ಆಸ್ಪತ್ರೆಯಲ್ಲಿ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಆರೋಗ್ಯ ವಿಚಾರಿಸಿದ ಸಚಿವ ಯು.ಟಿ. ಖಾದರ್

ಬೆಂಗಳೂರು, ಸೆ. 18: ಅನಾರೋಗ್ಯದ ಹಿನ್ನೆಲೆಯಲ್ಲಿ ಬೆಂಗಳೂರಿನ ಆಸ್ಟರ್ ಸಿಎಂಐ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ, ಸಹಕಾರ ರತ್ನ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಅವರನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ಅವರು ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು. ಬುಧವಾರ ಆಸ್ಪತ್ರೆಗೆ ಭೇಟಿ ನೀಡಿದ ಸಚಿವ ಯು.ಟಿ….

Read More

ಚಿತ್ರಾಪುರದ ಅಂಗಳದಿಂದ ದಾದಾಸಾಹೇಬ್ ಫಾಲ್ಕೆ ಗೌರವದವರೆಗೆ…ಭಟ್ಕಳದ ನೆಲದ ಹೆಮ್ಮೆಯ ಅನಂತ ನಾಗ್ ಅವರ ಅಪೂರ್ವ ಕಲಾಯಾನ

ಕನ್ನಡ ಚಿತ್ರರಂಗದ ಸಹಜ ಅಭಿನಯದ ಹಿರಿಯ ಕಲಾವಿದ ಶ್ರೀ ಅನಂತ ನಾಗ್ ಅವರಿಗೆ 2024ನೇ ಸಾಲಿನ ಪ್ರತಿಷ್ಠಿತ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಲಭಿಸಿರುವುದು ಕನ್ನಡಿಗರಿಗಷ್ಟೇ ಅಲ್ಲ, ಉತ್ತರ ಕನ್ನಡದ ಕಲಾಭಿಮಾನಿಗಳಿಗೂ ಹೆಮ್ಮೆಯ ಹಾಗೂ ಸಂತಸದ ಕ್ಷಣ. ಐದು ದಶಕಗಳಿಗೂ ಹೆಚ್ಚು ಕಾಲ ಭಾರತೀಯ ಚಿತ್ರರಂಗಕ್ಕೆ ನೀಡಿದ ಕೊಡುಗೆಯನ್ನು ಗುರುತಿಸಿ ಈ ಗೌರವ ನೀಡಲಾಗುತ್ತಿದೆ. ಈ ಸಂದರ್ಭದಲ್ಲಿ ಭಟ್ಕಳ, ಚಿತ್ರಾಪುರ, ಶಿರಾಲಿ ಹಾಗೂ ಮಲ್ಲಾಪುರದ ನೆಲದೊಂದಿಗೆ ಅನಂತ ನಾಗ್ ಅವರಿಗಿರುವ ಆಪ್ತ ನಂಟು ವಿಶೇಷವಾಗಿ ನೆನಪಾಗುತ್ತದೆ.ಚಿತ್ರಾಪುರದ ಮಣ್ಣಿನಲ್ಲಿ ಅರಳಿದ…

Read More

ಅಬ್ದುಲ್ ರಹ್ಮಾನ್ ಕೊಲೆ ಕೇಸ್: ಆರೋಪಿಗಳಿಗೆ ಜಾಮೀನು ವಿರೋಧಿಸಿ SDPI ಪ್ರತಿಭಟನೆ

ಮಂಗಳೂರು: ಅಬ್ದುಲ್ ರಹ್ಮಾನ್ ಕೊಲೆ ಪ್ರಕರಣದ ಆರೋಪಿಗಳಿಗೆ ಜಾಮೀನು ನೀಡಿರುವುದನ್ನು ಖಂಡಿಸಿ ಎಸ್‌ಡಿಪಿಐ ಕಾರ್ಯಕರ್ತರು ಮಂಗಳೂರಿನಲ್ಲಿ ಪ್ರತಿಭಟನೆ ನಡೆಸಿದರು. ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ನಡೆಯುವ ಹಿನ್ನೆಲೆಯಲ್ಲಿ ಪ್ರತಿಭಟನೆ ನಡೆಸಿದ ಎಸ್‌ಡಿಪಿಐ ನಾಯಕರು, ಪ್ರಕರಣದಲ್ಲಿ ಆರೋಪಿಗಳಿಗೆ ಜಾಮೀನು ನೀಡಿರುವುದನ್ನು ವಿರೋಧಿಸಿದರು. ಈ ವೇಳೆ ಪ್ರತಿಭಟನಾಕಾರರು ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಸರ್ಕಾರ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವಿಫಲವಾಗಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು. ಪ್ರತಿಭಟನೆ ಹಿನ್ನೆಲೆಯಲ್ಲಿ ಪೊಲೀಸರು ಮುನ್ನೆಚ್ಚರಿಕಾ ಕ್ರಮವಾಗಿ ಎಸ್‌ಡಿಪಿಐನ ಕೆಲ ನಾಯಕರು ಹಾಗೂ…

Read More

ಮಂಗಳೂರಲ್ಲಿ ಐತಿಹಾಸಿಕ ಕ್ಯಾಬಿನೆಟ್ ಮೀಟಿಂಗ್: ಕರಾವಳಿಗೆ ಭರ್ಜರಿ ಘೋಷಣೆಗಳ ನಿರೀಕ್ಷೆ

ಮಂಗಳೂರು, ದಕ್ಷಿಣ ಕನ್ನಡ:ಕರಾವಳಿ ಭಾಗದ ಅಭಿವೃದ್ಧಿಗೆ ಹೊಸ ರೂಪ ನೀಡುವ ಉದ್ದೇಶದಿಂದ ಇದೇ ಮೊದಲ ಬಾರಿಗೆ ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ನಡೆಯುತ್ತಿದೆ. ಪಡೀಲಿನಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಆವರಣದ ಪ್ರಜಾಸೌಧದ ಎರಡನೇ ಮಹಡಿಯಲ್ಲಿ ಸಚಿವ ಸಂಪುಟ ಸಭೆಗೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಬೆಳಿಗ್ಗೆ ಸುಮಾರು 11 ಗಂಟೆಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ಆರಂಭವಾಗಲಿದೆ. ಸಭೆಯಲ್ಲಿ ಕರಾವಳಿ ಭಾಗದ ಅಭಿವೃದ್ಧಿ ಸೇರಿದಂತೆ ಹಲವು ಮಹತ್ವದ ವಿಚಾರಗಳ ಕುರಿತು ಚರ್ಚೆ ನಡೆಯುವ ನಿರೀಕ್ಷೆಯಿದೆ. ತುಳು…

Read More

ವಿಶ್ವ ಹೃದಯ ದಿನ: ಇಂಡಿಯಾನಾ ಆಸ್ಪತ್ರೆಯಲ್ಲಿ ₹1,499ಕ್ಕೆ ಸಂಪೂರ್ಣ ಹೃದಯ ತಪಾಸಣೆ

ಮಂಗಳೂರು, ಸೆ. 16:* ವಿಶ್ವ ಹೃದಯ ದಿನದ ಅಂಗವಾಗಿ ನಗರದ ಇಂಡಿಯಾನಾ ಆಸ್ಪತ್ರೆ ಮತ್ತು ಹೃದಯ ಸಂಸ್ಥೆಯು ಸಾರ್ವಜನಿಕರಿಗಾಗಿ ವಿಶೇಷ ರಿಯಾಯಿತಿ ದರದಲ್ಲಿ ಸಂಪೂರ್ಣ ಹೃದಯ ತಪಾಸಣಾ ಪ್ಯಾಕೇಜ್ ಘೋಷಿಸಿದೆ. ಸಾಮಾನ್ಯವಾಗಿ ₹3,000 ಮೌಲ್ಯದ ಈ ತಪಾಸಣಾ ಪ್ಯಾಕೇಜ್‌ನ್ನು ಇದೀಗ ಕೇವಲ ₹1,499ಕ್ಕೆ ನೀಡಲಾಗುತ್ತಿದ್ದು, ಈ ವಿಶೇಷ ಕೊಡುಗೆ ಸೆಪ್ಟೆಂಬರ್ 30, 2026ರವರೆಗೆ ಲಭ್ಯವಿರಲಿದೆ. ಪ್ಯಾಕೇಜ್‌ನಲ್ಲಿ ECHO/TMT, ಲಿಪಿಡ್ ಪ್ರೊಫೈಲ್, ಕ್ರಿಯೇಟಿನೈನ್, ರಾಂಡಮ್ ಬ್ಲಡ್ ಶುಗರ್ (RBS) ಹಾಗೂ ECG ಪರೀಕ್ಷೆಗಳು, ಆಹಾರ ಪದ್ಧತಿ ಕುರಿತು ತಜ್ಞರ…

Read More

ಕರಾವಳಿ ಅಭಿವೃದ್ಧಿಗೆ ಹೊಸ ರೂಪ: ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ

ಮಂಗಳೂರು, ಸೆ.17: ಕರಾವಳಿ ಭಾಗದ ಅಭಿವೃದ್ಧಿಗೆ ಹೊಸ ರೂಪ ನೀಡುವ ಉದ್ದೇಶದಿಂದ ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ನಡೆಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಮಂಗಳೂರು ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ಕರಾವಳಿ ಹಾಗೂ ಮಲೆನಾಡು ಭಾಗಗಳು ವಿದ್ಯಾವಂತರು ಮತ್ತು ಬುದ್ಧಿವಂತರು ಇರುವ ಜಿಲ್ಲೆಗಳಾಗಿದ್ದು, ಈ ಭಾಗಕ್ಕೆ ಮತ್ತಷ್ಟು ಶಕ್ತಿ ತುಂಬುವ ಉದ್ದೇಶದಿಂದ ಸಂಪುಟ ಸಭೆ ನಡೆಸಲಾಗುತ್ತಿದೆ ಎಂದರು. ಕರಾವಳಿ ಭಾಗದ ಶಾಸಕರು ಹಾಗೂ ಸಂಸದರು ತಮ್ಮನ್ನು ಭೇಟಿಯಾಗಿ ಸ್ಥಳೀಯ ಸಮಸ್ಯೆಗಳು ಮತ್ತು ವಿವಿಧ ಬೇಡಿಕೆಗಳನ್ನು…

Read More

ಪ್ರಧಾನಿ ಮೋದಿ ಜನ್ಮದಿನದ ಪ್ರಯುಕ್ತ ರಕ್ತದಾನ ಶಿಬಿರ ಆಯೋಜನೆ

ಮಂಗಳೂರು: ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಜನ್ಮದಿನದ ಅಂಗವಾಗಿ ಮಂಗಳೂರಿನ ಬಜಿಲಕೇರಿಯಲ್ಲಿರುವ ಸೇವಾಂಜಲಿ ಏರೆನಾದಲ್ಲಿ ಸೆಪ್ಟೆಂಬರ್ 18 ರಂದು ರಕ್ತದಾನ ಶಿಬಿರ ಜರುಗಿತು. ಸೇವಾಂಜಲಿ ಚಾರಿಟೇಬಲ್ ಟ್ರಸ್ಟ್ ಆಶ್ರಯದಲ್ಲಿ ಕೆಎಂಸಿ ಆಸ್ಪತ್ರೆಯ ಸಹಯೋಗದೊಂದಿಗೆ ಬಿರುವೆರ್ ಕುಡ್ಲ, ಕಾಳಿಚರಣ್ ಫ್ರೆಂಡ್ಸ್, ಬಜಿಲಕೇರಿ ಫ್ರೆಂಡ್ಸ್ ಸಹಕಾರದಲ್ಲಿ ರಕ್ತದಾನ ಶಿಬಿರ ನಡೆಯಿತು. ದೀಪ ಬೆಳಗಿಸಿ ಮಾತನಾಡಿದ ಸಾಮಾಜಿಕ ಹೋರಾಟಗಾರ ಹನುಮಂತ್ ಕಾಮತ್, ಪ್ರತಿ ಮೂರು ತಿಂಗಳಿಗೊಮ್ಮೆ ನಾವು ರಕ್ತದಾನ ಮಾಡಬಹುದು. ಒಬ್ಬ ವ್ಯಕ್ತಿ ಒಂದು ಸಲ ಮಾಡುವ ರಕ್ತದಾನದಿಂದ ಮೂರು ಅಮೂಲ್ಯ…

Read More

ಮಂಗಳೂರು ಸಚಿವ ಸಂಪುಟ ಸಭೆ: ಅಭಿವೃದ್ಧಿಗೆ ಮಹತ್ವದ ಮೈಲಿಗಲ್ಲು – ಮಂಜುನಾಥ ಭಂಡಾರಿ

ಮಂಗಳೂರು:ಮಂಗಳೂರಿನಲ್ಲಿ ನಡೆಯುತ್ತಿರುವ ಸಚಿವ ಸಂಪುಟ ಸಭೆ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಅಭಿವೃದ್ಧಿಯ ದೃಷ್ಟಿಯಿಂದ ಮಹತ್ವದ ಮೈಲಿಗಲ್ಲಾಗಲಿದೆ ಎಂದು ವಿಧಾನ ಪರಿಷತ್ ಸದಸ್ಯ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಡಾ. ಮಂಜುನಾಥ ಭಂಡಾರಿ ಹೇಳಿದರು. ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕರಾವಳಿಯ ಪ್ರವಾಸೋದ್ಯಮ, ಉದ್ಯೋಗ ಸೃಷ್ಟಿ, ಮೂಲಸೌಕರ್ಯ ಸೇರಿದಂತೆ ವಿವಿಧ ಕ್ಷೇತ್ರಗಳ ಅಭಿವೃದ್ಧಿಗೆ ಹಲವು ಪ್ರಸ್ತಾವನೆಗಳನ್ನು ಸರ್ಕಾರದ ಮುಂದಿಡಲಾಗಿದೆ. ಸಚಿವ ಸಂಪುಟ ಸಭೆಯ ಹಿನ್ನೆಲೆಯಲ್ಲಿ ಕಳೆದ 15 ದಿನಗಳಿಂದ ವಿವಿಧ ಇಲಾಖೆಗಳ ಅಧಿಕಾರಿಗಳು ಜಿಲ್ಲೆಯ ಅಗತ್ಯಗಳ ಕುರಿತು ಪ್ರಸ್ತಾವನೆ…

Read More

ಮುಂಡಳ್ಳಿ ಸಾರ್ವಜನಿಕ ಗಣೇಶೋತ್ಸವದಲ್ಲಿ ಭಕ್ತಿಲಹರಿ ಹರಿಸಿದ ನಿನಾದದ ಭಕ್ತಿ ಸಂಗೀತ

ಭಟ್ಕಳ: ಶ್ರೀ ಸಾರ್ವಜನಿಕ ಗಣೇಶೋತ್ಸವ ಸಮಿತಿ, ಮುಂಡಳ್ಳಿ ವತಿಯಿಂದ ಆಯೋಜಿಸಲಾಗಿದ್ದ 42ನೇ ವರ್ಷದ ಶ್ರೀ ಸಾರ್ವಜನಿಕ ಗಣೇಶೋತ್ಸವದ ಅಂಗವಾಗಿ ಬುಧವಾರ ರಾತ್ರಿ ನಿನಾದ ಕಲ್ಚರಲ್ ಅಕಾಡೆಮಿ, ಭಟ್ಕಳ ವತಿಯಿಂದ ಭಕ್ತಿಭಾವದ ವಿಶೇಷ ಭಕ್ತಿ ಸಂಗೀತ ಕಾರ್ಯಕ್ರಮ ನಡೆಯಿತು. ರಾಜ್ಯ ಪ್ರಶಸ್ತಿ ಪುರಸ್ಕೃತ ಗಾಯಕ ಉಮೇಶ ಮುಂಡಳ್ಳಿ ಅವರ ಸಾರಥ್ಯದಲ್ಲಿ ನಡೆದ ಸಂಗೀತ ಸೇವೆಯಲ್ಲಿ ನಿನಾದ ಉಮೇಶ, ಉತ್ಥಾನ ಉಮೇಶ ಹಾಗೂ ಸುದರ್ಶನ ಶಿರೂರು ಗಾಯನದಲ್ಲಿ ಸಾಥ್ ನೀಡಿದರು. ಹಿರಿಯ ಕಲಾವಿದ ಉಮೇಶ ಶಿರೂರು ಅವರು ಹಾರ್ಮೋನಿಯಂ ವಾದನದೊಂದಿಗೆ…

Read More

ಬಡವರಿಗೆ ಉಚಿತ ಚಿಕಿತ್ಸೆ, ಸಿಬ್ಬಂದಿ ಕೊರತೆ ನೀಗಿಸಲು ಕ್ರಮ: ಖಾದರ್

ಮಂಗಳೂರು: ಕರಾವಳಿ ಹಾಗೂ ತುಳುನಾಡಿನ ಆತಿಥ್ಯ, ಸೌಹಾರ್ದತೆ ಮತ್ತು ಪ್ರೀತಿ-ವಿಶ್ವಾಸದ ಸಂಸ್ಕೃತಿ ದೇಶ-ವಿದೇಶಗಳಲ್ಲಿಯೂ ವಿಶೇಷವಾಗಿ ಗುರುತಿಸಿಕೊಂಡಿದೆ. ಇಂತಹ ಸಂದರ್ಭದಲ್ಲಿ ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ನಡೆಯುತ್ತಿರುವುದಕ್ಕೆ ಎಲ್ಲರೂ ಸಹಕಾರ ನೀಡುವ ಬದಲು ವಿವಿಧ ವಿಚಾರಗಳನ್ನು ಮುಂದಿಟ್ಟುಕೊಂಡು ಪ್ರತಿಭಟನೆ ನಡೆಸುವುದು ಸೂಕ್ತವಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಖಾತೆ ಸಚಿವ ಯು.ಟಿ. ಖಾದರ್ ಹೇಳಿದರು. ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜೈಲಿನಲ್ಲಿ ಜಾಮರ್ ಅಳವಡಿಸಿರುವ ವಿಚಾರ ಹೊಸದಲ್ಲ. ಜಾಮರ್ ಅಳವಡಿಸಿದ…

Read More
error: Content is protected !!