ಪುತ್ತೂರಿನಲ್ಲಿ 7 ತಿಂಗಳ ಗರ್ಭಿಣಿ ನೇಣಿಗೆ ಶರಣು

ಪುತ್ತೂರು: ಗರ್ಭಿಣಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುತ್ತೂರು ನಗರದ ಹೊರವಲಯದ ಚಿಕ್ಕಪುತ್ತೂರು ಎಂಬಲ್ಲಿ ರವಿವಾರ ತಡರಾತ್ರಿ ನಡೆದಿದೆ.ಚಿಕ್ಕಪುತ್ತೂರಿನ ನಿವಾಸಿ, ಚಿಂತನ್ ಎಂಬವರ ಪತ್ನಿ ರೇಷ್ಮಾ (28) ಆತ್ಮಹತ್ಯೆ ಮಾಡಿಕೊಂಡವರು. ರೇಷ್ಮಾ ಏಳು ತಿಂಗಳ ಗರ್ಭಿಣಿಯಾಗಿದ್ದರು. ಸುರತ್ಕಲ್ ಮೂಲದ ರೇಷ್ಮಾರನ್ನು ನಾಲ್ಕು ವರ್ಷಗಳ ಹಿಂದೆ ಚಿಕ್ಕಪುತ್ತೂರಿನ ಚಿಂತನ್ ಅವರಿಗೆ ವಿವಾಹ ಮಾಡಿಕೊಡಲಾಗಿತ್ತು. ಈ ದಂಪತಿಗೆ ಓರ್ವ ಪುತ್ರಿಯಿದ್ದಾಳೆ. ಚಿಂತನ್, ರೇಷ್ಮಾ ಮತ್ತು ಅವರ ಪುತ್ರಿ ಚಿಕ್ಕಪುತ್ತೂರಿನಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದರು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ….

Read More

ಮಂಗಳೂರು ವಿ.ವಿ ಯಲ್ಲಿ ಬಿ.ಎ ಪ್ರವಾಸೋಧ್ಯಮ ಮುಚ್ಚುಗಡೆ ಪುನರಾರಂಭಕ್ಕೆ ಉನ್ನತ ಶಿಕ್ಷಣ ಸಚಿವರಿಗೆ ಮನವಿ

ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದ ೨೦೨೫-೨೬ ಶೈಕ್ಷಣಿಕ ವರ್ಷದಲ್ಲಿ ಬಹುಬೇಡಿಕೆಯುಳ್ಳ ಪ್ರವಾಸೋಧ್ಯಮ ವಿಷಯವನ್ನೊಳಗೊಂಡ ಟ್ರಾವೆಲ್ & ಟೊರೀಸಮ್ ಮ್ಯಾನೇಜ್ಮೆಂಟ್ ಕೋರ್ಸ್ ನ್ನು ಸ್ಥಗಿತಗೊಳಿಸಿದ್ದು, ಇದನ್ನು ಮುಂದುವರಿಸುವಂತೆ ಕರ್ನಾಟಕ ಸರಕಾರದ ಉನ್ನತ ಸಚಿವ ಡಾ. ಎಂ ಸಿ ಸುಧಾಕರ್ ರವರಿಗೆ ಮನವಿಯನ್ನು ಸಲ್ಲಿಸಲಾಗಿದೆ. ೨೦೦೯ ಬಿಎ ಪದವಿಯಲ್ಲಿ ಐಚ್ಚಿಕ ವಿಷಯವಾಗಿ ಈ ಕೋರ್ಸ್ ಆರಂಬಿಸಲಾಗಿತ್ತು. ಈ ವಿಷ್ಯದಲ್ಲಿ ಪದವಿ ಮಾಡಿದವರು ಉನ್ನತ ವ್ಯಾಸಂಗ ಹಾಗೂ ಕೆಲವು ಪ್ರತಿಷ್ಠಿತ ಸಂಸ್ಥೆಗಳಲ್ಲಿ ಉದ್ಯೋಗ ಮಾಡುತ್ತಿದ್ದಾರೆ. ಪ್ರವಾಸೋದ್ಯಮ ಉದ್ದಿಮೆ ಅತೀ ವೇಗವಾಗಿ ಬೆಳೆಯುತ್ತಿರುವ ಉದ್ಯೋಮವಾಗಿದ್ದು…

Read More

ಅನಾರೋಗ್ಯದಿಂದ ಬಳಲುತ್ತಿದ್ದ ವ್ಯಕ್ತಿಗಳಿಗೆ ನೆರವು,ಜೊತೆಗೆ ಯೋಗಕ್ಷೇಮ ವಿಚಾರಿಸಿದ ಲಂಚುಲಾಲ್ ಕೆ.ಎಸ್

ಸ್ವಾರ್ಥ ಹೆಚ್ಚುತ್ತಿರುವ ಮತ್ತು ಮಾನವೀಯತೆ ಮರೆಯಲಾಗುತ್ತಿರುವ ಕಾಲದಲ್ಲಿ, ಶಿಕ್ಷಣ ಬಯಸುವ ಮಗುವಿಗೆ ಶಿಕ್ಷಣ, ಕಂಕಣ ಕೂಡಿ ಬಂದಿರುವ ಮನೆಮಗಳಿಗೆ ಮದುವೆ, ಆರೋಗ್ಯದ ಸಮಸ್ಯೆಗಳನ್ನು ಹೊಂದಿರುವವನಿಗೆ ಚಿಕಿತ್ಸೆ ಇಂತಹ ಅನೇಕ ಮಹತ್ಕಾರ್ಯಗಳನ್ನು ಯಾವುದೇ ಪಲಾಷೇಕ್ಷೆಯಿಲ್ಲದೆ ನಿಸ್ವಾರ್ಥವಾಗಿ ಮಾಡಿಕೊಂದು ಬಂದವರು ಶ್ರೀ ಲಂಚುಲಾಲ್ ಕೆ.ಎಸ್‌. ಅನಾರೋಗ್ಯದಿಂದ ಬಳಲುತ್ತಿದ್ದ ವ್ಯಕ್ತಿಗಳಿಗೆ ಕೇವಲ ಚಿಕಿತ್ಸೆ ವೆಚ್ಚಮಾತ್ರವಲ್ಲದೆ ಅವರ ಯೋಗಕ್ಷೇಮ ವಿಚಾರಿಸಲು ಆಸ್ಪತ್ರೆಗೆ ಭೇಟಿ ಮಾಡುವುದು – ಜನರ ಗಮನ ಸೆಳೆಯಲು ಅಲ್ಲ, ಪ್ರಶಂಸೆಗಾಗಿ ಅಲ್ಲ, ಅದು ಅವರ ಹೃದಯದಿಂದ ಬಂದ ಕಾಳಜಿ.ಅವರು ಮಾಡಿದ…

Read More

ಕನ್ನಡ ಭಾಷೆಗೆ ಅಪಮಾನ ಕಮಲ್ ಹಾಸನ್ ಗೆ ಚಾಟಿ ಬೀಸಿದ ಕರ್ನಾಟಕ ಹೈಕೋರ್ಟ್

ನೀವು ಇತಿಹಾಸಗಾರರೇ ? ಸಂಶೋದಕರೇ ? ಕಮಲ್ ಗೆ ಪ್ರಶ್ನೆ ಹಾಕಿದ ಹೈಕೋರ್ಟ್ ಇತ್ತೀಚಿಗೆ ಕಾರ್ಯಕ್ರಮವೊಂದರಲ್ಲಿ ಕನ್ನಡ ಭಾಷೆಯ ಬಗ್ಗೆ ಹಗುರವಾಗಿ ಮಾತನಾಡಿ ಕನ್ನಡಿಗರ ಆಕ್ರೋಶಕ್ಕೆ ಕಾರಣರಾದ ಚಿತ್ರನಟ ಕಮಲ್ ಹಾಸನ್ ಗೆ ಕರ್ನಾಟಕ ಉಚ್ಚ ನ್ಯಾಯಾಲಯ ಸರಿಯಾದ ಚಾಟಿ ಬೀಸಿದೆ. ಕನ್ನಡ ಭಾಷೆ ತಮಿಳು ಭಾಷೆಯಿಂದ ಹುಟ್ಟಿದೆ ಎಂಬ ವಿವಾದಾತ್ಮಕ ಹೇಳಿಕೆ ನೀಡಿದ ನಂತರ ಕನ್ನಡ ಪರ ಸಂಘಟನೆಗಳ ಸಹಿತ ಕೋಟ್ಯಂತರ ಕನ್ನಡಿಗರು ಬಹಿರಂಗ ಕ್ಷಮೆ ಕೇಳಲು ಕಮಲ್ ಗೆ ಹೇಳಿದರೂ ನಾನು ಕ್ಷಮೆ ಕೇಳುವ…

Read More

ಅಬ್ದುಲ್ ರಹೀಮ್ ಕೊಲೆ ಪ್ರಕರಣ ಮೂವರು ಆರೋಪಿಗಳು ಪೋಲೀಸರ ಬಲೆಗೆ

ಮಂಜೇಶ್ವರ: ಬಂಟ್ವಾಳ ಗ್ರಾಮಾಂತರ ಪೊಲೀಸ್‌ ಠಾಣಾವ್ಯಾಪ್ತಿಯ ಕುರಿಯಾಳ ಗ್ರಾಮದ ಈರಾಕೋಡಿ ಎಂಬಲ್ಲಿ ನಡೆದ ಅಬ್ದುಲ್ ರಹ್ಮಾನ್ ಎಂಬವರ ಕೊಲೆ ಮತ್ತು ಅವರ ಜೊತೆಯಿದ್ದ ಕಲಂದರ್ ಶಾಫಿಯ ಕೊಲೆಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಶುಕ್ರವಾರ ಮತ್ತೆ ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ. ತೆಂಕಬೆಳ್ಳುರು ಗ್ರಾಮದ ಸುಮಿತ್ ಆಚಾರ್ಯ (27), ಹಾಗೂ ಬಡಗಬೆಳ್ಳೂರು ಗ್ರಾಮದ ರವಿರಾಜ್ (23)ನನ್ನು ವಶಕ್ಕೆ ಪಡೆದಿರುವ ಪೊಲೀಸರು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಮೂವರು ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದ್ದು,ತನಿಖೆ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Read More

ದೇರಳಕಟ್ಟೆ : ಮನೆ ಮೇಲೆ ಬಿದ್ದ ತಡೆಗೋಡೆ – ಬಾಲಕಿ ಮೃತ್ಯು

ದೇರಳಕಟ್ಟೆ, ಮೇ. 30 (namma media24x7): ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ವಿಪರೀತ ಮಳೆಗೆ ತಡೆಗೋಡೆ ಕುಸಿದುಬಿದ್ದು ಬಾಲಕಿಯೊಬ್ಬಳು ಮೃತಪಟ್ಟ ಘಟನೆ ದೇರಳಕಟ್ಟೆ ಸಮೀಪದ ಬೆಳ್ಮ ಗ್ರಾಮದ ಕಾನಕರೆ ಎಂಬಲ್ಲಿ ನಡೆದಿದೆ. ಮೃತ ಮಗುವನ್ನು ನೌಶಾದ್ ರ ಪುತ್ರಿ ಫಾತಿಮ ನಈಮ (10) ಎಂದು ಗುರುತಿಸಲಾಗಿದೆ. ಕಾನಕರೆಯಲ್ಲಿರುವ ನೌಶಾದ್ ಅವರ ಮನೆಗೆ ಹಿಂಬದಿಯ ಗುಡ್ಡೆ, ತಡೆಗೋಡೆ ಕುಸಿದು ಬಿದ್ದಿದ್ದು, ಮನೆಯ ಕೊಠಡಿ ಯ ಕಿಟಕಿ ಮಗುವಿನ ಮೇಲೆ ಬಿದ್ದು ಈ ದುರಂತ ಸಂಭವಿಸಿದೆ. ಘಟನೆ ನಡೆದ ಕೂಡಲೇ ಮಗುವನ್ನು…

Read More

ಅಬ್ದುಲ್ ರಹೀಂ ಕೊಲೆ ಪ್ರಕರಣ -ದೀಪಕ್ ಸಹಿತ ಮೂವರು ಪೊಲೀಸರ ವಶಕ್ಕೆ

ಬಂಟ್ವಾಳ ತಾಲೂಕಿನ ಕಲ್ಪನೆಯ ಕಾಗುಡ್ಡೆ ಎಂಬಲ್ಲಿ ಅಬ್ದುಲ್ ರಹೀಂ ಅವರನ್ನು ಕೊಲೆಗೈದ‌ ಪ್ರಕರಣದಲ್ಲಿ ದೀಪಕ್ ಸಹಿತ ಮೂವರನ್ನು ಪೊಲೀಸರು ವಶಕ್ಕೆ ಪಡೆದಿರುವುದಾಗಿ ತಿಳಿದು ಬಂದಿದೆ. ಕೊಲೆ ಕೃತ್ಯದಲ್ಲಿ ಸುಮಾರು 15 ಮಂದಿ ಭಾಗಿಯಾಗಿದ್ದಾರೆ ಎನ್ನಲಾಗುತ್ತಿದ್ದು, ಕೃತ್ಯ ನಡೆದ ಬಳಿಕ ಆರೋಪಿಗಳು ಪರಾರಿಯಾಗಿದ್ದಾರೆ. ಆ ಪೈಕಿ ಮೂವರನ್ನು ಪೊಲೀಸರು ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.

Read More

ಪತ್ನಿಯ ಸೀಮಂತದ ದಿನವೇ ಕುಸಿದು ಬಿದ್ದು ಪತಿ ಸಾವು..!!

ವಿಟ್ಲ: ಪತ್ನಿಯ ಸೀಮಂತದ ದಿನವೇ ಕುಸಿದು ಬಿದ್ದು ಪತಿ ಸಾವನ್ನಪ್ಪಿದ ಹೃದಯವಿದ್ರಾವಕ ಘಟನೆ ಕನ್ಯಾನದಲ್ಲಿ ನಡೆದಿದೆ. ಕನ್ಯಾನ ಮಿತ್ತನಡ್ಕ ನಿವಾಸಿ ಪಿಕಪ್ ಚಾಲಕ ಸತೀಶ್ (33) ಮೃತ ವ್ಯಕ್ತಿ.ಪತ್ನಿಯ ಸೀಮಂತದ ದಿನ ಕುಸಿದು ಬಿದ್ದ ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಯಿತು ಬಳಿಕಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅವರು ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.ಮೃತರು ತಂದೆ, ತಾಯಿ, ಪತ್ನಿ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ. ಸೀಮಂತದ ಸಂಭ್ರದಲ್ಲಿ ಕುಟುಂಬದಲ್ಲಿ ಈಗ ಆಕ್ರಂದನ ಮುಗಿಲು…

Read More

ಮಂಗಳೂರು ವಿಶ್ವವಿದ್ಯಾಲಯ ಯಕ್ಷ ಮಂಗಳ ಪ್ರಶಸ್ತಿಗೆ ಡಾ. ರಮಾನಂದ ಬನಾರಿ, ಪ್ರೊಫೆಸರ್ ಎಂಎಲ್ ಸಾಮಗ, ಸಿದಕಟ್ಟೆ ಸದಾಶಿವ ಶೆಟ್ಟಿಗಾರ್ ಗೆ. ಅಶೋಕ ಹಾಸ್ಯಗಾರರ ದಶರೂಪಕಗಳ ದಶಾವತಾರ ಗ್ರಂಥಕ್ಕೆ ಅತ್ಯುತ್ತಮ ಕೃತಿ ಪ್ರಶಸ್ತಿ.

ಮಂಗಳೂರು ವಿಶ್ವವಿದ್ಯಾನಿಲಯದ ಡಾ. ಬಿ ದಯಾನಂದ ಪೈ ಮತ್ತು ಶ್ರೀ ಪಿ ಸತೀಶ್ ಪೈ ಯಕ್ಷಗಾನ ಅಧ್ಯಯನ ಕೇಂದ್ರದ 2023 24 ನೇ ಸಾಲಿನ ಯಕ್ಷಮಂಗಲ ಪ್ರಶಸ್ತಿಗೆ ಯಕ್ಷಗಾನ ರಂಗದ ಹಿರಿಯ ಅರ್ಥದಾರಿ ಲೇಖಕ, ಸಾಹಿತಿ ರಮಾನಂದ ಬನಾರಿ, ಹಿರಿಯ ಯಕ್ಷಗಾನ ಕಲಾವಿದ ವಿದ್ವಾಂಸ ಪ್ರೊಫೆಸರ್ ಎಂಎಲ್ ಸಾಮಗ, ಹಿರಿಯ ಬಣ್ಣದ ವೇಷ ದಾರಿ ಸದಾಶಿವ ಶೆಟ್ಟಿ ಸಿದ್ದಕಟ್ಟೆ ಅವರು ಆಯ್ಕೆಯಾಗಿದ್ದಾರೆ ಹಿರಿಯ ಜಾನಪದ ವಿದ್ವಾಂಸರಾದ ಪ್ರೂ. ಚನ್ನಪ್ಪ ಗೌಡ ಅವರ ಅಧ್ಯಕ್ಷತೆಯಲ್ಲಿ ಪ್ರೊ. ಪಾದೆ ಕಲ್ಲು…

Read More

ಪಂಜಾಬ್‌ನಲ್ಲಿ ಧರ್ಮಸ್ಥಳ ಯುವತಿ ಸಾವಿಗೆ ಕಾರಣವಾದ ಆರೋಪಿಯ ಬಂಧನ: ದೆಹಲಿಗೆ ಮೃತದೇಹ ರವಾನೆ

ಧರ್ಮಸ್ಥಳ ಗ್ರಾಮದ ಬೊಳಿಯರ್ ನಿವಾಸಿ ಆಕಾಂಕ್ಷ ಎಸ್ ನಾಯರ್(22) ಆತ್ಮಹತ್ಯೆ ಪ್ರಕರಣ ಸಂಬಂಧ ಆರೋಪಿ ಪ್ರೊಫೆಸರ್ ಕೇರಳ ಮೂಲದ ಬಿಜಿಲ್ ಸಿ ಮ್ಯಾಥ್ಯೂ ಎಂಬಾತನನ್ನು ಮೇ.19 ರಂದು ರಾತ್ರಿ ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಆಂಬುಲೆನ್ಸ್ ಮೂಲಕ ದೆಹಲಿ ವಿಮಾನ ನಿಲ್ದಾಣಕ್ಕೆ ರಾತ್ರಿ 2 ಗಂಟೆಗೆ ತೆಗೆದುಕೊಂಡು ಬಂದಿದ್ದಾರೆ. ಧರ್ಮಸ್ಥಳ ಗ್ರಾಮದ ಬೊಳಿಯರ್ ನಿವಾಸಿ ಸುರೇಂದ್ರ ನಾಯರ್ ಮತ್ತು ಸಿಂಧೂ ದೇವಿ ದಂಪತಿಗಳ ಎರಡನೇ ಪುತ್ರಿ ಏರೋಸ್ಪೇಸ್ ಇಂಜಿನಿಯರ್ ಆಗಿ ಡೆಲ್ಲಿಯಲ್ಲಿ ಉದ್ಯೋಗಿಯಾಗಿದ್ದ ಆಕಾಂಕ್ಷ ಎಸ್ ನಾಯರ್(22) ಆತ್ಮಹತ್ಯೆ…

Read More
error: Content is protected !!