ಪುತ್ತೂರು ಬಿಜೆಪಿಯ ಪ್ರತಿಭಟನೆ ಮೂರ್ಖತನದ್ದು-ಕಾಂಗ್ರೆಸ್
ವಿಟ್ಲ: ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಯವರ ಜನಪ್ರಿಯತೆಯನ್ನು ಸಹಿಸದೇ ದಲಿತ ಸಂಘಟನೆಯ ಹೆಸರಿನಲ್ಲಿ ಹಲವರಿಗೆ ವಂಚಿಸಿ ತಲೆಮರೆಸಿಕೊಂಡಿದ್ದ ವ್ಯಕ್ತಿಯನ್ನು ಮುಂದಿಟ್ಟುಕೊಂಡು ಬಿಜೆಪಿ ಮಾಡಿದ ಪ್ರತಿಭಟನೆ ಮೂರ್ಖತನದ್ದಾಗಿದೆ ಎಂದು ವಿಟ್ಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಧ್ಮನಾಭ ಪೂಜಾರಿ ಸಣ್ಣಗುತ್ತು ಹೇಳಿದರು.ಶುಕ್ರವಾರ ವಿಟ್ಲ ಪ್ರೆಸ್ ಕ್ಲಬ್ ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಶಾಸಕರನ್ನು ನಿಂದಿಸುವ ಭರದಲ್ಲಿ ಅವಾಚ್ಯ ಪದಗಳನ್ನೂ ಬಳಕೆ ಮಾಡಿರುವುದು ತಪ್ಪು ಎಂದರು. ಪುಣಚ ಗ್ರಾಮಕ್ಕೆ ಕಳೆದ ಮೂರು ವರ್ಷಗಳಲ್ಲಿ ನಾನಾ ಅಭಿವೃದ್ಧಿ ಕಾಮಗಾರಿಗಳಿಗಾಗಿ…