ಜು. 16ರಂದು ಮಂಗಳೂರಿನಲ್ಲಿ ಇಸ್ಕಾನ್ ವತಿಯಿಂದ ಶ್ರೀ ಜಗನ್ನಾಥ ರಥಯಾತ್ರೆ …. !

ಮಂಗಳೂರು:ವಿಶ್ವಪ್ರಸಿದ್ಧ ಶ್ರೀ ಜಗನ್ನಾಥ ರಥಯಾತ್ರೆ ಉತ್ಸವದ ಅಂಗವಾಗಿ ಮಂಗಳೂರಿನ ಕುಡುಪು ಕಟ್ಟೆಯ ಇಸ್ಕಾನ್ ಶ್ರೀ ಜಗನ್ನಾಥ ಮಂದಿರದ ಆಶ್ರಯದಲ್ಲಿ ಜುಲೈ 16ರಂದು (ಗುರುವಾರ) ಶ್ರೀ ಜಗನ್ನಾಥ ರಥಯಾತ್ರೆ ವಿಜೃಂಭಣೆಯಿಂದ ನಡೆಯಲಿದೆ ಎಂದು ದೇವಸ್ಥಾನದ ಆಡಳಿತ ಮಂಡಳಿ ಸದಸ್ಯ ಪ್ರೇಮ ಭಕ್ತಿ ದಾಸ್ ತಿಳಿಸಿದರು. ನಗರದಲ್ಲಿ ಸೋಮವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇಸ್ಕಾನ್ ಸಂಸ್ಥಾಪಕ ಆಚಾರ್ಯರಾದ ಶ್ರೀಲ ಪ್ರಭುಪಾದರ ಪ್ರೇರಣೆಯಿಂದ ವಿಶ್ವದ ನ್ಯೂಯಾರ್ಕ್, ಲಂಡನ್, ಮಾಂಟ್ರಿಯಲ್, ಲಾಸ್ ಏಂಜಲೀಸ್, ಮೆಲ್ಬೋರ್ನ್ ಸೇರಿದಂತೆ ಭಾರತದ ನವದೆಹಲಿ, ಮುಂಬೈ, ಕೋಲ್ಕತ್ತಾ,…

Read More

ಚಿತ್ರದುರ್ಗದ ಭೋವಿ ಗುರುಪೀಠದಲ್ಲಿ ಜುಲೈ 18 ರಂದು ಅರ್ಥಪೂರ್ಣ “ಭೋವಿ ಜನೋತ್ಸವ”

​ಚಿತ್ರದುರ್ಗ:ನಗರದ ಹೊರವಲಯದಲ್ಲಿರುವ ಭೋವಿ ಗುರುಪೀಠದ ಆವರಣದಲ್ಲಿ ಶ್ರೀ ಜಗದ್ಗುರು ಸಿದ್ದರಾಮೇಶ್ವರ ಮಹಾಸಂಸ್ಥಾನ, ಭೋವಿ ಗುರುಪೀಠದ ಜಗದ್ಗುರು ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿರವರ 17ನೇ ಪಟ್ಟಾಭಿಷೇಕ ಮಹೋತ್ಸವ, 28ನೇ ಲಾಂಛನ ದೀಕ್ಷಾ ಮಹೋತ್ಸವ, 40ನೇ ಜನ್ಮ ವರ್ಧಂತ್ಯೋತ್ಸವದ ನಿಮಿತ್ತ ಪ್ರತಿ ವರ್ಷದಂತೆ ಈ ವರ್ಷವೂ ಜುಲೈ 18 ರಂದು ಬೃಹತ್ ಮಟ್ಟದಲ್ಲಿ “ರಾಷ್ಟ್ರೀಯ ಭೋವಿ ಜನೋತ್ಸವ” ನಡೆಯಲಿದೆ. ಭೋವಿ ಜನಾಂಗದ ಧಾರ್ಮಿಕ, ಸಾಂಸ್ಕೃತಿಕ ಹಾಗೂ ಸಾಮಾಜಿಕ ಸಂಭ್ರಮದ ಆಚರಣೆಯಾದ ಈ ಉತ್ಸವಕ್ಕೆ ಸಂಘಟನೆ ಭರದಿಂದ ಸಾಗುತ್ತಿವೆ. ​ಈ ಬಾರಿಯ…

Read More

“ಸಾಮಾಜಿಕ ಜಾಲತಾಣಕ್ಕಿಂತ ಪುಸ್ತಕ ಓದಿನ ಸಂಸ್ಕೃತಿ ಬೆಳೆಸೋಣ: ದಯಾನಂದ ರೈ ಕಳ್ವಾಜೆ”

” ಸಾಮಾಜಿಕ ಜಾಲತಾಣದ ಓದಿಗಿಂತ ಯಥಾರ್ಥ ಪುಸ್ತಕಗಳನ್ನು ಕೈಗೆತ್ತಿಕೊಂಡು ಓದ ಬೇಕು.ಕವಿ ಕಯ್ಯಾರರಂತಹ ಮೇರು ವ್ಯಕ್ತಿತ್ವವನ್ನು ಅಧ್ಯಯನ ಮಾಡಬೇಕು.ಸರ್ವಕಾಲಕ್ಕು ಅನ್ವಯವಾಗುವ ಭಾಷಾ ಶೈಲಿ , ಪದ ಜೋಡಣೆ , ಜೀವನ ಸಂದೇಶಗಳು ಅವರ ಸಾಹಿತ್ಯ ಕೃತಿಗಳಲ್ಲಿ ಹೇರಳವಾಗಿದೆ.ಅವರದ್ದು ಕಾವ್ಯದ ರಸದಡುಗೆ.ಕನ್ನಡ , ತುಳು ಭಾಷೆಯಲ್ಲಿ ಅವರ ಪಾಂಡಿತ್ಯ ನಮಗೆಲ್ಲ ಸ್ಫೂರ್ತಿದಾಯಕ.ಹೆಸರಿನಲ್ಲಿ ಕಿಂಞಣ್ಣ ಎಂದಿದ್ದರೂ ಕನ್ನಡಿಗರಾದ ನಮಗೆ ಅವರು ದೊಡ್ಡಣ್ಣನಂತೆ ” ಎಂಬುದಾಗಿ ಕವಿ ಸಾಹಿತಿ ಶ್ರೀ ದಯಾನಂದ ರೈ ಕಳ್ವಾಜೆ ಏತಡ್ಕದ ಕುಂಬ್ಡಾಜೆ ಗ್ರಾಮ ಸೇವಾ ಸಂಘ…

Read More

ಜೋಡಿಗಳಿಗಾಗಿ ವಿಶೇಷ ರೀಲ್ಸ್ ಸ್ಪರ್ಧೆ ಆಯೋಜನೆ

ತುಳುನಾಡು ಜವನೆರ್ ಬೆಂಗಳೂರು (ರಿ) ವತಿಯಿಂದ ‘ಐಸಿರದ ಜೋಡಿ’ ಹೆಸರಿನ ವಿಶೇಷ ರೀಲ್ಸ್ ಸ್ಪರ್ಧೆಯನ್ನು ಆಯೋಜಿಸಲಾಗಿದೆ. ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಪ್ರಾಯೋಜಕತ್ವದಲ್ಲಿ ನಡೆಯುತ್ತಿರುವ ಈ ಸ್ಪರ್ಧೆ, ತುಳುನಾಡಿನ ವಿವಿಧ ಜೋಡಿಗಳಿಗೆ ತಮ್ಮ ಪ್ರತಿಭೆ ಪ್ರದರ್ಶಿಸಲು ವೇದಿಕೆಯನ್ನು ಒದಗಿಸಿದೆ. ಗಂಡ-ಹೆಂಡತಿ, ಅಣ್ಣ-ತಂಗಿ, ತಂದೆ-ಮಗಳು, ತಾಯಿ-ಮಗ, ಗೆಳೆಯ-ಗೆಳತಿ ಸೇರಿದಂತೆ ಯಾವುದೇ ಜೋಡಿಗಳು ಈ ಸ್ಪರ್ಧೆಯಲ್ಲಿ ಭಾಗವಹಿಸಬಹುದಾಗಿದೆ. ಸ್ಪರ್ಧಾಳುಗಳು ತಮ್ಮದೇ ಆದ ಸೃಜನಶೀಲತೆಯೊಂದಿಗೆ ರೀಲ್ಸ್ ವಿಡಿಯೋ ಸಿದ್ಧಪಡಿಸಿ ಕಳುಹಿಸುವ ಮೂಲಕ ಸ್ಪರ್ಧೆಯಲ್ಲಿ ಪಾಲ್ಗೊಳ್ಳಬಹುದು ಎಂದು ಸಂಘಟಕರು ತಿಳಿಸಿದ್ದಾರೆ. ಆಕರ್ಷಕ ಬಹುಮಾನಗಳು…

Read More

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ: ನಾಲ್ಕು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳ ಬಂಧನ

ಮಂಗಳೂರು: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ತನಿಖೆಯಲ್ಲಿ ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ಮಹತ್ವದ ಯಶಸ್ಸು ಸಾಧಿಸಿದ್ದು, ಕಳೆದ ನಾಲ್ಕು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿದೆ. ಬೆಳ್ತಂಗಡಿ ತಾಲೂಕಿನ ಪಡಂಗಡಿ ಗ್ರಾಮದ ಪೊಯ್ಕೆಗುಡ್ಡೆ ನಿವಾಸಿ ನೌಶಾದ್ (32) ಅವರನ್ನು ಬೆಂಗಳೂರಿನಲ್ಲಿ ಹಾಗೂ ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಚೌಡ್ಲಿ ಕಾನ್ವೆಂಟ್ ರೋಡ್ ನಿವಾಸಿ ಅಬ್ದುಲ್ ನಾಸಿರ್ (41) ಅವರನ್ನು ಕೇರಳದ ಕೊಚ್ಚಿಯಲ್ಲಿ ಎನ್‌ಐಎ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಕೊಲೆ ಕೃತ್ಯ ಎಸಗಿದ್ದ…

Read More

ನೇತ್ರಾವತಿ ಲಯನ್ಸ್ ಕ್ಲಬ್‌ಗೆ ನೂತನ ಸಾರಥ್ಯ: ಪದಗ್ರಹಣದೊಂದಿಗೆ ₹3.5 ಲಕ್ಷ ಸೇವಾಕಾರ್ಯಗಳ ಹಸ್ತಾಂತರ

ಮಂಗಳೂರು: ನೇತ್ರಾವತಿ ಲಯನ್ಸ್ ಕ್ಲಬ್‌ನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಜುಲೈ 6ರಂದು ಮಲ್ಲಿಕಟ್ಟೆಯ ಲಯನ್ಸ್ ಸೇವಾ ಮಂದಿರದಲ್ಲಿ ಜಿಲ್ಲಾ ಮಾಜಿ ಗವರ್ನರ್ (PDG) ಸಂಜಿತ್ ಶೆಟ್ಟಿ ಅವರ ನೇತೃತ್ವದಲ್ಲಿ ನೆರವೇರಿತು. ಸಮಾರಂಭದಲ್ಲಿ ಡಾ. ವಿದ್ಯಾಧರಿ ಶೆಟ್ಟಿ ಅಧ್ಯಕ್ಷೆಯಾಗಿ, ಲಯನ್ ಶೋಭಾ ಸುಬ್ರಮಣ್ಯ ಕಾರ್ಯದರ್ಶಿಯಾಗಿ ಹಾಗೂ ಲಯನ್ ಸುಪಲಾ ಗೋಪಾಲ್ ಖಜಾಂಜಿಯಾಗಿ ಅಧಿಕಾರ ಸ್ವೀಕರಿಸಿದರು. ಕಾರ್ಯಕ್ರಮದ ಅಂಗವಾಗಿ ನೂತನ ಅಧ್ಯಕ್ಷೆ ಡಾ. ವಿದ್ಯಾಧರಿ ಶೆಟ್ಟಿ ಅವರು ಫಲಾನುಭವಿಗಳಿಗೆ ಕೃತಕ ಕಾಲುಗಳನ್ನು ಹಸ್ತಾಂತರಿಸಿದರು. ಜೊತೆಗೆ ಸುಮಾರು ₹3.5 ಲಕ್ಷ…

Read More

ಪಡೀಲ್ ರೈಲು ನಿಲ್ದಾಣಕ್ಕೆ ಪಂಚಗಂಗಾ ಎಕ್ಸ್‌ಪ್ರೆಸ್ ನಿಲುಗಡೆ ನೀಡಿ; ಸ್ಥಳೀಯರ ದಶಕಗಳ ಬೇಡಿಕೆಗೆ ನ್ಯಾಯ ಒದಗಿಸಿ: ಎಂಎಲ್‌ಸಿ ಪಿ.ವಿ. ಮೋಹನ್

ಮಂಗಳೂರು: ಮಂಗಳೂರು ನಗರಕ್ಕೆ ರೈಲು ಸಂಪರ್ಕ ಆರಂಭವಾಗಿ ಸುಮಾರು 120 ವರ್ಷಗಳು ಕಳೆದಿವೆ. ದಕ್ಷಿಣ ಭಾರತದ ಪ್ರಮುಖ ರೈಲು ಕೇಂದ್ರಗಳಲ್ಲಿ ಒಂದಾದ ಮಂಗಳೂರು, ಕರಾವಳಿ ಕರ್ನಾಟಕದ ಆರ್ಥಿಕ, ಶೈಕ್ಷಣಿಕ ಹಾಗೂ ವಾಣಿಜ್ಯ ಬೆಳವಣಿಗೆಗೆ ಮಹತ್ತರ ಕೊಡುಗೆ ನೀಡಿದೆ. ಮಂಗಳೂರು ಸೆಂಟ್ರಲ್ ಮತ್ತು ಮಂಗಳೂರು ಜಂಕ್ಷನ್ (ಕಂಕನಾಡಿ) ನಿಲ್ದಾಣಗಳು ಲಕ್ಷಾಂತರ ಜನರ ದೈನಂದಿನ ಬದುಕಿನ ಅವಿಭಾಜ್ಯ ಅಂಗಗಳಾಗಿವೆ. ಮಂಗಳೂರು ಜಂಕ್ಷನ್ ಸ್ಥಾಪನೆಯಾಗಿದ್ದಾಗಲೇ ಪಡೀಲ್ ಪ್ರದೇಶದ ಜನರಿಗೆ ಅನುಕೂಲವಾಗುವ ಉದ್ದೇಶದಿಂದ ಪಡೀಲ್ ರೈಲು ನಿಲ್ದಾಣವನ್ನು ನಿರ್ಮಿಸಲಾಗಿತ್ತು. ಆದರೆ ಹಲವು ದಶಕಗಳು…

Read More

ಮಂಗಳೂರಿನಲ್ಲಿ ‘Mangalore IAS’ ಶುಭಾರಂಭ: ನಾಗರಿಕ ಸೇವಾ ಕನಸಿಗೆ ಹೊಸ ವೇದಿಕೆ

ಮಂಗಳೂರು: ನಾಗರಿಕ ಸೇವೆಗಳ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಗುಣಮಟ್ಟದ ತರಬೇತಿ ನೀಡುವ ಉದ್ದೇಶದಿಂದ ಆರಂಭಗೊಂಡಿರುವ ‘Mangalore IAS – A School for Civil Services’ ಸಂಸ್ಥೆಯ ಉದ್ಘಾಟನಾ ಸಮಾರಂಭ ಸೋಮವಾರ ಬೆಳಿಗ್ಗೆ ಮಂಗಳೂರಿನ ಸಂದೇಶ ಫೌಂಡೇಶನ್ ಆವರಣದಲ್ಲಿ ವಿಜೃಂಭಣೆಯಿಂದ ನಡೆಯಿತು. ಬಳ್ಳಾರಿ ಧರ್ಮಪ್ರಾಂತ್ಯದ ಬಿಷಪ್ ಹಾಗೂ ಸಂದೇಶ ಫೌಂಡೇಶನ್ ಅಧ್ಯಕ್ಷರಾದ ಅತೀ ವಂದನೀಯ ಡಾ. ಹೆನ್ರಿ ಡಿಸೋಜಾ ಅವರು ರಿಬ್ಬನ್ ಕತ್ತರಿಸುವ ಮೂಲಕ ಸಂಸ್ಥೆಯನ್ನು ಉದ್ಘಾಟಿಸಿ ಆಶೀರ್ವದಿಸಿದರು. ಬಳಿಕ ರಾಮಕೃಷ್ಣ ಮಠದ ಸ್ವಾಮಿ ಯುಗಾನಂದ ಅವರು ದೀಪ…

Read More

ಭಾರತದ ಸಂತ ಪರಂಪರೆಯ ಅರಿವು ಯುವಜನರಲ್ಲಿ ಮೂಡಬೇಕು: ಕುಮಾರ್ ಬಿ.ಕೆ.

ಮಂಗಳೂರು: ಭಾರತದ ಭವ್ಯ ಇತಿಹಾಸ ಮತ್ತು ಶ್ರೀಮಂತ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಶ್ರೇಷ್ಠ ರಾಯಭಾರಿಗಳಾಗಿ ನಮ್ಮ ಯುವಜನತೆ ರೂಪುಗೊಳ್ಳಬೇಕು ಎಂದು ಇಂಡಿಯನ್ ಓವರ್ಸೀಸ್ ಬ್ಯಾಂಕಿನ ನಿವೃತ್ತ ಮಹಾ ಪ್ರಬಂಧಕ ಕುಮಾರ್ ಬಿ.ಕೆ. ಕರೆ ನೀಡಿದರು. ಅವರು ಹಿಂದೂ ವಿದ್ಯಾದಾಯಿನಿ ಸಂಘದ ಅಧೀನದ ವಿದ್ಯಾದಾಯಿನಿ ಹೈಸ್ಕೂಲು ಹಾಗೂ ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಶಿಕ್ಷಕರ ಸಂಘದ ಜಂಟಿ ಆಶ್ರಯದಲ್ಲಿ ಆಯೋಜಿಸಲಾದ ‘ಭಾರತದ ಸಂತ ಪರಂಪರೆ’ ಉಪನ್ಯಾಸ ಸರಣಿ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು. ಭಾರತವು ಸಾಂಸ್ಕೃತಿಕವಾಗಿ ವಿಶ್ವದ ಇತರ ರಾಷ್ಟ್ರಗಳಿಗಿಂತ…

Read More

ವೆನ್‌ಲಾಕ್‌ಗೆ ರೋಗಿ ಕಳುಹಿಸುವ ಮುನ್ನ ಐಸಿಯು ಬೆಡ್ ಲಭ್ಯತೆ ಖಚಿತಪಡಿಸಿಕೊಳ್ಳಿ : ಡಾ. ಶಿವಪ್ರಕಾಶ್

ಮಂಗಳೂರು:ವೆನ್‌ಲಾಕ್ ಆಸ್ಪತ್ರೆಗೆ ತುರ್ತು ಚಿಕಿತ್ಸೆಗಾಗಿ ರೋಗಿಗಳನ್ನು ಶಿಫಾರಸು ಮಾಡುವ ಮೊದಲು ಐಸಿಯು ಬೆಡ್‌ಗಳ ಲಭ್ಯತೆಯನ್ನು ಖಚಿತಪಡಿಸಿಕೊಳ್ಳಬೇಕು ಎಂದು ವೆನ್‌ಲಾಕ್ ಆಸ್ಪತ್ರೆಯ ಅಧೀಕ್ಷಕ ಹಾಗೂ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಶಿವಪ್ರಕಾಶ್ ಮನವಿ ಮಾಡಿದರು. ಆಸ್ಪತ್ರೆಯಲ್ಲಿ ಹೆಲ್ಪ್ ಡೆಸ್ಕ್ ಹಾಗೂ ಸಾರ್ವಜನಿಕ ಸಂಪರ್ಕಾಧಿಕಾರಿ ವ್ಯವಸ್ಥೆ ಕಲ್ಪಿಸಲಾಗಿದ್ದು, ಮುಂದಿನ ದಿನಗಳಲ್ಲಿ ವೆಬ್‌ಸೈಟ್‌ನಲ್ಲೂ ಬೆಡ್‌ಗಳ ಲಭ್ಯತೆ ಮಾಹಿತಿ ಪ್ರಕಟಿಸುವ ವ್ಯವಸ್ಥೆ ಮಾಡಲಾಗುವುದು ಎಂದು ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವೆನ್‌ಲಾಕ್ ಆಸ್ಪತ್ರೆಗೆ ಕೇರಳ ಸೇರಿದಂತೆ 31 ಜಿಲ್ಲೆಗಳಿಂದ ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ…

Read More
error: Content is protected !!