ವಿಟ್ಲದಲ್ಲಿ ಹಲಸು ಮೇಳಕ್ಕೆ ಚಾಲನೆ

ವಿಟ್ಲ: ಜೆಸಿಐ ವಿಟ್ಲ, ಲಯನ್ಸ್ ಕ್ಲಬ್ ವಿಟ್ಲ, ಲಯನ್ಸ್ ಕ್ಲಬ್ ವಿಟ್ಲ ಸಿಟಿ, ಟೀಮ್ ಪುಣ್ಯಕೋಟಿ, ಬಿಲ್ಲವ ಸಂಘ ಹಾಗೂ ಮಹಿಳಾ ಬಿಲ್ಲವ ಸಂಘಗಳ ಆಶ್ರಯದಲ್ಲಿ ಟೀಮ್ ಉಬರ್ ನೇತೃತ್ವದಲ್ಲಿ ಆಯೋಜಿಸಲಾದ ಹಲಸು ಮೇಳಕ್ಕೆ ರಾಮಕೃಷ್ಣ ಪ್ರೌಢಶಾಲೆಯ ಸಂಚಾಲಕ ಕಾವು ಹೇಮನಾಥ್ ಶೆಟ್ಟಿ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ಲಯನ್ಸ್‌ನ ಮಾಜಿ ರಾಜ್ಯಪಾಲೆ ಡಾ. ಗೀತಾ ಪ್ರಕಾಶ್, ನಿಕಟ ಪೂರ್ವ ಪಿಆರ್‌ಒ ಸುದರ್ಶನ್ ಪಡಿಯರ್, ಜೆಸಿಐ ವಿಟ್ಲ ಅಧ್ಯಕ್ಷ ಸಂದೀಪ್, ಟೀಮ್ ಪುಣ್ಯಕೋಟಿ ಅಧ್ಯಕ್ಷ ಜಿತೇಶ್ ಕುಳ್ಳಾಲ್, ವ್ಯವಸ್ಥಾಪಕರಾದ…

Read More

ತುಳು ಚಿತ್ರರಂಗದ ಖ್ಯಾತ ನಟ ರವಿ ರಾಮಕುಂಜ ಅವರಿಂದ ‘ಪ್ರೀತಿಯೇ ಉಸಿರು’ ಚಿತ್ರದ ಶೀರ್ಷಿಕೆ ಪೋಸ್ಟರ್ ಬಿಡುಗಡೆ

ಉಪ್ಪಿನಂಗಡಿ: ಮುಂಬರುವ ಕನ್ನಡ ಚಲನಚಿತ್ರ ‘ಪ್ರೀತಿಯೇ ಉಸಿರು’ ಚಿತ್ರದ ಶೀರ್ಷಿಕೆ ಪೋಸ್ಟರ್‌ ಅನ್ನು ಉಪ್ಪಿನಂಗಡಿಯ ಶ್ರೀ ರಾಮಕುಂಜ ಪಿಯು ಕಾಲೇಜಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ತುಳು ಚಿತ್ರರಂಗದ ಖ್ಯಾತ ನಟ ರವಿ ರಾಮಕುಂಜ ಅವರು ಅನಾವರಣಗೊಳಿಸಿದರು. ಪ್ರೀತಿ, ನಂಬಿಕೆ, ತ್ಯಾಗ ಮತ್ತು ಮಾನವೀಯ ಸಂಬಂಧಗಳ ಸುತ್ತ ಹೆಣೆಯಲ್ಪಟ್ಟಿರುವ ‘ಪ್ರೀತಿಯೇ ಉಸಿರು’ ಚಿತ್ರವು ಭಾವನಾತ್ಮಕ ಕಥಾಹಂದರದ ಮೂಲಕ ಪ್ರೇಕ್ಷಕರ ಮನ ಗೆಲ್ಲಲು ಸಜ್ಜಾಗಿದೆ. ವಿಭಿನ್ನ ನಿರೂಪಣೆ ಮತ್ತು ಮನಮುಟ್ಟುವ ಕಥೆಯೊಂದಿಗೆ ಚಿತ್ರವು ಕುಟುಂಬ ಪ್ರೇಕ್ಷಕರು ಹಾಗೂ ಯುವ ಸಮೂಹವನ್ನು ಆಕರ್ಷಿಸುವ…

Read More

ನೇತ್ರಾವತಿ ನೀರಿನ ಮಟ್ಟ ಏರಿಕೆಯಾಗದೆ ಆತಂಕ; ವಾಲಿದ ಅಳತೆ ಸ್ತಂಭ ದುರಸ್ತಿಗೆ ಆಗ್ರಹ

ಕಳೆದ ವರ್ಷಕ್ಕೆ ಹೋಲಿಸಿದರೆ ನೀರಿನ ಮಟ್ಟದಲ್ಲಿ ಭಾರೀ ಕುಸಿತ; ತುಂಬೆ ಡ್ಯಾಂನಲ್ಲಿ ನೀರು ಸಂಗ್ರಹಕ್ಕೆ ಆದ್ಯತೆ ಬಂಟ್ವಾಳ, ಜು. 10: ಕಳೆದ ವರ್ಷ ಇದೇ ಅವಧಿಯಲ್ಲಿ ಅಪಾಯದ ಮಟ್ಟದ ಸಮೀಪ ಹರಿದು ಆತಂಕ ಸೃಷ್ಟಿಸಿದ್ದ ನೇತ್ರಾವತಿ ನದಿ, ಈ ಬಾರಿ ನಿರೀಕ್ಷಿತ ಪ್ರಮಾಣದಲ್ಲಿ ನೀರು ತುಂಬಿಕೊಳ್ಳದೆ ಆತಂಕಕ್ಕೆ ಕಾರಣವಾಗಿದೆ. ಮಳೆಗಾಲ ಆರಂಭವಾಗಿ ಹಲವು ದಿನಗಳಾದರೂ ನದಿಯ ನೀರಿನ ಮಟ್ಟ ಕಂದಾಯ ಇಲಾಖೆ ಅಳವಡಿಸಿರುವ ಮೀಟರ್ ಗೇಜ್‌ನ ಬುಡವನ್ನೇ ಸಮರ್ಪಕವಾಗಿ ತಲುಪಿಲ್ಲ. ಬಿ.ಸಿ.ರೋಡ್ ಸಮೀಪದ ಕಂಚಿಕಾರಪೇಟೆಯಲ್ಲಿ ನೇತ್ರಾವತಿ ನದಿಯ…

Read More

ಪಾಲಿಕೆ ಆಡಳಿತಾಧಿಕಾರಿ ಕಚೇರಿಗೆ ಮುತ್ತಿಗೆ, ಬೀದಿಬದಿ ವ್ಯಾಪಾರಿಗಳ ಧರಣಿ ಅಂತ್ಯ

ಮಂಗಳೂರು : ಬೀದಿಬದಿ ವ್ಯಾಪಾರಿಗಳು ಸಂಡೆ ಬಜಾರ್ ಗೆ ಮುಕ್ತ ಅವಕಾಶ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ನಡೆಯುತ್ತಿದ್ದ 24ಗಂಟೆಗಳ ಧರಣಿ ಸತ್ಯಾಗ್ರಹ ಪ್ರತಿಭಟನೆಗೆ ಬಂದು ಮನವಿ ಸ್ವೀಕರಿಸದ ನಗರ ಪಾಲಿಕೆ ಆಯುಕ್ತರ ವಿರುದ್ಧ ಆಕ್ರೋಶಗೊಂಡ ಪ್ರತಿಭಟನಾಕಾರರು ಧರಣಿ ಮುಕ್ತಾಯದ ಸಮಯ ಆಗಿತ್ತಿದ್ದಂತೆ ಪಾಲಿಕೆಯ ಮುಖ್ಯ ದ್ವಾರದ ಬಳಿ ಧರಣಿ ನಡೆಸುತ್ತಿದ್ದ ಸ್ಥಳದಿಂದ ತೆರಳಿ ನಗರ ಪಾಲಿಕೆ ಆಡಳಿತಧಿಕಾರಿ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು. ಜಿಲ್ಲಾಧಿಕಾರಿಗಳು ಬಾರದೆ ತೆರಳುವುದಿಲ್ಲ ಎಂದು ಪಟ್ಟು ಹಿಡಿದ ಬೀದಿ…

Read More

ಜು. 13ರಂದು ಪುತ್ತೂರಿನಲ್ಲಿ ‘ಸ್ವಾತಿ ಆಕೃತಿ ವೆಲ್‌ನೆಸ್’ ಉದ್ಘಾಟನೆ

ಯೋಗ, ಧ್ಯಾನ, ಪ್ರಾಣಾಯಾಮದ ಮೂಲಕ ದೈಹಿಕ–ಮಾನಸಿಕ ಆರೋಗ್ಯ ವೃದ್ಧಿಗೆ ವಿಶೇಷ ಕೇಂದ್ರ ಪುತ್ತೂರು, ಜು. 10: ಫಿಟ್‌ನೆಸ್ ಅಥವಾ ತೂಕ ಇಳಿಕೆ ಕೇಂದ್ರವಲ್ಲದೆ, ಯೋಗ, ಧ್ಯಾನ, ಪ್ರಾಣಾಯಾಮ ಸೇರಿದಂತೆ ವಿವಿಧ ಆರೋಗ್ಯಪರ ವಿಧಾನಗಳ ಮೂಲಕ ದೈಹಿಕ ಹಾಗೂ ಮಾನಸಿಕ ಆರೋಗ್ಯ ಕಾಪಾಡುವ ಉದ್ದೇಶದಿಂದ ಆರಂಭಿಸಲಾಗಿರುವ ‘ಸ್ವಾತಿ ಆಕೃತಿ ವೆಲ್‌ನೆಸ್’ ಸಂಸ್ಥೆಯು ಜುಲೈ 13ರಂದು ಬೆಳಿಗ್ಗೆ 10 ಗಂಟೆಗೆ ಪುತ್ತೂರಿನ ಅರುಣಾ ಕಲಾ ಮಂದಿರದ ಬಳಿಯ ಕೃಷ್ಣಪ್ರಸಾದ್ ಬಿಲ್ಡಿಂಗ್‌ನ ಎರಡನೇ ಮಹಡಿಯಲ್ಲಿ ಉದ್ಘಾಟನೆಗೊಳ್ಳಲಿದೆ. ನಗರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ…

Read More

ಶಾಲಾ ಬಸ್ ತೋಡಿಗೆ ಉರುಳಿ ಏಳು ವಿದ್ಯಾರ್ಥಿಗಳಿಗೆ ಗಾಯ; ಅದೃಷ್ಟವಶಾತ್ ಅಪಾಯದಿಂದ ಪಾರು

ಉಡುಪಿ, ಶಾಲಾ ವಿದ್ಯಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಖಾಸಗಿ ಶಾಲಾ ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ತೋಡಿಗೆ ಉರುಳಿದ ಪರಿಣಾಮ ಏಳು ವಿದ್ಯಾರ್ಥಿಗಳು ಗಾಯಗೊಂಡ ಘಟನೆ ಶುಕ್ರವಾರ ಬೆಳಿಗ್ಗೆ ಸರಳೆಬೆಟ್ಟು–ಕೊಡಂಗೆ ದೇವಸ್ಥಾನದ ಸಮೀಪ ನಡೆದಿದೆ. ಮಣಿಪಾಲದ ಕ್ರೈಸ್ಟ್ ಆಂಗ್ಲ ಮಾಧ್ಯಮ ಶಾಲೆಗೆ ಸೇರಿದ ಬಸ್ ಎಂದಿನಂತೆ ವಿದ್ಯಾರ್ಥಿಗಳನ್ನು ಶಾಲೆಗೆ ಕರೆದೊಯ್ಯುತ್ತಿದ್ದ ವೇಳೆ, ಕೊಡಂಗೆ ದೇವಸ್ಥಾನದ ಸಮೀಪದ ಕಿರಿದಾದ ತಿರುವಿನಲ್ಲಿ ಚಾಲಕ ಬಸ್‌ನ್ನು ರಿವರ್ಸ್ ತೆಗೆದುಕೊಳ್ಳುವಾಗ ನಿಯಂತ್ರಣ ತಪ್ಪಿ ರಸ್ತೆ ಬದಿಯ ತೋಡಿಗೆ ಉರುಳಿದೆ ಎಂದು ತಿಳಿದುಬಂದಿದೆ. ಅಪಘಾತ…

Read More

ಮಳೆಗಾಲ: ಕೂಡ್ಲು ಫಾಲ್ಸ್‌ಗೆ ಪ್ರವಾಸಿಗರ ಪ್ರವೇಶ ತಾತ್ಕಾಲಿಕ ನಿಷೇಧ

ಸುರಕ್ಷತಾ ಕ್ರಮವಾಗಿ ‘ನೋ ಎಂಟ್ರಿ’ ಫಲಕ ಅಳವಡಿಸಿದ ಅರಣ್ಯ ಇಲಾಖೆ ಉಡುಪಿ, ಜು. 10: ಮಳೆಗಾಲದ ಹಿನ್ನೆಲೆಯಲ್ಲಿ ಹೆಬ್ರಿ ತಾಲೂಕಿನ ಪ್ರಸಿದ್ಧ ಪ್ರವಾಸಿ ತಾಣ ಕೂಡ್ಲು ಫಾಲ್ಸ್‌ಗೆ ಅರಣ್ಯ ಇಲಾಖೆ ತಾತ್ಕಾಲಿಕವಾಗಿ ಪ್ರವಾಸಿಗರ ಪ್ರವೇಶವನ್ನು ನಿಷೇಧಿಸಿದೆ. ಸುರಕ್ಷತಾ ಕ್ರಮವಾಗಿ ಜಲಪಾತಕ್ಕೆ ತೆರಳುವ ಮುಖ್ಯ ಮಾರ್ಗದಲ್ಲಿ ‘ನೋ ಎಂಟ್ರಿ’ ಫಲಕ ಅಳವಡಿಸಿ ಪ್ರವೇಶವನ್ನು ಸಂಪೂರ್ಣ ಬಂದ್ ಮಾಡಲಾಗಿದೆ. ರಾಷ್ಟ್ರೀಯ ಹೆದ್ದಾರಿ 169A ಸಮೀಪ ಪಶ್ಚಿಮ ಘಟ್ಟದ ದಟ್ಟ ಅರಣ್ಯದ ನಡುವೆ ಇರುವ ಕೂಡ್ಲು ಫಾಲ್ಸ್ ಪ್ರಕೃತಿ ಸೌಂದರ್ಯದಿಂದ ರಾಜ್ಯ…

Read More

ಸಂಡೇ ಬಜಾರ್ ಈ ಸಂಡೆ ನಡೆದೇ ನಡೆಯುತ್ತದೆ; ಮನಪಾಗೆ ಸುನಿಲ್ ಕುಮಾರ್ ಬಜಾಲ್ ಸವಾಲು..!

ಮಂಗಳೂರು: ಸಂಡೇ ಬಜಾರ್‌ (ಭಾನುವಾರದ ಮಾರುಕಟ್ಟೆ) ಯಾವುದೇ ಕಾರಣಕ್ಕೂ ನಿಲ್ಲುವುದಿಲ್ಲ. ಈ ಭಾನುವಾರ ನಿಗದಿಯಂತೆ ಸಂಡೇ ಬಜಾರ್ ನಡೆಯಲಿದ್ದು, ಅದನ್ನು ತಡೆಯಲು ಸಾಧ್ಯವಿಲ್ಲ ಎಂದು ದಕ್ಷಿಣ ಕನ್ನಡ ಜಿಲ್ಲಾ ಬೀದಿಬದಿ ವ್ಯಾಪಾರಸ್ಥರ ಸಂಘ (ಸಿಐಟಿಯು) ಮುಖಂಡ ಸುನಿಲ್ ಕುಮಾರ್ ಬಜಾಲ್ ಮಂಗಳೂರು ಮಹಾನಗರ ಪಾಲಿಕೆಗೆ ಸವಾಲು ಹಾಕಿದರು. ನಗರ ಪಾಲಿಕೆ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೀದಿಬದಿ ವ್ಯಾಪಾರಿಗಳಿಗೆ ವ್ಯಾಪಾರ ನಡೆಸಲು ಅವಕಾಶ ಕಲ್ಪಿಸಬೇಕು. ಒಂದು ವೇಳೆ ಸಂಡೇ ಬಜಾರ್‌ಗೆ ಅವಕಾಶ ನೀಡಲು ಸಾಧ್ಯವಾಗದಿದ್ದರೆ ಪಾಲಿಕೆಯೇ ಪರ್ಯಾಯ…

Read More

ಸಂಡೇ ಬಜಾರ್ ಪುನರಾರಂಭಕ್ಕೆ ಆಗ್ರಹಿಸಿ ಬೀದಿಬದಿ ವ್ಯಾಪಾರಸ್ಥರ ಹೋರಾಟ ತೀವ್ರ

ಪಾಲಿಕೆ ಕಚೇರಿ ಎದುರು ಹಗಲು-ರಾತ್ರಿ ಧರಣಿ; ಆಯುಕ್ತರ ಕಚೇರಿಗೆ ಮುತ್ತಿಗೆ ಮಂಗಳೂರು, ಜು. 10: ಸಂಡೇ ಬಜಾರ್ (ಭಾನುವಾರದ ಮಾರುಕಟ್ಟೆ) ವ್ಯಾಪಾರಕ್ಕೆ ಮತ್ತೆ ಅವಕಾಶ ಕಲ್ಪಿಸುವಂತೆ ಆಗ್ರಹಿಸಿ ದಕ್ಷಿಣ ಕನ್ನಡ ಜಿಲ್ಲಾ ಬೀದಿಬದಿ ವ್ಯಾಪಾರಸ್ಥರ ಸಂಘ (ಸಿಐಟಿಯು) ನೇತೃತ್ವದಲ್ಲಿ ನಡೆಯುತ್ತಿರುವ ಹೋರಾಟ ತೀವ್ರಗೊಂಡಿದೆ. ನಗರ ಪಾಲಿಕೆ ಕಚೇರಿ ಎದುರು ಆರಂಭಿಸಿರುವ ಹಗಲು-ರಾತ್ರಿ ಧರಣಿ ಸತ್ಯಾಗ್ರಹಕ್ಕೆ 24 ಗಂಟೆ ಕಳೆದರೂ ಅಧಿಕಾರಿಗಳು ಮನವಿಯನ್ನು ಸ್ವೀಕರಿಸಿಲ್ಲ ಎಂದು ಆರೋಪಿಸಿದ ಪ್ರತಿಭಟನಾಕಾರರು, ಬಳಿಕ ಪಾಲಿಕೆ ಆಯುಕ್ತರ ಕಚೇರಿಗೆ ಮುತ್ತಿಗೆ ಹಾಕಿ ಆಕ್ರೋಶ…

Read More

ಸರ್ಕಾರಿ ಕಚೇರಿಗಳಲ್ಲಿ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕುವಲ್ಲಿ ರಾಜ್ಯ ಸರಕಾರ ವಿಫಲ: ಕೆಆರ್‌ಎಸ್ ಪಕ್ಷ ಆರೋಪ

ಉಡುಪಿ: ರಾಜ್ಯದ ಸರ್ಕಾರಿ ಕಚೇರಿಗಳಲ್ಲಿ ಭ್ರಷ್ಟಾಚಾರ ಮತ್ತು ಅಕ್ರಮಗಳು ಹೆಚ್ಚಾಗುತ್ತಿದ್ದು, ಇದಕ್ಕೆ ಸರ್ಕಾರ ಪರಿಣಾಮಕಾರಿ ಕಡಿವಾಣ ಹಾಕುವಲ್ಲಿ ವಿಫಲವಾಗಿದೆ ಎಂದು ಕೆಆರ್‌ಎಸ್ ಪಕ್ಷದ ಉಡುಪಿ ಜಿಲ್ಲಾ ಉಸ್ತುವಾರಿ ವಿ.ಆರ್. ಮರಾಠೆ ಆರೋಪಿಸಿದರು. ಉಡುಪಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮುಖ್ಯಮಂತ್ರಿಗಳು ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ಸಹಾಯವಾಣಿ ಆರಂಭಿಸುವುದಾಗಿ ಘೋಷಿಸಿದ್ದರೂ, ಆಡಳಿತದಲ್ಲಿ ಪಾರದರ್ಶಕತೆ ಮತ್ತು ದಕ್ಷತೆಯನ್ನು ತರಲು ಅಗತ್ಯ ಕ್ರಮಗಳನ್ನು ಕೈಗೊಂಡಿಲ್ಲ ಎಂದು ಟೀಕಿಸಿದರು.ಸರ್ಕಾರಿ ಕಚೇರಿಗಳಲ್ಲಿ ಭ್ರಷ್ಟಾಚಾರ ಹೆಚ್ಚಲು ವರ್ಗಾವಣೆ ದಂಧೆಯೇ ಪ್ರಮುಖ ಕಾರಣವಾಗಿದೆ. ಅಧಿಕಾರಿಗಳು ಹಣ ನೀಡಿ ಆಯಕಟ್ಟಿನ…

Read More
error: Content is protected !!