ಕುದ್ರೋಳಿ ದಸರಾ ಅದ್ದೂರಿ ಶಾರದಾ ಮೆರವಣಿಗೆ ಅಕ್ಟೋಬರ್ ೨ ಕ್ಕೆ

ಮಂಗಳೂರು: ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ “ಮಂಗಳೂರು ದಸರಾ’ ಶೋಭಾಯಾತ್ರೆ ಅ. 2ರಂದು ಅದ್ದೂರಿಯಾಗಿ ನಡೆಯಲಿದೆ . ಈಗಾಗಲೇ ಶೋಭಾಯಾತ್ರೆ ಗೆ ಪೂರ್ವ ಸಿದ್ದತೆಗಳು ನಡೆಸಲಾಗಿದೆ ಎನ್ನಲಾಗಿದೆ . ಸಂಜೆ 4ರಿಂದ ಶ್ರೀ ಶಾರದಾಂಬೆಯ ಶೋಭಾಯಾತ್ರೆಯು ಶ್ರೀ ಕ್ಷೇತ್ರದಿಂದ ಹೊರಡಲಿದೆ. ಶ್ರೀ ಕ್ಷೇತ್ರದಲ್ಲಿ ನವರಾತ್ರಿ ಅಂಗವಾಗಿ ಪೂಜಿಸಲ್ಪಟ್ಟ ಶ್ರೀ ಮಹಾಗಣಪತಿ, ಆದಿಶಕ್ತಿ, ನವದುರ್ಗೆಯರು, ಶ್ರೀ ಶಾರದಾ ಮಾತೆ, ಬ್ರಹ್ಮಶ್ರೀ ನಾರಾಯಣ ಗುರುಗಳ ವಿಗ್ರಹ ಸಹಿತ ವರ್ಣರಂಜಿತ ದಸರಾ ಮೆರವಣಿಗೆ ನಗರದಲ್ಲಿ ಸಾಗಿಬರಲಿದೆ. ಕುದ್ರೋಳಿ ಕ್ಷೇತ್ರದಿಂದ ಹೊರಟು ಕಂಬಾರ…

Read More

ಜೆಪ್ಪು ಮಹಾಕಾಳಿಪಡ್ಡು ಅಂಡರ್ಬ್ರಿಜ್ ಕಾಮಗಾರಿ ಪೂರ್ಣಗೊಳ್ಳದೇ ಉಂಟಾಗಿರುವ ತೊಂದರೆಯ ಬಗ್ಗೆ ಮಂಗಳೂರು ದಕ್ಷಿಣ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ರೈಲ್ವೆ ಇಲಾಖೆಯ ನಿಧಾನಗತಿಯ ಕಾಮಗಾರಿಯನ್ನು ಖಂಡಿಸಿ ಪ್ರತಿಭಟನೆ

ಮಂಗಳೂರು :ಜೆಪ್ಪು ಮಹಾಕಾಳಿಪಡ್ಡು ಅಂಡರ್ಬ್ರಿಜ್ ಕಾಮಗಾರಿ ಪೂರ್ಣಗೊಳ್ಳದೇ ಉಂಟಾಗಿರುವ ತೊಂದರೆಯ ಬಗ್ಗೆ ಮಂಗಳೂರು ದಕ್ಷಿಣ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ರೈಲ್ವೆ ಇಲಾಖೆಯ ನಿಧಾನಗತಿಯ ಕಾಮಗಾರಿಯನ್ನು ಖಂಡಿಸಿ ಪ್ರತಿಭಟನೆ ನಡೆಸಲಾಯಿತು. ಕಳೆದ 4 ವರ್ಷಗಳ ಹಿಂದೆ ಜೆಪ್ಪು ಮಹಾಕಾಳಿಪಡ್ಡು ಅಂಡರ್ಬ್ರಿಜ್ ಕಾಮಗಾರಿ ಪೂರ್ಣಗೊಂಡಿದ್ದರೂ, ಇನ್ನು ಅದನ್ನು ಸಾರ್ವಜನಿಕರಿಗೆ ಬಿಟ್ಟುಕೊಡದೇ ಇದ್ದು ಇಲ್ಲಿ ನೀರು ತುಂಬಿ ಅವೈಜ್ಞಾನಿಕವಾಗಿ ಕಾಮಗಾರಿ ನಡೆಸಿದ ಬಗ್ಗೆ ದೂರುಗಳು ಇದ್ದರೂ ರೈಲ್ವೆ ಇಲಾಖೆಯವರು ಸಾರ್ವಜನಿಕ ಉಪಯೋಗಕ್ಕೆ ಬಿಟ್ಟುಕೊಡದೇ ಇರುವುದನ್ನು ಖಂಡಿಸಿ ಮಂಗಳೂರು ದಕ್ಷಿಣ ಬ್ಲಾಕ್…

Read More

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಸ್ಪತ್ರೆಗೆ ದಾಖಲು.

ಬೆಂಗಳೂರು:ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಅನಾರೋಗ್ಯದಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರ ಆರೋಗ್ಯ ಸ್ಥಿರವಾಗಿದೆ ಎಂದು ಮಾಹಿತಿ ಲಭ್ಯವಾಗಿದೆ. ಮಂಗಳವಾರ ಖರ್ಗೆ ಅವರು ಉತ್ಸಾಹದಿಂದ ರಾಜಕೀಯ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದರು. 83 ರ ಹರೆಯದ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಉಸಿರಾಟದ ಸಮಸ್ಯೆ ಕಾಣಿಸಿಕೊಂಡ ಬಳಿಕ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಪರೀಕ್ಷಿಸಿದ ವೈದ್ಯರು ಚಿಕಿತ್ಸೆಗಾಗಿ ದಾಖಲಿಸಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

Read More

ಕೆಂಪು ಕಲ್ಲಿನ ಸಮಸ್ಯೆಗೆ ಮುಕ್ತಿ ಸಿಕ್ಕಿದೆ – ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ.

ಪುತ್ತೂರು:ಕೆಂಪು ಕಲ್ಲಿನ ವಿಚಾರದಲ್ಲಿ ಜನರಿಗೆ ಗೊಂದಲಗಳಿತ್ತು.ಸರಕಾರದ ಮಟ್ಟದಲ್ಲಿ ಚರ್ಚೆ ಮಾಡಿ, ಕೆಂಪು ಕಲ್ಲು ತೆಗೆಯುವ ಎಲ್ಲಾ ಸಂಘದ ಪ್ರಮುಖ ಮೂರು ಬೇಡಿಕೆಗಳನ್ನು ರಾಜ್ಯ ಸರ್ಕಾರ ಈಡೇರಿಸಿದೆ.ಹೊಸ ಲೈಸನ್ಸ್ ಹಾಗೂ ಲೈಸನ್ಸ್‌ಗಳ ನವೀಕರಣವೂ ಮಾಡಲಾಗುತ್ತಿದೆ.ಇನ್ನು ಮುಂದೆ ಯಾರು ಕೂಡ ಲೈಸನ್ಸ್ ಪಡೆದು ಕೆಂಪು ಕಲ್ಲಿನ ವ್ಯವಹಾರ ನಡೆಸಬಹುದು ಎಂದು ಪುತ್ತೂರು ಶಾಸಕ ಅಶೋಕ್‌ ಕುಮಾರ್ ರೈ ಹೇಳಿದರು. ಕೆಂಪು ಕಲ್ಲಿನ ಸಮಸ್ಯೆ ಬಗ್ಗೆ ಸರ್ಕಾರದ ಮಟ್ಟದಲ್ಲಿ ಚರ್ಚಿಸಿದ ನಂತರ ಕೆಂಪು ಕಲ್ಲು ತೆಗೆಯುವವರ ಸಂಘಗಳ ಸದಸ್ಯರ ಸಭೆಯನ್ನು ಕರೆದಾಗ…

Read More

ಮುಳಿಹಿತ್ಲು ಫ್ರೆಂಡ್ಸ್ ಸರ್ಕಲ್ (ಎಂ.ಎಫ್.ಸಿ) ತಂಡದ ಮುಡಿಗೇರಿದ ಕುಡ್ಲದ ಪಿಲಿಪರ್ಬ- 2025 ರ ಕಿರೀಟ.

ನಳಿನ್ ಕುಮಾರ್ ಕಟೀಲ್ ಮಾರ್ಗದರ್ಶನ ಹಾಗೂ ಶಾಸಕ ಡಿ.ವೇದವ್ಯಾಸ ಕಾಮತ್ ರವರ ನೇತೃತ್ವದ ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನದಡಿ ಕೇಂದ್ರ ಮೈದಾನದಲ್ಲಿ ಅದ್ದೂರಿಯಾಗಿ ನಡೆದ ಕುಡ್ಲದ ಪಿಲಿಪರ್ಬ-2025 ಸೀಸನ್-4 ಮುಕ್ತಾಯಗೊಂಡಿದ್ದು,10 ತಂಡಗಳ ನಡುವಿನ ಜಿದ್ದಾಜಿದ್ದಿನ ಸ್ಪರ್ಧಾಕೂಟದಲ್ಲಿ ಅಂತಿಮವಾಗಿ ಮುಳಿಹಿತ್ಲು ಫ್ರೆಂಡ್ಸ್ ಸರ್ಕಲ್ (ಎಂ.ಎಫ್.ಸಿ) ತಂಡವು ಪ್ರತಿಷ್ಠಿತ ಪಿಲಿಪರ್ಬ- 2025 ರ ಕಿರೀಟ ಮುಡಿಗೇರಿಸಿಕೊಂಡಿತು. ದ್ವಿತೀಯ ಸ್ಥಾನದ ಪ್ರಶಸ್ತಿಯನ್ನು ನಂದಿಗುಡ್ಡ ಫ್ರೆಂಡ್ಸ್ ಬಾಬುಗುಡ್ಡ ತಂಡವು ಪಡೆದುಕೊಂಡರೆ, ತೃತೀಯ ಸ್ಥಾನವನ್ನು ಕಾರ್ಕಳ ಟೈಗರ್ಸ್ ಬೋಳ ಪ್ರಶಾಂತ್ ಕಾಮತ್ ಅಭಿಮಾನಿ ಬಳಗ ತಂಡ…

Read More

ಉಚ್ಚಿಲ: ಅಪರಿಚಿತ ವಾಹನ ಡಿಕ್ಕಿ ಹೊಡೆದು ಬೈಕ್ ಸವಾರ ಮೃತ್ಯು

ಉಡುಪಿ: ಪಡುಬಿದ್ರಿ ಸಮೀಪದ ಉಚ್ಚಿಲ ಕೆನರಾ ಬ್ಯಾಂಕ್ ಎಟಿಎಂ ಎದುರು ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಇಂದು ಬೆಳಗಿನ ಜಾವ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಸಂಭವಿಸಿದೆ. ಮೃತ ಬೈಕ್‌ ಸವಾರನ ಗುರುತು ಪತ್ತೆ ಇನ್ನೂ ಪತ್ತೆಯಾಗಿಲ್ಲ. ಉಡುಪಿ ಕಡೆಯಿಂದ ಮಂಗಳೂರು ಕಡೆಗೆ ಹೋಗುತ್ತಿದ್ದ ಪುತ್ತೂರು ನೋಂದಣಿ ಇರುವ ಬೈಕಿಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದಿದ್ದು ಇದರಿಂದ ರಸ್ತೆಗೆ ಬಿದ್ದು ಗಂಭೀರ ಗಾಯಗೊಂಡ ಸವಾರ ಸ್ಥಳದಲ್ಲೇ ಮೃತಪಟ್ಟರು ಎಂದು…

Read More

ಪುತ್ತೂರು ಯೋಜನಾ ಪ್ರಾಧಿಕಾರದಿಂದ ಕಡತ ವಿಲೇವಾರಿ.ರಾಜ್ಯದಲ್ಲೇ ಪ್ರಪ್ರಥಮ ಬಾರಿ ಕಡತ ವಿಲೇವಾರಿ ಕಾರ್ಯಾಗಾರ-ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ.

ಪುತ್ತೂರು: ಪುತ್ತೂರು ಮತ್ತು ಕಡಬ ಗ್ರಾಮಾಂತರ ಪ್ರದೇಶದ ಗ್ರಾಮ ಪಂಚಾಯತ್‌ಗಳಲ್ಲಿ ಸಲ್ಲಿಸುವ ಏಕ ನಿವೇಶನ ವಿನ್ಯಾಸ ಅನುಮೋದನೆ ಕುರಿತ ಅರ್ಜಿಗಳಿಗೆ ಸಂಬಂಧಿಸಿ ೪ಕೆ ನಿಯಮಾವಳಿಗಳು ಜಾರಿಯಾಗಿರುವ ಮೊದಲು ಪ್ರಾಧಿಕಾರಕ್ಕೆ ಸಲ್ಲಿಕೆಯಾಗಿರುವ ಅರ್ಜಿಗಳ ವಿಲೇವಾರಿಯ ಅದಾಲತ್ ಸೆ.೩೦ರಂದು ಶಾಸಕರ ಕಚೇರಿಯ ಸಭಾಂಗಣದಲ್ಲಿ ನಡೆಯಿತು. ಶಾಸಕ ಅಶೋಕ್ ಕುಮಾರ್ ರೈ ದೀಪ ಪ್ರಜ್ವಲಿಸಿ ಉದ್ಘಾಟಿಸಿ ಮಾತನಾಡಿ ಕರ್ನಾಟಕ ರಾಜ್ಯದಲ್ಲೇ ಪ್ರಪ್ರಥಮ ಬಾರಿಗೆ ಯೋಜನಾ ಪ್ರಾಧಿಕಾರದಿಂದ ಕಡತ ವಿಲೇವಾರಿ ಕಾರ್ಯಾಗಾರ ಆಯೋಜಿಸಲಾಗಿದೆ. ಏಕ ನಿವೇಶನ ನಕ್ಕಷೆ ಈ ಮೊದಲು ಗ್ರಾಮ ಪಂಚಾಯತ್‌ನಲ್ಲಿ…

Read More

ಅಮಾಸೆಬೈಲು: ಜ್ಯುವೆಲ್ಲರಿಯಿಂದ ಚಿನ್ನ ಖರೀದಿಸಿ ಹಣ ಕೊಡದೆ ವಂಚನೆ: ಆರೋಪಿ ಸೆರೆ.

ಉಡುಪಿ: ಜ್ಯುವೆಲ್ಲರಿಯಿಂದ ಚಿನ್ನ ಖರೀದಿಸಿ ಹಣ ಕೊಡದೆ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ ಓರ್ವ ಆರೋಪಿಯನ್ನು ಅಮಾಸೆಬೈಲು ಪೊಲೀಸರು ಬಂಧಿಸಿದ್ದಾರೆ. ಹೊಸಂಗಡಿಯ ಶ್ರೀಕೃಷ್ಣ ಜ್ಯುವೆಲ್ಲರಿಯಿಂದ 2024ರ ನ.3ರಂದು ಸಂತೋಷ ಎಂದು ಹೆಸರು ಹೇಳಿಕೊಂಡು ಕಾರಿನಲ್ಲಿ ಬಂದ ವ್ಯಕ್ತಿ ಗಿಪ್ಟ್ ಕೊಡುವ ಬಗ್ಗೆ 30 ಸಾವಿರ ರೂ. ಮೌಲ್ಯದ 2 ಚಿನ್ನದ ಉಂಗುರಗಳನ್ನು ಖರೀದಿ ಮಾಡಿದ್ದನು. ಹಣವನ್ನು ನೆಫ್ಟ್ ಮೂಲಕ ಹಾಕಿರುವುದಾಗಿ ಮೊಬೈಲ್ ಪೋನ್ ತೋರಿಸಿ ಉಂಗುರಗಳನ್ನು ತೆಗೆದುಕೊಂಡು ಹೋಗಿದ್ದನು. ಆದರೆ ಹಣ ಖಾತೆಗೆ ಜಮಾ ಆಗದ ಬಗ್ಗೆ ಆತನಿಗೆ…

Read More

ತಿಮರೋಡಿ ಗಡಿಪಾರು ಆದೇಶ. ವಿರೋಧಿಸಿ ಪ್ರತಿಭಟನೆಗೆ ಅನುಮತಿ ನಿರಾಕರಣೆ.

ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆಯ ಸ್ಥಾಪಕಾಧ್ಯಕ್ಷ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಗಡಿಪಾರು ಮಾಡಿ ಆದೇಶ ಮಾಡಿರುವ ವಿರುದ್ಧ ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆಯಿಂದ ನಡೆಸಲು ಉದ್ದೇಶಿಸಿದ್ದ ಪ್ರತಿಭಟನೆಗೆ ಅನುಮತಿ ನಿರಾಕರಿಸಿ ಬೆಳ್ತಂಗಡಿ ತಹಶೀಲ್ದಾರ್ ಆದೇಶ ಹೊರಡಿಸಿದ್ದಾರೆ. ಬೆಳ್ತಂಗಡಿ ತಾಲೂಕಿನ ಉಜಿರೆಯ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಒಂದು ವರ್ಷ ಗಡಿಪಾರು ಮಾಡಿ ಸೆ.18 ರಂದು ಪುತ್ತೂರು ಸಹಾಯಕ ಆಯುಕ್ತ (ಎಸಿ) ಸ್ಟೆಲ್ಲಾ ವರ್ಗಿಸ್ ಆದೇಶ ಹೊರಡಿಸಿದ್ದರು.ಈ ಗಡಿಪಾರು ಆದೇಶದ ವಿರುದ್ಧ…

Read More

ಧರ್ಮಸ್ಥಳ ಪ್ರಕರಣ.ಇಂದು ಚಿನ್ನಯ್ಯನ ಹೇಳಿಕೆ ಪೂರ್ಣಗೊಳ್ಳುವ ನಿರೀಕ್ಷೆ.

ಧರ್ಮಸ್ಥಳ ಪ್ರಕರಣದಲ್ಲಿ ಆರೋಪಿಯಾಗಿರುವ  ಬುರುಡೆ ಚಿನ್ನಯ್ಯನನ್ನು ಶಿವಮೊಗ್ಗ ಜೈಲಿನಿಂದ ಬೆಳ್ತಂಗಡಿ ನ್ಯಾಯಾಲಯಕ್ಕೆ ಶನಿವಾರ ಕರೆತಂದಿದ್ದು ಇಂದು ಆತ ನ್ಯಾಯಾಲಯದ ಮುಂದೆ‌ತನ್ನ ಹೇಳಿಕೆಯನ್ನು ದಾಖಲಿಸಲಿದ್ದಾನೆ .  ಬೆಳ್ತಂಗಡಿ ನ್ಯಾಯಾಲಯಕ್ಕೆ ಇಂದು ಬೆಳಗ್ಗೆ  ಶಿವಮೊಗ್ಗ ಜೈಲಿನಿಂದ  ಭದ್ರತೆಯಲ್ಲಿ ಕರೆದುಕೊಂಡು ಬಂದಿದ್ದು. 11.30 ಕ್ಕೆ ಆತನನ್ನು ನ್ಯಾಯಾಲಯಕ್ಕೆ ಕರೆದೊಯ್ಯಲಾಗಿದೆ  .ಬುರುಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಧೀಶರ ಮುಂದೆ BNSS 183 ಹೇಳಿಕೆ ನೀಡಲಿದ್ದಾನೆ. ಈತ ಈ ಹಿಂದೆ ಎರಡು ದಿನಗಳ ಕಾಲ ಹೇಳಿಕೆ ನೀಡಿದ್ದು ಈತನ ಹೇಳಿಕೆ ಪೂರ್ಣಗೊಳ್ಳದ ಹಿನ್ನಲೆಯಲ್ಲಿ ಇಂದು ಮುಂದುವರಿದ ಹೇಳಿಕೆ…

Read More
error: Content is protected !!