ಕರಾವಳಿ ಭಾಗದಲ್ಲಿ ಉದ್ಯೋಗ ಸೃಷ್ಟಿ, ಪ್ರವಾಸೋದ್ಯಮ ಬೆಳವಣಿಗೆಗೆ ಪ್ರತ್ಯೇಕ ನೀತಿ: ಡಿಸಿಎಂ ಡಿ.ಕೆ.ಶಿವಕುಮಾರ್.

ಬೆಂಗಳೂರು: “ಕರಾವಳಿ ಭಾಗದಲ್ಲಿ ಉದ್ಯೋಗ ಸೃಷ್ಟಿಗೆ ಹಾಗೂ ಪ್ರವಾಸೋದ್ಯಮ ಬೆಳವಣಿಗೆಗೆ ಪ್ರತ್ಯೇಕ ನೀತಿ ಮಾಡಬೇಕು ಎಂದು ಆಲೋಚನೆ ಮಾಡಲಾಗುತ್ತಿದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು.ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. “ಎರಡನೇ ಸಭೆಯನ್ನು ಮಂಗಳೂರಿನಲ್ಲಿ ನಡೆಸಲಾಗುವುದು. ಮುಂದಿನ ಸಭೆಗೆ ಯಾರನ್ನು ಆಹ್ವಾನ ಮಾಡಬೇಕು ಎಂದು ಸಲಹೆ ನೀಡಿದ್ದಾರೆ. ಈ ಸಭೆಯಲ್ಲಿ ಬಂಡವಾಳ ಹೂಡಿಕೆದಾರರು, ಕೇಂದ್ರ ಇಲಾಖೆ ಹಾಗೂ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳನ್ನು ಕರೆಯಲಾಗುತ್ತದೆ. ಕರಾವಳಿ ಭಾಗಕ್ಕೆ ಹೊಸ ರೂಪ ನೀಡಲಾಗುತ್ತದೆ” ಎಂದು ತಿಳಿಸಿದರು. “ಕರಾವಳಿ ಭಾಗದ ಜನಪ್ರತಿನಿಧಿಗಳು…

Read More

ತಿಮರೋಡಿ ಬಂಧನ ಓಕೆ , ಪೂಂಜಾ ಇಲ್ಲ ಯಾಕೆ ?ಇಷ್ಟೇ ಸಾಕೇ ? ಸಾರ್ವಜನಿಕರ ಪ್ರಶ್ನೆ .ಕಾಂಗ್ರೆಸ್ ನ ಮೃದು ನೀತಿಯೇ ?

ಬಿಜೆಪಿ ರಾಷ್ಟೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ ಎಲ್ ಸಂತೋಷ್ ರವರ ವಿರುದ್ಧ ಅವ್ಯಾಚ್ಯ ಶಬ್ದಗಳಿಂದ ಸಾರ್ವಜನಿಕವಾಗಿ ನಿಂದಿಸಿ ಅವಮಾನಿಸಿದರೆಂಬ ಆರೋಪದ ಹಿನ್ನಲೆಯಲ್ಲಿ ಸೌಜನ್ಯ ಪರ ಹೋರಾಟಗಾರ ಹಿಂದೂ ಮುಖಂಡ ಮಹೇಶ್ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸರು ಉಜಿರೆಯ ಅವರ ನಿವಾಸದಿಂದ ಬಂಧಿಸಿದರು .ನಂತರ ಕಾನೂನಿನಂತೆ ವೈದ್ಯಕೀಯ ಪರೀಕ್ಷೆಯ ನಂತರ ನ್ಯಾಯಾಂಗ ವಶಕ್ಕೆ ನೀಡಲಾಗಿದೆ.ವ್ಯಕ್ತಿಯೊಬ್ಬರ ಬಗ್ಗೆ ಸಾರ್ವಜನಿಕವಾಗಿಯೋ ಸಾಮಾಜಿಕ ಜಾಲತಾಣಗಳ ಮೂಲಕವೋ ನಿಂದಿಸಿ ಅಪಮಾನ ಮಾಡಿದರೆ ಈ ರೀತಿಯ ಕ್ರಮಗೊಳ್ಳುವುದು ಉಚಿತ .ಆದರೆ ಸರಕಾರವು ಕೈಗೊಳ್ಳುವ ಕಾನೂನು…

Read More

ಎಲ್ಲಾ ಅಡೆತಡೆಗಳನ್ನು ನಿವಾರಿಸಲಾಗಿದ್ದು, ಇನ್ನಾದರೂ ಬಡವರಿಗೆ ಸೂರು ಕಲ್ಪಿಸಿ:- ಶಾಸಕ ಕಾಮತ್

ಮಂಗಳೂರಿನ ಶಕ್ತಿನಗರದಲ್ಲಿ ತಮಗೊಂದು ಮನೆ ನಿರ್ಮಾಣವಾಗುತ್ತದೆಂದು 2017ರಿಂದಲೂ ಬಡಜನರು ಹಕ್ಕುಪತ್ರಗಳನ್ನು ಹಿಡಿದುಕೊಂಡು ಆಸೆ ಕಂಗಳಿಂದ ಕಾಯುತ್ತಿದ್ದು, ಇದೀಗ ಎಲ್ಲಾ ಅಡೆತಡೆಗಳನ್ನು ನಿವಾರಿಸಲಾಗಿದ್ದು ಪ್ರಸ್ತುತ ಸಾಲಿನ ಪ್ರಧಾನಮಂತ್ರಿ ಆವಾಸ್ ಯೋಜನೆ 2.0 ದಲ್ಲಾದರೂ ಆ ಬೇಡಿಕೆ ಈಡೇರಿಸಿ ಎಂದು ಶಾಸಕ ವೇದವ್ಯಾಸ ಕಾಮತ್ ರವರು ಅಧಿವೇಶನದಲ್ಲಿ ಸರ್ಕಾರವನ್ನು ಆಗ್ರಹಿಸಿದರು. ಈ ಭಾಗದ ಹಿಂದಿನ ಶಾಸಕರು 2017 ರಲ್ಲೇ 930 ಬಡ ಕುಟುಂಬಗಳಿಗೆ ಹಕ್ಕುಪತ್ರ ಕೊಟ್ಟು ತರಾತುರಿಯಲ್ಲಿ, ಕಾಮಗಾರಿಯ ಗುದ್ದಲಿ ಪೂಜೆ ಸಹ ಮಾಡಿ ಬಿಟ್ಟಿದ್ದರು. ಆದರೆ ಉದ್ದೇಶಿತ ಯೋಜನೆಯ…

Read More

ಕಾನೂನಿನ ಹೆಸರಿನಲ್ಲಿ ಶ್ರೀಕೃಷ್ಣ ಜನ್ಮಾಷ್ಠಮಿಯ ಸಂಭ್ರಮಕ್ಕೆ ಕೊಳ್ಳಿ ಇಟ್ಟ ರಾಜ್ಯ ಕಾಂಗ್ರೆಸ್ ಸರ್ಕಾರ- ವೇದವ್ಯಾಸ್ ಕಾಮತ್.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾನೂನಿನ ಹೆಸರಿನಲ್ಲಿ ಶ್ರೀಕೃಷ್ಣ ಜನ್ಮಾಷ್ಠಮಿಯ ಸಂಭ್ರಮಕ್ಕೆ ರಾಜ್ಯ ಕಾಂಗ್ರೆಸ್ ಸರ್ಕಾರ ಕೊಳ್ಳಿ ಇಟ್ಟು ಹಿಂದೂ ಧಾರ್ಮಿಕ ನಂಬಿಕೆಗಳನ್ನು ಘಾಸಿಗೊಳಿಸಿದೆ ಎಂದು ಅಧಿವೇಶನದಲ್ಲಿ ಶಾಸಕ ವೇದವ್ಯಾಸ ಕಾಮತ್ ರವರು ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. ದಕ್ಷಿಣ ಕನ್ನಡ ಜಿಲ್ಲೆ ಎಂದರೆ ಧಾರ್ಮಿಕ ಕ್ಷೇತ್ರಗಳಿಗೆ ಪ್ರಸಿದ್ದಿ. ಅಂತಹ ಸ್ಥಳದಲ್ಲಿ ಹಬ್ಬದ ಸಂಭ್ರಮ ತುಸು ಹೆಚ್ಚೇ ಇರುವುದು ಸಾಮಾನ್ಯವಾಗಿದ್ದು, ಕೋಲ, ನೇಮ, ಯಕ್ಷಗಾನ, ಬ್ರಹ್ಮಕಲಶ ಹೀಗೆ ನಿರಂತರವಾಗಿ ಕಾರ್ಯಕ್ರಮಗಳು ನಡೆಯುತ್ತವೆ. ಅದರಂತೆ ಶ್ರೀ ಕೃಷ್ಣ ಜನ್ಮಾಷ್ಟಮಿಯು ಈ ಭಾಗದಲ್ಲಿ…

Read More

ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ರಾಜೀವ್ ಗಾಂಧಿ ಹಾಗೂ ದೇವರಾಜ ಅರಸು ಜನ್ಮದಿನ ಆಚರಣೆ.

ಮಂಗಳೂರು: ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹಾಗೂ ಮಾಜಿ ಮುಖ್ಯಮಂತ್ರಿ ದೇವರಾಜು ಅರಸು ಅವರ ಜನ್ಮದಿನದ ಪ್ರಯುಕ್ತ ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ವತಿಯಿಂದ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಇಬ್ರಾಹೀಂ ನವಾಝ್ ನೇತೃತ್ವದಲ್ಲಿ ವೆನ್ಲಾಕ್ ಜಿಲ್ಲಾ ಸರ್ಕಾರಿ ಆಸ್ಪತ್ರೆಯ ರೋಗಿಗಳ ಜೊತೆಗಾರರಿಗೆ ಊಟವನ್ನು ವಿತರಿಸಲಾಯಿತು. ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷರಾದ ಸುನಿತ್ ಡೇಸಾ, ದೀಕ್ಷಿತ್ ಅತ್ತಾವರ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸೌಹಾನ್ ಎಸ್‌ಕೆ, ಮಂಗಳೂರು ದಕ್ಷಿಣ ವಿಧಾನಸಭಾ ಅಧ್ಯಕ್ಷ ಆಸಿಫ್ ಬಜಾಲ್, ಬ್ಲಾಕ್…

Read More

ದ.ಕ.ಜಿಲ್ಲಾ ಮಹಿಳಾ ಕಾಂಗ್ರೆಸ್ ಪದಗ್ರಹಣ ಸಮಾರಂಭ

ದ.ಕ.ಜಿಲ್ಲಾ ಮಹಿಳಾ ಕಾಂಗ್ರೆಸ್ ಪದಗ್ರಹಣ ಸಮಾರಂಭ ಇಂದು ನಡೆಯಿತು.ಈ ಕಾರ್ಯಕ್ರಮದ ಉದ್ಘಾಟನೆಯನ್ನು..ರಾಜ್ಯ ಮಹಿಳಾ ಅಧ್ಯಕ್ಷೆ ಸೌಮ್ಯ ರೆಡ್ಡಿಯವರು ದೀಪ ಬೆಳಗಿಸಿ,ಮಹಿಳಾ ನಗರ ಅಧ್ಯಕ್ಷೆ ಕುಮಾರಿ ಅಪ್ಪಿ ಹಾಗೂ ಗ್ರಾಮಂತರ ಅಧ್ಯಕ್ಷೇ ಉಷಾ ಅಂಚನ ಅವರಿಗೆ ಕಾಂಗ್ರೆಸ್ ಧ್ವಜವನ್ನು ನೀಡುವ ಮೂಲಕ ಅಧಿಕಾರವನ್ನು ನಿಡಿದರು ಈ ಸಂಧರ್ಭದಲ್ಲಿ ಮಾಜಿ ಸಚಿವ ರಮಾನಾಥ.ರೈ, ಮಾಜಿ ಮೇಯರ ಶಶಿಧರ ಹೆಗ್ಡೆ, ಕಾರ್ಯದರ್ಶಿ ಮಂಜುಳ ನಾಯಕ್ ನಮಿತಾ.ಡಿ.ರಾವ್ ಹಾಗು ಇನ್ನಿತರರು ಉಪಸ್ಥಿತರಿದ್ದರು.

Read More

ಕಡಬ ಪಟ್ಟಣ ಪಂಚಾಯತ್ ಕಾಂಗ್ರೆಸ್ ತೆಕ್ಕೆಗೆ!ಶಾಸಕ ಮಂಜುನಾಥ ಭಂಡಾರಿ ಹರ್ಷ

ಕಡಬ: ಭಾರೀ ಕುತೂಹಲ ಕೆರಳಿಸಿದ್ದ ಸುಳ್ಯ ತಾಲೂಕಿನ ಕಡಬ ಪಟ್ಟಣ ಪಂಚಾಯತ್ ಚುನಾವಣೆಯು ಯಶಸ್ವಿಯಾಗಿದ್ದು ಕಾಂಗ್ರೆಸ್ ಪಕ್ಷ ಜಯಭೇರಿ ಬಾರಿಸಿದೆ. 13 ಸ್ಥಾನಗಳಲ್ಲಿ 8 ಸ್ಥಾನಗಳನ್ನು ಕಾಂಗ್ರೆಸ್ ಪಕ್ಷ ಗೆಲ್ಲುವ ಮೂಲಕ ಅಧಿಕಾರದ ಗದ್ದುಗೆಯೇರಿದೆ. ಕೆಪಿಸಿಸಿ ಕಾರ್ಯಧ್ಯಕ್ಷರು ಹಾಗೂ ವಿಧಾನ ಪರಿಷತ್ ಶಾಸಕರಾದ ಮಂಜುನಾಥ ಭಂಡಾರಿ, ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್, ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಅವರ ನೇತೃತ್ವದಲ್ಲಿ ನಡೆದಿದ್ದ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಬಹುಮತ ಪಡೆದಿದ್ದಾರೆ….

Read More

ಮುಗ್ಡಾಲ್ ಗುಡ್ಡೆ: ‘5ನೇ ವರ್ಷದ ಆಟಿಡೊಂಜಿ ದಿನ’ಆಟಿದ ಅಟ್ಟನೆ’.

ಬಂಟ್ವಾಳ: ‘ ಮುಗ್ಡಾಲ್ ಗುಡ್ಡೆ’ ವತಿಯಿಂದ 5 ನೇ ವರ್ಷದ’ಆಟಿಡೊಂಜಿ ದಿನ ಕಾರ್ಯಕ್ರಮ”ಆಟಿದ ಅಟ್ಟನೆ “ವಿವಿಧ, ಸಂಸ್ಕೃತಿ ಸಂಸ್ಕಾರದ ಆಹಾರ ತಿಂಡಿ ತಿನಸಿನ ಜೊತೆ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಸಾಧನೆಯನ್ನು ಮಾಡಿದ ಸಾಧಕರಿಗೆ ಸನ್ಮಾನದೊಂದಿಗೆ ವಿಜೃಂಭನೆಯಿಂದ ಜರಗಿತು.ಸ್ಥಳೀಯ ಹಿರಿಯರಜೊತೆ ವಠಾರದ ಮಾತೆಯರು ದೀಪ ಬೆಳಗಿಸಿ ಉದ್ಘಾಟಿಸಿದರು. ತುಳುನಾಡಿನ ಸಾಂಸ್ಕೃತಿಕ ನೃತ್ಯಗಳು, ಆಟಿಕಳಂಜ ನಲಿಕೆ, ತುಳುಪದಕೊಲಿಕೆ ಆಟ, ಕಂಡಡೊಂಜಿ ದಿನ ಸ್ಪರ್ಧೆ ನಡೆಸಿದ ಸ್ಪರ್ಧಾಳುಗಳಿಗೆ ಬಹುಮಾನ ವಿತರಣೆ, ಹತ್ತನೇ ತರಗತಿಯಲ್ಲಿ ಉತ್ತಮ ಅಂಕ ಪಡದ ವಿದ್ಯಾರ್ಥಿಗಳನ್ನು ತುಳುನಾಡ ಶಾಲು ಹೊದಿಸಿ…

Read More

ಬಜಾಲ್ ನಂತೂರ್ ನಲ್ಲಿ ಜೆ.ಎಫ್ ಅಸೋಸಿಯೇಷನ್ ನಿಂದ 79ನೇ ಸ್ವಾತಂತ್ರ್ಯೋತ್ಸವ.

ಮಂಗಳೂರು: ಸ್ವಾತಂತ್ರ್ಯಕ್ಕಾಗಿ ತ್ಯಾಗ ಮಾಡಿದ ಎಲ್ಲ ಮಹಾತ್ಮಾರನ್ನು ನಾವು ಸ್ಮರಿಸಬೇಕು. ಸ್ವಾತಂತ್ರ್ಯವನ್ನು ಪಡೆಯಲು ಅವರು ಮಾಡಿದ ತ್ಯಾಗದಿಂದ ನಾವು ಇಂದು ನೆಮ್ಮದಿಯ ಉಸಿರಾಡುತ್ತಿದ್ದೇವೆ ಎಂದು ಮ.ನ.ಪಾ ನಿಕಟ ಪೂರ್ವ ಸದಸ್ಯ ಹಾಗೂ ಬಜಾಲ್ ನಂತೂರ್ ಬದ್ರಿಯಾ ಜುಮ್ಮಾ ಮಸ್ಜಿದ್ ಅಧ್ಯಕ್ಷ ಅಬ್ದುಲ್ ರವೂಫ್ ಹೇಳಿದ್ದಾರೆ.79ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಜೆ.ಎಫ್ ಅಸೋಸಿಯೇಷನ್ (ರಿ) ಬಜಾಲ್ ನಂತೂರ್ ಇದರ ವತಿಯಿಂದ ಶುಕ್ರವಾ ಚೌಕ್ ನಲ್ಲಿ ಆಯೋಜಿಸಿದ ಕಾರ್ಯಕ್ರಮದಲ್ಲಿ ಧ್ವಜಾರೋಹಣ ಗೈದು ಬಳಿಕ ಅವರು ಮಾತನಾಡುತ್ತಿದ್ದರು. ಜೆ.ಎಫ್.ಎ ಸಂಸ್ಥೆ ಹಲವಾರು ಜನಪರ…

Read More

ಕೆನರಾ ಎಂಜಿನಿಯರಿಂಗ್ ಕಾಲೇಜಿನಲ್ಲಿ 21ನೇ ಪದವಿ ಪ್ರಧಾನ ಸಮಾರಂಭ.

“ಸಂಸ್ಥೆಯ ಹೆಮ್ಮೆಯ ಸಾಧನೆಗಳಲ್ಲಿ ನೀವು ಪಾಲುದಾರರು ” – ವಾಸುದೇವ ಕಾಮತ್ಮಂಗಳೂರು, ಆ. 16: “ನಮ್ಮ ಕಾಲೇಜಿನಲ್ಲಿ ನಿರ್ಮಿಸಿದ ಆಧುನಿಕ ಸೌಲಭ್ಯಗಳು, ಈ ತಾಂತ್ರಿಕ ಶಿಕ್ಷಣ ಸಂಸ್ಥೆಗೆ ದೊರಕಿದ ಸ್ವಾಯತ್ತ ಸ್ಥಾನಮಾನ, NAAC ಮಾನ್ಯತೆ, ಅನೇಕ ಶ್ರೇಣಿಗಳು ಹಾಗೂ ಚಿನ್ನದ ಪದಕ ಇವು ಸಂಸ್ಥೆಯ ಹೆಮ್ಮೆಯ ಸಾಧನೆಗಳು. ಈ ಸಾಧನೆಗಳ ಸಹಯಾತ್ರಿಗಳೆಂದರೆ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು. ಬರುವ ಡಿಸೆಂಬರ್ 24, 2025ರಂದು ಜರುಗುವ ಜಾಗತಿಕ ಹಳೆಯ ವಿದ್ಯಾರ್ಥಿ ಸಮಾವೇಶದಲ್ಲಿ ಪ್ರತಿಯೊಬ್ಬ ಪದವೀಧರರೂ ಪಾಲ್ಗೊಳ್ಳಿ, ಸಂಸ್ಥೆಯ ಶಕ್ತಿಯನ್ನು ವಿಶ್ವಮಟ್ಟದಲ್ಲಿ…

Read More
error: Content is protected !!