ಮಂಗಳೂರು: ಪಂಪ್‌ವೆಲ್ ಬಳಿ ಗಾಂಜಾ ಸುವಾಸನೆಯುಳ್ಳ ಚಾಕೊಲೇಟ್ ಮಾರಾಟ;ಆರೋಪಿ ಅರೆಸ್ಟ್

ಮಂಗಳೂರು, ಜೂ. 21 : ಗಾಂಜಾ ಸುವಾಸನೆಯುಳ್ಳ ಚಾಕಲೇಟ್‌ಗಳನ್ನು ಮಾರಾಟ ಮಾಡುತ್ತಿರುವ ಆರೋಪದ ಮೇಲೆ ಅಬಕಾರಿ ಇಲಾಖೆ ಅಧಿಕಾರಿಗಳು ಪಂಪ್‌ವೆಲ್ ಸಮೀಪದ ಪಾನ್ ಗೂಡಂಗಡಿಯ ಮೇಲೆ ದಾಳಿ ನಡೆಸಿ ಉತ್ತರ ಪ್ರದೇಶ ಮೂಲದ ವ್ಯಕ್ತಿಯನ್ನು ಬಂಧಿಸಿದ್ದಾರೆ.ಉತ್ತರ ಪ್ರದೇಶ ಮೂಲದ ಸುಜಿತ್ ಕುಮಾರ್ ಬಂಧಿತ ಆರೋಪಿ. ಗಾಂಜಾ ಎಲೆಗಳ ಸುವಾಸನೆಯುಳ್ಳ ಚಾಕ್‌ಲೇಟ್‌ಗಳನ್ನು ಮಾರಾಟ ಮಾಡುತ್ತಿದ್ದಾನೆಂಬ ಆರೋಪದಲ್ಲಿ ಅಬಕಾರಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈ ವೇಳೆ ಆರೋಪಿ ಗಾಂಜಾ ಎಲೆಗಳ ಸುವಾಸನೆಯುಳ್ಳ ಚಾಕೊಲೇಟ್‌ಗಳನ್ನು ಮಾರಾಟ ಮಾಡುತ್ತಿರುವುದು ಕಂಡುಬಂದಿದೆ. ದಾಳಿ…

Read More

ಬಂಟ್ವಾಳ : ಪತ್ನಿಯನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡ ಪತಿ

ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಸಮೀಪ ಪತ್ನಿಯನ್ನು ಕೊಂದು ಪತಿ ಆತ್ಮಹತ್ಯೆ ಮಾಡಿಕೊಂಡ ರೀತಿಯಲ್ಲಿ ಗಂಡ ಹೆಂಡತಿ ಇಬ್ಬರ ಮೃತದೇಹ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ಬಡಗುಂಡಿ ಎಂಬಲ್ಲಿ ಇಂದು ಗುರುವಾರ ಪತ್ತೆಯಾಗಿದೆ.ಸಜಿಪಮೂಡ ಗ್ರಾಮದ ತಿಮ್ಮಪ್ಪ ಮೂಲ್ಯ (50)ಹಾಗೂ ಆತನ ಪತ್ನಿ ತುಂಬು ಗರ್ಭಿಣಿ ಜಯಂತಿ (40) ಇಬ್ಬರು ಸಂಶಯಾಸ್ಪದ ರೀತಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಮಾಹಿತಿ ತಿಳಿದು ಬಂದಿದೆ. ಜಯಂತಿ ಅವರ ಮೃತದೇಹ ಕೋಣೆಯಲ್ಲಿ ಮಲಗಿದ ಸ್ಥಿತಿಯಲ್ಲಿ ಇದ್ದರೆ ತಿಮ್ಮಪ್ಪ ಅವರು ನೇಣು ಬಿಗಿದು…

Read More

ಜೂ.22ರಂದು ಮುಳಿಯ ಗೋಲ್ಡ್ & ಡೈಮಂಡ್ಸ್ ವತಿಯಿಂದ ಅಪ್ಪ-ಮಗ ಹಾಗೂ ಅಪ್ಪ-ಮಗಳು ಎಂಬ ವಿಶೇಷ ರೀತಿಯ ಅನುಬಂಧದ ಕಾರ್ಯಕ್ರಮ

ಪುತ್ತೂರು: ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ವತಿಯಿಂದ Father’s Day ಅಂಗವಾಗಿ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಜೂನ್ 22 ರಂದು ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ನಲ್ಲಿ ಚಿನ್ನದಂತ ಅಪ್ಪ ನನ್ನ ಅಪ್ಪ ಶೀರ್ಷಿಕೆಯಡಿ ಅಪ್ಪ-ಮಗ ಹಾಗೂ ಅಪ್ಪ-ಮಗಳು ಎಂಬ ವಿಶೇಷ ರೀತಿಯ ಅನುಬಂಧದ ಕಾರ್ಯಕ್ರಮ ಏರ್ಪಡಿಸಲಾಗಿದ್ದು, ವಿನೂತನ ಆಟಗಳು, ಪ್ರಶ್ನೋತ್ತರಗಳು, ಅಂತರಾತ್ಮದ ಮಾತುಗಳು ಈ ಕಾರ್ಯಕ್ರಮದ ವಿಶೇಷತೆಗಳಾಗಿವೆ. ಹಾಗೆಯೇ ಅಪ್ಪ-ಮಕ್ಕಳ ಅನುಬಂಧದ ಕುರಿತಾಗಿ ಹೊಸದಾಗಿ ಮಾಡಿದ 30 ಸೆಕೆಂಡುಗಳ ವೀಡಿಯೋವನ್ನು 9353030916 ಸಂಖ್ಯೆಗೆ ಕಳುಹಿಸುವಂತೆ ಕೋರಲಾಗಿದೆ….

Read More

ಉಡುಪಿ ಜಿಲ್ಲಾಧಿಕಾರಿ ಡಾ.ವಿದ್ಯಾಕುಮಾರಿ ವರ್ಗ,ನೂತನ ಜಿಲ್ಲಾಧಿಕಾರಿಯಾಗಿ ಸ್ವರೂಪ ಟಿಕೆ

ಉಡುಪಿ: ಜಿಲ್ಲೆಯ ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ ಅವರನ್ನು ವರ್ಗ ಮಾಡಿ ರಾಜ್ಯ ಸರಕಾರ ಇದೀಗ ಆದೇಶ ಹೊರಡಿಸಿದ್ದು, ನೂತನ ಜಿಲ್ಲಾಧಿಕಾರಿಯಾಗಿ ಸ್ವರೂಪ ಟಿ.ಕೆ. ಅವರನ್ನು ನೇಮಕಗೊಳಿಸಿ ಆದೇಶ ಹೊರಡಿಸಿದೆ.ಮೇಡಂ ಸ್ವರೂಪ ಟಿ.ಕೆ ರವರು ಈ ಹಿಂದೆ ಬೆಂಗಳೂರು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಇ ಗವರ್ನೆನ್ಸ್ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದರು. ಡಾ. ವಿದ್ಯಾ ಕುಮಾರಿಗೆ ಯಾವುದೇ ಹುದ್ದೆಯನ್ನು ಸೂಚಿಸಿಲ್ಲ ಎಂದು ತಿಳಿದು ಬಂದಿದೆ.

Read More

ದಕ್ಷಿಣಕನ್ನಡದ ಜಿಲ್ಲಾಧಿಕಾರಿ, ಮಕ್ಕಳ ‘ರಜೆ ಕೊಡುವ ಡಿಸಿ’ ಮುಲೈ ಮುಗಿಲನ್ ವರ್ಗಾವಣೆ, ನೂತನ ಡಿಸಿ ದರ್ಶನ್!

ಮಂಗಳೂರು: ಕರಾವಳಿಯ ಪ್ರೀತಿಯ ಮಕ್ಕಳ ರಜೆ ಕೊಡುವ ಡಿಸಿಯ ವರ್ಗಾವಣೆಯಾಗಿದೆ. ರಾಜ್ಯದಲ್ಲಿ 16 ಮಂದಿ ಐಎಎಸ್ ಅಧಿಕಾರಿಗಳನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿದ್ದು, ಅದರಲ್ಲಿ ಕಳೆದ 2 ವರ್ಷಗಳಿಂದ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾಗಿದ್ದ ಮುಲೈ ಮುಗಿಲನ್ ಅವರನ್ನು ಕೂಡಾ ದಿಢೀರ್ ಆಗಿ ವರ್ಗಾಯಿಸಿದೆ. ಅವರನ್ನು ಬೆಂಗಳೂರಿನ ನೋಂದಣಿ ಇಲಾಖೆಯ ಐಜಿ ಮತ್ತು ಸ್ಟಾಂಪ್ಸ್ ವಿಭಾಗದ ಕಮಿಷನ‌ರ್ ಆಗಿ ವರ್ಗಾಯಿಸಲಾಗಿದೆ. ರಾಜ್ಯದಲ್ಲಿ ಒಟ್ಟು 16 ಮಂದಿ ಐಎಎಸ್ ಅಧಿಕಾರಿಗಳನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿದೆ. ದಕ್ಷಿಣ ಕನ್ನಡ ಜಿಲ್ಲೆಯ…

Read More

ಪುತ್ತೂರಿನಲ್ಲಿ 7 ತಿಂಗಳ ಗರ್ಭಿಣಿ ನೇಣಿಗೆ ಶರಣು

ಪುತ್ತೂರು: ಗರ್ಭಿಣಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುತ್ತೂರು ನಗರದ ಹೊರವಲಯದ ಚಿಕ್ಕಪುತ್ತೂರು ಎಂಬಲ್ಲಿ ರವಿವಾರ ತಡರಾತ್ರಿ ನಡೆದಿದೆ.ಚಿಕ್ಕಪುತ್ತೂರಿನ ನಿವಾಸಿ, ಚಿಂತನ್ ಎಂಬವರ ಪತ್ನಿ ರೇಷ್ಮಾ (28) ಆತ್ಮಹತ್ಯೆ ಮಾಡಿಕೊಂಡವರು. ರೇಷ್ಮಾ ಏಳು ತಿಂಗಳ ಗರ್ಭಿಣಿಯಾಗಿದ್ದರು. ಸುರತ್ಕಲ್ ಮೂಲದ ರೇಷ್ಮಾರನ್ನು ನಾಲ್ಕು ವರ್ಷಗಳ ಹಿಂದೆ ಚಿಕ್ಕಪುತ್ತೂರಿನ ಚಿಂತನ್ ಅವರಿಗೆ ವಿವಾಹ ಮಾಡಿಕೊಡಲಾಗಿತ್ತು. ಈ ದಂಪತಿಗೆ ಓರ್ವ ಪುತ್ರಿಯಿದ್ದಾಳೆ. ಚಿಂತನ್, ರೇಷ್ಮಾ ಮತ್ತು ಅವರ ಪುತ್ರಿ ಚಿಕ್ಕಪುತ್ತೂರಿನಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದರು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ….

Read More

ಮಂಗಳೂರು ವಿ.ವಿ ಯಲ್ಲಿ ಬಿ.ಎ ಪ್ರವಾಸೋಧ್ಯಮ ಮುಚ್ಚುಗಡೆ ಪುನರಾರಂಭಕ್ಕೆ ಉನ್ನತ ಶಿಕ್ಷಣ ಸಚಿವರಿಗೆ ಮನವಿ

ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದ ೨೦೨೫-೨೬ ಶೈಕ್ಷಣಿಕ ವರ್ಷದಲ್ಲಿ ಬಹುಬೇಡಿಕೆಯುಳ್ಳ ಪ್ರವಾಸೋಧ್ಯಮ ವಿಷಯವನ್ನೊಳಗೊಂಡ ಟ್ರಾವೆಲ್ & ಟೊರೀಸಮ್ ಮ್ಯಾನೇಜ್ಮೆಂಟ್ ಕೋರ್ಸ್ ನ್ನು ಸ್ಥಗಿತಗೊಳಿಸಿದ್ದು, ಇದನ್ನು ಮುಂದುವರಿಸುವಂತೆ ಕರ್ನಾಟಕ ಸರಕಾರದ ಉನ್ನತ ಸಚಿವ ಡಾ. ಎಂ ಸಿ ಸುಧಾಕರ್ ರವರಿಗೆ ಮನವಿಯನ್ನು ಸಲ್ಲಿಸಲಾಗಿದೆ. ೨೦೦೯ ಬಿಎ ಪದವಿಯಲ್ಲಿ ಐಚ್ಚಿಕ ವಿಷಯವಾಗಿ ಈ ಕೋರ್ಸ್ ಆರಂಬಿಸಲಾಗಿತ್ತು. ಈ ವಿಷ್ಯದಲ್ಲಿ ಪದವಿ ಮಾಡಿದವರು ಉನ್ನತ ವ್ಯಾಸಂಗ ಹಾಗೂ ಕೆಲವು ಪ್ರತಿಷ್ಠಿತ ಸಂಸ್ಥೆಗಳಲ್ಲಿ ಉದ್ಯೋಗ ಮಾಡುತ್ತಿದ್ದಾರೆ. ಪ್ರವಾಸೋದ್ಯಮ ಉದ್ದಿಮೆ ಅತೀ ವೇಗವಾಗಿ ಬೆಳೆಯುತ್ತಿರುವ ಉದ್ಯೋಮವಾಗಿದ್ದು…

Read More

ಅನಾರೋಗ್ಯದಿಂದ ಬಳಲುತ್ತಿದ್ದ ವ್ಯಕ್ತಿಗಳಿಗೆ ನೆರವು,ಜೊತೆಗೆ ಯೋಗಕ್ಷೇಮ ವಿಚಾರಿಸಿದ ಲಂಚುಲಾಲ್ ಕೆ.ಎಸ್

ಸ್ವಾರ್ಥ ಹೆಚ್ಚುತ್ತಿರುವ ಮತ್ತು ಮಾನವೀಯತೆ ಮರೆಯಲಾಗುತ್ತಿರುವ ಕಾಲದಲ್ಲಿ, ಶಿಕ್ಷಣ ಬಯಸುವ ಮಗುವಿಗೆ ಶಿಕ್ಷಣ, ಕಂಕಣ ಕೂಡಿ ಬಂದಿರುವ ಮನೆಮಗಳಿಗೆ ಮದುವೆ, ಆರೋಗ್ಯದ ಸಮಸ್ಯೆಗಳನ್ನು ಹೊಂದಿರುವವನಿಗೆ ಚಿಕಿತ್ಸೆ ಇಂತಹ ಅನೇಕ ಮಹತ್ಕಾರ್ಯಗಳನ್ನು ಯಾವುದೇ ಪಲಾಷೇಕ್ಷೆಯಿಲ್ಲದೆ ನಿಸ್ವಾರ್ಥವಾಗಿ ಮಾಡಿಕೊಂದು ಬಂದವರು ಶ್ರೀ ಲಂಚುಲಾಲ್ ಕೆ.ಎಸ್‌. ಅನಾರೋಗ್ಯದಿಂದ ಬಳಲುತ್ತಿದ್ದ ವ್ಯಕ್ತಿಗಳಿಗೆ ಕೇವಲ ಚಿಕಿತ್ಸೆ ವೆಚ್ಚಮಾತ್ರವಲ್ಲದೆ ಅವರ ಯೋಗಕ್ಷೇಮ ವಿಚಾರಿಸಲು ಆಸ್ಪತ್ರೆಗೆ ಭೇಟಿ ಮಾಡುವುದು – ಜನರ ಗಮನ ಸೆಳೆಯಲು ಅಲ್ಲ, ಪ್ರಶಂಸೆಗಾಗಿ ಅಲ್ಲ, ಅದು ಅವರ ಹೃದಯದಿಂದ ಬಂದ ಕಾಳಜಿ.ಅವರು ಮಾಡಿದ…

Read More

ಕನ್ನಡ ಭಾಷೆಗೆ ಅಪಮಾನ ಕಮಲ್ ಹಾಸನ್ ಗೆ ಚಾಟಿ ಬೀಸಿದ ಕರ್ನಾಟಕ ಹೈಕೋರ್ಟ್

ನೀವು ಇತಿಹಾಸಗಾರರೇ ? ಸಂಶೋದಕರೇ ? ಕಮಲ್ ಗೆ ಪ್ರಶ್ನೆ ಹಾಕಿದ ಹೈಕೋರ್ಟ್ ಇತ್ತೀಚಿಗೆ ಕಾರ್ಯಕ್ರಮವೊಂದರಲ್ಲಿ ಕನ್ನಡ ಭಾಷೆಯ ಬಗ್ಗೆ ಹಗುರವಾಗಿ ಮಾತನಾಡಿ ಕನ್ನಡಿಗರ ಆಕ್ರೋಶಕ್ಕೆ ಕಾರಣರಾದ ಚಿತ್ರನಟ ಕಮಲ್ ಹಾಸನ್ ಗೆ ಕರ್ನಾಟಕ ಉಚ್ಚ ನ್ಯಾಯಾಲಯ ಸರಿಯಾದ ಚಾಟಿ ಬೀಸಿದೆ. ಕನ್ನಡ ಭಾಷೆ ತಮಿಳು ಭಾಷೆಯಿಂದ ಹುಟ್ಟಿದೆ ಎಂಬ ವಿವಾದಾತ್ಮಕ ಹೇಳಿಕೆ ನೀಡಿದ ನಂತರ ಕನ್ನಡ ಪರ ಸಂಘಟನೆಗಳ ಸಹಿತ ಕೋಟ್ಯಂತರ ಕನ್ನಡಿಗರು ಬಹಿರಂಗ ಕ್ಷಮೆ ಕೇಳಲು ಕಮಲ್ ಗೆ ಹೇಳಿದರೂ ನಾನು ಕ್ಷಮೆ ಕೇಳುವ…

Read More

ಅಬ್ದುಲ್ ರಹೀಮ್ ಕೊಲೆ ಪ್ರಕರಣ ಮೂವರು ಆರೋಪಿಗಳು ಪೋಲೀಸರ ಬಲೆಗೆ

ಮಂಜೇಶ್ವರ: ಬಂಟ್ವಾಳ ಗ್ರಾಮಾಂತರ ಪೊಲೀಸ್‌ ಠಾಣಾವ್ಯಾಪ್ತಿಯ ಕುರಿಯಾಳ ಗ್ರಾಮದ ಈರಾಕೋಡಿ ಎಂಬಲ್ಲಿ ನಡೆದ ಅಬ್ದುಲ್ ರಹ್ಮಾನ್ ಎಂಬವರ ಕೊಲೆ ಮತ್ತು ಅವರ ಜೊತೆಯಿದ್ದ ಕಲಂದರ್ ಶಾಫಿಯ ಕೊಲೆಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಶುಕ್ರವಾರ ಮತ್ತೆ ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ. ತೆಂಕಬೆಳ್ಳುರು ಗ್ರಾಮದ ಸುಮಿತ್ ಆಚಾರ್ಯ (27), ಹಾಗೂ ಬಡಗಬೆಳ್ಳೂರು ಗ್ರಾಮದ ರವಿರಾಜ್ (23)ನನ್ನು ವಶಕ್ಕೆ ಪಡೆದಿರುವ ಪೊಲೀಸರು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಮೂವರು ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದ್ದು,ತನಿಖೆ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Read More
error: Content is protected !!