ಪಿಆರ್‌ಸಿ ಅಧಿಸೂಚನೆ ತಕ್ಷಣ ಹಿಂಪಡೆಯಿರಿ : ಬಿಜೆಪಿ ಆಗ್ರಹ

ಮಂಗಳೂರು:ಕರ್ನಾಟಕ ಸರ್ಕಾರ ಜಾರಿಗೊಳಿಸಿರುವ ಶಾಶ್ವತ ನಿವಾಸಿ ಪ್ರಮಾಣಪತ್ರ (PRC) ಅಧಿಸೂಚನೆಯನ್ನು ತಕ್ಷಣವೇ ಹಿಂಪಡೆಯಬೇಕು ಎಂದು ಬಿಜೆಪಿ ಆಗ್ರಹಿಸಿದೆ. ಈ ನೀತಿ ಅಕ್ರಮ ವಲಸಿಗರಿಗೆ ಸರ್ಕಾರಿ ಸೌಲಭ್ಯ ಕಲ್ಪಿಸಿ, ಮತದಾರರ ಪಟ್ಟಿಗೆ ಸೇರಿಸುವ ಉದ್ದೇಶ ಹೊಂದಿದ್ದು, ಇದು ಸಂವಿಧಾನ ವಿರೋಧಿ ಹಾಗೂ ರಾಷ್ಟ್ರೀಯ ಭದ್ರತೆಗೆ ಅಪಾಯ ಉಂಟುಮಾಡಲಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಅಧ್ಯಕ್ಷ ಸತೀಶ್ ಕುಂಪಲ ಆತಂಕ ವ್ಯಕ್ತಪಡಿಸಿದರು. ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಂದಾಯ ಇಲಾಖೆಯ ಮೂಲಕ ಪಿಆರ್‌ಸಿ ನೀಡುವ…

Read More

ಆಟೋ ದರ ಏರಿಕೆಗೆ ಒತ್ತಾಯ; ಕನಿಷ್ಠ ಬಾಡಿಗೆ ₹50ಕ್ಕೆ ಹೆಚ್ಚಳಕ್ಕೆ ಬೇಡಿಕೆ

ಮಂಗಳೂರು, ಜು.11: ಎಲ್‌ಪಿಜಿ, ಸಿಎನ್‌ಜಿ ಸೇರಿದಂತೆ ಇಂಧನ ದರ ಹಾಗೂ ಬಿಡಿಭಾಗಗಳ ಬೆಲೆ ಏರಿಕೆಯಿಂದ ಸಂಕಷ್ಟದಲ್ಲಿರುವ ಆಟೋರಿಕ್ಷಾ ಚಾಲಕರಿಗೆ ನೆರವಾಗಲು ಕನಿಷ್ಠ ಪ್ರಯಾಣ ದರವನ್ನು ₹35ರಿಂದ ₹50ಕ್ಕೆ, ನಂತರದ ಪ್ರತಿ ಕಿ.ಮೀ. ದರವನ್ನು ₹20ರಿಂದ ₹30ಕ್ಕೆ ಹೆಚ್ಚಳಗೊಳಿಸುವಂತೆ ವಿವಿಧ ಆಟೋರಿಕ್ಷಾ ಸಂಘಟನೆಗಳು ಒತ್ತಾಯಿಸಿವೆ. ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಅಧ್ಯಕ್ಷತೆಯಲ್ಲಿ ನಡೆದ ಪ್ರಾದೇಶಿಕ ಸಾರಿಗೆ ಸಭೆಯಲ್ಲಿ, ನಗರ ಮತ್ತು ಗ್ರಾಮಾಂತರ ಆಟೋರಿಕ್ಷಾಗಳಿಗೆ ಪ್ರತ್ಯೇಕ ಕನಿಷ್ಠ ದರ ನಿಗದಿ ಮಾಡಬೇಕು, ಉಚಿತ ಕಾಯುವಿಕೆ ಅವಧಿಯನ್ನು 18 ನಿಮಿಷದಿಂದ 10 ನಿಮಿಷಕ್ಕೆ…

Read More

ಎಸ್.ಡಿ.ಟಿ.ಯು ಮಂಗಳೂರು ಗ್ರಾಮಾಂತರ ಜಿಲ್ಲಾ ಸಮಿತಿಯ ಮಾಸಿಕ ಸಭೆ: ರಾಜ್ಯ ನಾಯಕರಿಗೆ ಸನ್ಮಾನ

ಮಂಗಳೂರು: ಸೋಶಿಯಲ್ ಡೆಮಾಕ್ರಟಿಕ್ ಟ್ರೇಡ್ ಯೂನಿಯನ್ (ಎಸ್.ಡಿ.ಟಿ.ಯು) ಮಂಗಳೂರು ಗ್ರಾಮಾಂತರ ಜಿಲ್ಲಾ ಸಮಿತಿಯ ಮಾಸಿಕ ಸಭೆಯು ಜುಲೈ 9, 2026ರಂದು ಜಿಲ್ಲಾ ಕಚೇರಿಯಲ್ಲಿ ನಡೆಯಿತು. ಜಿಲ್ಲಾ ಉಪಾಧ್ಯಕ್ಷರಾದ ಹೆನ್ರಿ ಡಿ.ಸೋಜಾ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಸಂಘಟನೆಯ ಚಟುವಟಿಕೆಗಳು, ಅಸಂಘಟಿತ ಕಾರ್ಮಿಕರ ಸಮಸ್ಯೆಗಳು ಹಾಗೂ ಮುಂದಿನ ದಿನಗಳ ಕಾರ್ಯಯೋಜನೆ ಕುರಿತು ಸಮಗ್ರವಾಗಿ ಚರ್ಚಿಸಲಾಯಿತು. ಈ ಸಂದರ್ಭದಲ್ಲಿ ಎಸ್.ಡಿ.ಟಿ.ಯು ಕರ್ನಾಟಕದ ರಾಜ್ಯಾಧ್ಯಕ್ಷರಾದ ಅಥಾವುಲ್ಲಾ ಜೋಕಟ್ಟೆ, ರಾಜ್ಯ ಪ್ರಧಾನ ಕಾರ್ಯದರ್ಶಿ ಸಲೀಂ ಜಿ.ಕೆ. ಗುರುವಾಯನಕೆರೆ, ರಾಜ್ಯ ಸಮಿತಿ ಸದಸ್ಯರಾದ ಅಬ್ದುಲ್…

Read More

ಕನ್ಯಾನ: ಬಾವಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ

ಬಂಟ್ವಾಳ: ಕನ್ಯಾನ ಸಮೀಪದ ಕೊಣಲೆ ಮಳವೆಲು ಗ್ರಾಮದಲ್ಲಿ ವ್ಯಕ್ತಿಯೊಬ್ಬರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.ಮೃತರನ್ನು ಕೊಣಲೆ ಮಳವೆಲು ನಿವಾಸಿ ಈಶ್ವರ ನಾಯ್ಕ (51) ಎಂದು ಗುರುತಿಸಲಾಗಿದೆ. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ವಿಟ್ಲ ಪೊಲೀಸ್ ಠಾಣೆಯ ಉಪನಿರೀಕ್ಷಕ ರಾಮಕೃಷ್ಣ ಹಾಗೂ ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸಿ ಮಹಜರು ನಡೆಸಿ ಪರಿಶೀಲನೆ ಕೈಗೊಂಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆತ್ಮಹತ್ಯೆಗೆ ಕಾರಣವೇನು ಎಂಬ ಕುರಿತು ತನಿಖೆ ಮುಂದುವರಿಸಿದ್ದಾರೆ.

Read More

ಮಂಗಳೂರು ಮತ್ತು ಗೋವಾದ ಕೊಂಕಣಿ ಕವಯತ್ರಿಯರು ಚಾರೊಳಿ ರಾಷ್ಟ್ರೀಯ ಸನ್ಮಾನಕ್ಕೆ ಆಯ್ಕೆ: ರೇಮಂಡ್ ಡಿಕುನಾ ತಾಕೊಡೆ.

ಮಂಗಳೂರಿನಲ್ಲಿ ನಡೆಯುವ ಕೊಂಕಣಿ ೫ನೇ ರಾಷ್ಟ್ರೀಯ ಚಾರೊಳಿ ಸಾಹಿತ್ಯ ಸಮ್ಮೇಳನದಲ್ಲಿ ಖ್ಯಾತ ಹಿರಿಯ ಕವಯತ್ರಿಯರಾದ ಮಂಗಳೂರಿನ ಅರುಂಧತಿ ವಿ ರಾವ್ ಮತ್ತು ಗೋವಾದ ಆನ್ನಿ ದೆ ಕೊಲ್ವಾಲೆ ಆಯ್ಕೆ ಆಗಿದ್ದಾರೆ ಎಂದು ಸಮ್ಮೇಳನದ ಅಧ್ಯಕ್ಷರಾದ ರೇಮಂಡ್ ಡಿಕೂನಾ ತಾಕೊಡೆ ಮಾಹಿತಿ ನೀಡಿದರು.ಅವರು ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ,೧೯ ಜುಲೈ ಒಂದು ದಿನದ ಕೊಂಕಣಿ ಐದನೇ ಚಾರೊಳಿ ಸಾಹಿತ್ಯ ಸಮ್ಮೇಳನಕ್ಕೆ ದೆಹಲಿ, ಮಹಾರಾಷ್ಟ್ರ, ಗೋವಾ, ಕರ್ನಾಟಕ, ಕಾರವಾರ, ಕೇರಳ ಮತ್ತು ದುಬೈನ ಕವಿಗಳು ನೊಂದಾವಣೆ ಮಾಡಿದ್ದಾರೆ. ಹಿಂದಿನ…

Read More

ಕೊಲ್ಲೂರು ಮೂಕಾಂಬಿಕಾ ದೇಗುಲಕ್ಕೆ ಕೇರಳ ಸಿಎಂ ವಿ.ಡಿ. ಸತೀಶನ್ ಭೇಟಿ

ಉಡುಪಿ: ಕೇರಳ ಮುಖ್ಯಮಂತ್ರಿ ವಿ.ಡಿ. ಸತೀಶನ್ ಅವರು ಶನಿವಾರ ಉಡುಪಿ ಜಿಲ್ಲೆಯ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ, ದೇವಿಯ ವಿಶೇಷ ಪೂಜೆಯಲ್ಲಿ ಭಾಗಿಯಾಗಿ ಆಶೀರ್ವಾದ ಪಡೆದರು. ಮುಂಜಾನೆಯೇ ದೇವಸ್ಥಾನಕ್ಕೆ ಆಗಮಿಸಿದ ಮುಖ್ಯಮಂತ್ರಿ, ಶ್ರೀ ಮೂಕಾಂಬಿಕಾ ದೇವಿಗೆ ವಿಶೇಷ ಪೂಜೆ ಸಲ್ಲಿಸಿ ರಾಜ್ಯದ ಸುಭಿಕ್ಷತೆ ಹಾಗೂ ಜನರ ಕಲ್ಯಾಣಕ್ಕಾಗಿ ಪ್ರಾರ್ಥನೆ ಸಲ್ಲಿಸಿದರು. Z-ಪ್ಲಸ್ ಭದ್ರತೆಯ ನಡುವೆ ಅವರು ದೇವಸ್ಥಾನಕ್ಕೆ ಆಗಮಿಸಿದ್ದರಿಂದ ಕ್ಷೇತ್ರದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು. ಮುಖ್ಯಮಂತ್ರಿಯಾದ ಬಳಿಕ ಸತೀಶನ್ ಅವರ ಇದು ಕೊಲ್ಲೂರು…

Read More

ವಿ.ಡಿ. ಸತೀಶನ್ ಅವರನ್ನು ಭೇಟಿ ಮಾಡಿ ಸ್ವಾಗತಿಸಿದ ಐವನ್ ಡಿ’ಸೋಜಾ

ಮಂಗಳೂರು:ಕರ್ನಾಟಕ ವಿಧಾನ ಪರಿಷತ್ ಸದಸ್ಯರಾದ ಐವನ್ ಡಿ’ಸೋಜಾ ಅವರು ಶುಕ್ರವಾರ ಮಂಗಳೂರಿಗೆ ಆಗಮಿಸಿದ ಕೇರಳ ರಾಜ್ಯದ ಸನ್ಮಾನ್ಯ ಮುಖ್ಯಮಂತ್ರಿ ವಿ.ಡಿ. ಸತೀಶನ್ ಅವರನ್ನು ಆತ್ಮೀಯವಾಗಿ ಭೇಟಿ ಮಾಡಿ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಉಭಯ ರಾಜ್ಯಗಳ ನಡುವಿನ ಸೌಹಾರ್ದ ಸಂಬಂಧ, ಕರಾವಳಿ ಭಾಗದ ಅಭಿವೃದ್ಧಿ, ಪರಸ್ಪರ ಸಹಕಾರ ಹಾಗೂ ಜನಪರ ವಿಚಾರಗಳ ಕುರಿತು ಆತ್ಮೀಯ ಮಾತುಕತೆ ನಡೆಯಿತು. ಮಂಗಳೂರಿಗೆ ಆಗಮಿಸಿದ ಮುಖ್ಯಮಂತ್ರಿ ವಿ.ಡಿ. ಸತೀಶನ್ ಅವರಿಗೆ ಐವನ್ ಡಿ’ಸೋಜಾ ಅವರು ಶುಭಾಶಯಗಳನ್ನು ತಿಳಿಸಿದರು. ಈ ಭೇಟಿಯು ಕರ್ನಾಟಕ–ಕೇರಳ ರಾಜ್ಯಗಳ…

Read More

ಮಂಗಳೂರು ಮಿತ್ರ ಮಂಡಳಿ -2.0 ಜುಲೈ 18 ರಂದು ಉದ್ಘಾಟನೆ

1920 ರ ಕಾಲಘಟ್ಟದಲ್ಲಿ ಕರಾವಳಿ ಕರ್ನಾಟಕವೂ ಸೇರಿದಂತೆ ಇಡೀ ರಾಷ್ಟ್ರವು ಸ್ವಾತಂತ್ರ್ಯ ಹೋರಾಟದಲ್ಲಿ ತೀವ್ರವಾಗಿ ತೊಡಗಿಸಿಕೊಂಡಿದ್ದ ಸಮಯದಲ್ಲಿ ರಾಷ್ಟ್ರೀಯತೆ ಎನ್ನುವುದು ಸಾಹಿತ್ಯದ ಮುಖ್ಯ ತಿರುಳಾಗಿ ಸಾಹಿತಿಗಳ ಲೇಖನದಿಂದ ಹೊರಹೊಮ್ಮುತ್ತಿದ್ದ ಕಾಲ. ಈ ಹಂತದಲ್ಲಿ ಕನ್ನಡ ಭಾಷೆಯ ಮೂಲಕ ರಾಷ್ಟ್ರೀಯತೆಯ ಭಾವವನ್ನು ಹರಡಿಸಲು ಕರಾವಳಿಯ ಕನ್ನಡ ಪಂಡಿತರು ದೃಢವಾದ ಹೆಜ್ಜೆಯನ್ನು ಇಟ್ಟಿದ್ದರು. ಮಂಗಳೂರಿನ ಕೆನರಾ ಹೈಸ್ಕೂಲಿನ ಮರದಡಿಯಲ್ಲಿ ಸಮಾನ ಮನಸ್ಕ ಸಾಹಿತಿಗಳು ಸೇರಿ ಚಿಂತನೆ ನಡೆಸಿ, ಕನ್ನಡ ಸಾಹಿತ್ಯ ಲೋಕದಲ್ಲಿಯೂ ಅನೇಕ ಪ್ರಯೋಗಗಳನ್ನು ಮಾಡಲು ತಮ್ಮನ್ನು ಸಮರ್ಪಿಸಿಕೊಂಡಿದ್ದರು.. ಅವರಿಗೆಲ್ಲಾ…

Read More

ಉಚಿತ ಕ್ಷೌರ ಸೇವೆಯಿಂದ ಆಶ್ರಮವಾಸಿಗಳ ಮುಖದಲ್ಲಿ ಮಂದಹಾಸ; ಕೋಟ ಸವಿತ ಸಮಾಜದ ಮಾನವೀಯ ಸೇವೆ

ಉಡುಪಿ: ಸಮಾಜಸೇವೆ ಎಂದರೆ ಕೇವಲ ಆರ್ಥಿಕ ನೆರವು ನೀಡುವುದಲ್ಲ, ತಮ್ಮ ವೃತ್ತಿಯನ್ನೇ ಸೇವೆಯ ಮಾಧ್ಯಮವನ್ನಾಗಿ ಮಾಡಿಕೊಂಡು ಮಾನವೀಯತೆಯನ್ನು ಮೆರೆದರೂ ಅದು ನಿಜವಾದ ಸಮಾಜಸೇವೆಯೇ ಎಂಬುದಕ್ಕೆ ಉಡುಪಿ ಜಿಲ್ಲೆಯ ಕೋಟ ವಲಯ ಸವಿತ ಸಮಾಜ ಮಾದರಿಯಾಗಿದೆ. ಕಳೆದ ಒಂದು ವರ್ಷದಿಂದ ಸಂಘದ ಸದಸ್ಯರು ಸಾಲಿಗ್ರಾಮ ಸಮೀಪದ ತೋಡ್ಕಟ್ಟು ಹೊಸ ಬದುಕು ಆಶ್ರಮಕ್ಕೆ ಪ್ರತಿ ತಿಂಗಳು ಭೇಟಿ ನೀಡಿ ಆಶ್ರಮವಾಸಿಗಳಿಗೆ ಉಚಿತ ಕ್ಷೌರ ಸೇವೆ ಸಲ್ಲಿಸುವ ಮೂಲಕ ಆತ್ಮಗೌರವ ಮತ್ತು ಆತ್ಮವಿಶ್ವಾಸ ತುಂಬುವ ಕಾರ್ಯದಲ್ಲಿ ತೊಡಗಿದ್ದಾರೆ. ತೋಡ್ಕಟ್ಟು ಹೊಸ ಬದುಕು…

Read More

ಬೆಳಗಾವಿಯಲ್ಲಿ ಆರ್‌ಎಸ್‌ಎಸ್‌ ರಾಷ್ಟ್ರೀಯ ಪ್ರಚಾರಕರ ಬೈಠಕ್ ಆರಂಭ

ಬೆಳಗಾವಿ: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್‌) ವಾರ್ಷಿಕ ಅಖಿಲ ಭಾರತೀಯ ಪ್ರಾಂತ ಪ್ರಚಾರಕ್ ಬೈಠಕ್ ಶುಕ್ರವಾರ ಬೆಳಗಾವಿಯಲ್ಲಿ ಆರಂಭಗೊಂಡಿದ್ದು, ದೇಶದ ವಿವಿಧ ಭಾಗಗಳಿಂದ ಹಿರಿಯ ಪ್ರಚಾರಕರು ಸಭೆಯಲ್ಲಿ ಭಾಗವಹಿಸಿದ್ದಾರೆ. ಮೂರು ದಿನಗಳ ಈ ಸಭೆ ಜುಲೈ 12ರಂದು ಮುಕ್ತಾಯಗೊಳ್ಳಲಿದೆ. ಆರ್‌ಎಸ್‌ಎಸ್‌ ಸರಸಂಘಚಾಲಕ ಮೋಹನ್ ಭಾಗವತ್ ಹಾಗೂ ಸರಕಾರ್ಯವಾಹ ದತ್ತಾತ್ರೇಯ ಹೊಸಬಾಳೆ ಅವರ ಸಮ್ಮುಖದಲ್ಲಿ ನಡೆಯುತ್ತಿರುವ ಸಭೆಯಲ್ಲಿ ರಾಷ್ಟ್ರವ್ಯಾಪಿ ಜನಗಣತಿ, ಸಂಘಟನಾ ಚಟುವಟಿಕೆಗಳು, ಶಾಖೆಗಳ ವಿಸ್ತರಣೆ ಸೇರಿದಂತೆ ಹಲವು ಮಹತ್ವದ ವಿಷಯಗಳ ಕುರಿತು ಚರ್ಚೆ ನಡೆಯಲಿದೆ. ಸಭೆಯಲ್ಲಿ ದೇಶದ…

Read More
error: Content is protected !!