ಕಾಸರಗೋಡಿನಲ್ಲಿ ಆರ್ವಿಆರ್ ನ್ಯೂರೋ-ಆಂಕಾಲಜಿ ಕೇಂದ್ರ ಆರಂಭ; ‘ಆರೋಗ್ಯ ಬೈ ಆರ್ವಿಆರ್’ ದೇಶವ್ಯಾಪಿ ವಿಸ್ತರಣೆ
ಮಂಗಳೂರು, ಜು.24: ಕೈಗೆಟುಕುವ ದರದಲ್ಲಿ ವಿಶ್ವದರ್ಜೆಯ ಆರೋಗ್ಯ ಸೇವೆ ನೀಡುವ ಗುರಿಯೊಂದಿಗೆ ಕಾರ್ಯನಿರ್ವಹಿಸುತ್ತಿರುವ ಆರ್ವಿಆರ್ ಹೆಲ್ತ್ಕೇರ್, ಕೇರಳದ ಕಾಸರಗೋಡಿನಲ್ಲಿ ಜುಲೈ 26ರಂದು ನೂತನ ನ್ಯೂರೋ-ಆಂಕಾಲಜಿ ಕೇಂದ್ರವನ್ನು ಆರಂಭಿಸುವುದಾಗಿ ಹಾಗೂ ತನ್ನ ಸಮುದಾಯ ಆರೋಗ್ಯ ಕಾರ್ಯಕ್ರಮ ‘ಆರೋಗ್ಯ ಬೈ ಆರ್ವಿಆರ್’ ಅನ್ನು ದೇಶಾದ್ಯಂತ ವಿಸ್ತರಿಸುವುದಾಗಿ ಘೋಷಿಸಿದೆ. ನಗರದ ದಿ ಓಶನ್ ಪರ್ಲ್ ಹೋಟೆಲ್ನಲ್ಲಿ ಶುಕ್ರವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಸಂಸ್ಥೆಯ ನಿರ್ದೇಶಕ ಹಾಗೂ ಹಿರಿಯ ನರಶಸ್ತ್ರಚಿಕಿತ್ಸಕರಾದ ಡಾ. (ಪ್ರೊ.) ರಾಘವೇಂದ್ರ ಬಿ. ಎಸ್. ಈ ಮಾಹಿತಿ ನೀಡಿದರು.2026ರ ಏಪ್ರಿಲ್ನಲ್ಲಿ ಆರಂಭಗೊಂಡ…
