ಗೋಮಾತೆಗೆ ರಾಷ್ಟ್ರಮಾತೆ ಸ್ಥಾನಮಾನಕ್ಕೆ ಆಗ್ರಹ: ಜು.27ರಂದು ಉಡುಪಿ ಜಿಲ್ಲಾಧಿಕಾರಿಗೆ ಮನವಿ
ಉಡುಪಿ: ಗೋಮಾತೆಗೆ ರಾಷ್ಟ್ರಮಾತೆ, ರಾಷ್ಟ್ರೀಯ ದೇವತೆ, ರಾಷ್ಟ್ರೀಯ ಪರಂಪರೆ ಹಾಗೂ ರಾಷ್ಟ್ರೀಯ ಗೌರವದ ಸ್ಥಾನಮಾನ ನೀಡಬೇಕು. ಗೋಸೇವೆಗಾಗಿ ಕೇಂದ್ರ ಕಾನೂನು ಜಾರಿಗೊಳಿಸಿ, ದೇಶಾದ್ಯಂತ ಗೋಹತ್ಯೆಯನ್ನು ಸಂಪೂರ್ಣವಾಗಿ ನಿಷೇಧಿಸಬೇಕು ಎಂದು ಆಗ್ರಹಿಸಿ ರಾಷ್ಟ್ರಮಟ್ಟದ ನಾಲ್ಕು ಹಂತದ ‘ಗೋ ಸಮ್ಮಾನ್ ಆಹ್ವಾನ ಅಭಿಯಾನ’ ಹಮ್ಮಿಕೊಳ್ಳಲಾಗಿದೆ ಎಂದು ಶಂಕರಪುರದ ದ್ವಾರಕಾಮಾಯಿ ಮಠದ ಶ್ರೀ ಶ್ರೀ ಸಾಯಿ ಈಶ್ವರ್ ಗುರೂಜಿ ತಿಳಿಸಿದರು. ಉಡುಪಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶದಾದ್ಯಂತ ಆಚಾರ್ಯರು, ಸಾಧು–ಸಂತರು, ಗೋಸೇವಾ ಸಂಸ್ಥೆಗಳು, ಗೋಪಾಲಕರು ಹಾಗೂ ಗೋಭಕ್ತರ ಸಹಭಾಗಿತ್ವದಲ್ಲಿ ಈ…
