ಮತ್ತೆ ಕರಾವಳಿಯಾದಂತ್ಯ ಅಬ್ಬರಿಸಲಿದೆ ಮಳೆರಾಯ.

ಬೆಂಗಳೂರು: ಕರ್ನಾಟಕದಾದ್ಯಂತ ಮುಂಗಾರು ಮಳೆ ಚುರುಕುಗೊಳ್ಳಲು ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ತೀವ್ರತೆ ಕಾರಣವೆಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುಂಗಾರು ಋತುವಿನ ಆರಂಭದಿಂದಲೂ ಸಮುದ್ರ ಮಟ್ಟದಲ್ಲಿ ನಿರಂತರ ಬದಲಾವಣೆಗಳು ಮುಂದುವರಿದಿವೆ. ಕರಾವಳಿ ಕರ್ನಾಟಕವು ತೀವ್ರ ಮಳೆ ಎಚ್ಚರಿಕೆ ನೀಡಲಾಗಿದೆ. ಈ ಪ್ರದೇಶದಲ್ಲಿ ಅತಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಇನ್ನು ಆಗಸ್ಟ್ 16ರಂದು ಕರಾವಳಿ ಜಿಲ್ಲೆಗಳು ಬೆಳಗಾವಿ, ಬೀದರ್ ಸೇರಿ ಐದು ಜಿಲ್ಲೆಗಳಿಗೆ ಹವಾಮಾನ ಇಲಾಖೆಯು ಯೆಲ್ಲೋ ಅಲರ್ಟ್ ಘೋಷಿಸಿದ್ದು, ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ನಿರೀಕ್ಷೆ ಇದೆ….

Read More

ಸಾಮರಸ್ಯದಿಂದ ಅಭಿವೃದ್ಧಿ ಸಾಧ್ಯ : ದಕ್ಷಿಣ ಕನ್ನಡ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್.

ಮಂಗಳೂರು: ಸಾಮರಸ್ಯದಿಂದ ಅಭಿವೃದ್ಧಿ ಸಾಧ್ಯ ಎಂಬುದನ್ನು ಸಮಾಜದ ಜನರಿಗೆ ಮತ್ತು ಚರ್ಚ್‌, ಮಸೀದಿ ಮಂದಿರಗಳ ಮುಖ್ಯಸ್ಥರಿಗೆ ಮನದಟ್ಟು ಮಾಡಬೇಕಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್‌ ನಗರದ ನೆಹರೂ ಮೈದಾನದಲ್ಲಿ ನಡೆದ ಪಥಸಂಚಲನದೊಂದಿಗೆ 79ನೇ ಸ್ವಾತಂತ್ರೋತ್ಸವದಲ್ಲಿ ಧ್ವಜಾರೋಹಣ ನೆರವೇರಿಸಿದ ಬಳಿಕ ಸಂದೇಶ ಭಾಷಣದಲ್ಲಿ ಅವರು ಕರೆ ನೀಡಿದರು. ಕಲೆ, ನಾಟಕ, ಯಕ್ಷಗಾನ ಕ್ಷೇತ್ರಗಳಲ್ಲೂ ಸಹ ಸಾಮರಸ್ಯ ಸಂದೇಶ ಸಾರುವತ್ತ ಕಲಾವಿದರು ಹೆಚ್ಚಿನ ಗಮನ ಹರಿಸಬೇಕು. ಹಿಂಸೆಗೆ ಅವಕಾಶ ನೀಡದೇ ಜಿಲ್ಲೆಯ ಸರ್ವತೋಮುಖ ಅಭಿವೃದ್ಧಿಗೆ ಎಲ್ಲರೂ ಕೈ…

Read More

ಐಎಂಸಿ ವತಿಯಿಂದ ಪುರಸ್ಕಾರ ಸಮಾರಂಭ.

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಗಡಿಯಾರ ಜೋಗಿಬೆಟ್ಟುವಿನ ಐಎಂಸಿ ಸಂಘಟನೆಯ ನೇತೃತ್ವದಲ್ಲಿ ಎಸೆಸೆಲ್ಸಿಯಲ್ಲಿ ಉತ್ತಮ ಅಂಕ ಪಡೆದ ಊರಿನ ವಿದ್ಯಾರ್ಥಿಗಳಿಗೆ ಪುರಸ್ಕಾರ ಸಮಾರಂಭವು ಶುಕ್ರವಾರ ಗಡಿಯಾರ ಜುಮಾ‌ ಮಸೀದಿ ಆವರಣದಲ್ಲಿ ‌ನಡೆಯಿತು. ಇದೇ ವೇಳೆ ಉತ್ತಮ ಅಂಕಗಳನ್ನು ಪಡೆದ ದುಲ್ಖತ್ಹುಲ್ ಅಫೀಫಾ (ಅಂಕ 617), ಮುಹಮ್ಮದ್ ಶಬೀರ್ ಕೆ (ಅಂಕ 590), ಮುಹಮ್ಮದ್ ರಾಫಿ (ಅಂಕ 566),ಮುಹಮ್ಮದ್ ನಿಹಾಲ್ (ಅಂಕ 560), ಮರಿಯಂ ರಾಯಿದ್ (ಅಂಕ 549) ಇವರನ್ನು ಪೋಷಕರ ಸಮ್ಮುಖದಲ್ಲಿ ಸನ್ಮಾನಿಸಲಾಯಿತು. ಸಮಾರಂಭದ ಮುಖ್ಯ…

Read More

ಪಿವಿಎಸ್ ವೃತ್ತ ಬಳಿಯ ಆಟೋರಿಕ್ಷಾ ನಿಲ್ದಾಣಕ್ಕೆ ನೂತನವಾಗಿ ನಿರ್ಮಿಸಲಾದ ಮೇಲ್ಚಾವಣಿಯ ಉದ್ಘಾಟನೆ ಇಂದು.

ಪಿವಿಎಸ್ ವೃತ್ತ ಬಳಿಯ ಆಟೋರಿಕ್ಷಾ ನಿಲ್ದಾಣಕ್ಕೆ ನೂತನವಾಗಿ ನಿರ್ಮಿಸಲಾದ ಮೇಲ್ಚಾವಣಿಯ ಉದ್ಘಾಟನೆಯನ್ನು ಶಾಸಕ ವೇದವ್ಯಾಸ ಕಾಮತ್ ರವರು ನೆರವೇರಿಸಿದರು. ಈ ವೇಳೆ ಮಾತನಾಡಿದ ಶಾಸಕರು, ನಿಮ್ಮೆಲ್ಲರ ಅನುಕೂಲಕ್ಕಾಗಿ ಶಾಸಕರ ನಿಧಿಯಿಂದ ಅನುದಾನವನ್ನು ಹೊಂದಿಸಿಕೊಂಡು ಈ ಆಟೋರಿಕ್ಷಾ ನಿಲ್ದಾಣದ ಮೇಲ್ಚಾವಣಿಯನ್ನು ನಿರ್ಮಿಸಲಾಗಿದ್ದು, 79ನೇ ಸ್ವಾತಂತ್ರ್ಯೋತ್ಸವದ ಶುಭ ದಿನದಂದೇ ಉದ್ಘಾಟನೆಗೊಳ್ಳುತ್ತಿದೆ. ಇಲ್ಲಿನ ಚಾಲಕ ಬಂಧುಗಳಿಗೆ ಇದರ ಉಪಯೋಗವಾದರೆ ಅದಕ್ಕಿಂತ ಸಂತೋಷ ಬೇರೇನಿಲ್ಲ, ಎಲ್ಲರಿಗೂ ಶುಭವಾಗಲಿ ಎಂದು ಹಾರೈಸಿದರು. ನಿಕಟಪೂರ್ವ ಪಾಲಿಕೆ ಸದಸ್ಯೆ ಪೂರ್ಣಿಮಾ, ರಮೇಶ್ ಹೆಗ್ಡೆ, ಮೋಹನ್ ಪೂಜಾರಿ, ಭಾಗ್ಯ…

Read More

ದಕ್ಷಿಣಕನ್ನಡದ ಹೆಸರು ಮಂಗಳೂರು ಎಂದಾಗಲಿ :- ಅಧಿವೇಶನದಲ್ಲಿ ಆಗ್ರಹಿಸಿದ ಶಾಸಕ ಕಾಮತ್

ಕೇವಲ ಒಂದೆರಡು ತಿಂಗಳಲ್ಲಿಯೇ ರಾಮನಗರ ಜಿಲ್ಲೆಯ ಹೆಸರನ್ನು ಬೆಂಗಳೂರು ದಕ್ಷಿಣ ಎಂದು ಬದಲಾಯಿಸಲು ತೋರಿದ ಉತ್ಸಾಹವನ್ನು ದಕ್ಷಿಣಕನ್ನಡದ ಹೆಸರನ್ನು ಮಂಗಳೂರು ಎಂದು ಬದಲಿಸುವಲ್ಲಿಯೂ ರಾಜ್ಯ ಸರ್ಕಾರ ತೋರಬೇಕು ಎಂದು ಶಾಸಕ ವೇದವ್ಯಾಸ ಕಾಮತ್ ರವರು ಅಧಿವೇಶನದಲ್ಲಿ ಆಗ್ರಹಿಸಿದರು. ಗಮನ ಸೆಳೆಯುವ ವೇಳೆ ನಡೆದ ಚರ್ಚೆಯಲ್ಲಿ ಮಾತನಾಡಿದ ಶಾಸಕರು, ಸದರಿ ವಿಷಯಕ್ಕೆ ಸಂಬಂಧಿಸಿದಂತೆ ದ.ಕ ಜಿಲ್ಲಾಧಿಕಾರಿಗಳಿಂದ ವರದಿ ಬರಲು ಬಾಕಿ ಇದ್ದು ಪ್ರಸ್ತಾವನೆ ಸ್ವೀಕೃತಗೊಂಡಿರುವುದಿಲ್ಲ ಎಂದು ಸರ್ಕಾರ ಹೇಳಿದೆ. ಆದರೆ ಆ ಪ್ರಸ್ತಾವನೆ ಸಲ್ಲಿಕೆಯಾಗಲು ಸರ್ಕಾರದಿಂದ ಪೂರಕವಾದ ವಾತಾವರಣ…

Read More

ಸದನದಲ್ಲಿ ಯಶಸ್ವಿಯಾಗಿ ಕಲಾಪ ನಡೆಸಿಕೊಟ್ಟ ಶಾಸಕ ಮಂಜುನಾಥ ಭಂಡಾರಿ!

ಬೆಂಗಳೂರು: ಇಂದು ವಿಧಾನಸೌಧದಲ್ಲಿ ನಡೆದ ವಿಧಾನ ಮಂಡಲ ಅಧಿವೇಶನದಲ್ಲಿ ವಿಧಾನ ಪರಿಷತ್ ಶಾಸಕರಾದ ಮಂಜುನಾಥ ಭಂಡಾರಿಯವರು ಸಭಾಪತಿ ಪೀಠದಲ್ಲಿ ಕುಳಿತು ಶೂನ್ಯ ವೇಳೆಯ ಚರ್ಚೆಯನ್ನು ಹಾಗೂ ವಿವಿಧ ವಿಧೇಯಕಗಳ ಅಂಗೀಕಾರದ ಮೇಲಿನ ಚರ್ಚೆಯನ್ನು ಬಹಳ ಸುಧೀರ್ಘವಾಗಿ ಹಾಗೂ ಅರ್ಥಗರ್ಭಿತವಾಗಿ ನಡೆಸಿಕೊಟ್ಟರು. ಶಾಸಕ ಭಂಡಾರಿ ಅವರು ಈ ಹಿಂದೆಯೂ ಅನೇಕ ಬಾರಿ ಯಶಸ್ವಿಯಾಗಿ ವಿಧಾನ ಪರಿಷತ್ ಕಲಾಪವನ್ನು ನಿರ್ವಹಿಸುವ ಮೂಲಕ ಸೈ ಅನ್ನಿಸಿಕೊಂಡಿದ್ದಾರೆ.

Read More

ರೇಣುಕಾಸ್ವಾಮಿ ಹತ್ಯೆ ಕೇಸ್‌ – ಎಲ್ಲಾ ಜೈಲುಗಳಿಗೂ ಸುಪ್ರೀಂ ಎಚ್ಚರಿಕೆ

ನವದೆಹಲಿ, ಆ. 15 : ಚಾಲೆಂಜಿಂಗ್ ಸ್ಟಾರ್ ದರ್ಶನ್ ಸೇರಿ ಏಳು ಮಂದಿಗೆ ಹೈಕೋರ್ಟ್ ನೀಡಿದ್ದ ಜಾಮೀನು ಪರಿಗಣಿಸುವಲ್ಲಿ ಗಂಭೀರ ಹಗರಣವಾಗಿದೆ ಎಂಬ ಕಾರಣದಿಂದ, ಸುಪ್ರೀಂಕೋರ್ಟ್ ಇಂದು ಗಂಭೀರ ತೀರ್ಪು ಪ್ರಕಟಿಸಿದೆ. ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಆರೋಪಿಗಳಾಗಿರುವ ದರ್ಶನ್ ಮತ್ತು ಇತರರು ಜಾಮೀನಿನ ಹಿನ್ನಲೆಯಲ್ಲಿ ಹೊರಗಿದ್ದರೂ, ಪ್ರಕರಣದ ಗಂಭೀರತೆಯ ಹಿನ್ನೆಲೆಯಲ್ಲಿ ಸುಪ್ರೀಂಕೋರ್ಟ್ ಜಾಮೀನನ್ನು ರದ್ದುಗೊಳಿಸಿ ತೀರ್ಪು ನೀಡಿದೆ. “ಯಾರೂ ಕಾನೂನಿಗಿಂತ ಮೇಲಲ್ಲ. ಆರೋಪಿ ಎಷ್ಟೇ ಪ್ರಸಿದ್ಧ ವ್ಯಕ್ತಿಯಾದರೂ ಕೂಡ ಕಾನೂನಿನ ಮುಂದೆ ಎಲ್ಲರೂ ಸಮಾನರು,” ಎಂದು ನ್ಯಾಯಮೂರ್ತಿಗಳು ಹೇಳಿದ್ದಾರೆ….

Read More

ರೇಣುಕಾಸ್ವಾಮಿ ಹತ್ಯೆ ಪ್ರಕರಣ – ಪವಿತ್ರಾ ಗೌಡ ಬಂಧನ

ಬೆಂಗಳೂರು, ಆ. 15 : ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಪ್ರಮುಖ ಆರೋಪಿ ಪವಿತ್ರಾ ಗೌಡ ಜಾಮೀನು ರದ್ದುಗೊಳಿಸಿರುವ ಸುಪ್ರೀಂಕೋರ್ಟ್ ತೀರ್ಪಿನ ಬೆನ್ನಲ್ಲೇ, ಬೆಂಗಳೂರು ಪೊಲೀಸರು ಪವಿತ್ರಾ ಅವರನ್ನು ಅವರ ನಿವಾಸದಲ್ಲಿ ಬಂಧಿಸಿದ್ದಾರೆ. ದರ್ಶನ್ ಸೇರಿದಂತೆ 7 ಮಂದಿ ಆರೋಪಿಗಳ ಜಾಮೀನು ರದ್ದುಪಡಿಸಿದ ಬಳಿಕ, ಎಲ್ಲಾ ಆರೋಪಿಗಳನ್ನು ಪುನಃ ವಶಕ್ಕೆ ಪಡೆಯುವ ಕಾರ್ಯಾಚರಣೆ ಪ್ರಾರಂಭವಾಗಿದೆ. ಕರ್ನಾಟಕ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿಗೆ ಸ್ಪಂದನೆ ನೀಡಿದ ಸುಪ್ರೀಂಕೋರ್ಟ್ ನ ನ್ಯಾಯಮೂರ್ತಿಗಳು ಜೆ.ಬಿ. ಪಾರ್ದಿವಾಲಾ ಮತ್ತು ಆರ್. ಮಹಾದೇವನ್ ನೇತೃತ್ವದ ದ್ವಿಸದಸ್ಯ ಪೀಠ, ಹೈಕೋರ್ಟ್…

Read More

ನಮ್ಮ ಕುಡ್ಲ ವಾಹಿನಿಯ ಬೊಳ್ಳಿ ಪರ್ಬ 2025 ಸಮಾರೋಪ ಮಾತೃಭಾಷೆಯಲ್ಲಿ ತುಳುವಾರ್ತೆ ಬಂದಾಗ ಬಾರೀ ಸಂತೋಷ : ಡಾ. ಡಿ. ವೀರೇಂದ್ರ ಹೆಗ್ಗಡೆ

ಮಂಗಳೂರು, ಆಗಸ್ಟ್ 13: ಧರ್ಮಸ್ಥಳದ ಎಲ್ಲಾ ಕಾರ್ಯಕ್ರಮಗಳಿಗೆ ನಮ್ಮಕುಡ್ಲ ಬೇಕೇ ಬೇಕು. ಶ್ರೀ ಕಾಂತರಾವ್ ರಂಥ ಅದ್ಭುತ ಟೀಮ್ ಇದೆ. ಮಾತೃಭಾಷೆ ನಮಗೆ ಬಹಳ ಪ್ರಿಯವಾದುದು. ಮಾತೃಭಾಷೆಯಲ್ಲಿ ತುಳುವಾರ್ತೆ, ಕಾರ್ಯಕ್ರಮ ಬಂದಾಗ ಭಾರೀ ಸಂತೋಷ ಎಂದು ರಾಜ್ಯಸಭಾ ಸದಸ್ಯ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರು ಹೇಳಿದರು. ಮಂಗಳೂರಿನ ಪುರಭವನದಲ್ಲಿ ಆಗಸ್ಟ್ 12 ರಂದು ನಡೆದ ಪ್ರಥಮ ತುಳು ವಾರ್ತಾವಾಹಿನಿ ‘ನಮ್ಮಕುಡ್ಲ’ದ ಬೊಳ್ಳಿ ಪರ್ಬ 2025 ರ ಸಮಾರೋಪ ಸಮಾರಂಭದಲ್ಲಿ…

Read More

ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ ತಿದ್ದುಪಡಿ ಕುರಿತು ಸಚಿವರಿಗೆ ಮನವಿ ಸಲ್ಲಿಸಿದ ಶಾಸಕ ಕಿಶೋರ್ ಕುಮಾರ್ ಪುತ್ತೂರು.

ಬೆಂಗಳೂರು: ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮದ ಸೆಕ್ಷನ್ 64 ಪ್ರಕಾರ, ಗ್ರಾಮ ಪಂಚಾಯತ್ ವ್ಯಾಪ್ತಿಯ ಕಟ್ಟಡ ಪರವಾನಿಗೆ ವಿತರಿಸುವ ಅಧಿಕಾರ ಗ್ರಾಮ ಪಂಚಾಯತಿಗಿದೆ. ಆದರೆ, ಸಬ್-ಸೆಕ್ಷನ್ 5-A ಪ್ರಕಾರ ಲೇಔಟ್ ಅನುಮೋದನೆ ಮತ್ತು ಕಟ್ಟಡ ಪರವಾನಿಗೆ ವಿತರಿಸುವ ಸಂದರ್ಭದಲ್ಲಿ ಗ್ರಾಮ ಪಂಚಾಯತಿಗಳು ಪಟ್ಟಣ ಮತ್ತು ಗ್ರಾಮಾಂತರ ಯೋಜನಾ ಅಧಿನಿಯಮ 1961 ಅನ್ನು ಪಾಲಿಸಬೇಕಾದ ಕಾರಣ, ಗ್ರಾಮ ಪಂಚಾಯತಿಗಳಿಗೆ ತಾಂತ್ರಿಕ ಅನುಮೋದನೆ ನೀಡುವ ಅಧಿಕಾರ ಇಲ್ಲದಂತಾಗಿದೆ. ಈ ಹಿನ್ನೆಲೆಯಲ್ಲಿ, ಶಾಸಕ ಕಿಶೋರ್ ಕುಮಾರ್ ಪುತ್ತೂರು…

Read More
error: Content is protected !!