ಡಿ ಎನ್ ಎ ಪರೀಕ್ಷೆಯಲ್ಲಿ ತಂದೆಯೆಂದು ಸಾಬೀತಾದ ಕೃಷ್ಣ ಜಿ ರಾವ್ ಮದುವೆಯಾಗಲು ಹಿಂದೇಟು ಹಾಕುವುದೇಕೆ ….. ? ; ಹಿಂದುಳಿದ ವರ್ಗಗಳ ಆಯೋಗದ ಸದಸ್ಯೆ ಪ್ರತಿಭಾ ಕುಳಾಯಿ

ಮಂಗಳೂರು: ಕೃಷ್ಣ ಜಿ ರಾವ್ನ ಡಿ ಎನ್ ಎ ಪರೀಕ್ಷೆಯ ಮೂಲಕ ಈತನದ್ದೇ ಮಗುವೆನ್ನುವ ಸತ್ಯ ಇದೀಗ ಹೊರ ಬಂದಿದೆ , ಈತನೇ ತಂದೆ ಎಂದು ಸಾಬೀತಾದರೂ ಕೂಡ ಬಾಲಕಿಯನ್ನು ವಿವಾಹವಾಗಲು ಹಿಂದೇಟು ಹಾಕುತ್ತಿದ್ದಾನೆ , ಈ ಹಿಂದೂ ಹೆಣ್ಣು ಮಗಳಿಗೆ ಆದ ಅನ್ಯಾಯವನ್ನು ಯಾವ ಹಿಂದೂ ಮುಖಂಡರಾಗಲಿ , ಸ್ವಾಮೀಜಿಗಳಾಗಲಿ , ರಾಜಕೀಯ ವ್ಯಕ್ತಿಗಳಾಗಲಿ ಮಾತನಾಡದೇ ಇರುವುದು ದುರಂತ . ಆದರೆ ಶ್ರೀಮಂತ , ರಾಜಕೀಯವಾಗಿ ಪ್ರಬಲ ಕುಟುಂಬದ ಹೆಣ್ಣಾಗಿದ್ದರೆ ಈ ಅನ್ಯಾಯ ಆಗುತ್ತಿತ್ತಾ…. ?…

Read More

ಬಂಟ್ವಾಳ: ರಸ್ತೆ ದಾಟುವ ವೇಳೆ ರಿಕ್ಷಾ ಡಿಕ್ಕಿ ಹೊಡೆದು ವ್ಯಕ್ತಿ ಸಾವು

ಬಂಟ್ವಾಳ, ಅ. 03 : ರಸ್ತೆ ದಾಟುವ ವೇಳೆ ರಿಕ್ಷಾ ಡಿಕ್ಕಿ ಹೊಡೆದು ವ್ಯಕ್ತಿಯೋರ್ವ ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನ ಕಲ್ಲಡ್ಕದ ಅಮ್ಟೂರು ಕ್ರಾಸ್ ನಲ್ಲಿ ನಡೆದಿದೆ. ಸಜೀಪ ಮೂಡ ಗ್ರಾಮದ ಸುಭಾಷ್ ನಗರ ನಿವಾಸಿ ಲೋಕೇಶ್ ಮೂಲ್ಯ (44) ಮೃತ ದುರ್ದೈವಿ.ಲೋಕೇಶ್ ಅವರು ಕಲ್ಲಡ್ಕದ ನಾಯರ ಪೆಟ್ರೋಲ್ ಪಂಪ್ ನ ಮುಂಭಾಗದಲ್ಲಿ ರಸ್ತೆಯನ್ನು ದಾಟುವ ವೇಳೆ ಅತೀ ವೇಗದಿಂದ ಬಂದ ರಿಕ್ಷಾ ಡಿಕ್ಕಿ ಹೊಡೆದು ಚಾಲಕನ ನಿಯಂತ್ರಣ ಕಳೆದುಕೊಂಡು ಬಳಿಕ ಪಲ್ಟಿಯಾಗಿದೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಲೋಕೇಶ್…

Read More

ದ.ಕ. ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಮಹಾತ್ಮ ಗಾಂಧೀಜಿ ಹಾಗೂ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಜನ್ಮದಿನ ಕಾರ್ಯಕ್ರಮ.

ಮಂಗಳೂರು: ದ.ಕ. ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಮಹಾತ್ಮ ಗಾಂಧೀಜಿ ಹಾಗೂ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಜನ್ಮದಿನ ಕಾರ್ಯಕ್ರಮ ಗುರುವಾರ ನಗರದ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾಧ್ಯಕ್ಷ ಕೆ.ಹರೀಶ್ ಕುಮಾರ್, ಮಹಾತ್ಮ ಗಾಂಧಿ ಅವರು ಬ್ರಿಟಿಷರ, ದಬ್ಬಾಳಿಕೆ, ದೌರ್ಜನ್ಯವನ್ನು ಮೆಟ್ಟಿನಿಂತು ದೇಶದ ಜನತೆಯ ಪ್ರೀತಿ, ವಿಶ್ವಾಸಗಳಿಸಿ ಸ್ವಾತಂತ್ರ್ಯ ಹೋರಾಟಕ್ಕೆ ಧುಮುಕಿದರು. ಅವರ ನಡೆ-ನುಡಿ, ಚಿಂತನೆ, ಆದರ್ಶ, ಜೀವನ ಶೈಲಿ ದೇಶದಲ್ಲಿ ಇನ್ನೂ ಜೀವಂತವಾಗಿದ್ದರಿಂದ ಪ್ರಜಾಪ್ರಭುತ್ವ ಉಳಿದಿದೆ. ಗಾಂಧಿ…

Read More

ಕಡಲ ನಗರಿಯಲ್ಲಿ ನವರಾತ್ರಿ ಸಮಾಪ್ತಿಗೆ ಕ್ಷಣಗಣೆಯ ರಾತ್ರಿ ….!!!

ಮಂಗಳೂರು: ಕರಾವಳಿಯಲ್ಲಿ ನವರಾತ್ರಿ ಸಂಭ್ರಮ ಇಂದು ರಾತ್ರಿ ಸಮಾರೋಪಗೊಳ್ಳುತ್ತಿದೆ. ನವರಾತ್ರಿ ಹಬ್ಬ, ಕುದ್ರೋಳಿ ದಸರಾ ಮತ್ತು ಉಚ್ಚಿಲ ದಸರಾಗಳು ಕರಾವಳಿಗೆ ಬಹು ಸಂಖ್ಯೆಯಲ್ಲಿ ಭಕ್ತರು, ಯಾತ್ರಿಕರನ್ನು ಆಕರ್ಷಿಸಿವೆ. ಉಡುಪಿಯ ಕೊಲ್ಲೂರು, ಮಂಗಳೂರಿನ‌ ಮಂಗಳಾದೇವಿ ಕ್ಷೇತ್ರ ಸೇರಿದಂತೆ ಸಾಂಪ್ರದಾಯಿಕ ನವರಾತ್ರಿ ಆಚರಣೆ ಜಾರಿಯಲ್ಲಿರುವ ಕ್ಷೇತ್ರಗಳಲ್ಲಿಯೂ ಭಕ್ತ ಸಂದಣಿ ಹೆಚ್ಚಾಗಿತ್ತು.ನವರಾತ್ರಿ ದೀಪಾಲಂಕಾರ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ವಿಶೇಷ ಆಕರ್ಷಣೆಯಾಗಿತ್ತು. ನವರಾತ್ರಿಯಲ್ಲಿ ಶಾರದಾ ಪ್ರತಿಷ್ಟಾಪನೆ ಮಾಡಿದ ವಿವಿಧ ಮಂಡಳಿಗಳು ಶಾರದಾ ಮಾತೆ ವಿಸರ್ಜನೆಗೆ ತಯಾರಾಗಿವೆ. ಕುದ್ರೋಳಿಯಲ್ಲಿ ಲಕ್ಷಾಂತರ ಭಕ್ತರನ್ನು…

Read More

ಖಂಬದಕೋಣೆ; ಸೇತುವೆಗೆ ಡಿಕ್ಕಿ ಹೊಡೆದ ಕಂಟೈನ‌ರ್; ತಪ್ಪಿದ ಬಾರಿ ಅನಾಹುತ

ಉಡುಪಿ: ರಾಷ್ಟ್ರೀಯ ಹೆದ್ದಾರಿ 66ರ ಖಂಬದಕೋಣೆ ಸೇತುವೆಗೆ ಕಂಟೈನರ್‌ವೊಂದು ಡಿಕ್ಕಿ ಹೊಡೆದಿದ್ದು, ಭಾರೀ ಅನಾಹುತವೊಂದು ಕೂದಲೆಳೆಯ ಅಂತರದಲ್ಲಿ ತಪ್ಪಿದಂತಾಗಿದೆ.ಕಂಟೈನರ್ ಡಿಕ್ಕಿ ಹೊಡೆದ ರಭಸಕ್ಕೆ ನದಿಗೆ ಉರುಳುವ ಸಾಧ್ಯತೆ ಇದ್ದು, ಅದೃಷ್ಟವಶಾತ್ ಪಾರಾಗಿದೆ.ಕಂಟೈನರ್ ಮಂಗಳೂರಿನಿಂದ ಗೋವಾ ಕಡೆಗೆ ಸಾಗುತ್ತಿದ್ದು, ಕಂಟೈನರ್‌ನಲ್ಲಿದ್ದ ಚಾಲಕ ಹಾಗೂ ಕೀನ‌ರ್ ಅಪಾಯದಿಂದ ಪಾರಾಗಿದ್ದಾರೆ.

Read More

ದಸರಾ ಹಬ್ಬದ ಸಂಭ್ರಮವನ್ನು ಸಿದ್ದರಾಮಯ್ಯ ನೇತೃತ್ವದ ಸರಕಾರ ಸಮೀಕ್ಷೆಯಿಂದ ನುಂಗಿ ನೀರು ಕುಡಿದಿದೆ ; ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ

ಮಂಗಳೂರು: ದಸರಾ ಹಬ್ಬದ ಸಂಭ್ರಮವನ್ನು ಸಿದ್ದರಾಮಯ್ಯ ನೇತೃತ್ವದ ಸರಕಾರ ಸಮೀಕ್ಷೆಯಿಂದ ನುಂಗಿ ನೀರು ಕುಡಿದಿದೆ ; ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲರಾಜ್ಯದಲ್ಲಿ ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆಯನ್ನು ಈ ದಸರಾ ಸಂಭ್ರಮದ ಸಮಯದಲ್ಲಿ ಆರಂಭಿಸಿದ್ದು ಹಿಂದೂ ಭಾವನೆಗೆ ಧಕ್ಕೆ ತಂದಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಗುಡುಗಿದರು.ಅವರು ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಹಿಂದೂ ಹಬ್ಬದ ಹಿಂದೆ ಈ ಸಮೀಕ್ಷೆಯನ್ನು ನಡೆಸುವುದರ ಹಿಂದೆ ದೊಡ್ಡ ಷಡ್ಯಂತರ ಇದೆ ಎಂದರು. ಹಬ್ಬದ ಹಿನ್ನಲೆಯಲ್ಲಿ ಶಿಕ್ಷಕರಿಗೆ…

Read More

ಗಾಂಧೀಜಿಯವರ ತತ್ವ, ಆದರ್ಶ ಮನುಷ್ಯನಲ್ಲಿ ಮುಖ್ಯವಾಗಿ ಬೇಕು ; ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾಡಳಿತ , ಜಿಲ್ಲಾ ಪಂಚಾಯತ್ , ಮಂಗಳೂರು ಮಹಾನಗರ ಪಾಲಿಕೆ , ವಾರ್ತ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ , ಸಾರ್ವಜನಿಕ ಶಿಕ್ಷಣ ಇಲಾಖೆ , ಭಾರತ ಸೇವಾದಳದ ನೇತ್ರಿತ್ವದಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಹುಟ್ಟುಹಬ್ಬ ಗಾಂಧಿ ಜಯಂತಿಯನ್ನು ನಗರದ ರಾಜಾಜಿ ಪಾರ್ಕ್ನನಲ್ಲಿ ಗಣ್ಯರ ಸಮ್ಮುಖದಲ್ಲಿ ಆಚರಿಸಲಾಯಿತು . ಗಾಂಧಿ ಪ್ರತಿಮೆಗೆ ಮಾಲಾರ್ಪಣೆ ಮತ್ತು ಪುಷ್ಪಾರ್ಚನೆಯನ್ನು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ನೆರವೇರಿಸಿ ಮಾತನಾಡಿ, ಗಾಂಧೀಜಿಯವರ ತತ್ವ, ಆದರ್ಶ…

Read More

ತುಂಬೆ: ಶ್ರೀ ಶಾರದಾ ಸಮುದಾಯ ಭವನ ಲೋಕಾರ್ಪಣಾ ಕಾರ್ಯಕ್ರಮ.

ಬಂಟ್ವಾಳ: ತುಂಬೆ ರಾಮಲ್ ಕಟ್ಟೆ ಶ್ರೀ ಶಾರದಾ ಸೇವಾ ಪ್ರತಿಷ್ಠಾನ (ರಿ.) ಶ್ರೀ ಶಾರದಾ ರಜತ ಮಹೋತ್ಸವ ಸಮಿತಿ ಇದರ ವತಿಯಿಂದ ತುಂಬೆ ಶ್ರೀರಾಮ ನಗರ ರಾಮಲ್ ಕಟ್ಟೆಯಲ್ಲಿ ಸುಮಾರು 1.5ಕೋಟಿ ವೆಚ್ಚದಲ್ಲಿ ನೂತನವಾಗಿ ನಿರ್ಮಾಣಗೊಂಡ ಶ್ರೀ ಶಾರದಾ ಸಮುದಾಯ ಭವನವನ್ನು ಸೆ 28ರಂದು ಆದಿತ್ಯವಾರ ಮಂಗಳೂರು ಎಸ್ ಸಿ ಡಿ ಸಿ ಸಿ ಬ್ಯಾಂಕ್ ಅಧ್ಯಕ್ಷರಾದ ಡಾ ಎಂ ಎನ್ ರಾಜೇಂದ್ರ ಕುಮಾರ್ ಉದ್ಘಾಟಿಸಿ ಲೋಕಾರ್ಪಣೆಗೊಳಿಸಿದರು. ಬಳಿಕ ಮಾತನಾಡಿದ ಅವರು, ಶಾಂತಿ ಪ್ರಿಯರಾದ ನಾವು ಎಲ್ಲರನ್ನು…

Read More

ಪೆಟ್ರೋಲ್‌ ಕಳ್ಳತನ ಪ್ರಕರಣ: 10 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ.

ಬೆಳ್ತಂಗಡಿ: ನೆರಿಯ ಪೆಟ್ರೋನೆಟ್ ಪೈಪ್ ಲೈನ್ ನಿಂದ 2010 ರಲ್ಲಿ ಪೆಟ್ರೋಲ್ ಕಳ್ಳತನ ಪ್ರಕರಣದಲ್ಲಿ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರಾಗದೆ ಸುಮಾರು 10 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.ಬೆಳ್ತಂಗಡಿ ತಾಲೂಕಿನ ಚಿಬಿದ್ರೆ ನಿವಾಸಿ ತಮ್ಮಯ್ಯ(35) ಬಂಧಿತ ಆರೋಪಿ . ಮಂಗಳೂರು ನಗರದ ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೆ.28 ರಂದು ಅನುಮಾನಾಸ್ಪದವಾಗಿ ತಿರುಗಾಡುತ್ತಿದ್ದವನನ್ನು ನೋಡಿ ಸುರತ್ಕಲ್ ಪೊಲೀಸ್ ಠಾಣೆಯ ಸಿಬ್ಬಂದಿ ಉಮೇಶ್ ಅವರು ವಶಕ್ಕೆ…

Read More

ಉಡುಪಿ: ಅ. 4ರಿಂದ 12ರವರೆಗೆ ಮಾನಸಿಕ ಆರೋಗ್ಯ ಮತ್ತು ಯೋಗಕ್ಷೇಮ ಸಪ್ತಾಹ

ಉಡುಪಿ: ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆಯ ಪ್ರಯುಕ್ತ ಲಯನ್ಸ್ ಡಿಸ್ಟ್ರಿಕ್ಟ್ 317C – ಲಯನ್ಸ್ ಕ್ಲಬ್, ಮಣಿಪಾಲ್, ಮತ್ತು ಡಾ. ಎ.ವಿ.ಬಾಳಿಗಾ ಸ್ಮಾರಕ ಆಸ್ಪತ್ರೆ ಉಡುಪಿ ಇವರ ಸಹಯೋಗದಲ್ಲಿ ಅ. 4ರಿಂದ 12ರವರೆಗೆ ಮಾನಸಿಕ ಆರೋಗ್ಯ ಮತ್ತು ಯೋಗಕ್ಷೇಮ ಸಪ್ತಾಹವನ್ನು ಆಯೋಜಿಸಲಾಗಿದೆ ಎಂದು ಲಯನ್ಸ್ ಡಿಸ್ಟ್ರಿಕ್ಟ್ 317ಸಿ ಜಿಲ್ಲಾ ಗವರ್ನರ್ ಸಪ್ನಾ ಸುರೇಶ್ ತಿಳಿಸಿದರು. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಈ ಸಪ್ತಾಹದಲ್ಲಿ ಮಕ್ಕಳು, ಮಹಿಳೆಯರು, ವಯಸ್ಕರು, ಉದ್ಯೋಗಿಗಳು ಹಾಗೂ ಹಿರಿಯ ನಾಗರಿಕರನ್ನು ಎಲ್ಲರ…

Read More
error: Content is protected !!