ಕುಂದಾಪುರ: ಕ್ರೇನ್ ಹರಿದು ಯುವಕ ಮೃತ್ಯು
ಉಡುಪಿ: ಕ್ರೇನ್ ಹರಿದು ಯುವಕನೋರ್ವ ದಾರುಣವಾಗಿ ಮೃತಪಟ್ಟ ಘಟನೆ ಕುಂದಾಪುರ ತಾಲೂಕಿನ ತೆಕ್ಕಟ್ಟೆ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಬುಧವಾರ ಸಂಭವಿಸಿದೆ. ಮೃತನನ್ನು ತೆಕ್ಕಟ್ಟೆ ಗ್ರಾಮದ ಅಭಿಷೇಕ್ ಪೂಜಾರಿ ಎಂದು ಗುರುತಿಸಲಾಗಿದೆ. ಹೆದ್ದಾರಿಯಲ್ಲಿ ಯೂಟರ್ನ್ ತೆಗೆದುಕೊಳ್ಳುವ ಸ್ಥಳದಲ್ಲಿ ಖಾಸಗಿ ಬಸ್ ಪ್ರಯಾಣಿಕರನ್ನ ಹತ್ತಿಸಿ ಇಳಿಸುತ್ತಿತ್ತು. ಈ ವೇಳೆ ಬಸ್ ಪಕ್ಕದಲ್ಲಿ ದ್ವಿಚಕ್ರ ಸವಾರ ತಿರುವು ತೆಗೆದುಕೊಳ್ಳಲು ಮುಂದಾಗಿದ್ದಾನೆ.ಆಗ ಏಕಾಏಕಿ ಬಸ್ ಚಲಿಸಿದ ಪರಿಣಾಮ ಆಯತಪ್ಪಿ ದ್ವಿಚಕ್ರ ಸವಾರ ರಸ್ತೆಗೆ ಬಿದ್ದಿದ್ದಾನೆ. ಸವಾರ ಬೀಳುತ್ತಿದ್ದಂತೆ ಆತನ ಮೇಲೆ ಕ್ರೇನ್…
