ಖ್ಯಾತ ನಟ ಮತ್ತು ರಂಗಭೂಮಿ ಕಲಾವಿದ ಟಿ ಪ್ರಭಾಕ‌ರ್ ಕಲ್ಯಾಣಿ ಇನ್ನಿಲ್ಲ

ಉಡುಪಿ: ಕಾಂತಾರ ಚಿತ್ರದ ಖ್ಯಾತ ನಟ ಮತ್ತು ರಂಗಭೂಮಿ ಕಲಾವಿದ ಟಿ ಪ್ರಭಾಕ‌ರ್ ಕಲ್ಯಾಣಿ ಹೃದಯಾಘಾತದಿಂದ ನಿಧನರಾದರು.ಪೆರ್ಡೂರಿನ ಮೂಲದವರು ಮತ್ತು ಬ್ಯಾಂಕ್ ಆಫ್ ಬರೋಡಾದ ನಿವೃತ್ತ ಅಧಿಕಾರಿಯಾಗಿದ್ದ ಪ್ರಭಾಕರ್, ‘ಕಾಂತಾರ’ದಲ್ಲಿ ವಕೀಲರ ಪಾತ್ರವನ್ನು ನಿರ್ವಹಿಸುವ ಮೂಲಕ ಪ್ರಸಿದ್ದರಾಗಿದ್ದರು. ಕುಟುಂಬದ ಮೂಲಗಳ ಪ್ರಕಾರ, ಅವರು ಎರಡು ದಿನಗಳ ಹಿಂದೆ ಮನೆಯಲ್ಲಿ ಕುಸಿದುಬಿದ್ದು ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಿಸದೇ ಅವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

Read More

ಮುಸುಕುದಾರಿಗೆ ಗನ್ ಮ್ಯಾನ್ ಭದ್ರತೆ ನೀಡುವಂತೆ ಎಸ್ ಐಟಿಗೆ ಮನವಿ

ಧರ್ಮಸ್ಥಳದಲ್ಲಿ ಶವಹೂತಿಟ್ಟಿರುವ ಪ್ರಕರಣದ ದೂರುದಾರ ತನಗೆ ಗನ್ ಮ್ಯಾನ್ ಭದ್ರತೆ ನೀಡುವಂತೆ ಎಸ್ ಐಟಿಗೆ ಮನವಿ ಮಾಡಿದ್ದಾನೆ ಎಂದು ತಿಳಿದುಬಂದಿದೆ. ಧರ್ಮಸ್ಥಳದಲ್ಲಿ ಗಲಾಟೆ ಪ್ರಕರಣದ ಬೆನ್ನಲ್ಲೇ ದೂರುದಾರ ತನ್ನ ಮೇಲೂ ದಾಳಿ ನಡೆಯುವ ಸಾಧ್ಯತೆ ಇರುವುದರಿಂದ ತನಗೆ ಗನ್ ಮ್ಯಾನ್ ಭದ್ರತೆ ಒದಗಿಸುವಂತೆ ಮನವಿ ಮಾಡಿದದಗಿ ದೂರುದಾರ ಪರ ವಕೀಲರು ಎಸ್ ಐಟಿ ತಂಡಕ್ಕೆ ಲಿಖಿತ ಮನವಿ ಮಾಡಿದ್ದಾರೆ.ಶೋಧಕಾರ್ಯ ಮುಕ್ತಾಯವಾದ ಬಳಿಕವೂ ತನಗೆ ಗನ್ ಮ್ಯಾನ್ ಭದ್ರತೆ ಕಲ್ಪಿಸುವಂತೆ ಎಸ್ ಐಟಿ ಎಸ್‌ ಪಿ ಜಿತೇಂದ್ರ ದಯಾಮ್…

Read More

ಧರ್ಮಸ್ಥಳ ಕ್ಷೇತ್ರದ ಪಾವಿತ್ರ್ಯಕ್ಕೆ ಧಕ್ಕೆಯಾದರೆ ಸಹಿಸುವುದಿಲ್ಲ:- ಶಾಸಕ ಕಾಮತ್

ಧರ್ಮಸ್ಥಳದ ನೇತ್ರಾವತಿ ನದಿ ತೀರದಲ್ಲಿ ಎಸ್ಐಟಿ ಈಗಾಗಲೇ ತನಿಖೆ ಕೈಗೊಂಡಿದ್ದು ಸೋಷಿಯಲ್ ಮೀಡಿಯಾಗಳಲ್ಲಿ ಕುಳಿತವರು, ತನಿಖೆ ಹೇಗೆ ನಡೆಯಬೇಕು ಎಂದು ನಿರ್ದೇಶಿಸಿ, ಕ್ಷೇತ್ರದ ಪಾವಿತ್ರ್ಯಕ್ಕೆ ಧಕ್ಕೆ ಆಗುವಂತಹ ಹೇಳಿಕೆ ನೀಡಿ ಅಂತಿಮ ತೀರ್ಪು ಸಹ ಕೊಟ್ಟು ಬಿಡುತ್ತಿದ್ದಾರೆ. ಇಂತಹ ಅತಿರೇಕದ ವರ್ತನೆಗಳಿಗೆ ರಾಜ್ಯ ಸರ್ಕಾರ ಕೂಡಲೇ ಕಡಿವಾಣ ಹಾಕಬೇಕು ಎಂದು ಶಾಸಕ ವೇದವ್ಯಾಸ ಕಾಮತ್ ರವರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಧರ್ಮಸ್ಥಳವು ರಾಜ್ಯದ ಸಾವಿರಾರು ದೇವಸ್ಥಾನಗಳ ಜೀರ್ಣೋದ್ಧಾರ, ಕೆರೆ ಅಭಿವೃದ್ಧಿ, ಹಿಂದೂ ರುದ್ರಭೂಮಿಗಳ ನವೀಕರಣ, ಸ್ತ್ರೀ ಸಬಲೀಕರಣ,…

Read More

ಮಂಗಳೂರಿನಲ್ಲಿ ನಡೆದ ಕುಕ್ಕರ್ ಬಾಂಬ್ ಸ್ಪೋಟ ’ಧರ್ಮಸ್ಥಳ’ ಕ್ಷೇತ್ರವನ್ನು ಟಾರ್ಗೆಟ್ ಮಾಡಿರುವ ಆಘಾತಕಾರಿ ಸಂಗತಿ

ಮಂಗಳೂರು ಹೊರ ವಲಯದಲ್ಲಿ ಸಂಭವಿಸಿದ ಕುಕ್ಕರ್ ಬಾಂಬ್ ಬ್ಲಾಸ್ಟ್ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ ವಿಚಾರಣಾ ಮಾಹಿತಿ ಆರೋಪಿಯು, ಧರ್ಮಸ್ಥಳದಲ್ಲಿ ಸ್ಪೋಟ ನಡೆಸಲು ಸಂಚು ರೂಪಿಸಿದ್ದ ಎನ್ನುವುದನ್ನು ಬೆಳಕಿಗೆ ತಂದಿದೆ.ನವೆಂಬರ್ 2022ರಲ್ಲಿ ನಡೆದ ಮಂಗಳೂರು ಕುಕ್ಕರ್ ಬಾಂಬ್ ಸ್ಪೋಟಕ್ಕೆ ಸಂಬಂಧಿಸಿದಂತೆ ಇಡಿ ವಿಚಾರಣೆ ನಡೆಸುತ್ತಿದೆ. ಮಂಗಳೂರಿನಲ್ಲಿ ಹಿಂದೆ ಆಟೋರಿಕ್ಷಾದಲ್ಲಿ ಕಡಿಮೆ ತೀವ್ರತೆಯ ಸ್ಪೋಟ ಸಂಭವಿಸಿತ್ತು. ಜಾರಿ ನಿರ್ದೇಶನಾಲಯವು, ಪ್ರಮುಖ ಆರೋಪಿ ಸಯ್ಯದ್ ಯಾಸಿನ್ ಬ್ಯಾಂಕ್ ಖಾತೆಯಲ್ಲಿದ್ದ 29 ಸಾವಿರ ರೂಪಾಯಿ ಹಣವನ್ನು, ಅಕ್ರಮ ಹಣ ವರ್ಗಾವಣೆ ಕಾಯ್ದೆಯಡಿಯಲ್ಲಿ ಮುಟ್ಟುಗೋಲು…

Read More

ನಿಟ್ಟೆ ಗ್ರಾಮದಲ್ಲಿ ಶ್ರೀ ಗಂಧದ ಮರ ಕಳವು ಪ್ರಕರಣ – ಸೊತ್ತು ಸಹಿತ ಮೂವರ ಅಂಧರ್

ಕಾರ್ಕಳ : ಜೂನ್ 16ರಂದು ರಾತ್ರಿ ಸಮಯ ಕಾರ್ಕಳ ಗ್ರಾಮಾಂತರ ಠಾಣಾ ವ್ಯಾಪ್ತಿಯ ನಿಟ್ಟೆ ಗ್ರಾಮದ ದಿನೇಶ್ ಶೆಟ್ಟಿಗಾರ್ ತೋಟದಲ್ಲಿದ್ದ ಶ್ರೀಗಂಧದ ಮರವನ್ನು ಕಳವು ಮಾಡಿರುವ ಕೇಸ್ ಗೆ ಸಂಬಂಧಿಸಿದಂತೆ ಕಾರ್ಕಳ ಗ್ರಾಮಾಂತರ ಪೊಲೀಸರು ಮೂವರನ್ನು ಬಂಧಿಸಿದ್ದಾರೆ. ಹೇನೊಟ್ಟುವಿನ ದಿನೇಶ್ ಶೆಟ್ಟಿಗಾರ್ ಎಂಬುವವರಿಗೆ ಸೇರಿದ್ದ 4 ಲಕ್ಷ ರೂ. ಮೌಲ್ಯದ ಶ್ರೀಗಂಧದ ಮರಗಳನ್ನು ಕಳವು ಗೈದಿರುವ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಜೂ.17ರಂದು ಪ್ರಕರಣ ದಾಖಲಾಗಿತ್ತು. ತನಿಖೆಯನ್ನು ಕೈಗೆತ್ತಿಕೊಂಡ ಪೊಲೀಸ್ ಉಪನಿರೀಕ್ಷಕರಾದ ಪ್ರಸನ್ನ ಎಂ.ಎಸ್. ಮತ್ತು…

Read More

ಸರ್ಕಾರದ ಬೊಕ್ಕಸದಿಂದ ಪಿಂಚಣಿ ಕೊಡಿ. ಜನರ ಜೇಬಿನಿಂದ ಅಲ್ಲ :- ಶಾಸಕ ಕಾಮತ್

ವಿದ್ಯುತ್ ಸರಬರಾಜು ನಿಗಮಗಳ ನೌಕರರಿಗೆ ಪಿಂಚಣಿ ಹಾಗೂ ಗ್ರಾಚ್ಯುಟಿ ನೀಡಲು, ಗ್ರಾಹಕರಿಂದಲೇ ಹಣ ವಸೂಲಿ ಮಾಡುವ ಮೂಲಕ ಹಗಲು ದರೋಡೆಗಿಳಿದಿರುವ ರಾಜ್ಯ ಕಾಂಗ್ರೆಸ್ ಸರ್ಕಾರ ತನ್ನ ತಪ್ಪನ್ನು ತಿದ್ದಿಕೊಳ್ಳುವ ಬದಲು, ಮುಚ್ಚಿಕೊಳ್ಳಲು ಪ್ರಯತ್ನಿಸಿ, “ಆ ನಿರ್ಧಾರ ನಮ್ಮದಲ್ಲ, ಹಿಂದಿನ ಸರ್ಕಾರದ್ದು” ಎಂದು ಬಾಲಿಶ ಹೇಳಿಕೆ ನೀಡಿ ಜನತೆಯ ಮುಂದೆ ಇನ್ನಷ್ಟು ಬೆತ್ತಲಾಗುತ್ತಿದ್ದಾರೆ ಎಂದು ಶಾಸಕ ವೇದವ್ಯಾಸ್ ಕಾಮತ್ ರವರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಬಿಜೆಪಿ ಅವಧಿಯ ಕರೆಂಟ್ ಬಿಲ್ಲುಗಳಲ್ಲಿ ಪಿಂಚಣಿ ಹಾಗೂ ಗ್ರ್ಯಾಚುಟಿ ಹೆಸರಿನಲ್ಲಿ ಒಂದೇ ಒಂದು…

Read More

‘ಕೃಷಿಯೇ ನಮ್ಮ ಜೀವನವಾಗಿದೆ’ -ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ:ದ.ಕ.ಜಿಲ್ಲೆಯ ಪ್ರತಿ ಮನೆಯಲ್ಲೂ ಒಂದಲ್ಲ ಒಂದು ಕೃಷಿಯನ್ನು ಮಾಡುತ್ತಿದ್ದು, ನಾವೆಲ್ಲರೂ ಕೃಷಿಕರಾಗಿದ್ದೇವೆ ,ಕೃಷಿಯೇ ನಮ್ಮ ಜೀವನವಾಗಿದೆ ಎಂದು ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಹೇಳಿದರು.ಅವರು ಕೃಷಿ ಇಲಾಖೆ ಬಂಟ್ವಾಳ ಇದರ , 2025 -26 ನೇ ಸಾಲಿನ ರಾಷ್ಟ್ರೀಯ ಕೃಷಿ ವಿಸ್ತರಣೆ ಉಪ ಅಭಿಯಾನ,ATMA ( ಆತ್ಮ) ಯೋಜನೆಯಡಿ ” ಕಿಸಾನ್ ಗೋಷ್ಠಿ “ವಿವೇಚನಾತ್ಮಕ ಕೀಟನಾಶಕಗಳ ಬಳಕೆ ಹಾಗೂ ಬೆಳೆಗಳಲ್ಲಿ ಶೇಷಾಂಶ ತಗ್ಗಿಸಲು ಅಗತ್ಯ ಕ್ರಮಗಳ ಕುರಿತು ತರಬೇತಿ ಕಾರ್ಯಕ್ರಮ ಖಾಸಗಿ ನಿವಾಸಿಗಳಿಗೆ ಬೆಳೆ ಸಮೀಕ್ಷೆ…

Read More

ಖಾಸಗಿ ಸುದ್ದಿ ವಾಹಿನಿಯ ವರದಿಗಾರನ ಮೇಲೆ ಹಲ್ಲೆ ಆರೋಪ : ತಿಮರೋಡಿ, ಮಟ್ಟಣ್ಣನವ‌ರ್ ಸಹಿತ ಹಲವರ ವಿರುದ್ಧ ಪ್ರಕರಣ ದಾಖಲು

ಉಜಿರೆ: ಖಾಸಗಿ ಸುದ್ದಿ ವಾಹಿನಿಯ ವರದಿಗಾರನ ಮೇಲೆ ನಡೆದ ಹಲ್ಲೆ ಆರೋಪಕ್ಕೆ ಸಂಬಂಧಿಸಿದಂತೆ ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣನವರ್ ಸಹಿತ ಹಲವರ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಸುವರ್ಣ ಸುದ್ದಿ ವಾಹಿನಿಯ ವರದಿಗಾರ ಹರೀಶ್ ಅವರು ನೀಡಿರುವ ದೂರಿನಂತೆ ಪ್ರಕರಣ ದಾಖಲಿಸಲಾಗಿದೆ. ಉಜಿರೆಯ ಖಾಸಗಿ ಆಸ್ಪತ್ರೆಗೆ ವರದಿ ಮಾಡಲೆಂದು ತೆರಳಿದ ವೇಳೆ ಚಾನೆಲ್ ನ ಲೋಗೊ ನೋಡಿ ತಡೆದ ತಂಡ ತನ್ನ ಮೇಲೆ ಹಲ್ಲೆ ನಡೆಸಿ ಜೀವಬೆದರಿಕೆ ಹಾಕಿರುವುದಾಗಿ ದೂರಿನಲ್ಲಿ ಆರೋಪಿಸಲಾಗಿದೆ. ಅದರಂತೆ ಬೆಳ್ತಂಗಡಿ…

Read More

ಆಕ್ರಮವಾಗಿ ಕೆಂಪುಕಲ್ಲು ಸಾಗಾಟದ ಲಾರಿ ಮತ್ತು ಅಪಾರ ಮೌಲ್ಯದ ಸೊತ್ತುಗಳನ್ನು ವಶಪಡಿಸಿದ ವಿಟ್ಲಾ ಪೊಲೀಸರು.

ಬಂಟ್ವಾಳ: ಅಕ್ರಮವಾಗಿ ಕೇರಳ ರಾಜ್ಯದಿಂದ ದ.ಕ.ಜಿಲ್ಲೆಗೆ ಕೆಂಪು ಕಲ್ಲು ಸಾಗಿಸುವ ವೇಳೆ ವಿಟ್ಲ ಪೋಲೀಸರ ಕೈಗೆ ಸಿಕ್ಕಿಹಾಕಿಕೊಂಡಿರುವ ಘಟನೆ ನಡೆದಿದ್ದು, ಕೆಂಪು ಕಲ್ಲು ಸಹಿತ ಲಾರಿ ಸೇರಿದಂತೆ ಲಕ್ಷಾಂತರ ರೂ ಮೌಲ್ಯದ ಸೊತ್ತುಗಳನ್ನು ವಶಕ್ಕೆ ಪಡೆದುಕೊಂಡು ಪ್ರಕರಣ ದಾಖಲಿಸಿದ್ದಾರೆ. ವಿಟ್ಲ ನಿವಾಸಿ ಮಹಮ್ಮದ್ ಮುಸ್ತಾಫ ಹಾಗೂ ಉಕ್ಕುಡ ನಿವಾಸಿ ಸಲಾಂ ಮತ್ತು ಧರ್ಮತ್ತಡ್ಕ ನಿವಾಸಿ ಅಶ್ರಫ್ ಎಂಬವರ ಮೇಲೆ ವಿಟ್ಲ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ‌ರೂ.7,500 ಸಾವಿರ ಮೌಲ್ಯದ 270 ಕೆಂಪು ಕಲ್ಲು ಸಹಿತ ಸಾಗಾಟಕ್ಕೆ…

Read More

ಕನ್ನಡ ಭವನ ಪ್ರಕಾಶನ ಮತ್ತು ಕನ್ನಡ ಭವನ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಆಶ್ರಯದಲ್ಲಿ ಏಕ ದಿನ ಸಾಹಿತ್ಯ ಅಭಿಯಾನ ‘ಕನ್ನಡದ ನಡಿಗೆ ಶಾಲೆಯ ಕಡೆಗೆ’

ಕನ್ನಡ ಭವನ ಮತ್ತು ಗ್ರಂಥಾಲಯ (ರಿ) ಕನ್ನಡ ಭವನ ಪ್ರಕಾಶನ ಕನ್ನಡ ಭವನ ದಕ್ಷಿಣ ಕನ್ನಡ ಜಿಲ್ಲಾ ಘಟಕ ಇದರ ನೇತೃತ್ವದಲ್ಲಿ ವಿದ್ಯಾರ್ಥಿಗಳಿಗಾಗಿ ಏಕದಿನ ಸಾಹಿತ್ಯ ಅಭಿಯಾನ ಕನ್ನಡದ ನಡಿಗೆ ಶಾಲೆಯ ಕಡೆಗೆ ಕಾರ್ಯಕ್ರಮ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ಬೋಳಾರ ಇಲ್ಲಿ ನಡೆಯಿತು. ಶಾಲಾ ವಿದ್ಯಾರ್ಥಿಗಳ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮವು ಆರಂಭಗೊಂಡಿತು. ಬಳಿಕ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾದ ಶ್ರೀಮತಿ ರೇಖಾ ಸುದೇಶ್ ರಾವ್ ಇವರು ಕನ್ನಡ ಶಾಲನ್ನು ಹಾಕಿ, ಅತಿಥಿ ಅಭ್ಯಾಗತರನ್ನು ಸ್ವಾಗತಿಸಿದರು….

Read More
error: Content is protected !!