ರಜೆ ಘೋಷಣೆ ಉಲ್ಲಂಘಿಸಿ ತರಗತಿ ನಡೆಸಿದ ಶಿಕ್ಷಣ ಸಂಸ್ಥೆಗಳಿಗೆ ನೋಟಿಸ್
ದಕ್ಷಿಣ ಕನ್ನಡ ಜಿಲ್ಲಾಡಳಿತದಿಂದ ಸ್ಪಷ್ಟನೆಗೆ ಸೂಚನೆ; ಆದೇಶ ಉಲ್ಲಂಘಿಸಿದರೆ ಕ್ರಮದ ಎಚ್ಚರಿಕೆ ಮಂಗಳೂರು, ಜು. 10: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯ ಹಿನ್ನೆಲೆಯಲ್ಲಿ ಜಿಲ್ಲಾಡಳಿತವು ಶಾಲೆ ಹಾಗೂ ಕಾಲೇಜುಗಳಿಗೆ ರಜೆ ಘೋಷಿಸಿದ್ದರೂ, ಕೆಲವು ಶಿಕ್ಷಣ ಸಂಸ್ಥೆಗಳು ತರಗತಿಗಳನ್ನು ನಡೆಸಿರುವ ಕುರಿತು ದೂರುಗಳು ಬಂದ ಹಿನ್ನೆಲೆಯಲ್ಲಿ ಸಂಬಂಧಿತ ಸಂಸ್ಥೆಗಳಿಗೆ ಜಿಲ್ಲಾಡಳಿತವು ನೋಟಿಸ್ ಜಾರಿಗೊಳಿಸಿ, ಘಟನೆಯ ಕುರಿತು ಸ್ಪಷ್ಟನೆ ನೀಡುವಂತೆ ಸೂಚಿಸಿದೆ. ವಿದ್ಯಾರ್ಥಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ರಜೆ ಘೋಷಿಸಲಾಗಿದ್ದು, ಜಿಲ್ಲಾಡಳಿತದ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸುವುದು ಎಲ್ಲ ಶಿಕ್ಷಣ ಸಂಸ್ಥೆಗಳ…
