‘ತರವಾಡು ‘ತುಳು ಸಿನಿಮಾದ ಟೀಸರ್ ಬಿಡುಗಡೆ

ಮಂಗಳೂರಿನ ಭಾರತ್ ಮಾಲ್ ನ ಭಾರತ್ ಸಿನಿಮಾಸ್ ನಲ್ಲಿ ಉಮೇಶ್ ಪಡುಬಿದ್ರೆ ನಿರ್ಮಾಣ ದ ಶರತ್ ಶೆಟ್ಟಿ ನಿರ್ದೇಶನ ದಲ್ಲಿ ಶೋಭಾ ಶೆಟ್ಟಿ ಬ್ಯಾನರ್ ಹಾಗೂ ಪ್ರೊಡಕ್ಷನ್ ನಲ್ಲಿ ನಿರ್ಮಾಣ ವಾದ ‘ತರವಾಡು ‘ತುಳು ಸಿನಿಮಾದ ಟೀಸರ್ ಜೂನ್ 29ರಂದು ಮದ್ಯಾಹ್ನ 2 ಗಂಟೆಗೆ ಬಿಡುಗಡೆ ಮಾಡಲಾಯಿತು. ಇನ್ನು ಈ ಚಿತ್ರದಲ್ಲಿ ಶೋಧನ್ ಶೆಟ್ಟಿ ನಾಯಕ ನಟನಾಗಿ ಅಭಿನಯಿಸಿದ್ದಾರೆ. ಇನ್ನು ಈ ಟೀಸರ್ ಬಿಡುಗಡೆಗೆ ಮುಖ್ಯ ಅತಿಥಿಗಳಾಗಿ ಸಂತೋಷ್ ಶೆಟ್ಟಿ,ಡಿ.ಕೆ ಶೆಟ್ಟಿ, ವಿಠ್ಠಲ್ ಶೆಟ್ಟಿ,ವಿಜಯ ಕುಮಾರ್ ಕೊಡಿಯಾಲಬೈಲು,ಪ್ರಕಾಶ್…

Read More

“ಬಾಲಿಕಾಶ್ರಮದ ಮಕ್ಕಳ ಜೊತೆ ಒಂದು ಸಂಜೆ “

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಸಂಸ್ಥೆ ಸ್ವಸ್ತಿಕ್ ಕಲಾಕೇಂದ್ರ ಜಲಿಗುಡ್ಡೆ ಇದರ ಹಾಗೂ ಬಾಲಿಕಾಶ್ರಮ ಕಂಕನಾಡಿ ಇಲ್ಲಿನ ಮಕ್ಕಳಿಗಾಗಿ“ಬಾಲಿಕಾಶ್ರಮದ ಮಕ್ಕಳ ಜೊತೆ ಒಂದು ಸಂಜೆ ” ಎಂಬ ಸಮಯೋಜಿತ ಕಾರ್ಯಕ್ರಮವನ್ನು ತಾ. 22.6.2025 ನೇ ರವಿವಾರಬಾಲಿಕಾಶ್ರಮದ ಸಭಾಂಗಣದಲ್ಲಿ ಆಯೋಜಿಸಲಾಯಿತು. ಪ್ರಾಥಮಿಕ ಶಾಲಾ ಬಾಲಕಿಯರಿಗಾಗಿ ರಾಮಾಯಣ ಮತ್ತು ಮಹಾಭಾರತ ಅಲ್ಲದೆ ಪುರಾಣಗಳ ಬಗ್ಗೆ ಸುಮಾರು 50 ಕ್ಕೂ ಅಧಿಕ ರಸಪ್ರಶ್ಣೆ ಯನ್ನು ಕೇಳಲಾಗಿ ಸಮರ್ಪಕವಾಗಿ ಮಕ್ಕಳು ಪ್ರಶ್ಣಾನುಸಾರ ಉತ್ತರ ನೀಡಿದರು. 60 ಕ್ಕೂ ಹೆಚ್ಚು ಬಾಲಕಿಯರು ಈ ರಸಪ್ರಶ್ಣೆಯಲ್ಲಿ…

Read More

ಸ್ನೋ ಮ್ಯಾನ್ ಐಸ್ ಕ್ರೀಮ್ ಪಾರ್ಲರ್ ನ ಎರಡನೇ ಶಾಖೆ ಶುಭಾರಂಭ

ಅಸ್ತ್ರ ಗ್ರೂಪ್ ಲಂಚುಲಾಲ್ ಇವರ ಮಾಲಕತ್ವದ ಸ್ನೋ ಮ್ಯಾನ್ ಐಸ್ ಕ್ರೀಮ್ ಪಾರ್ಲರ್ ನ ಎರಡನೇ ಶಾಖೆ ನಿನ್ನೆ ದೇರಳಕಟ್ಟೆಯಲ್ಲಿ ಶುಭಾರಂಭಗೊಂಡಿತು. .ಉಧ್ಘಟನಾ ಸಮಾರಂಭದಲ್ಲಿ ಅಸ್ತ್ರ ಗ್ರೂಪ್ ಸಿ.ಇ.ಓ ,ಕ್ಯಾಟ್ಕಾ ಅಧ್ಯಕ್ಷರಾದ ಲಂಚು ಲಾಲ್, ದಾಸ್ ಪ್ರಮೋಟರ್ಸ್ ಇದರ ಮ್ಯಾನೇಜಿಂಗ್ ಡೈರೆಕ್ಟರ್ ಅನಿಲ್ ದಾಸ್ ,ಲಂಚು ಲಾಲ್ ಅವರ ತಾಯಿ ರೇಖಾ,ಧರ್ಮ ಪತ್ನಿ ಭವ್ಯ ಉಪಸ್ಥಿತರಿದ್ದರು, ಲಂಚುಲಾಲ್ ಅವರ ತಾಯಿ ದೀಪ ಬೆಳಗಿಸುವುದರ ಮೂಲಕ ಶಾಖೆಯನ್ನು ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಹಲವು ಗಣ್ಯ ಅತಿಥಿಗಳು, ಸಿನಿಮಾ ತಾರೆಯರು ಉಪಸ್ಥಿತರಿದ್ದರು…

Read More

ಬದುಕಿಗೆ ಮುಳುವಾಯಿತೇ ಬಣ್ಣ – 19 ರಲ್ಲೇ ಜೀವನ ಅಂತ್ಯಗೊಳಿಸಿದ ವಿದ್ಯಾರ್ಥಿನಿ

ಮಂಜೇಶ್ವರ : ದ್ವಿತೀಯ ವರ್ಷದ ಬಿಎ ಸೈಕಾಲಜಿ ವಿದ್ಯಾರ್ಥಿನಿಯೊಬ್ಬಳು ನೇಣಿಗೆ ಶರಣಾಗಿರುವ ಬಗ್ಗೆ ತಲಪಾಡಿಯ ಕಿನ್ಯದಿಂದ ವರದಿಯಾಗಿದೆ.ಶ್ರೇಯಾ (19) ಸಾವನ್ನಪ್ಪಿದ ದುರ್ದೈವಿ.ಎಂದು ಗುರುತಿಸಲಾಗಿದೆ. ಶ್ರೇಯಾ ಓದಿನ ಒತ್ತಡ ಹಾಗೂ ತಲೆನೋವಿನಿಂದ ಬಳಲುತ್ತಿದ್ದಳು ಎಂದು ತಿಳಿದುಬಂದಿದೆ. ಶ್ರೇಯಾ ಬರೆದಿರುವ ಡೆತ್ ನೋಟ್ ಸಿಕ್ಕಿದ್ದು, ಅದರಲ್ಲಿ ಆಕೆಯನ್ನು ಕಪ್ಪು ಎಂದು ಅವಮಾನಿಸುತ್ತಿದ್ದ ಬಗ್ಗೆ ಬರೆದಿದ್ದಾಳೆ. ಅಲ್ಲದೇ, ಮೇ ತಿಂಗಳಿನಲ್ಲಿ ಶ್ರೇಯಾ ಬರೆದಿರುವ ಡೆತ್ ನೋಟೊಂದು ಸಿಕ್ಕಿದೆ. ನನ್ನನ್ನು ಯಾರೂ ಪ್ರೀತಿಸುವುದಿಲ್ಲ. ನಾನು ಬದುಕಬಾರದು, ಮನೆಯವರಿಗೆ ಕಷ್ಟವಾಗುತ್ತದೆ ಎಂದು ಬರೆದಿದ್ದಾಳೆ. ಮನೆಯ…

Read More

ಪುತ್ತೂರು: ಯುವ ಗಾಯಕಿ ಅಖಿಲಾ ಪಜಿಮಣ್ಣು ದಾಂಪತ್ಯದಲ್ಲಿ ಬಿರುಕು; ವಿಚ್ಛೇದನಕ್ಕೆ ಅರ್ಜಿ

ಪುತ್ತೂರು, ಜೂ. 21: ಯುವ ಗಾಯಕಿ ಅಖಿಲಾ ಪಜಿಮಣ್ಣು ಅವರ ದಾಂಪತ್ಯ ಜೀವನದಲ್ಲಿ ಬಿರುಕು ಮೂಡಿದೆ. ಅಖಿಲಾ ಪಜಿಮಣ್ಣು ಹಾಗೂ ಧನಂಜಯ್ ಶರ್ಮಾ ಇಬ್ಬರು ಪರಸ್ಪರ ಒಪ್ಪಿ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಅಖಿಲಾ ಪಜಿಮಣ್ಣು ಮೂರು ವರ್ಷಗಳ ಹಿಂದೆ ಬೆಳಗಾವಿ ಮೂಲದ ಅಮೆರಿಕ ನಿವಾಸಿ ಸಾಫ್ಟ್‌ವೇರ್‌ ಇಂಜಿನಿಯರ್ ಧನಂಜಯ್ ಶರ್ಮಾ ಅವರೊಂದಿಗೆ ವಿವಾಹವಾಗಿದ್ದರು. ಆದರೆ ಈಗ ಇವರಿಬ್ಬರ ದಾಂಪತ್ಯದಲ್ಲಿ ಬಿರುಕು ಮೂಡಿದ್ದು, ವಿಚ್ಛೇದನ ಪಡೆಯಲು ನಿರ್ಧರಿಸಿದ್ದಾರೆ.ದಿಢೀರನೇ ಅಖಿಲಾ ಹಾಗೂ ಧನಂಜಯ್ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿರುವುದು ಅಚ್ಚರಿ ಮೂಡಿಸಿದೆ. ಅವರಿಬ್ಬರು ಪುತ್ತೂರು…

Read More

ಭಾರೀ ಮಳೆಗೆ ರೈಲ್ವೆ ಹಳಿ ಮೇಲೆ ಗುಡ್ಡ ಕುಸಿತ; ಬೆಂಗಳೂರು-ಮುರುಡೇಶ್ವರ ರೈಲು ಸಂಚಾರದಲ್ಲಿ ವ್ಯತ್ಯಯ

ಹಾಸನ, ಜೂ. 21 ಭಾರೀ ಮಳೆಯಿಂದ ರೈಲ್ವೆ ಹಳಿ ಮೇಲೆ ಗುಡ್ಡ ಕುಸಿದ ಘಟನೆ ಹಾಸನದ ಸಕಲೇಶಪುರ ಯಡೆಕುಮಾರಿ ಎಂಬಲ್ಲಿ ನಡೆದಿದ್ದು, ರೈಲು ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ. ಕಿಲೋಮೀಟರ್ ಸಂಖ್ಯೆ 74 & 75ರ ನಡುವಿನ ಅರೆಬೆಟ್ಟ ಮತ್ತು ಯಡೆಕುಮಾರಿ ಮಧ್ಯೆ ಭಾಗದಲ್ಲಿ ರೈಲ್ವೆ ಹಳಿ ಮೇಲೆ ಬಂಡೆ ಕಲ್ಲುಗಳು ಬಿದ್ದಿವೆ. ಭಾರೀ ಗಾತ್ರದ ಬಂಡೆ ಉರುಳಿ ಬಿದ್ದ ಪರಿಣಾಮ ಹಳಿಗೆ ಹಾನಿಯಾಗಿದೆ. ಇದರಿಂದಾಗಿ ಬೆಂಗಳೂರು-ಕಣ್ಣೂರು ಘಾಟ್, ಬೆಂಗಳೂರು-ಮುರುಡೇಶ್ವರ ಮಾರ್ಗದಲ್ಲಿ ಸಂಚರಿಸುವ ರೈಲುಗಳ ಸಂಚಾರ ಸ್ಥಗಿತಗೊಳಿಸಲಾಗಿದೆ.ಇದೇ ಮಾರ್ಗದಲ್ಲಿ…

Read More

ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಕ್ಷೇತ್ರಾಡಳಿತ ಸಮಿತಿ ಅಧ್ಯಕ್ಷರಾಗಿ ಎಚ್.ಎಸ್.ಜಯರಾಜ್ ಆಯ್ಕೆ

ಮಂಗಳೂರು: ಬ್ರಹ್ಮಶ್ರೀ ನಾರಾಯಣಗುರುಗಳು ಪ್ರತಿಷ್ಠಾಪಿಸಿದ ಕರ್ನಾಟಕದ ಏಕೈಕ ಕ್ಷೇತ್ರ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಸಮಗ್ರ ಅಭಿವೃದ್ಧಿ ಹಿತದೃಷ್ಟಿಯಿಂದ ಆಡಳಿತ ಸಮಿತಿ ಮತ್ತು ಅಭಿವೃದ್ಧಿ ಸಮಿತಿ ಜಂಟಿ ಸಭೆ ಕೇಂದ್ರದ ಮಾಜಿ ಸಚಿವ ಹಾಗು ಕ್ಷೇತ್ರದ ನವೀಕರಣದ ರೂವಾರಿ ಬಿ.ಜನಾರ್ದನ ಪೂಜಾರಿಯವರ ಮಾರ್ಗದರ್ಶನದಲ್ಲಿ ಶುಕ್ರವಾರ ನಡೆಯಿತು. ಕ್ಷೇತ್ರದ ಸಮಗ್ರ ಅಭಿವೃದ್ಧಿ ಬಗ್ಗೆ ಚರ್ಚೆ ನಡೆಸಿ, ಕ್ಷೇತ್ರಾಡಳಿತ ಸಮಿತಿಯನ್ನು ಪುನರ್ ರಚಿಸಲಾಯಿತು. ಕ್ಷೇತ್ರದ ಆಡಳಿತ ಸಮಿತಿ ಅಧ್ಯಕ್ಷರಾಗಿ ಸಾಹುಕಾರ್ ಕೊರಗಪ್ಪರವರ ಮೊಮ್ಮಗ ಜಯರಾಜ್ ಎಚ್ ಸೋಮಸುಂದರಂ (ಎಚ್.ಎಸ್.ಜಯರಾಜ್) ಅವರನ್ನು…

Read More

ಮಂಗಳೂರು: ಪಂಪ್‌ವೆಲ್ ಬಳಿ ಗಾಂಜಾ ಸುವಾಸನೆಯುಳ್ಳ ಚಾಕೊಲೇಟ್ ಮಾರಾಟ;ಆರೋಪಿ ಅರೆಸ್ಟ್

ಮಂಗಳೂರು, ಜೂ. 21 : ಗಾಂಜಾ ಸುವಾಸನೆಯುಳ್ಳ ಚಾಕಲೇಟ್‌ಗಳನ್ನು ಮಾರಾಟ ಮಾಡುತ್ತಿರುವ ಆರೋಪದ ಮೇಲೆ ಅಬಕಾರಿ ಇಲಾಖೆ ಅಧಿಕಾರಿಗಳು ಪಂಪ್‌ವೆಲ್ ಸಮೀಪದ ಪಾನ್ ಗೂಡಂಗಡಿಯ ಮೇಲೆ ದಾಳಿ ನಡೆಸಿ ಉತ್ತರ ಪ್ರದೇಶ ಮೂಲದ ವ್ಯಕ್ತಿಯನ್ನು ಬಂಧಿಸಿದ್ದಾರೆ.ಉತ್ತರ ಪ್ರದೇಶ ಮೂಲದ ಸುಜಿತ್ ಕುಮಾರ್ ಬಂಧಿತ ಆರೋಪಿ. ಗಾಂಜಾ ಎಲೆಗಳ ಸುವಾಸನೆಯುಳ್ಳ ಚಾಕ್‌ಲೇಟ್‌ಗಳನ್ನು ಮಾರಾಟ ಮಾಡುತ್ತಿದ್ದಾನೆಂಬ ಆರೋಪದಲ್ಲಿ ಅಬಕಾರಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈ ವೇಳೆ ಆರೋಪಿ ಗಾಂಜಾ ಎಲೆಗಳ ಸುವಾಸನೆಯುಳ್ಳ ಚಾಕೊಲೇಟ್‌ಗಳನ್ನು ಮಾರಾಟ ಮಾಡುತ್ತಿರುವುದು ಕಂಡುಬಂದಿದೆ. ದಾಳಿ…

Read More

ಬಂಟ್ವಾಳ : ಪತ್ನಿಯನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡ ಪತಿ

ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಸಮೀಪ ಪತ್ನಿಯನ್ನು ಕೊಂದು ಪತಿ ಆತ್ಮಹತ್ಯೆ ಮಾಡಿಕೊಂಡ ರೀತಿಯಲ್ಲಿ ಗಂಡ ಹೆಂಡತಿ ಇಬ್ಬರ ಮೃತದೇಹ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ಬಡಗುಂಡಿ ಎಂಬಲ್ಲಿ ಇಂದು ಗುರುವಾರ ಪತ್ತೆಯಾಗಿದೆ.ಸಜಿಪಮೂಡ ಗ್ರಾಮದ ತಿಮ್ಮಪ್ಪ ಮೂಲ್ಯ (50)ಹಾಗೂ ಆತನ ಪತ್ನಿ ತುಂಬು ಗರ್ಭಿಣಿ ಜಯಂತಿ (40) ಇಬ್ಬರು ಸಂಶಯಾಸ್ಪದ ರೀತಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಮಾಹಿತಿ ತಿಳಿದು ಬಂದಿದೆ. ಜಯಂತಿ ಅವರ ಮೃತದೇಹ ಕೋಣೆಯಲ್ಲಿ ಮಲಗಿದ ಸ್ಥಿತಿಯಲ್ಲಿ ಇದ್ದರೆ ತಿಮ್ಮಪ್ಪ ಅವರು ನೇಣು ಬಿಗಿದು…

Read More

ಜೂ.22ರಂದು ಮುಳಿಯ ಗೋಲ್ಡ್ & ಡೈಮಂಡ್ಸ್ ವತಿಯಿಂದ ಅಪ್ಪ-ಮಗ ಹಾಗೂ ಅಪ್ಪ-ಮಗಳು ಎಂಬ ವಿಶೇಷ ರೀತಿಯ ಅನುಬಂಧದ ಕಾರ್ಯಕ್ರಮ

ಪುತ್ತೂರು: ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ವತಿಯಿಂದ Father’s Day ಅಂಗವಾಗಿ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಜೂನ್ 22 ರಂದು ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ನಲ್ಲಿ ಚಿನ್ನದಂತ ಅಪ್ಪ ನನ್ನ ಅಪ್ಪ ಶೀರ್ಷಿಕೆಯಡಿ ಅಪ್ಪ-ಮಗ ಹಾಗೂ ಅಪ್ಪ-ಮಗಳು ಎಂಬ ವಿಶೇಷ ರೀತಿಯ ಅನುಬಂಧದ ಕಾರ್ಯಕ್ರಮ ಏರ್ಪಡಿಸಲಾಗಿದ್ದು, ವಿನೂತನ ಆಟಗಳು, ಪ್ರಶ್ನೋತ್ತರಗಳು, ಅಂತರಾತ್ಮದ ಮಾತುಗಳು ಈ ಕಾರ್ಯಕ್ರಮದ ವಿಶೇಷತೆಗಳಾಗಿವೆ. ಹಾಗೆಯೇ ಅಪ್ಪ-ಮಕ್ಕಳ ಅನುಬಂಧದ ಕುರಿತಾಗಿ ಹೊಸದಾಗಿ ಮಾಡಿದ 30 ಸೆಕೆಂಡುಗಳ ವೀಡಿಯೋವನ್ನು 9353030916 ಸಂಖ್ಯೆಗೆ ಕಳುಹಿಸುವಂತೆ ಕೋರಲಾಗಿದೆ….

Read More
error: Content is protected !!