ರಾಜ್ಯ ದತ್ತಾಂಶದ ಸುರಕ್ಷತೆ, ಸೈಬರ್ ಭದ್ರತಾ ಚೌಕಟ್ಟು ಬಲಪಡಿಸುವುದು ವಿಷಯದ ಕುರಿತು ರಾಜ್ಯ ಮಟ್ಟದ ಕಾರ್ಯಾಗಾರ

ಬೆಂಗಳೂರು:ಕರ್ನಾಟಕ ಸರ್ಕಾರದ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ (ಇ-ಆಡಳಿತ), ಇ-ಆಡಳಿತ ಕೇಂದ್ರ (CeG), ಕರ್ನಾಟಕದ ಸೈಬರ್ ಭದ್ರತಾ ಉತ್ಕೃಷ್ಟತಾ ಕೇಂದ್ರ (CySecK) ಮತ್ತು ರಾಷ್ಟ್ರೀಯ ಇ-ಆಡಳಿತ ವಿಭಾಗದ ಸಹಯೋಗದೊಂದಿಗೆ ಬೆಂಗಳೂರಿನ ದಿ ಲಲಿತ್ ಅಶೋಕ್ ಹೋಟೆಲ್‌ನಲ್ಲಿ ರಾಜ್ಯ ದತ್ತಾಂಶಕ್ಕಾಗಿ ಸೈಬರ್ ಭದ್ರತಾ ಚೌಕಟ್ಟನ್ನು ಬಲಪಡಿಸುವುದು ಎಂಬ ವಿಷಯದ ಕುರಿತು ರಾಜ್ಯ ಮಟ್ಟದ ಮಹತ್ವದ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿತ್ತು. ​ಕರ್ನಾಟಕದ ಡಿಜಿಟಲ್ ಆಡಳಿತ ವ್ಯವಸ್ಥೆಯಲ್ಲಿ ಸೈಬ‌ರ್ ಭದ್ರತೆಯನ್ನು ಬಲಪಡಿಸುವ ಕಾರ್ಯತಂತ್ರಗಳ ಕುರಿತು ಚರ್ಚಿಸಲು 30ಕ್ಕೂ ಹೆಚ್ಚು ಇಲಾಖೆಗಳು, ನಿಗಮಗಳು,…

Read More

ಇಂಗ್ಲಿಷ್ ಚಾನೆಲ್ ಈಜಿದ ಮಂಗಳೂರಿನ ಮೊದಲ ವ್ಯಕ್ತಿ: ಸಾಧನೆಯ ಯಶೋಗಾಥೆ ಹಂಚಿಕೊಂಡ ಡಾ. ಗುರುಪ್ರಸಾದ್ ಭಟ್

ಮಂಗಳೂರು:ವಿಶ್ವದ ಅತ್ಯಂತ ಸವಾಲಿನ ಸಮುದ್ರ ಮಾರ್ಗಗಳಲ್ಲಿ ಒಂದಾದ ಇಂಗ್ಲಿಷ್ ಚಾನೆಲ್ ಅನ್ನು ಆರು ಸದಸ್ಯರ ರಿಲೇ ತಂಡದೊಂದಿಗೆ ಜುಲೈ 3ರಂದು ಯಶಸ್ವಿಯಾಗಿ ಈಜಿದ ಮಂಗಳೂರಿನ ಮೊದಲ ವ್ಯಕ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ಖ್ಯಾತ ಈಜುಪಟು ಡಾ. ಗುರುಪ್ರಸಾದ್ ಭಟ್, ತಮ್ಮ ಸಾಧನೆಯ ಅನುಭವವನ್ನು ಸೋಮವಾರ ನಗರದ ಪತ್ರಿಕಾಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಹಂಚಿಕೊಂಡರು. ಇಂಗ್ಲಿಷ್ ಚಾನೆಲ್ ಈಜು ವಿಶ್ವದ ಅತ್ಯಂತ ಕಠಿಣ ಸಾಹಸಗಳಲ್ಲಿ ಒಂದಾಗಿದೆ. 13ರಿಂದ 14 ಡಿಗ್ರಿ ಸೆಲ್ಸಿಯಸ್‌ನಷ್ಟು ಕಡಿಮೆ ತಾಪಮಾನ, ಅಟ್ಲಾಂಟಿಕ್ ಮಹಾಸಾಗರ ಮತ್ತು ಉತ್ತರ…

Read More

ಬಿಸಿರೋಡಿನಲ್ಲಿ ಹಾವಿನ ಸಾವಿನ ನೆಪದಲ್ಲಿ ಹಣ ಸಂಗ್ರಹ ಯತ್ನ? ಅನುಮಾನಗೊಂಡ ಸಾರ್ವಜನಿಕರು, ಸ್ಥಳ ತೆರವುಗೊಳಿಸಿದ ಪೊಲೀಸರು

ಬಂಟ್ವಾಳ: ಬಂಟ್ವಾಳ ತಾಲೂಕಿನ ಬಿಸಿರೋಡು ಸರ್ಕಲ್ ಸಮೀಪ ರಸ್ತೆ ಬದಿಯಲ್ಲಿ ಮೃತಪಟ್ಟ ಹಾವಿನ ಹೆಸರಿನಲ್ಲಿ ಸಾರ್ವಜನಿಕರಿಂದ ಹಣ ಸಂಗ್ರಹಿಸಲು ಐವರು ಅಪರಿಚಿತರು ಮುಂದಾಗಿದ್ದರೆಂಬ ಘಟನೆ ಸೋಮವಾರ ಗಮನ ಸೆಳೆಯಿತು. ಘಟನೆಯು ಸ್ಥಳೀಯರಲ್ಲಿ ಹಲವು ಅನುಮಾನಗಳಿಗೆ ಕಾರಣವಾಗಿದ್ದು, ಸಾರ್ವಜನಿಕ ವಲಯದಲ್ಲಿ ವ್ಯಾಪಕ ಚರ್ಚೆಗೆ ಗ್ರಾಸವಾಗಿದೆ. ಸ್ಥಳೀಯರ ಮಾಹಿತಿ ಪ್ರಕಾರ, ತಮ್ಮನ್ನು ಮೂಡುಶೆಡ್ಡೆ ನಿವಾಸಿಗಳು ಎಂದು ಪರಿಚಯಿಸಿಕೊಂಡಿದ್ದ ಕೆಲವರು, ಜೆಸಿಬಿ ಕಾಮಗಾರಿ ವೇಳೆ ಹಾವು ಸಾವನ್ನಪ್ಪಿದೆ ಎಂದು ಹೇಳಿಕೊಂಡು, ಬಿಳಿ ಬಟ್ಟೆಯಲ್ಲಿ ಹಾವನ್ನು ಇರಿಸಿ ಸಾರ್ವಜನಿಕರಿಂದ ಹಣ ಸಂಗ್ರಹಿಸುತ್ತಿದ್ದರು ಎನ್ನಲಾಗಿದೆ….

Read More

ಲೋಕ ಅದಾಲತ್‌ನಲ್ಲಿ ಮರು ಒಂದಾದ ದಂಪತಿ: ರಾಜಿ ಸಂಧಾನದಿಂದ ಅಂತ್ಯಗೊಂಡ ವಿಚ್ಛೇದನ ಪ್ರಕರಣ

ಬಂಟ್ವಾಳ: ದಾಂಪತ್ಯ ಜೀವನದಲ್ಲಿ ಉಂಟಾಗಿದ್ದ ಭಿನ್ನಾಭಿಪ್ರಾಯದಿಂದ ವಿಚ್ಛೇದನಕ್ಕಾಗಿ ನ್ಯಾಯಾಲಯದ ಮೆಟ್ಟಿಲೇರಿದ್ದ ದಂಪತಿಯೊಂದು, ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ನಡೆದ ರಾಜಿ ಸಂಧಾನದ ಮೂಲಕ ಮತ್ತೆ ಒಂದಾಗಿ ಹೊಸ ಜೀವನ ಆರಂಭಿಸಲು ನಿರ್ಧರಿಸಿದ ಹೃದಯಸ್ಪರ್ಶಿ ಘಟನೆ ಬಂಟ್ವಾಳದಲ್ಲಿ ನಡೆದಿದೆ. ಬಂಟ್ವಾಳ ಹಿರಿಯ ಸಿವಿಲ್ ನ್ಯಾಯಾಲಯದಲ್ಲಿ ಶನಿವಾರ ನಡೆದ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶ ಅನಿಲ್ ಪ್ರಕಾಶ್ ಎಂ.ಪಿ. ಅವರ ನೇತೃತ್ವದಲ್ಲಿ ಸಂಧಾನ ಪ್ರಕ್ರಿಯೆ ನಡೆಯಿತು. ದೀರ್ಘಕಾಲದಿಂದ ನ್ಯಾಯಾಲಯದಲ್ಲಿ ಬಾಕಿ ಉಳಿದಿದ್ದ ಕೌಟುಂಬಿಕ ವಿವಾದವನ್ನು ಉಭಯ ಪಕ್ಷಗಳ ಅಭಿಪ್ರಾಯ…

Read More

ಹುಡುಗಿಯ ಮದುವೆ ವಿಚಾರಕ್ಕೆ ಸಂಬಂಧಿಸಿದ ಗಲಾಟೆ: ದೂರು–ಪ್ರತಿದೂರು ದಾಖಲು

ಕಡಬ: ಹುಡುಗಿಯೊಬ್ಬಳ ಮದುವೆ ವಿಚಾರಕ್ಕೆ ಸಂಬಂಧಿಸಿದಂತೆ ಉಂಟಾದ ಗಲಾಟೆಯ ಹಿನ್ನೆಲೆಯಲ್ಲಿ ಕಡಬ ಪೊಲೀಸ್ ಠಾಣೆಯಲ್ಲಿ ಎರಡೂ ಕಡೆಯಿಂದ ದೂರು ಹಾಗೂ ಪ್ರತಿದೂರು ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ. ಕಡಬ ನಿವಾಸಿ ಮೋನಿಷ್ (21) ಅವರು ನೀಡಿದ ದೂರಿನ ಪ್ರಕಾರ, ಜು.10ರಂದು ರಾತ್ರಿ ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ವೇಳೆ ಕಡಬ ಗ್ರಾಮದ ಕಾಲೇಜು ರಸ್ತೆ ಜಂಕ್ಷನ್ ಬಳಿ ಶರತ್, ದೀಪಕ್ ಹಾಗೂ ವಿಶ್ವನಾಥ ಅವರು ತಡೆದು ನಿಲ್ಲಿಸಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ನಡೆಸಿ ಜೀವ ಬೆದರಿಕೆ…

Read More

ಕೆಪಿಎಸ್‌ಸಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ ಅಮಾನತು – ಅಧಿಕಾರ ದುರುಪಯೋಗ ಆರೋಪಕ್ಕೆ ರಾಜ್ಯಪಾಲರ ಕಠಿಣ ಕ್ರಮ

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ) ಅಧ್ಯಕ್ಷ ಶಿವಶಂಕರಪ್ಪ ಎಸ್. ಸಾಹುಕಾರ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೊಟ್ ಆದೇಶ ಹೊರಡಿಸಿದ್ದಾರೆ. ತಮ್ಮ ಇಬ್ಬರು ಪುತ್ರಿಯರು ಕೈಗಾರಿಕಾ ವಿಸ್ತರಣಾಧಿಕಾರಿ ಹುದ್ದೆಗೆ ನೇಮಕವಾಗಲು ಅಧಿಕಾರ ದುರುಪಯೋಗಪಡಿಸಿಕೊಂಡಿದ್ದಾರೆ ಎಂಬ ಗಂಭೀರ ಆರೋಪದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಪ್ರಕರಣದ ತನಿಖೆಗೆ ಶಿಫಾರಸು ಮಾಡಿರುವ ರಾಜ್ಯಪಾಲರು, ವಿಚಾರವನ್ನು ಸುಪ್ರೀಂ ಕೋರ್ಟ್‌ಗೆ ಉಲ್ಲೇಖಿಸುವಂತೆ ರಾಷ್ಟ್ರಪತಿಗಳಿಗೆ ಶಿಫಾರಸು ಮಾಡಿದ್ದಾರೆ. ಮುಂದಿನ ಆದೇಶದವರೆಗೆ ಆಯೋಗದ ಹಿರಿಯ ಸದಸ್ಯರು ಹಂಗಾಮಿ ಅಧ್ಯಕ್ಷರಾಗಿ…

Read More

ಪುರುಷರಕಟ್ಟೆ ಘಟನೆ: ಸಂತ್ರಸ್ತ ಯುವತಿಯ ಮನೆಗೆ ವಿಹೆಚ್‌ಪಿ ಭೇಟಿ, ನ್ಯಾಯಕ್ಕೆ ಆಗ್ರಹ

ಪುತ್ತೂರು ಪುರುಷರಕಟ್ಟೆ ಘಟನೆಯಿಂದ ಆತಂಕಕ್ಕೆ ಒಳಗಾಗಿರುವ ಹಿಂದೂ ಯುವತಿಯ ಮನೆಗೆ ವಿಶ್ವ ಹಿಂದೂ ಪರಿಷದ್ ಪ್ರಮುಖರು ಭೇಟಿ ನೀಡಿ, ಪೋಷಕರಿಗೆ ಧೈರ್ಯ ತುಂಬಿ ಸಾಂತ್ವನ ಹೇಳಲಾಯಿತು.ಸಾರ್ವಜನಿಕವಾಗಿ ಆಯುಧ ಪ್ರದರ್ಶಿಸಿ ಯುವತಿಯರಲ್ಲಿ ಪ್ರಾಣಭಯ ಉಂಟುಮಾಡಿದ ಘಟನೆಯನ್ನು ಕೇವಲ ‘ತಪ್ಪು ಗ್ರಹಿಕೆ’ ಎಂದು ಬಿಂಬಿಸಿ, ಆರೋಪಿಗಳನ್ನು ರಕ್ಷಿಸಲು ನಡೆಯುತ್ತಿರುವ ರಾಜಕೀಯ ಸಂಧಾನದ ಪ್ರಯತ್ನವು ಸರಿಯಲ್ಲ. ಈ ಘಟನೆಯ ಕುರಿತು ಪೊಲೀಸ್ ಇಲಾಖೆಯು ಯಾವುದೇ ರಾಜಕೀಯ ಒತ್ತಡಕ್ಕೆ ಮಣಿಯದೆ, ನ್ಯಾಯಯುತ ಹಾಗೂ ನಿಷ್ಪಕ್ಷಪಾತ ತನಿಖೆ ನಡೆಸಿ ನೊಂದ ಯುವತಿಗೆ ಸೂಕ್ತ ನ್ಯಾಯ…

Read More

ದ.ಕ.ಜಿಲ್ಲಾ ನೂತನ ಖಾಝಿಯಾಗಿ ಪಾಣಕ್ಕಾಡ್ ಸೈಯ್ಯದ್ ನಾಸರ್ ಅಬ್ದುಲ್ ಹಯ್ಯ ಶಿಹಾಬುದ್ದೀನ್ ತಂಙಳ್

ಮಂಗಳೂರು: ಅಲ್‌ಹಾಜ್ ತ್ವಾಖಾ ಅಹ್ಮದ್ ಮುಸ್ಲಿಯಾರ್‌ರ ನಿಧನದಿಂದಾಗಿ ತೆರವಾದ ದ.ಕ.ಜಿಲ್ಲಾ ಖಾಝಿ ಸ್ಥಾನಕ್ಕೆ ಪಾಣಕ್ಕಾಡ್ ಸೈಯ್ಯದ್ ನಾಸರ್ ಅಬ್ದುಲ್ ಹಯ್ಯ ಶಿಹಾಬುದ್ದೀನ್ ತಂಙಳ್ ಬಾ-ಅಲವಿ ಅವರನ್ನು ಆಯ್ಕೆ ಮಾಡಿರುವುದಾಗಿ ಮಂಗಳೂರಿನ ಝೀನತ್ ಬಕ್ಷ್ ಕೇಂದ್ರ ಜುಮಾ ಮಸೀದಿ ಮತ್ತು ಈದ್ಗಾ ಮಸೀದಿಯ ಆಡಳಿತ ಸಮಿತಿಯ ಅಧ್ಯಕ್ಷ ಯೆನೆಪೋಯ ಅಬ್ದುಲ್ಲಾ ಕುಂಞಿ ಶನಿವಾರ ಅಧಿಕೃತವಾಗಿ ಘೋಷಿಸಿದರು. ಕೇರಳದ ಹಿರಿಯ ಧಾರ್ಮಿಕ ವಿದ್ವಾಂಸರಾಗಿರುವ ಪಾಣಕ್ಕಾಡ್ ಸೈಯ್ಯದ್ ನಾಸರ್ ಅಬ್ದುಲ್ ಹಯ್ಯ ಶಿಹಾಬುದ್ದೀನ್ ತಂಙಳ್ ಕೆಲವು ದಿನಗಳ ಹಿಂದೆಯೇ ದ.ಕ.ಜಿಲ್ಲಾ ಖಾಝಿಯಾಗಿ…

Read More

ಜು. 16ರಂದು ಶ್ರೀ ಗೋಕರ್ಣನಾಥೇಶ್ವರ ಕಾಲೇಜಿನಲ್ಲಿ ಬೃಹತ್ ಉದ್ಯೋಗ ಮೇಳ – ‘ಸಮೃದ್ಧಿ CareerNxt-2026’

ಮಂಗಳೂರು:ಕರಾವಳಿ ಭಾಗದ ಯುವ ಸಮುದಾಯಕ್ಕೆ ಉದ್ಯೋಗಾವಕಾಶಗಳನ್ನು ಕಲ್ಪಿಸುವ ಉದ್ದೇಶದಿಂದ ನಗರದ ಗಾಂಧಿನಗರದಲ್ಲಿರುವ ಶ್ರೀ ಗೋಕರ್ಣನಾಥೇಶ್ವರ ಕಾಲೇಜು ತನ್ನ ಆಂತರಿಕ ಗುಣಮಟ್ಟ ಭರವಸೆ ಕೋಶ (IQAC) ಹಾಗೂ ಕೆನರಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ (KCCI), ಮಂಗಳೂರು ಸಹಯೋಗದಲ್ಲಿ ಜುಲೈ 16ರಂದು “ಸಮೃದ್ಧಿ CareerNxt-2026” ಬೃಹತ್ ಉದ್ಯೋಗ ಮೇಳವನ್ನು ಆಯೋಜಿಸಿದೆ ಎಂದು ಶ್ರೀ ಗೋಕರ್ಣನಾಥೇಶ್ವರ ಶಿಕ್ಷಣ ಸಂಸ್ಥೆಯ ಸಂಚಾಲಕ ನ್ಯಾಯವಾದಿ ವಸಂತ ಕಾರಂದೂರ್ ತಿಳಿಸಿದ್ದಾರೆ. ನಗರದ ಪತ್ರಿಕಾಭವನದಲ್ಲಿ ಸೋಮವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಳಗ್ಗೆ 10ರಿಂದ ಸಂಜೆ…

Read More

ಎಕ್ಕೂರು, ಪಡೀಲು ನಗರ ಆರೋಗ್ಯ ಕೇಂದ್ರಗಳಿಗೆ ಸಿಪಿಎಂ ಬಜಾಲ್ ವಿಭಾಗ ಸಮಿತಿ ನಿಯೋಗ ಭೇಟಿ

ಸರಕಾರಿ ಆಸ್ಪತ್ರೆಗಳನ್ನು ಖಾಸಗೀ ಜೊತೆ ಮಾಡಿರುವ ಕರಾರು ಒಪ್ಪಂದ ರದ್ದುಗೊಳಿಸಲು, ಸರಕಾರಿ ಆಸ್ಪತ್ರೆಗಳ ಬಲಪಡಿಸಲು, ಮೂಲಭೂತ ಸೌಕರ್ಯಗಳ ವ್ಯವಸ್ಥೆ ಕಲ್ಪಿಸಲು ಸಹಿತ ಹಲವು ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸಿಪಿಐಎಂ ಜಿಲ್ಲಾದ್ಯಂತ ಕರೆ ನೀಡಿರುವ ಹೋರಾಟದ ಭಾಗವಾಗಿ ಇಂದು ಸಿಪಿಐಎಂ ಬಜಾಲ್ ವಿಭಾಗ ಸಮಿತಿ ನಿಯೋಗವು ಇಂದು ಪಡೀಲು ಮತ್ತು ಎಕ್ಕೂರು ಪ್ರದೇಶದಲ್ಲಿರುವ ಎರಡು ನಗರ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡಿ ಅಲ್ಲಿನ ಸಮಸ್ಯೆಗಳ ಕುರಿತು ಪರಿಶೀಲಿಸಿದೆ. ಮಂಗಳೂರು ನಗರ ಪಾಲಿಕೆ ವ್ಯಾಪ್ತಿಗೆ ಒಳಪಡುವ ಬಜಾಲ್ , ಅಳಪೆ…

Read More
error: Content is protected !!