ಎಂಸಿಸಿ ಬ್ಯಾಂಕ್ ವತಿಯಿಂದ ಅಂತರರಾಜ್ಯ ಬ್ಯಾಂಕಿಂಗ್ ಸಂವಾದ

ಎಂಸಿಸಿ ಬ್ಯಾಂಕ್ ವತಿಯಿಂದ 2026 ಏಪ್ರಿಲ್ 25 ಮತ್ತು 26ರಂದು ಗೋವಾದ Courtyard by Marriottನಲ್ಲಿ ಅಂತರರಾಜ್ಯ ಬ್ಯಾಂಕಿಂಗ್ ಸಂವಾದವನ್ನು ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಬ್ಯಾಂಕಿನ ಹಿರಿಯ ಅಧಿಕಾರಿಗಳು, ಶಾಖಾ ವ್ಯವಸ್ಥಾಪಕರು, ಪೆಕ್ರಡಿಟ್ ಅಧಿಕಾರಿಗಳು, ಮುಂದಿನ ವ್ಯವಸ್ಥಾಪಕರು ಹಾಗೂ ನಿರ್ದೇಶಕ ಮಂಡಳಿಯ ಸದಸ್ಯರು ಭಾಗವಹಿಸಿದ್ದರು. ಬ್ಯಾಂಕಿಂಗ್ ಕ್ಷೇತ್ರದಲ್ಲಿ ಬದಲಾಗುತ್ತಿರುವ ಪರಿಸ್ಥಿತಿಗಳನ್ನು ಚರ್ಚಿಸುವುದು ಹಾಗೂ ಅಂತರರಾಜ್ಯ ಸಹಕಾರವನ್ನು ಉತ್ತೇಜಿಸುವುದು ಈ ಸಂವಾದದ ಮುಖ್ಯ ಉದ್ದೇಶವಾಗಿತ್ತು. ಈ ಸಂವಾದದ ಉದ್ಘಾಟನಾ ಕಾರ್ಯಕ್ರಮದಲ್ಲಿ ಎಂಸಿಸಿ ಬ್ಯಾಂಕ್ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ…

Read More

ಬೋಳಿಯಾರ್: ಬಿಂದಾಝ್ ಫ್ರೆಂಡ್ಸ್ (ರಿ)ಬೋಳಿಯಾರ್ ವತಿಯಿಂದ ಉಚಿತ ಆಂಬ್ಯುಲೆನ್ಸ್ ಲೋಕಾರ್ಪಣೆ

​ಬೋಳಿಯಾರ್: ಬಿಂದಾಝ್ ಫ್ರೆಂಡ್ಸ್ (ರಿ) ಬೋಳಿಯಾರ್ ಇದರ ರಜತ ಮಹೋತ್ಸವದ ಸವಿನೆನಪಿಗಾಗಿ ಸಾರ್ವಜನಿಕರ ಸೇವೆಗಾಗಿ ಉಚಿತ ಆಂಬ್ಯುಲೆನ್ಸ್ ಲೋಕಾರ್ಪಣಾ ಕಾರ್ಯಕ್ರಮ ನಡೆಯಿತು. ಅಮ್ಮೆಂಬಳ ಕೇಂದ್ರ ಜುಮಾ‌ ಮಸೀದಿ ಖತೀಬ್ ಅಸೈಯ್ಯದ್ ಅಮೀರ್ ತಂಙಳ್ ಹಾಗೂ ಮಜಿ ಮಹಮ್ಮಾಯ ದೇವಸ್ಥಾನದ ಅರ್ಚಕ ಮನೋಹರ್ ಭಟ್, ಮತ್ತು ಚೇಳೂರು ಸಂತ ತೋಮಸ್ ಇಗರ್ಜಿಯ ಧರ್ಮಗುರು ಫಾದರ್ ಮೈಕಲ್ ಡಿಸಿಲ್ವಾ ಉಚಿತ ಆಂಬ್ಯುಲೆನ್ಸ್ ಸೇವೆಗೆ ಚಾಲನೆ ನೀಡಿದರು. ಬಿಂದಾಝ್ ಫ್ರೆಂಡ್ಸ್ ಅಧ್ಯಕ್ಷ ಬದ್ರುದ್ದೀನ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಬೋಳಿಯಾರು ಮೊಹಿಯದ್ದೀನ್ ಜುಮಾ‌…

Read More

ಬ್ರಹ್ಮರಕೂಟ್ಟು ಟೋಲ್‌ಗೇಟ್‌ ಬಂದ್‌: ಏಪ್ರಿಲ್‌ 28ಕ್ಕೆ ಬೃಹತ್‌ ಜನಾಂದೋಲನ ನಡಿಗೆ

ಮಂಗಳೂರು: ಇಲ್ಲಿನ ಬ್ರಹ್ಮರಕೂಟ್ಟು ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸವಾರರಿಗೆ ಕನಿಷ್ಠ ಮೂಲ ಸೌಕರ್ಯವನ್ನೂ ನೀಡದೆ 23 ವರ್ಷಗಳಿಂದ ಕಾನೂನು ಬಾಹಿರವಾಗಿ ಸುಂಕ ವಸೂಲಿ ಮಾಡುತ್ತಿರುವ ಟೋಲ್ ಗೇಟ್ ಸಂಪೂರ್ಣ ಮುಚ್ಚಲು ಆಗ್ರಹಿಸಿ ಏಪ್ರಿಲ್‌ 28ರಂದು ಬೃಹತ್‌ ಜನಾಂದೋಲನ ನಡಿಗೆ ಹಮ್ಮಿಕೊಂಡಿರುವುದಾಗಿ ಕಾಂಗ್ರೆಸ್‌ ನಾಯಕರು, ಟೋಲ್‌ ಗೇಟ್ ತೆರವು ಹೋರಾಟ ಸಮಿತಿ ಗೌರವಾಧ್ಯಕ್ಷ ಬಿ.ರಮಾನಾಥ ರೈ ಎಚ್ಚರಿಸಿದ್ದಾರೆ. ಗುರುಪುರ ಬ್ಲಾಕ್‌ ಕಾಂಗ್ರೆಸ್‌ ಕಚೇರಿಯಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಬಿ.ಸಿ. ರೋಡ್‌ ನಾರಾಯಣಗುರು ವೃತ್ತದಿಂದ ಬ್ರಹ್ಮರಕೂಟ್ಲು…

Read More

ಮಹಿಳಾ ಮೀಸಲಾತಿ ಮಸೂದೆ ವಿರೋಧಿಸಿದ ಕಾಂಗ್ರೆಸ್ ವಿರುದ್ಧ ಜನಾಕ್ರೋಶ ಸಭೆ

ಬಂಟ್ವಾಳ: ಮಹಿಳಾ ಮೀಸಲಾತಿ ಮಸೂದೆಯನ್ನು ಜಾರಿಯಾಗದಂತೆ ತಡೆದ ಮಹಿಳಾ ವಿರೋಧಿ ಕಾಂಗ್ರೆಸ್ ವಿರುದ್ಧ ಜನಾಕ್ರೋಶ ಮಹಿಳಾ ಸಭೆ ಬಿಸಿರೋಡಿನ ಪ್ಲೈ ಓವರ್ ನ ಕೆಳಭಾಗದಲ್ಲಿ ನಡೆಯಿತು. ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಮಾತನಾಡಿ,ಜಿಲ್ಲೆಯಲ್ಲಿ ಬಿಜೆಪಿ ಪಕ್ಷ ವಿಧಾನಸಭಾ ಚುನಾವಣೆಯಲ್ಲಿ ಮಹಿಳೆಯರಿಗೆ ಸ್ಪರ್ಧೆ ಮಾಡಲು ಅವಕಾಶ ನೀಡಿದೆ, ಆದರೆ ಮಹಿಳಾ ಮಸೂದೆ ಜಾರಿಯಾಗದಂತೆ ವಿರೋಧ ವ್ಯಕ್ತಪಡಿಸುವ ಕಾಂಗ್ರೆಸ್ ಜಿಲ್ಲೆಯಲ್ಲಿ ಎಷ್ಟು ಸೀಟು ನೀಡಿದೆ ಹೇಳಲಿ. ಅಂತವರು ಬಿಜೆಪಿಯ ಬಗ್ಗೆ ಪ್ರಶ್ನೆ ಮಾಡುವ ನೈತಿಕತೆ ಇದೆಯಾ ಎಂದು…

Read More

ಉಡುಪಿ ವಾಣಿಜ್ಯ ಕಟ್ಟಡ ಅಗ್ನಿ ದುರಂತ ಸ್ಥಳಕ್ಕೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ

Udupi: ಉಡುಪಿ ಸಿಟಿ ಬಸ್ ನಿಲ್ದಾಣದ ಸಮೀಪದ ವಾಣಿಜ್ಯ ಕಟ್ಟಡದಲ್ಲಿ ಸಂಭವಿಸಿದ ಅಗ್ನಿ ದುರಂತದ ಸ್ಥಳಕ್ಕೆ ಶಾಸಕ Yashpal Suvarna ಭೇಟಿ ನೀಡಿ ಪರಿಶೀಲನೆ ನಡೆಸಿದರು. ಘಟನಾ ಸ್ಥಳದಲ್ಲಿ ಹಾನಿಯ ಪ್ರಮಾಣ ಹಾಗೂ ಪರಿಸ್ಥಿತಿಯನ್ನು ಅವಲೋಕಿಸಿದ ಬಳಿಕ ಮಾತನಾಡಿದ ಅವರು, ನಷ್ಟದ ಅಂದಾಜು ಪರಿಶೀಲಿಸಿದ ನಂತರ ಪರಿಹಾರಕ್ಕಾಗಿ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು ಎಂದು ಭರವಸೆ ನೀಡಿದರು. ಉಡುಪಿಗೆ ಹೊಸ ತಂತ್ರಜ್ಞಾನದ ಅಗ್ನಿಶಾಮಕ ವಾಹನ ಒದಗಿಸುವಂತೆ ಗೃಹ ಸಚಿವರಿಗೆ ಮನವಿ ಸಲ್ಲಿಸಲಾಗುವುದು ಎಂದೂ ಹೇಳಿದರು. ಜಿಲ್ಲೆಯಲ್ಲಿ ಅಗ್ನಿಶಾಮಕ ಸೇವೆಯನ್ನು…

Read More

ದಕ್ಷಿಣ ಕನ್ನಡ ಹಾಲು ಒಕ್ಕೂಟಕ್ಕೆ ₹10.61 ಕೋಟಿ ನಿವ್ವಳ ಲಾಭ

ಮಂಗಳೂರು: ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟವು 2025-26ನೇ ಸಾಲಿನಲ್ಲಿ ₹10.61 ಕೋಟಿ ನಿವ್ವಳ ಲಾಭ ಗಳಿಸಿರುವುದಾಗಿ ಒಕ್ಕೂಟದ ಅಧ್ಯಕ್ಷ ರವಿರಾಜ ಹೆಗ್ಡೆ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಸಾಲಿನಲ್ಲಿ ಒಕ್ಕೂಟವು ₹1,270 ಕೋಟಿ ಆರ್ಥಿಕ ವ್ಯವಹಾರ ನಡೆಸಿದ್ದು, ಕಳೆದ ವರ್ಷದ ₹1,174 ಕೋಟಿಯೊಂದಿಗೆ ಹೋಲಿಸಿದರೆ ಶೇ.8.18ರಷ್ಟು ಬೆಳವಣಿಗೆ ದಾಖಲಿಸಲಾಗಿದೆ ಎಂದರು. ಒಕ್ಕೂಟವು ಒಟ್ಟು 51,693 ಸಕ್ರಿಯ ಸದಸ್ಯರನ್ನು ಹೊಂದಿದ್ದು, ದಿನಕ್ಕೆ ಸರಾಸರಿ 4.07 ಲಕ್ಷ ಲೀಟರ್ ಹಾಲು ಸಂಗ್ರಹವಾಗುತ್ತಿದೆ. ಹಾಲು ಶೇಖರಣೆಯಲ್ಲಿ ಶೇ.19ರಷ್ಟು…

Read More

ಮಂಗಳೂರು: ಕದ್ರಿ ಮಾರ್ಕೆಟ್‌ನಲ್ಲಿ 5 ಕೆಜಿ FTL ಶಿಬಿರಕ್ಕೆ ಉತ್ತಮ ಸ್ಪಂದನೆ

ಮಂಗಳೂರು ನಗರದ ಕದ್ರಿ ಮಾರ್ಕೆಟ್, ಮಲ್ಲಿಕಟ್ಟೆ ಪ್ರದೇಶದಲ್ಲಿ Bharat Petroleum ಸಂಸ್ಥೆಯ ಭಾರತ್‌ಗ್ಯಾಸ್ ವಿತರಕರಾದ Kamadhenu Gas Agencies ಅವರ ವತಿಯಿಂದ ವಲಸೆ ಕಾರ್ಮಿಕರು, ವ್ಯಾಪಾರಿಗಳು ಹಾಗೂ ವಿದ್ಯಾರ್ಥಿಗಳಿಗಾಗಿ 5 ಕೆಜಿ FTL ಶಿಬಿರವನ್ನು ಆಯೋಜಿಸಲಾಯಿತು. ಹೊಸ ಯೋಜನೆಗೆ ಸಾರ್ವಜನಿಕರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದ್ದು, ಹಲವರು ಸ್ಥಳಕ್ಕೆ ಭೇಟಿ ನೀಡಿ ಯೋಜನೆ ಕುರಿತು ಆಸಕ್ತಿ ತೋರಿದರು. ಕಾರ್ಯಕ್ರಮದಲ್ಲಿ ಪ್ರದೇಶ ವ್ಯವಸ್ಥಾಪಕರಾದ ಶ್ರೀ ಸಂದೀಪ್ ಕುಮಾರ್ ರೈನಾ, ಹಿರಿಯ ಮಾರಾಟ ಅಧಿಕಾರಿಯಾದ ಶ್ರೀ ಅನಂತ ರಾವ್ ಹಾಗೂ ವಿತರಕರಾದ…

Read More

ಮಹಿಳಾ 33% ಮೀಸಲಾತಿಗೆ ಕಾಂಗ್ರೆಸ್ ವಿರೋಧ: ಮಂಗಳೂರಿನಲ್ಲಿ ಬಿಜೆಪಿ ಮಹಿಳಾ ಮೋರ್ಚಾದ ಬೃಹತ್ ಪಾದಯಾತ್ರೆ

ಮಂಗಳೂರು: ಕೇಂದ್ರ ಸರ್ಕಾರವು ಜಾರಿಗೆ ತರಲು ಉದ್ದೇಶಿಸಿರುವ ಮಹಿಳೆಯರ ಶೇ. 33 ಮೀಸಲಾತಿಯನ್ನು ವಿರೋಧಿಸುವ ಮೂಲಕ ಕಾಂಗ್ರೆಸ್ ತನ್ನ ಮಹಿಳಾ ವಿರೋಧಿ ನೀತಿಯನ್ನು ಜಗಜ್ಜಾಹೀರುಗೊಳಿಸಿದೆ ಎಂದು ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲದ ಮಹಿಳಾ ಮೋರ್ಚಾ ತೀವ್ರವಾಗಿ ಕಿಡಿಕಾರಿದೆ. ಕಾಂಗ್ರೆಸ್‌ನ ಈ ಧೋರಣೆಯನ್ನು ಪ್ರತಿಭಟಿಸಿ ಬಿ.ವಿ.ಎಸ್ ವೃತ್ತದಿಂದ ಮಹಾನಗರ ಪಾಲಿಕೆ ಕಚೇರಿಯವರೆಗೆ ಬೃಹತ್ ಪಾದಯಾತ್ರೆ ನಡೆಸುವ ಮೂಲಕ ಬೃಹತ್ ಆಕ್ರೋಶ ವ್ಯಕ್ತಪಡಿಸಲಾಯಿತು. ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಪೂರ್ಣಿಮಾ, “ತೊಟ್ಟಿಲು ತೂಗುವ ಕೈಗಳು ದೇಶವನ್ನೂ…

Read More

ರಾಜ್ಯ ಕಾಂಗ್ರೆಸ್‌ನಲ್ಲಿ ಮತ್ತೆ ನಾಯಕತ್ವ ಪೈಪೋಟಿ: ಸಿಎಂ ಹಂಚಿಕೆ ಚರ್ಚೆಗೆ ಹೊಸ ತಿರುವು

ಬೆಂಗಳೂರು: ರಾಜ್ಯ ಕಾಂಗ್ರೆಸ್‌ನಲ್ಲಿ ಮತ್ತೆ ನಾಯಕತ್ವದ ಪೈಪೋಟಿ ತೀವ್ರಗೊಂಡಿದೆ. ಮುಖ್ಯಮಂತ್ರಿ Siddaramaiah ಅವರು ಮೂರು ವರ್ಷ ಪೂರ್ಣಗೊಳಿಸುತ್ತಿರುವ ಸಂದರ್ಭದಲ್ಲಿ ಸಿಎಂ ಸ್ಥಾನ ಹಂಚಿಕೆ ಪ್ರಶ್ನೆ ಮತ್ತೆ ಮುನ್ನೆಲೆಗೆ ಬಂದಿದೆ. ಉಪಮುಖ್ಯಮಂತ್ರಿ ಡಿ . ಕೆ . ಶಿವಕುಮಾರ್ ಬಣದಿಂದ ಹಂಚಿಕೆ ಬೇಡಿಕೆ ಕೇಳಿಬರುತ್ತಿದ್ದರೆ, ಸಿದ್ದರಾಮಯ್ಯ ಬೆಂಬಲಿಗರು ಸಿಎಂ ಬದಲಾವಣೆ ಇಲ್ಲವೆಂದು ಸ್ಪಷ್ಟಪಡಿಸಿದ್ದಾರೆ. ಈ ನಡುವೆ ದಲಿತ ಮುಖ್ಯಮಂತ್ರಿ ಅಸ್ತ್ರ ರಾಜಕೀಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ. ಸಿದ್ದರಾಮಯ್ಯ ಅವರು ಹೈಕಮಾಂಡ್ ಮುಂದೆ ಹೊಸ ಷರತ್ತು ಇಟ್ಟಿದ್ದಾರೆ ಎನ್ನಲಾಗುತ್ತಿದ್ದು, ತಾವು…

Read More

ಎರಡು ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಬಂಧನ

Mangaluru: ಮಂಗಳೂರು ನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯ ಮಂಗಳೂರು ನಾರ್ತ್ ಪೊಲೀಸ್ ಸ್ಟೇಷನ್ ಠಾಣೆಯಲ್ಲಿ ದಾಖಲಾಗಿದ್ದ 1998ರ ಗಲಭೆ ಮತ್ತು ಬೆಂಕಿ ಹಚ್ಚಿದ ಪ್ರಕರಣದ ವಾರಂಟ್ ಆರೋಪಿ ಒಬ್ಬನನ್ನು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಬಂಧಿತನನ್ನು ಮುನೀರ್ ಅಹ್ಮದ್ (59) ಎಂದು ಗುರುತಿಸಲಾಗಿದೆ. ಇವರು ಅನ್ಸಾರಿ ಕ್ರಾಸ್ ರಸ್ತೆ, ಬಂದರು ನಿವಾಸಿಯಾಗಿದ್ದು, ಇತ್ತೀಚೆಗೆ ಕುಲಶೇಖರದಲ್ಲಿರುವ ಸಾಯಿ ಆರ್ಟ್ಸ್ ಅಪಾರ್ಟ್‌ಮೆಂಟ್‌ನಲ್ಲಿ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದರು ಎನ್ನಲಾಗಿದೆ. ಆರೋಪಿಯ ವಿರುದ್ಧ ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 291/1998ರಡಿ…

Read More
error: Content is protected !!