ಕೆನರಾ ಎಂಜಿನಿಯರಿಂಗ್ ಕಾಲೇಜಿನಲ್ಲಿ ‘ಫೈನಲ್ ಪಿಚ್ ಡೇ’

ಮಂಗಳೂರು:ಕೆನರಾ ಎಂಜಿನಿಯರಿಂಗ್ ಕಾಲೇಜಿನ ಉದ್ಯಮಶೀಲತಾ ಅಭಿವೃದ್ಧಿ ಕೋಶ (ಇ.ಡಿ.ಸಿ.) ವತಿಯಿಂದ ಎಕ್ಸ್‌ಪ್ಲೋರಿಂಗ್ ಎಂಟ್ರಪ್ರಿನರ್ಶಿಪ್ ಪ್ರೋಗ್ರಾಂನ ಫೈನಲ್ ಪಿಚ್ ಡೇ ಆಯೋಜಿಸಲಾಯಿತು. ಉಡುಪಿ ಎಸ್.ಎಂ.ವಿ.ಐ.ಟಿ.ಎಂ. ಮತ್ತು ಮಂಗಳೂರು ಕೆನರಾ ಎಂಜಿನಿಯರಿಂಗ್ ಕಾಲೇಜುಗಳಿಂದ ಆಯ್ಕೆಯಾದ 14 ವಿದ್ಯಾರ್ಥಿ ತಂಡಗಳು ತಮ್ಮ ಸ್ಟಾರ್ಟ್‌ಅಪ್ ಕಲ್ಪನೆಗಳನ್ನು ಸೆಕ್ಷನ್ ಇನ್ಫಿನ್–8 ಫೌಂಡೇಶನ್ (ಎಸ್‌.ಐ.–8) ನೇಮಕ ಮಾಡಿದ ತೀರ್ಪುಗಾರರ ಮುಂದಿಡಿದರು. ತೀರ್ಪುಗಾರರಾಗಿ ಶ್ರೀ ಅಜಯ್ ಪ್ರಭು, ವ್ಯವಸ್ಥಾಪಕ ನಿರ್ದೇಶಕ, ಕೆ.ವಿ.ಪಿ. ಬಿಸಿನೆಸ್ ಸೊಲ್ಯೂಶನ್ಸ್, ಶ್ರೀ ಪುನೀತ್ ರೈ, ಇಂಕ್ಯುಬೇಶನ್ ಮ್ಯಾನೇಜರ್, ಅಟಲ್ ಇಂಕ್ಯುಬೇಶನ್ ಸೆಂಟರ್, ನಿಟ್ಟೆ,…

Read More

ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದಿಂದ ಪ್ರಕಟಿತ ಪುಸ್ತಕ- ಕಾಸರಗೋಡು ಜಿಲ್ಲೆಯ ಕನ್ನಡ ಶಾಲೆಗಳಿಗೆ ಉಚಿತವಾಗಿ ವಿತರಣೆ

ಕರ್ನಾಟಕ ಗಡಿ ಅಭಿವೃದ್ಧಿ ಪ್ರಾಧಿಕಾರ, ಬೆಂಗಳೂರು ಇವರ ವತಿಯಿಂದ ಕೇರಳದ ಶ್ರೀಮದ್ ಎಡನೀರು ಮಠ, ಕಾಸರಗೋಡು ಇವರ ಸಹಯೋಗದೊಂದಿಗೆ ದಿನಾಂಕ:03.09.2025ರಂದು ಸಂಜೆ 7.15 ಗಂಟೆಗೆ ಕಾಸರಗೋಡು ಜಿಲ್ಲೆಯ ಗಡಿ ಭಾಗದ ಕನ್ನಡ ಶಾಲಾ ವಿದ್ಯಾರ್ಥಿಗಳಿಗೆ ಉಪಯೋಗವಾಗುವಂತೆ ಎಲ್ಲಾ ಕನ್ನಡ ಶಾಲೆಗಳಿಗೆ ಹಾಗೂ ಗ್ರಂಥಾಲಯಗಳಿಗೆ ಕನ್ನಡ ಪುಸ್ತಕಗಳನ್ನು ವಿತರಿಸಲಾಯಿತು. ಪ್ರೋ. ಕೆ.ಸಿ ಶಿವಪ್ಪನವರು ರಚಿಸಿದ ಮುದ್ದುರಾಮನ 10 ಆವೃತ್ತಿ ಕೃತಿಗಳನ್ನು ಕೂಡ ಈ ಸಂದರ್ಭದಲ್ಲಿ ವಿತರಿಸಲಾಯಿತು. ಹೊರನಾಡು ಗಡಿ ಕನ್ನಡಿಗರ ಸಮಸ್ಯೆಗಳ ಬಗ್ಗೆ ಗಡಿ ಅಭಿವೃದ್ಧಿ ಪ್ರಾಧಿಕಾರ ಹೊರತಂದಿರುವ…

Read More

ಮೋದಿ ಸರ್ಕಾರದಿಂದ ಜನತೆಗೆ ಐತಿಹಾಸಿಕ ಕೊಡುಗೆ :- ಶಾಸಕ ಕಾಮತ್

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಜಿಎಸ್‌ಟಿಯನ್ನು ಮತ್ತಷ್ಟು ಜನಸ್ನೇಹಿ ಹಾಗೂ ಸರಳೀಕರಣಗೊಳಿಸುವ ಮೂಲಕ ದೇಶದ ಆರ್ಥಿಕತೆಗೆ ನವಚೈತನ್ಯ ತುಂಬಿದ್ದಲ್ಲದೇ, ಜನರ ಜೀವನ ಸುಧಾರಣೆಗೆ ಮಹತ್ವದ ಕ್ರಮ ಕೈಗೊಂಡಿದೆ. ಆ ಮೂಲಕ ನವ ಭಾರತದ ನಿರ್ಮಾಣಕ್ಕೆ ಮುಂದಡಿಯಿಟ್ಟಿದೆ ಎಂದು ಶಾಸಕ ವೇದವ್ಯಾಸ ಕಾಮತ್ ರವರು ಹೇಳಿದರು. ಅಮೆರಿಕಾದಂತಹ ಜಾಗತಿಕ ಮಟ್ಟದ ದೈತ್ಯ ರಾಷ್ಟ್ರಗಳ ಸವಾಲುಗಳನ್ನು ಮೆಟ್ಟಿ ನಿಂತು ದೇಶ ಅಭಿವೃದ್ಧಿಯೆಡೆಗೆ ಸಾಗುತ್ತಿದ್ದು ಈ ಐತಿಹಾಸಿಕ ನಿರ್ಧಾರದಿಂದಾಗಿ ದೈನಂದಿನ, ಶೈಕ್ಷಣಿಕ, ಆರೋಗ್ಯ, ರಕ್ಷಣಾ, ಕೃಷಿ, ಆಟೋಮೊಬೈಲ್, ಎಲೆಕ್ಟ್ರಾನಿಕ್, ಹೀಗೆ ಜನಸಾಮಾನ್ಯರ…

Read More

ವೆನ್ಲಾಕ್ ಆಸ್ಪತೆಯ ಮೂಲ ಸೌಕರ್ಯವನ್ನು ಇನ್ನಷ್ಟು ಪ್ರಮಾಣದಲ್ಲಿ ಹೆಚ್ಚಳ ಮಾಡುವ ಉದ್ದೇಶದಿಂದ ವಿಭಾಗೀಯ ಆಸ್ಪತ್ರೆಯನ್ನಾಗಿ ಮಾಡಲು ಕ್ರಮವನ್ನು ಶೀಘ್ರವೇ ಕೈಗೊಳ್ಳಲಾಗುವುದು -ವಿಧಾನ ಪರಿಷತ್ ಶಾಸಕರಾದ ಐವನ್ ಡಿಸೋಜ

ವೆನ್ಲಾಕ್ ಆಸ್ಪತೆಯ ಮೂಲ ಸೌಕರ್ಯವನ್ನು ಇನ್ನಷ್ಟು ಪ್ರಮಾಣದಲ್ಲಿ ಹೆಚ್ಚಳ ಮಾಡುವ ಉದ್ದೇಶದಿಂದ ವಿಭಾಗೀಯ ಆಸ್ಪತ್ರೆಯನ್ನಾಗಿ ಮಾಡಲು ಕ್ರಮವನ್ನು ಶೀಘ್ರವೇ ಕೈಗೊಳ್ಳಲಾಗುವುದೆಂದು ವಿಧಾನ ಪರಿಷತ್ ಶಾಸಕರಾದ ಐವನ್ ಡಿಸೋಜ ಹೇಳಿದರು. ಅವರು ಮನಪಾ ಕಚೇರಿಯಲ್ಲಿ ಕರೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿ , ವೆನ್ಲಾಕ್ ಆಸ್ಪತೆಯನ್ನು ವಿಭಾಗೀಯ ಆಸ್ಪತ್ರೆಯನ್ನಾಗಿ ಮಾಡಿದರೆ ಈಗ ಇರುವ ೪೦೦ ಸಿಬ್ಬಂದಿಗಳು ೮೦೦ ಸಿಬ್ಬಂದಿಗೆ ಹೆಚ್ಚಳವಾಗುತ್ತಾರೆ . ಇದರ ಜೊತೆಗೆ ಆಡಳಿತ ಅಧಿಕಾರಿ , ಹಣಕಾಸು ಅಧಿಕಾರಿಗಳು ಇಲ್ಲಿಗೆ ಬರುತ್ತಾರೆ . ಒಂದು ಕೊಠಡಿಯಿಂದ ಇನ್ನೊಂದು ಕೊಠಡಿ…

Read More

ಕುಡುಬಿ ಸಮುದಾಯವನ್ನು ಪರಿಶಿಷ್ಟ ಜಾತಿ ಪಟ್ಟಿಗೆ ಕೂಡಲೇ ಕೇಂದ್ರ ಸರಕಾರ ಸೇರಿಸಬೇಕು – ವಿಧಾನ ಪರಿಷತ್ ನ ಶಾಸಕರಾದ ಐವನ್ ಡಿಸೋಜ

ಕುಡುಬಿ ಸಮುದಾಯವನ್ನು ಪರಿಶಿಷ್ಟ ಜಾತಿ ಪಟ್ಟಿಗೆ ಕೂಡಲೇ ಕೇಂದ್ರ ಸರಕಾರ ಸೇರಿಸಬೇಕೆಂದು ವಿಧಾನ ಪರಿಷತ್ ನ ಶಾಸಕರಾದ ಐವನ್ ಡಿಸೋಜ ತಿಳಿಸಿದರು . ಅವರು ಮನಪಾ ಕಚೇರಿಯಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ , ಕುಡುಬಿ ಸಮುದಾಯವನ್ನು ಪರಿಶಿಷ್ಟ ಜಾತಿ ಪಟ್ಟಿಗೆ ಕೂಡಲೇ ಸೇರಿಸುವ ಬಗ್ಗೆ ದಕ್ಷಿಣ ಕನ್ನಡ ಸಂಸದರು ಪಾರ್ಲಿಮೆಂಟ್ ನಲ್ಲಿ ಕೇಂದ್ರ ಸಾಮಾಜಿಕ ಅಭಿವೃದ್ಧಿ ಮಂತ್ರಿಗಳಲ್ಲಿ ಪ್ರಶ್ನೆಯನ್ನು ಕೇಳುತ್ತಾರೆ . ಆಗ ರಾಜ್ಯದಿಂದ ಯಾವುದೇ ಶಿಫಾರಸ್ಸು ಬಂದಿಲ್ಲ ಎಂದು ಸಿಗುತ್ತೆ . ಅನುಚ್ಛೇದ ೩೪೧ (೨)…

Read More

ಧ್ಯಾನಯೋಗದಿಂದ ಜೀವನದ ಸವಾಲುಗಳನ್ನು ದೂರ ಮಾಡಬಹುದು

ಮಂಗಳೂರು: ಜೀವನದ ಸವಾಲುಗಳಿಗೆ ಪರಿಹಾರ ಕಂಡುಕೊಳ್ಳಲು ಧ್ಯಾನಯೋಗದ ಮಹತ್ವ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಇದೇ ಹಿನ್ನೆಲೆಯಲ್ಲಿ “ಉತ್ತಮ ಜೀವನ ನಿರ್ವಹಣೆಗಾಗಿ ಹಿಮಾಲಯದ ಧ್ಯಾನಯೋಗ” ಎಂಬ ವಿಷಯದ ಕುರಿತು ಪರಮ ವಂದನೀಯ ಗುರುಮಾ ಅವರಿಂದ ವಿಶೇಷ ಪ್ರವಚನ ಮಂಗಳೂರಿನಲ್ಲಿ ನಡೆಯಲಿದೆ ಎಂದು ಆಯೋಜಕರಾದ ಚಂದ್ರಶೇಖರ ತಿಳಿಸಿದರು . ನಗರದ ಪತ್ರಿಕಾಭವನದಲ್ಲಿ ಮಾತಾಡಿದ ಅವರು, ಸೆಪ್ಟೆಂಬರ್ 9, 2025 ರಂದು ಸಂಜೆ 5 ಗಂಟೆಗೆ ಮಣ್ಣಗುಡ್ಡೆಯ ಸಂಘನಿಕೇತನ ಸಭಾಂಗಣದಲ್ಲಿ ಈ ಕಾರ್ಯಕ್ರಮ ಆಯೋಜನೆಯಾಗಲಿದ್ದು, ಎಲ್ಲಾ ವಯಸ್ಸಿನ ಜನರಿಗೆ ಮುಕ್ತವಾಗಿದೆ ಎಂದರು….

Read More

ಧರ್ಮಸ್ಥಳ ಪ್ರಕರಣ: ದೂರುದಾರ ಚಿನ್ನಯ್ಯ ಮತ್ತೆ ಎಸ್.ಐ.ಟಿ ಕಸ್ಟಡಿಗೆ

ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವಗಳನ್ನು ಹೂತಿಟ್ಟ ಪ್ರಕರಣದಲ್ಲಿ ಬಂಧಿತನಾಗಿರುವ ʻಬುರುಡೆʼ ಚಿನ್ನಯ್ಯನನ್ನ ಮತ್ತೆ 4 ದಿನಗಳ ಕಾಲ ಎಸ್‌ಐಟಿ ಕಸ್ಟಡಿಗೆ ನೀಡಿ ಕೋರ್ಟ್‌ ಆದೇಶಿಸಿದೆ. ಸೆ.6ರಂದು ಚಿನ್ನಯ್ಯನನ್ನ ಕೋರ್ಟ್‌ಗೆ ಹಾಜರುಪಡಿಸುವಂತೆ ಬೆಳ್ತಂಗಡಿ ನ್ಯಾಯಾಲಯ ಆದೇಶಿಸಿದೆ. 12 ದಿನಗಳ ಎಸ್‌ಐಟಿ ಕಸ್ಟಡಿ ಇಂದು ಅಂತ್ಯಗೊಂಡಿದ್ದ ಹಿನ್ನೆಲೆ ಚಿನ್ನಯ್ಯನನ್ನ (Chinnayya) ಬೆಳ್ತಂಗಡಿ ಕೋರ್ಟ್‌ಗೆ ಹಾಜರುಪಡಿಸಲಾಗಿತ್ತು. ಬೆಳ್ತಂಗಡಿ ತಾಲೂಕು ನ್ಯಾಯಾಲಯದ ಹೆಚ್ಚುವರಿ ವ್ಯಾವಹಾರಿಕ ಮತ್ತು ಪ್ರಥಮ ದರ್ಜೆ ನ್ಯಾಯಾಧೀಶರಾದ ವಿಜಯಾನಂದ.ಟಿ ಅವರ ಎದುರು ಹಾಜರುಪಡಿಸಲಾಗಿತ್ತು. ತನಿಖಾಧಿಕಾರಿ ಎಸ್ಪಿ ಜಿತೇಂದ್ರ ಕುಮಾರ್‌ ದಯಾಮ,…

Read More

ನಾರಾವಿ ಗ್ರಾಮ ಪಂಚಾಯತಿಗೆ ಶಾಸಕ ಕಿಶೋರ್ ಕುಮಾರ್ ಪುತ್ತೂರು ಅವರ ಭೇಟಿ.

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ನಾರಾವಿ ಗ್ರಾಮ ಪಂಚಾಯತಿಗೆ ವಿಧಾನ ಪರಿಷತ್ತಿನ ಸದಸ್ಯರಾದ ಕಿಶೋರ್ ಕುಮಾರ್ ಪುತ್ತೂರು ಅವರು ಭೇಟಿ ನೀಡಿದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹಾಗೂ ಕಾರ್ಯದರ್ಶಿಗಳೊಂದಿಗೆ ಸಭೆ ನಡೆಸಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿವಿಧ ಯೋಜನೆಗಳ ಪ್ರಗತಿಯ ಬಗ್ಗೆ ಚರ್ಚಿಸಿ ಪರಿಶೀಲಿಸಿದರು. ಕೇಂದ್ರ ಸರ್ಕಾರದ MGNREGA, ಪ್ರಧಾನ ಮಂತ್ರಿ ಆವಾಸ್ ಯೋಜನೆ, 15ನೇ ಹಣಕಾಸು ಅನುದಾನ, ಸ್ವಚ್ಛ ಭಾರತ ಮಿಷನ್ (SBM)…

Read More

ಸೆಪ್ಟೆಂಬರ್ – 5 ರಂದು ಪ್ರವಾದಿ ಮುಹಮ್ಮದ್(ಸ.ಅ) ಪೈಗಂಬರರ ಜನ್ಮದಿನವಾದ ಈದ್ ಮೀಲಾದ್ ಹಬ್ಬ ಆಚರಣೆ

ಮಂಗಳೂರು: ಈ ತಿಂಗಳ ೫ ನೇ ತಾರೀಖಿನಂದು ಪ್ರವಾದಿ ಮುಹಮ್ಮದ್(ಸ.ಅ) ಪೈಗಂಬರರ ಜನ್ಮದಿನವಾದ ಈದ್ ಮೀಲಾದ್ ಹಬ್ಬದ ಆಚರಣೆ ನಡೆಯಲಿದೆ ಎಂದು ಉಳ್ಳಾಲ ದರ್ಗಾ ಅಧ್ಯಕ್ಷರಾದ ಬಿ ಜಿ ಹನೀಫ್ ಹಾಜಿ ತಿಳಿಸಿದರು. ಅವರು ಮಂಗಳೂರಿನ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ , ವರ್ಷಂಪ್ರತೀ ನಡೆಸಿಕೊಂಡು ಬರುವಂತೆ. ಈ ವರ್ಷವೂ ಕೂಡ ಉಳ್ಳಾಲ ಜುಮ್ಮಾ ಮಸ್ಟಿದ್ ಮತ್ತು ಹಝ್ರತ್ ಸಯ್ಯದ್ ಮದನಿ ದರ್ಗಾದ ವತಿಯಿಂದ 27 ಮೊಹಲ್ಲಾಗಳ ಮತ್ತು 32 ಮದ್ರಸಗಳ ವಿದ್ಯಾರ್ಥಿಗಳು ಹಾಗೂ ಉಳ್ಳಾಲ ಮೊಹಲ್ಲಾ…

Read More

ಸೆಪ್ಟೆಂಬರ್ 27ರಂದು ಪಿ.ಎ. ಪುಥಮ ದರ್ಜೆ ಕಾಲೇಜಿನಲ್ಲಿ ನಡೆಯಲಿದೆ ‘ಕನ್‌ವರ್ಜೆನ್ಸ್‌ 2025’ ಕಾರ್ಯಕ್ರಮ

ಮಂಗಳೂರು: ಪಿ.ಎ.ಪ್ರಥಮ ದರ್ಜೆ ಕಾಲೇಜು ಮತ್ತು ಸೆಂಟರ್ ಫಾರ್ ಮ್ಯಾನೇಜ್‌ಮೆಂಟ್ ಸ್ಟಡೀಸ್ ಅಂಡ್ ರಿಸರ್ಚ್, ಪಿ.ಎ. ಕಾಲೇಜು ಆಫ್ ಎಂಜಿನಿಯರಿಂಗ್, ಸಂತ ಅಲೋಶಿಯಸ್ (ಪರಿಗಣಿತ ವಿಶ್ವವಿದ್ಯಾನಿಲಯ)ಇವರ ಸಹಯೋಗದೊಂದಿಗೆ ಸುಸ್ಥಿರ ಭವಿಷ್ಯದ ಕೃತಕ ಬುದ್ಧಿಮತ್ತೆಯ ಅಂತಾರಾಷ್ಟ್ರೀಯ ಸಮ್ಮೇಳನವಾದ ‘ಕನ್‌ವರ್ಜೆನ್ಸ್‌ 2025’ ಕಾರ್ಯಕ್ರಮವು ನಡುಪದವಿನ ಪಿ.ಎ. ಪುಥಮ ದರ್ಜೆ ಕಾಲೇಜಿನಲ್ಲಿ ಸೆಪ್ಟೆಂಬರ್ 27ರಂದು ನಡೆಯಲಿದೆ ಎಂದು ಪಿ.ಎ.ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಡಾ ಸರ್ಫ್ರಾಜ್ ಜೆ ಹಾಸಿಂ ತಿಳಿಸಿದರು . ಅವರು ಮಂಗಳೂರಿನ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ,…

Read More
error: Content is protected !!