ಜು. 16ರಂದು ಮಂಗಳೂರಿನಲ್ಲಿ ಇಸ್ಕಾನ್ ವತಿಯಿಂದ ಶ್ರೀ ಜಗನ್ನಾಥ ರಥಯಾತ್ರೆ …. !
ಮಂಗಳೂರು:ವಿಶ್ವಪ್ರಸಿದ್ಧ ಶ್ರೀ ಜಗನ್ನಾಥ ರಥಯಾತ್ರೆ ಉತ್ಸವದ ಅಂಗವಾಗಿ ಮಂಗಳೂರಿನ ಕುಡುಪು ಕಟ್ಟೆಯ ಇಸ್ಕಾನ್ ಶ್ರೀ ಜಗನ್ನಾಥ ಮಂದಿರದ ಆಶ್ರಯದಲ್ಲಿ ಜುಲೈ 16ರಂದು (ಗುರುವಾರ) ಶ್ರೀ ಜಗನ್ನಾಥ ರಥಯಾತ್ರೆ ವಿಜೃಂಭಣೆಯಿಂದ ನಡೆಯಲಿದೆ ಎಂದು ದೇವಸ್ಥಾನದ ಆಡಳಿತ ಮಂಡಳಿ ಸದಸ್ಯ ಪ್ರೇಮ ಭಕ್ತಿ ದಾಸ್ ತಿಳಿಸಿದರು. ನಗರದಲ್ಲಿ ಸೋಮವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇಸ್ಕಾನ್ ಸಂಸ್ಥಾಪಕ ಆಚಾರ್ಯರಾದ ಶ್ರೀಲ ಪ್ರಭುಪಾದರ ಪ್ರೇರಣೆಯಿಂದ ವಿಶ್ವದ ನ್ಯೂಯಾರ್ಕ್, ಲಂಡನ್, ಮಾಂಟ್ರಿಯಲ್, ಲಾಸ್ ಏಂಜಲೀಸ್, ಮೆಲ್ಬೋರ್ನ್ ಸೇರಿದಂತೆ ಭಾರತದ ನವದೆಹಲಿ, ಮುಂಬೈ, ಕೋಲ್ಕತ್ತಾ,…
