ಶಾಸಕರ ಭವನದ ಸರ್ಕಾರಿ ವಾಹನ ದುರ್ಬಳಕೆಗೆ ಬ್ರೇಕ್; ಹೊಸ ಕಠಿಣ ನಿಯಮ ಜಾರಿ

ಬೆಂಗಳೂರು, ಜು.8: ಬೆಂಗಳೂರಿನ ಶಾಸಕರ ಭವನದಲ್ಲಿ ಜನಪ್ರತಿನಿಧಿಗಳಿಗಾಗಿ ಮೀಸಲಿಟ್ಟಿರುವ ಸರ್ಕಾರಿ ವಾಹನಗಳು ದುರ್ಬಳಕೆಯಾಗುತ್ತಿರುವುದನ್ನು ತಡೆಯಲು ಕರ್ನಾಟಕ ವಿಧಾನಸಭೆ ಸಚಿವಾಲಯವು ಕಠಿಣ ಕ್ರಮ ಕೈಗೊಂಡಿದೆ. ಇನ್ಮುಂದೆ ಶಾಸಕರು ತಮ್ಮ ಆಪ್ತ ಸಹಾಯಕರು (PAs), ಅತಿಥಿಗಳು ಅಥವಾ ಪರಿಚಯಸ್ಥರಿಗೆ ಈ ವಾಹನಗಳನ್ನು ಶಿಫಾರಸು ಮಾಡುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ. ವಿಧಾನಸಭೆ ಸಚಿವಾಲಯದ ಕಾರ್ಯದರ್ಶಿ ಎಂ.ಕೆ. ವಿಶಾಲಾಕ್ಷಿ ಅವರು ಈ ಸಂಬಂಧ ಹೊಸ ಮಾರ್ಗಸೂಚಿಗಳನ್ನು ಹೊರಡಿಸಿದ್ದಾರೆ. ಶಾಸಕರ ಭವನದ ವಾಹನಗಳನ್ನು ಕೇವಲ ‘ಗ್ರೇಟರ್ ಬೆಂಗಳೂರು ಅಥಾರಿಟಿ’ (GBA) ಅಂದರೆ ಬೆಂಗಳೂರು ನಗರದ ಗಡಿಯೊಳಗೆ ಮಾತ್ರ…

Read More

ಬೀದಿಬದಿ ವ್ಯಾಪಾರಿಗಳಿಗೆ ಪರ್ಯಾಯ ವ್ಯವಸ್ಥೆಯ ಮುಖ್ಯಮಂತ್ರಿಗಳ ಭರವಸೆ ಸ್ವಾಗತಾರ್ಹ; ಸರ್ಕಾರ ತಕ್ಷಣ ಆದೇಶ ಹೊರಡಿಸಲಿ – ಎಸ್.ಡಿ.ಟಿ.ಯು ಎಚ್ಚರಿಕೆ

ಬೆಂಗಳೂರು: ಬೀದಿಬದಿ ವ್ಯಾಪಾರಿಗಳಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ರಾಜ್ಯದ ಮುಖ್ಯಮಂತ್ರಿ ನೀಡಿರುವ ಭರವಸೆಯನ್ನು ಎಸ್.ಡಿ.ಟಿ.ಯು ಕರ್ನಾಟಕ ಸ್ವಾಗತಿಸುತ್ತದೆ. ಆದರೆ, ಈ ಭರವಸೆ ಕೇವಲ ಮಾಧ್ಯಮಗಳಲ್ಲಿನ ಹೇಳಿಕೆಯಾಗಿಯೇ ಉಳಿಯಬಾರದು. ತಕ್ಷಣವೇ ಅಧಿಕೃತ ಆದೇಶ ಹೊರಡಿಸಿ ರಾಜ್ಯದ ಎಲ್ಲಾ ಸ್ಥಳೀಯ ಸಂಸ್ಥೆಗಳು ಹಾಗೂ ಅಧಿಕಾರಿಗಳಿಗೆ ಸ್ಪಷ್ಟ ನಿರ್ದೇಶನ ನೀಡಬೇಕು ಎಂದು ಎಸ್.ಡಿ.ಟಿ.ಯು ಕರ್ನಾಟಕ ರಾಜ್ಯಾಧ್ಯಕ್ಷರಾದ ಅಥಾವುಲ್ಲಾ ಜೋಕಟ್ಟೆ ಆಗ್ರಹಿಸಿದ್ದಾರೆ. ಕಳೆದ ಕೆಲವು ದಿನಗಳಿಂದ ಸಚಿವರ ಹೇಳಿಕೆಯನ್ನು ನೆಪ ಮಾಡಿಕೊಂಡು ರಾಜ್ಯದ ವಿವಿಧ ನಗರಗಳಲ್ಲಿ ಬೀದಿಬದಿ ವ್ಯಾಪಾರಿಗಳಿಗೆ ಬೆದರಿಕೆ ಹಾಕುವುದು,…

Read More

ಭಾರೀ ಗಾಳಿ-ಮಳೆ ಅಬ್ಬರ: ಬಂಟ್ವಾಳದಲ್ಲಿ ಐದು ಮನೆಗಳಿಗೆ ಹಾನಿ

ಮರ ಬಿದ್ದು, ಬರೆ ಜರಿದು ಹಾನಿ; ಅಧಿಕಾರಿಗಳಿಂದ ಸ್ಥಳ ಪರಿಶೀಲನೆ ಬಂಟ್ವಾಳ, ಜು. 8: ತಾಲೂಕಿನಲ್ಲಿ ನಿರಂತರವಾಗಿ ಸುರಿಯುತ್ತಿರುವ ಭಾರೀ ಗಾಳಿ-ಮಳೆಯ ಪರಿಣಾಮ ವಿವಿಧ ಗ್ರಾಮಗಳಲ್ಲಿ ಐದು ಮನೆಗಳಿಗೆ ಭಾಗಶಃ ಹಾನಿಯಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಅಮ್ಮುಂಜೆ ಗ್ರಾಮದ ನೆಫಿಸಾ ಕೋಂ ಹಾಮದ್ ಅವರ ಮನೆಗೆ ಭಾಗಶಃ ಹಾನಿಯಾಗಿದ್ದು, ಮುಡೈಕೋಡಿಕುಳ ಗ್ರಾಮದ ಮೋಂಟೆಮಾರು ನಿವಾಸಿ ಗಿರಿಜ ಕೋಂ ಬಾಬು ಗೌಡ ಅವರ ವಾಸ್ತವ್ಯದ ಮನೆಗೆ ಹೊಂದಿಕೊಂಡಿದ್ದ ಶೀಟ್ ಅಳವಡಿಸಿದ ಉಪಕಟ್ಟಡ ಗಾಳಿ-ಮಳೆಯಿಂದ ಹಾನಿಗೊಳಗಾಗಿದೆ. ಕನ್ಯಾನ ಗ್ರಾಮದ…

Read More

ವೀರಕಂಭ ಗ್ರಾಮ ಪಂಚಾಯತ್ ನ 2026-27 ನೇ ಸಾಲಿನ ಪ್ರಥಮ ಹಂತದ ಗ್ರಾಮ ಸಭೆ

ಕಲ್ಲಡ್ಕ : ಬಂಟ್ವಾಳ ತಾಲೂಕು ವೀರಕಂಭ ಗ್ರಾಮ ಪಂಚಾಯತ್ ನ 2026-27 ನೇ ಸಾಲಿನ ಪ್ರಥಮ ಹಂತದ ಗ್ರಾಮ ಸಭೆಯು ದ. ಕ. ಜಿ. ಪಂ.ಹಿರಿಯ ಪ್ರಾಥಮಿಕ ಶಾಲೆ, ಮಜಿ, ವೀರಕಂಭ ಇಲ್ಲಿ ಜೂಲೈ 7 ಮಂಗಳವಾರ ನಡೆಯಿತು.ಬಂಟ್ವಾಳ ತಾಲೂಕು ತೋಟಗಾರಿಕೆ ಇಲಾಖೆಯ ಸಹಾಯಕ ತೋಟಗಾರಿಕ ನಿರ್ದೇಶಕರು ಹಾಗೂ ವೀರಕಂಭ ಗ್ರಾಮ ಪಂಚಾಯತ್ ನ ಆಡಳಿತಾಧಿಕಾರಿ ದಿನೇಶ್ ಇವರು ಸಭೆಯ ಅಧ್ಯಕ್ಷತೆ ವಹಿಸಿದ್ದರು. ವೀರಕಂಭ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಂಗಳಪದವು ಎಂಬಲ್ಲಿ ಲೋಕೋಪಯೋಗಿ ಇಲಾಖೆಯ ರಸ್ತೆಯ ಬದಿಯಲ್ಲಿರುವ…

Read More

3 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕಳ್ಳತನ ಪ್ರಕರಣದ ಆರೋಪಿ ಬಂಧನ

ಬಂಟ್ವಾಳ: ವಿಟ್ಲ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಕಳ್ಳತನ ಪ್ರಕರಣದಲ್ಲಿ ಕಳೆದ ಮೂರು ವರ್ಷಗಳಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ. ವಿಟ್ಲ ಪೊಲೀಸ್ ಠಾಣೆಯ ಅಪರಾಧ ಸಂಖ್ಯೆ 204/2018ರ, ಭಾರತೀಯ ದಂಡ ಸಂಹಿತೆ ಕಲಂ 379ರಡಿ ದಾಖಲಾಗಿದ್ದ ಪ್ರಕರಣದ ಆರೋಪಿ ಬೆಳ್ತಂಗಡಿ ನಿವಾಸಿ ರಾಜೇಶ್ (41) ಎಂಬಾತ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ಸುಮಾರು ಮೂರು ವರ್ಷಗಳಿಂದ ತಲೆಮರೆಸಿಕೊಂಡಿದ್ದ.ವಿಟ್ಲ ಪೊಲೀಸ್ ಠಾಣೆಯ ಎಎಸ್‌ಐ ಜಯರಾಮ್ ನೇತೃತ್ವದಲ್ಲಿ ಸಿಬ್ಬಂದಿಗಳಾದ ಸಿಪಿಸಿ ವೆಂಕಪ್ಪ ಹಾಗೂ ಸಿಪಿಸಿ ಶಿವಾನಂದ…

Read More

ವಿಟ್ಲ: ಸರಣಿ ಬ್ಯಾಟರಿ ಕಳ್ಳತನ ಪ್ರಕರಣ : ಕಾಸರಗೋಡು ಮೂಲದ ಇಬ್ಬರು ಆರೋಪಿಗಳ ಬಂಧನ

ವಿಟ್ಲ: ರಸ್ತೆ ಬದಿ‌ ರಾತ್ರಿ‌ ವೇಳೆ ನಿಲ್ಲಿಸಿದ್ದ ವಾಹನಗಳ ಬ್ಯಾಟರಿ ಕಳ್ಳತನ‌ ಮಾಡುತ್ತಿದ್ದ ಇಬ್ಬರನ್ನು ಬಂಧಿಸಿರುವ ವಿಟ್ಲ ಠಾಣಾ ಪೊಲೀಸರು ಅವರ ಬಳಿ‌ ಇದ್ದ ೧೦ ಬ್ಯಾಟರಿಗಳನ್ನು ವಶಪಡಿಸಿಕೊಂಡಿದ್ದಾರೆ. ಕಾಸರಗೋಡು ಜಿಲ್ಲೆಯ ಚೆರ್ಕಳ ನಿವಾಸಿ ಅಬ್ದುಲ್ ಶಮೀರ್ ಪಿ.ಎ. (50 ವ.) ಹಾಗೂ ಕಾಸರಗೋಡು ಜಿಲ್ಲೆಯ ಮುಟ್ಟತೋಡಿ ನಿವಾಸಿ ಅಬ್ದುಲ್ ಮಜಿದ್ (33 ವ.) ಬಂಧಿತ ಆರೋಪಿಗಳು.‌ ಬಂಧಿತರ ಮೇಲೆ ವಿಟ್ಲ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ರಾತ್ರಿ ಸಮಯ ನಿಲ್ಲಿಸಿದ್ದ ಲಾರಿಗಳ ಬ್ಯಾಟರಿಗಳನ್ನು ಕಳ್ಳತನ ಮಾಡಿದ…

Read More

ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ತಂಡದ ಸ್ವಯಂಸೇವಕರಿಗೆ ತರಬೇತಿ

ಪುತ್ತೂರು, ಜು. 7: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ಬಿಸಿ ಟ್ರಸ್ಟ್) ವತಿಯಿಂದ ಶೌರ್ಯ ವಿಪತ್ತು ನಿರ್ವಹಣಾ ತಂಡದ ಸ್ವಯಂಸೇವಕರ ತರಬೇತಿ ಕಾರ್ಯಾಗಾರವು ಬೊಳ್ವಾರದ ವಿಶ್ವಕರ್ಮ ಸಮುದಾಯ ಭವನದಲ್ಲಿ ಸೋಮವಾರ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ಗ್ರಾಮಾಭಿವೃದ್ಧಿ ಯೋಜನೆಯ ದಕ್ಷಿಣ ಕನ್ನಡ ಜಿಲ್ಲಾ ನಿರ್ದೇಶಕ ಬಾಬು ನಾಯ್ಕ್, ರಾಜ್ಯಾದ್ಯಂತ 10 ಸಾವಿರಕ್ಕೂ ಅಧಿಕ ಸ್ವಯಂಸೇವಕರನ್ನು ಹೊಂದಿರುವ ಶೌರ್ಯ ತಂಡವು ವಿಪತ್ತು ಸಂದರ್ಭಗಳಲ್ಲಿ ಅಮೂಲ್ಯ ಸೇವೆ ಸಲ್ಲಿಸುತ್ತಿದೆ ಎಂದು ಹೇಳಿದರು. ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡದ ಕಮಾಂಡರ್ ಶಾಂತಿಲಾಲ್…

Read More

ಗೌರಿಮಠ ರಸ್ತೆ ಅಭಿವೃದ್ಧಿ, ಚರಂಡಿ ಕಾಮಗಾರಿಗೆ ಶಾಸಕ ವೇದವ್ಯಾಸ ಕಾಮತ್ ಚಾಲನೆ

ಮಂಗಳೂರು, ಜು. 7: ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 41ನೇ ಸೆಂಟ್ರಲ್ ವಾರ್ಡ್‌ನ ಮಹಾಮ್ಮಾಯ ದೇವಸ್ಥಾನದ ಹಿಂಭಾಗದ ಚರಂಡಿಯ ಉಳಿದ ಕಾಮಗಾರಿ ಹಾಗೂ ಗೌರಿಮಠ ರಸ್ತೆಯ ಸಮಗ್ರ ಅಭಿವೃದ್ಧಿ ಕಾಮಗಾರಿಗೆ ಶಾಸಕ ವೇದವ್ಯಾಸ ಕಾಮತ್ ಗುದ್ದಲಿ ಪೂಜೆ ನೆರವೇರಿಸಿ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಸ್ಥಳೀಯರ ಬಹುಕಾಲದ ಬೇಡಿಕೆಯಂತೆ ₹60 ಲಕ್ಷ ವಿಶೇಷ ಅನುದಾನದಲ್ಲಿ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಾಗಿದ್ದು, ಶೀಘ್ರದಲ್ಲೇ ಪೂರ್ಣಗೊಳಿಸಿ ಸಾರ್ವಜನಿಕರ ಬಳಕೆಗೆ ಮುಕ್ತಗೊಳಿಸಲಾಗುವುದು ಎಂದು ಹೇಳಿದರು. ಕಾರ್ಯಕ್ರಮದಲ್ಲಿ ನಿಕಟಪೂರ್ವ ಪಾಲಿಕೆ ಸದಸ್ಯೆ ಪೂರ್ಣಿಮಾ,…

Read More

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಅಕ್ರಮ ನಡೆದರೆ ಸಹಿಸುವುದಿಲ್ಲ: ಬಿಜೆಪಿ ಎಚ್ಚರಿಕೆ

ಉಳ್ಳಾಲ, ಜು. 7: ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಲ್ಲಿ ಬಿಎಲ್‌ಒಗಳು ಯಾವುದೇ ರಾಜಕೀಯ ಒತ್ತಡಕ್ಕೆ ಮಣಿದು ನಿಯಮಬಾಹಿರವಾಗಿ ನಡೆದುಕೊಳ್ಳಬಾರದು. ಅಕ್ರಮಗಳು ಕಂಡುಬಂದರೆ ಬಿಜೆಪಿ ಸಹಿಸುವುದಿಲ್ಲ ಎಂದು ಬಿಜೆಪಿ ಮಂಗಳೂರು ಮಂಡಲ ಅಧ್ಯಕ್ಷ ಜಗದೀಶ್ ಆಳ್ವ ಕುವ್ವೆತ್ತಬೈಲ್ ಎಚ್ಚರಿಸಿದರು. ತೊಕ್ಕೊಟ್ಟಿನ ಪತ್ರಿಕಾಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೆಲವು ಕಡೆ ಮನೆಮನೆಗೆ ತೆರಳಿ ಫಾರಂ ಭರ್ತಿ ಮಾಡುವ ಬದಲು ಪ್ರಾರ್ಥನಾ ಮಂದಿರಗಳಲ್ಲಿ ಸಾಮೂಹಿಕವಾಗಿ ಎಸ್‌ಐಆರ್ ಫಾರಂ ಭರ್ತಿ ಮಾಡಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಕುರಿತು…

Read More

ಎಣ್ಣೂರು ಹೈಸ್ಕೂಲ್ ವಿದ್ಯಾರ್ಥಿ ಶಿಶಿಲ್ ಹೃದಯಾಘಾತದಿಂದ ನಿಧನ

ಕಡಬ, ಜು. 6: ಕಡಬ ತಾಲೂಕು ಎಡಮಂಗಲ ಗ್ರಾಮದ ಕರಿಂಬಿಲ ಪೂರ್ಣಚಂದ್ರ ಹಾಗೂ ಕವಿತಾ ದಂಪತಿಯ ಪುತ್ರ, ಎಣ್ಣೂರು ಪ್ರೌಢಶಾಲೆಯ 9ನೇ ತರಗತಿ ವಿದ್ಯಾರ್ಥಿ ಶಿಶಿಲ್ (14) ಹೃದಯಾಘಾತದಿಂದ ಭಾನುವಾರ ರಾತ್ರಿ ನಿಧನರಾದರು.ಕಳೆದ ಕೆಲವು ದಿನಗಳಿಂದ ಅಸ್ವಸ್ಥರಾಗಿದ್ದ ಶಿಶಿಲ್ ಅವರಿಗೆ ಕಾಣಿಯೂರು, ಪುತ್ತೂರು ಹಾಗೂ ಮಂಗಳೂರಿನ ಕೆಎಂಸಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗಿತ್ತು. ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸಲು ಸೋಮವಾರ ಕರೆದೊಯ್ಯಲು ಕುಟುಂಬಸ್ಥರು ನಿರ್ಧರಿಸಿದ್ದರು. ಆದರೆ ಭಾನುವಾರ ರಾತ್ರಿ ಆರೋಗ್ಯ ಏಕಾಏಕಿ ಹದಗೆಟ್ಟ ಹಿನ್ನೆಲೆಯಲ್ಲಿ ಪುತ್ತೂರಿಗೆ ಚಿಕಿತ್ಸೆಗೆ…

Read More
error: Content is protected !!