ಸಂಡೇ ಬಜಾರ್ ಈ ಸಂಡೆ ನಡೆದೇ ನಡೆಯುತ್ತದೆ; ಮನಪಾಗೆ ಸುನಿಲ್ ಕುಮಾರ್ ಬಜಾಲ್ ಸವಾಲು..!

ಮಂಗಳೂರು: ಸಂಡೇ ಬಜಾರ್‌ (ಭಾನುವಾರದ ಮಾರುಕಟ್ಟೆ) ಯಾವುದೇ ಕಾರಣಕ್ಕೂ ನಿಲ್ಲುವುದಿಲ್ಲ. ಈ ಭಾನುವಾರ ನಿಗದಿಯಂತೆ ಸಂಡೇ ಬಜಾರ್ ನಡೆಯಲಿದ್ದು, ಅದನ್ನು ತಡೆಯಲು ಸಾಧ್ಯವಿಲ್ಲ ಎಂದು ದಕ್ಷಿಣ ಕನ್ನಡ ಜಿಲ್ಲಾ ಬೀದಿಬದಿ ವ್ಯಾಪಾರಸ್ಥರ ಸಂಘ (ಸಿಐಟಿಯು) ಮುಖಂಡ ಸುನಿಲ್ ಕುಮಾರ್ ಬಜಾಲ್ ಮಂಗಳೂರು ಮಹಾನಗರ ಪಾಲಿಕೆಗೆ ಸವಾಲು ಹಾಕಿದರು. ನಗರ ಪಾಲಿಕೆ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೀದಿಬದಿ ವ್ಯಾಪಾರಿಗಳಿಗೆ ವ್ಯಾಪಾರ ನಡೆಸಲು ಅವಕಾಶ ಕಲ್ಪಿಸಬೇಕು. ಒಂದು ವೇಳೆ ಸಂಡೇ ಬಜಾರ್‌ಗೆ ಅವಕಾಶ ನೀಡಲು ಸಾಧ್ಯವಾಗದಿದ್ದರೆ ಪಾಲಿಕೆಯೇ ಪರ್ಯಾಯ…

Read More

ಸಂಡೇ ಬಜಾರ್ ಪುನರಾರಂಭಕ್ಕೆ ಆಗ್ರಹಿಸಿ ಬೀದಿಬದಿ ವ್ಯಾಪಾರಸ್ಥರ ಹೋರಾಟ ತೀವ್ರ

ಪಾಲಿಕೆ ಕಚೇರಿ ಎದುರು ಹಗಲು-ರಾತ್ರಿ ಧರಣಿ; ಆಯುಕ್ತರ ಕಚೇರಿಗೆ ಮುತ್ತಿಗೆ ಮಂಗಳೂರು, ಜು. 10: ಸಂಡೇ ಬಜಾರ್ (ಭಾನುವಾರದ ಮಾರುಕಟ್ಟೆ) ವ್ಯಾಪಾರಕ್ಕೆ ಮತ್ತೆ ಅವಕಾಶ ಕಲ್ಪಿಸುವಂತೆ ಆಗ್ರಹಿಸಿ ದಕ್ಷಿಣ ಕನ್ನಡ ಜಿಲ್ಲಾ ಬೀದಿಬದಿ ವ್ಯಾಪಾರಸ್ಥರ ಸಂಘ (ಸಿಐಟಿಯು) ನೇತೃತ್ವದಲ್ಲಿ ನಡೆಯುತ್ತಿರುವ ಹೋರಾಟ ತೀವ್ರಗೊಂಡಿದೆ. ನಗರ ಪಾಲಿಕೆ ಕಚೇರಿ ಎದುರು ಆರಂಭಿಸಿರುವ ಹಗಲು-ರಾತ್ರಿ ಧರಣಿ ಸತ್ಯಾಗ್ರಹಕ್ಕೆ 24 ಗಂಟೆ ಕಳೆದರೂ ಅಧಿಕಾರಿಗಳು ಮನವಿಯನ್ನು ಸ್ವೀಕರಿಸಿಲ್ಲ ಎಂದು ಆರೋಪಿಸಿದ ಪ್ರತಿಭಟನಾಕಾರರು, ಬಳಿಕ ಪಾಲಿಕೆ ಆಯುಕ್ತರ ಕಚೇರಿಗೆ ಮುತ್ತಿಗೆ ಹಾಕಿ ಆಕ್ರೋಶ…

Read More

ಸರ್ಕಾರಿ ಕಚೇರಿಗಳಲ್ಲಿ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕುವಲ್ಲಿ ರಾಜ್ಯ ಸರಕಾರ ವಿಫಲ: ಕೆಆರ್‌ಎಸ್ ಪಕ್ಷ ಆರೋಪ

ಉಡುಪಿ: ರಾಜ್ಯದ ಸರ್ಕಾರಿ ಕಚೇರಿಗಳಲ್ಲಿ ಭ್ರಷ್ಟಾಚಾರ ಮತ್ತು ಅಕ್ರಮಗಳು ಹೆಚ್ಚಾಗುತ್ತಿದ್ದು, ಇದಕ್ಕೆ ಸರ್ಕಾರ ಪರಿಣಾಮಕಾರಿ ಕಡಿವಾಣ ಹಾಕುವಲ್ಲಿ ವಿಫಲವಾಗಿದೆ ಎಂದು ಕೆಆರ್‌ಎಸ್ ಪಕ್ಷದ ಉಡುಪಿ ಜಿಲ್ಲಾ ಉಸ್ತುವಾರಿ ವಿ.ಆರ್. ಮರಾಠೆ ಆರೋಪಿಸಿದರು. ಉಡುಪಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮುಖ್ಯಮಂತ್ರಿಗಳು ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ಸಹಾಯವಾಣಿ ಆರಂಭಿಸುವುದಾಗಿ ಘೋಷಿಸಿದ್ದರೂ, ಆಡಳಿತದಲ್ಲಿ ಪಾರದರ್ಶಕತೆ ಮತ್ತು ದಕ್ಷತೆಯನ್ನು ತರಲು ಅಗತ್ಯ ಕ್ರಮಗಳನ್ನು ಕೈಗೊಂಡಿಲ್ಲ ಎಂದು ಟೀಕಿಸಿದರು.ಸರ್ಕಾರಿ ಕಚೇರಿಗಳಲ್ಲಿ ಭ್ರಷ್ಟಾಚಾರ ಹೆಚ್ಚಲು ವರ್ಗಾವಣೆ ದಂಧೆಯೇ ಪ್ರಮುಖ ಕಾರಣವಾಗಿದೆ. ಅಧಿಕಾರಿಗಳು ಹಣ ನೀಡಿ ಆಯಕಟ್ಟಿನ…

Read More

ಜು.12ರಂದು ಶ್ರೀ ಕೋರ‍್ದಬ್ಬು ದೈವಸ್ಥಾನದ ಜೀರ್ಣೋದ್ಧಾರ ಕಾಮಗಾರಿಗೆ ಶಿಲಾನ್ಯಾಸ

ಮಂಗಳೂರು: ನಗರದ ಮಜಿಲ ಸೂಟರ್‌ಪೇಟೆಯಲ್ಲಿರುವ ಐತಿಹಾಸಿಕ ಶ್ರೀ ಕೋರ‍್ದಬ್ಬು ದೈವಸ್ಥಾನದ ಜೀರ್ಣೋದ್ಧಾರ ಕಾಮಗಾರಿಗೆ ಜುಲೈ 12ರಂದು ಭಾನುವಾರ ಬೆಳಿಗ್ಗೆ 9 ಗಂಟೆಗೆ ಶಿಲಾನ್ಯಾಸ ಕಾರ್ಯಕ್ರಮ ನಡೆಯಲಿದೆ ಎಂದು ಜೀರ್ಣೋದ್ಧಾರ ಸಮಿತಿಯ ಗೌರವ ಸಲಹೆಗಾರ ರೋಹಿತ್ ಉಳ್ಳಾಲ್ ತಿಳಿಸಿದ್ದಾರೆ. ನಗರದ ಪತ್ರಿಕಾಭವನದಲ್ಲಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶತಮಾನಗಳ ಇತಿಹಾಸ ಹೊಂದಿರುವ ಈ ದೈವಸ್ಥಾನ ಶಿಥಿಲಾವಸ್ಥೆಗೆ ತಲುಪಿರುವ ಹಿನ್ನೆಲೆಯಲ್ಲಿ ದೈವದ ಅಪ್ಪಣೆಯಂತೆ ಊರ ಹತ್ತು ಸಮಸ್ತರು ಹಾಗೂ ಭಕ್ತರ ಸಹಕಾರದೊಂದಿಗೆ ಜೀರ್ಣೋದ್ಧಾರ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಾಗಿದೆ ಎಂದರು. ಕದ್ರಿ ಶ್ರೀ…

Read More

ಪುತ್ತೂರು ವಿಧಾನಸಭಾ ಕ್ಷೇತ್ರ: ಪ್ರತೀ ಗ್ರಾಮಕ್ಕೊಂದು ಕೆಪಿಎಸ್ ಶಾಲೆ ಮಂಜೂರು ಮಾಡಿ: ಶಾಸಕ ಅಶೋಕ್ ರೈ ಮನವಿ

ಪುತ್ತೂರು: ಗ್ರಾಮಾಂತರ ಪ್ರದೇಶದ ಮಕ್ಕಳ ಶೈಕ್ಷಣಿಕ ಹಿತದೃಷ್ಟಿಯಿಂದ ತನ್ನ ವಿಧಾನಸಭಾ ಕ್ಷೇತ್ರದ ಪ್ರತೀ ಗ್ರಾಮಕ್ಕೊಂದರಂತೆ ಕೆಪಿಎಸ್ ಶಾಲೆಯನ್ನು ಮಂಜೂರುಗೊಳಿಸಬೇಕು ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಡಾ. ರಶ್ಮಿ ಮಹೇಶ್ ರವರಿಗೆ ಶಾಸಕ ಅಶೋಕ್ ರೈ ಮನವಿ ಮಾಡಿದ್ದಾರೆ. ಗುರುವಾರ ಬೆಂಗಳೂರಿನಲ್ಲಿ ಇಲಾಖಾ ಕಾರ್ಯದರ್ಶಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ ಶಾಸಕರು ಈ ಮನವಿ ಸಲ್ಲಿಸಿದ್ದಾರೆ.ಗ್ರಾಮೀಣ ಭಾಗದ ಬಡ ಮಕ್ಕಳು ಗುಣ ಮಟ್ಟದ ಶಿಕ್ಷಣದಿಂದ ವಂಚಿತರಾಗಬಾರದು ಮತ್ತು ಎಲ್ ಕೆ ಜಿ ಯಿಂದಲೇ…

Read More

ಅಂಬ್ಯುಲೆನ್ಸ್‌ಗೆ ದಾರಿ ಬಿಡುವ ವೇಳೆ ಸರಣಿ ಡಿಕ್ಕಿ; ಭಂಡಾರಿಬೆಟ್ಟಿನಲ್ಲಿ ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿತು

ಬಂಟ್ವಾಳ: ಭಂಡಾರಿಬೆಟ್ಟು ಸಮೀಪ ಅಂಬ್ಯುಲೆನ್ಸ್ ವಾಹನಕ್ಕೆ ದಾರಿ ಬಿಡುವ ವೇಳೆ ಮೂರು ವಾಹನಗಳು ಪರಸ್ಪರ ಡಿಕ್ಕಿ ಹೊಡೆದ ಘಟನೆ ನಡೆದಿದೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಅಥವಾ ಗಂಭೀರ ಗಾಯಗಳಾಗಿಲ್ಲ. ಮಾಹಿತಿಯ ಪ್ರಕಾರ, ಸೈರನ್ ಹಾಕಿಕೊಂಡು ತುರ್ತು ಚಿಕಿತ್ಸೆಗೆ ತೆರಳುತ್ತಿದ್ದ ಅಂಬ್ಯುಲೆನ್ಸ್‌ಗೆ ದಾರಿ ಮಾಡಿಕೊಡುವ ಉದ್ದೇಶದಿಂದ ಮುಂಭಾಗದಲ್ಲಿ ಸಂಚರಿಸುತ್ತಿದ್ದ ಪಿಕಪ್ ವಾಹನ ಹಾಗೂ ಕಾರಿನ ಚಾಲಕರು ತಮ್ಮ ವಾಹನಗಳ ವೇಗವನ್ನು ಕಡಿಮೆ ಮಾಡಿ ರಸ್ತೆ ಬದಿಗೆ ಸರಿಯಲು ಪ್ರಯತ್ನಿಸಿದ್ದಾರೆ. ಇದೇ ವೇಳೆ ಹಿಂದಿನಿಂದ ಬರುತ್ತಿದ್ದ ಖಾಸಗಿ ಬಸ್…

Read More

ಶ್ರೀ ಗುರು ಚರಣಾಮೃತ’ ಹಾಗೂ ರೋಹಿದಾಸ್ ಬಂಗೇರ ವ್ಯಕ್ತಿ ಪರಿಚಯ ಕೃತಿ ಲೋಕಾರ್ಪಣೆ

ಮಂಗಳೂರು: ಕಡಲ ಸೃಷ್ಟಿ ಪಾಕ್ಷಿಕ ಪತ್ರಿಕೆಯ ಸಂಪಾದಕರಾದ ಸಂಜೀವ ಕೆ. ಅವರ ರಚನೆಯ ‘ಶ್ರೀ ಗುರು ಚರಣಾಮೃತ’ ಹಾಗೂ ‘ತೀಯಾ ಕುಲ ತಿಲಕ ಮಹಾದಾನಿ ರೋಹಿದಾಸ್ ಬಂಗೇರ’ ಅವರ ವ್ಯಕ್ತಿ ಪರಿಚಯ ಕೃತಿಯನ್ನು ನಗರದ ಪತ್ರಿಕಾ ಭವನದಲ್ಲಿ ನಡೆದ ಸಮಾರಂಭದಲ್ಲಿ ಲೋಕಾರ್ಪಣೆ ಮಾಡಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ರಾಜ್ಯಾಧ್ಯಕ್ಷರು ಹಾಗೂ ಧರ್ಮದರ್ಶಿ ಡಾ. ಹರಿಕೃಷ್ಣ ಪುನರೂರು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಮುಂಬೈನ ಸಮಾಜಸೇವಕ ಶಂಕರ ಸುವರ್ಣ, ಉದ್ಯಮಿ ಗೋವಿಂದ ಮಂಜೇಶ್ವರ ಹಾಗೂ ಅಮೃತ…

Read More

ಪ್ರಕೃತಿಯ ನಾಶ ಜಗತ್ತು ಸರ್ವನಾಶ: ನಾರಾಯಣ ಗುರುಗಳ ಸಂದೇಶ ನೆನಪಿಸಿದ ದಿನೇಶ್ ಸುವರ್ಣ ರಾಯಿ

ಕಲ್ಲಡ್ಕ : “ಪ್ರಕೃತಿಯ ನಾಶ ಜಗತ್ತು ಸರ್ವನಾಶ” ಎಂಬುದು ಬ್ರಹ್ಮಶ್ರೀ ನಾರಾಯಣ ಗುರುಗಳ ಪರಿಸರ ಸಂರಕ್ಷಣೆಯ ಸಂದೇಶದ ಸಾರವಾಗಿದೆ. ಪ್ರಕೃತಿಯನ್ನು ನಾಶ ಮಾಡಿದರೆ ಅದರ ದುಷ್ಪರಿಣಾಮ ಇಡೀ ಮಾನವಕುಲ ಹಾಗೂ ಜೀವಜಗತ್ತಿನ ಮೇಲೆ ಬೀಳುತ್ತದೆ. ಆದ್ದರಿಂದ ಪ್ರತಿಯೊಬ್ಬರೂ ಪ್ರಕೃತಿಯನ್ನು ಪೂಜ್ಯಭಾವದಿಂದ ಕಾಪಾಡಿ, ಉಳಿಸಿ, ಬೆಳೆಸಬೇಕು ಎಂದು ಯುವವಾಹಿನಿ (ರಿ.) ಬಂಟ್ವಾಳ ಘಟಕದ ಮಾಜಿ ಅಧ್ಯಕ್ಷ ದಿನೇಶ್ ಸುವರ್ಣ ರಾಯಿ ಹೇಳಿದರು. ಅವರು ಜುಲೈ 9 ಗುರುವಾರ ಯುವವಾಹಿನಿ (ರಿ.) ಬಂಟ್ವಾಳ ಘಟಕದ ಆಶ್ರಯದಲ್ಲಿ ಆಯೋಜಿಸಲಾದ ಗುರುತತ್ವವಾಹಿನಿ 70ನೇ…

Read More

ಜು. 12ರಂದು ‘ಬಿ ದಿ ಬಿಂದು ಬ್ರೈಡ್’ ಗ್ರ್ಯಾಂಡ್ ಫಿನಾಲೆ

ಅಂತಿಮ ಸುತ್ತಿನಲ್ಲಿ 20 ಸ್ಪರ್ಧಿಗಳು; ವಿಜೇತೆಗೆ ಬಿಂದು ಜ್ಯುವೆಲ್ಲರಿಯ ಅಧಿಕೃತ ಬ್ರ್ಯಾಂಡ್ ಮಾಡೆಲ್ ಆಗುವ ಅವಕಾಶ ಮಂಗಳೂರು, ಜು. 10: ವಿಶ್ವಾಸ, ಕರಕುಶಲತೆ ಹಾಗೂ ಗುಣಮಟ್ಟದ ಸೇವೆಯ ನಾಲ್ಕು ದಶಕಗಳ ಯಶಸ್ವಿ ಪಯಣವನ್ನು ಆಚರಿಸುತ್ತಿರುವ ಬಿಂದು ಜ್ಯುವೆಲ್ಲರಿಯ ವಿಶೇಷ ವಧು ಪ್ರತಿಭಾ ಅನ್ವೇಷಣಾ ಕಾರ್ಯಕ್ರಮ ‘ಬಿ ದಿ ಬಿಂದು ಬ್ರೈಡ್’ ಗ್ರ್ಯಾಂಡ್ ಫಿನಾಲೆ ಜುಲೈ 12ರಂದು (ಭಾನುವಾರ) ಮಧ್ಯಾಹ್ನ 2 ಗಂಟೆಗೆ ನಗರದ ಎಕ್ಕೂರಿನ ಎ.ಜೆ. ಗ್ರ್ಯಾಂಡ್ ಎಲೈಟ್ ಹೋಟೆಲ್‌ನಲ್ಲಿ ನಡೆಯಲಿದೆ ಎಂದು ಬಿಂದು ಜ್ಯುವೆಲ್ಲರಿಯ ಮಾರುಕಟ್ಟೆ…

Read More

ಗದಗದ ಡಾ. ಶಾಂತಕುಮಾರ ಬಿ. ಭಜಂತ್ರಿಗೆ ನಾಡೋಜ ಡಾ. ಕಯ್ಯಾರ ಸದ್ಭಾವನಾ ರಾಷ್ಟ್ರೀಯ ಪ್ರಶಸ್ತಿ

ಗದಗ: ಗದಗ ಜಿಲ್ಲೆಯ ದಲಿತ ಸಾಹಿತ್ಯ ಅಕಾಡೆಮಿ (ದೆಹಲಿ) ಜಿಲ್ಲಾ ಅಧ್ಯಕ್ಷರು, ಪ್ರೌಢಶಾಲೆಯ ಆದರ್ಶ ಶಿಕ್ಷಕರು ಹಾಗೂ ಸಮಾಜಸೇವಕರಾದ ಡಾ. ಶಾಂತಕುಮಾರ ಬಿ. ಭಜಂತ್ರಿ ಅವರಿಗೆ ಶೈಕ್ಷಣಿಕ, ಸಾಹಿತ್ಯ ಹಾಗೂ ಸಾಂಸ್ಕೃತಿಕ ಕ್ಷೇತ್ರದಲ್ಲಿ ಸಲ್ಲಿಸಿರುವ ಗಣನೀಯ ಸೇವೆಯನ್ನು ಪರಿಗಣಿಸಿ “ನಾಡೋಜ ಡಾ. ಕಯ್ಯಾರ ಸದ್ಭಾವನಾ ರಾಷ್ಟ್ರೀಯ ಪ್ರಶಸ್ತಿ–2026”ಗೆ ಆಯ್ಕೆ ಮಾಡಲಾಗಿದೆ. ಕಾಸರಗೋಡಿನ ಕನ್ನಡ ಭವನದಿಂದ ನೀಡಲಾಗುವ ಈ ಪ್ರತಿಷ್ಠಿತ ಪ್ರಶಸ್ತಿಯನ್ನು ಜುಲೈ 26ರಂದು ನಡೆಯಲಿರುವ “ರಜತ ಸಂಭ್ರಮ ಸಮಾರೋಪ ಕಾರ್ಯಕ್ರಮ” ಹಾಗೂ “ಕರ್ನಾಟಕ ಗಡಿನಾಡು ಕನ್ನಡ ಸಮ್ಮೇಳನ”ದ…

Read More
error: Content is protected !!