೆ ಕೂಡಲೇ ಪರಿಹಾರ ಕಾಣಬೇಕು: ಮಾಜಿ ಸಚಿವ ರಾಮನಾಥ್ ರೈ.

ಮಂಗಳೂರು :ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮರಳುಗಾರಿಕೆ ಮತ್ತು ಕೆಂಪು ಕಲ್ಲು ಸಮಸ್ಯೆಗಳಿಗೆ ಕೂಡಲೇ ಪರಿಹಾರ ಕಾಣಬೇಕೆಂದು ಆಗ್ರಹಿಸಿ ಮಾಜಿ ಸಚಿವರಾದ ರಾಮನಾಥ್ ರೈ ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು .ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಕೆಂಪು ಕಲ್ಲು ಮತ್ತು ಮರಳಿನ ಲಭ್ಯತೆ ಆಗುತ್ತಾ ಇಲ್ಲ ಎನ್ನುವ ಚರ್ಚೆ ಪ್ರಸ್ತುತ ಇದೆ. ಬಿಜೆಪಿ ಚುನಾಯಿತ ಪ್ರತಿನಿಧಿಗಳು ಸಮಸ್ಯೆಗೆ ಕಾಂಗ್ರೆಸ್ ಸರ್ಕಾರ ಕಾರಣ ಎಂದು ಆರೋಪ ಮಾಡುತ್ತಿದ್ದಾರೆ.ಆದರೆ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬರುವ ಮೊದಲೇ ಸಮಸ್ಯೆ ಇತ್ತು. ಬಿಜೆಪಿ ಸರ್ಕಾರ…

Read More

ವಾತ್ಸಲ್ಯ ಛಾಯ ಟ್ರಸ್ಟ್ ಹಾಗೂ ನಮ್ಮ ಮೀಡಿಯಾ 24×7 ನ ‘ಗೋಲ್ಡನ್ ವಾಯ್ಸ್ ಒಫ್ ನಮ್ಮ ಮೀಡಿಯಾ 2025’ ಗೆ ಅದ್ಧೂರಿಯ ಚಾಲನೆ

ಮಂಗಳೂರು : ಮಂಗಳೂರಿನ ವಾತ್ಸಲ್ಯ ಛಾಯ ಟ್ರಸ್ಟ್ ಹಿರಿಯ ನಾಗರಿಕರ ಹಗಲು ಯೋಗಕ್ಷೇಮದ ಆಶ್ರಯದಲ್ಲಿ ಹಾಗೂ ಕರಾವಳಿಯ ನಾಡಿ ಮಿಡಿತ ಜನತೆಯ ಧ್ವನಿ ಯಾಗಿರುವ ನಮ್ಮ ಮೀಡಿಯಾ 24×7 ನ ಸಾರಥ್ಯದಲ್ಲಿ 60 ವರ್ಷಕ್ಕಿಂತ ಮೇಲ್ಪಟ್ಟ ಹಿರಿಯ ನಾಗರಿಕರ ಸಂಗೀತ ರಿಯಾಲಿಟಿ ಶೋ ‘ಗೋಲ್ಡನ್ ವಾಯ್ಸ್ ಒಫ್ ನಮ್ಮ ಮೀಡಿಯಾ 2025’ ರ ಪ್ರಥಮ ಆಡಿಷನ್ ಬಲ್ಲಾಳ್ ಭಾಗ್ ನ ವಾತ್ಸಲ್ಯ ಛಾಯಾ ಟ್ರಸ್ಟ್ ನ ಸಭಾಂಗಣದಲ್ಲಿ ನಡೆಯಿತು.ಮೊಗವೀರ ಮಹಾಜನ ಸಭಾ ದ ಉಪಾಧ್ಯಕ್ಷ ಮೋಹನ್ ಬೆಂಗ್ರೆ…

Read More

ಲಕುಮಿ ತಂಡದ ‘ಆಂಟಿ & ಅಂಕಲ್’ ಹೊಚ್ಚ ಹೊಸ ನಾಟಕಕ್ಕೆ ಮಂಗಳೂರಿನ ಶರವು ಕ್ಷೇತ್ರದಲ್ಲಿ ಮುಹೂರ್ತ

ಮಂಜೇಶ್ವರ: ಕಿಶೋರ್ ಡಿ ಶೆಟ್ಟಿ ನಿರ್ಮಾಣ ಮತ್ತು ನಿರ್ದೇಶನದ ಅರವಿಂದ ಬೋಳಾರ್ ವಿಭಿನ್ನ ಅಭಿನಯದ ಲಕುಮಿ ತಂಡದ ಕುಸಲ್ದ ಕಲಾವಿದೆರ್ ಅಭಿನಯಿಸುವ ಹೊಚ್ಚ ಹೊಸ ತುಳು ಹಾಸ್ಯಮಯ ನಾಟಕ ‘ಆಂಟಿ & ಅಂಕಲ್’ ಇಂದು ಮಂಗಳೂರಿನ ಶರವು ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ಶುಭ ಮುಹೂರ್ತಗೊಂಡಿತು. ವಸಂತ ಅಮೀನ್ ಸಾಹಿತ್ಯದ ತುಳಸೀದಾಸ್ ಮಂಜೇಶ್ವರ ರಚಿಸಿದ ಈ ನಾಟಕಕ್ಕೆ ನಾಗಾರ್ಜುನ್ ಮಂಗಲ್ಪಾಡಿ ಸಂಗೀತ ಅಳವಡಿಸಿದ್ದಾರೆ. ನವೀನ ಶೆಟ್ಟಿ ಅಳಕೆ ಸಲಹೆ ನೀಡಿದ ಈ ನಾಟಕವನ್ನು ಗಿರೀಶ್ ಶೆಟ್ಟಿ ನಿರ್ವಹಣೆ ಮಾಡಿದ್ದಾರೆ.

Read More

ಡಿವೈಡರ್‌ನಿಂದ ಹೊರಗೆ ಬಂದು ನಿಂತಿದ್ದ ಕಬ್ಬಿಣದ ರಾಡ್‌ಗೆ ಕಾರು ನೇರವಾಗಿ ಡಿಕ್ಕಿ-ಅಪಘಾತದಲ್ಲಿ ಇಬ್ಬರು ಗಂಭೀರ

ಮಂಜೇಶ್ವರ : ಡಿವೈಡರ್‌ನಿಂದ ಹೊರಗೆ ಬಂದು ನಿಂತಿದ್ದ ಕಬ್ಬಿಣದ ರಾಡ್‌ಗೆ ಕಾರು ನೇರವಾಗಿ ಡಿಕ್ಕಿಯಾದ ಪರಿಣಾಮ, ಪ್ರಯಾಣಿಕನ ಕೈಗೆ ಕಬ್ಬಿಣದ ರಾಡ್ ತೂರಿ ಸಂಭವಿಸಿದ ಅಪಘಾತದಲ್ಲಿ ಇಬ್ಬರು ಗಂಭೀರ ಗಾಯ ಗೊಂಡಿದ್ದಾರೆ. ಗಾಯಗೊಂಡ ಪಳ್ಳಿಕರ ಮೌವ್ವಲೆಯ ಶೆಬಾಬ್ (24), ಫಯಾದ್ (28) ಎಂಬವರನ್ನು ಕುಂಬಳೆ ಜಿಲ್ಲಾ ಸಹಕಾರ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಮಂಗಳವಾರ ಬೆಳಿಗ್ಗೆ ಸುಮಾರು 7.30ರ ಸುಮಾರಿಗೆ ಕುಂಬಳೆ ಜುಮಾ ಮಸೀದಿ ಬಳಿ ಸಂಭವಿಸಿದೆ. ಪಳ್ಳಿಕೆರೆಯಿಂದ ಮಂಗಳೂರು ಕಡೆಗೆ ಹೋಗುತ್ತಿದ್ದ ಕಾರು ಡಿವೈಡರ್‌ನ ಹೊರಗೆ ಬಂದು ನಿಂತಿದ್ದ…

Read More
error: Content is protected !!