ಉಡುಪಿಯ ಕೃಷ್ಣ ಮಠದ ನೂತನ ಯಾಳಿ ಲೋಕಾರ್ಪಣೆ
ಉಡುಪಿ: ಸುಮಾರು ಎಂಟು ಶತಮಾನಗಳ ಹಿಂದೆ ಆಚಾರ್ಯ ಮಧ್ವರು ಶ್ರೀಕೃಷ್ಣನಿಗಾಗಿ ಉಡುಪಿಯಲ್ಲಿ ನಿರ್ಮಿಸಿದರೆನ್ನಲಾದ ಕೃಷ್ಣಮಠದ ಪ್ರಾಚೀನ ಸೌಂದರ್ಯವನ್ನು ಆಧುನಿಕ ಬೆಳಕಿಂಡಿಯಲ್ಲಿ ಪ್ರದರ್ಶಿಸಲು ಪರ್ಯಾಯ ಪುತ್ತಿಗೆ ಮಠಾಧೀಶ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ಮುಂದಾಗಿದ್ದಾರೆ. ಕರಾವಳಿಯ ಮೂಲ ವಾಸ್ತುಶೈಲಿ ಮಾದರಿಯ ಕಾಷ್ಠ ಯಾಳಿ (ಸುತ್ತು ಪೌಳಿ)ಯನ್ನು ಸುಮಾರು ಒಂದು ಕೋಟಿ ರೂ. ವೆಚ್ಚದಲ್ಲಿ ಪುನರ್ ನಿರ್ಮಿಸಲಾಗಿದೆ.ಕನಕ ಗೋಪುರಕ್ಕೆ ಹೊಂದಿಕೊಂಡಿರುವ ಚಂದ್ರಶಾಲೆ ಸಹಿತ ಮಧ್ವ ಸರೋವರದವರೆಗೆ ಶ್ರೀಕೃಷ್ಣ ಆಲಯದ ಮೇಲ್ಛಾವಣಿಗೆ ಪ್ರಾಚೀನ ವಾಸ್ತುಶೈಲಿಯ ರೂಪ ನೀಡಲಾಗಿದೆ. ಆ ಮೂಲಕ ಕೃಷ್ಣಮಠದ ದಿವ್ಯ…
