ವಿದ್ಯುತ್ ಸರಬರಾಜು ನಿಗಮಗಳ ನೌಕರರಿಗೆ ಪಿಂಚಣಿ ಹಾಗೂ ಗ್ರಾಚ್ಯುಟಿ ನೀಡಲು, ಗ್ರಾಹಕರಿಂದಲೇ ಹಣ ವಸೂಲಿ. ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲ ವತಿಯಿಂದ ಬೃಹತ್ ಪ್ರತಿಭಟನೆ

ವಿದ್ಯುತ್ ಸರಬರಾಜು ನಿಗಮಗಳ ನೌಕರರಿಗೆ ಪಿಂಚಣಿ ಹಾಗೂ ಗ್ರಾಚ್ಯುಟಿ ನೀಡಲು, ಗ್ರಾಹಕರಿಂದಲೇ ಹಣ ವಸೂಲಿ ಮಾಡುವ ಮೂಲಕ ಹಗಲು ದರೋಡೆಗಿಳಿದಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲ ವತಿಯಿಂದ ಮರೋಳಿ-ಜೋಡುಕಟ್ಟೆ ಬಳಿ ಇರುವ ಮೆಸ್ಕಾಂ ಕಚೇರಿ (ಕುಲಶೇಖರ ಉಪವಿಭಾಗ) ಮುಂಭಾಗದಲ್ಲಿ ಬೃಹತ್ ಪ್ರತಿಭಟನೆ ನಡೆಯಿತು. ಈ ವೇಳೆ ಮಾತನಾಡಿದ ಶಾಸಕ ವೇದವ್ಯಾಸ ಕಾಮತ್ ರವರು, ನೌಕರರ ಪಿಂಚಣಿ ಹಾಗೂ ಗ್ರಾಚುಟಿಗೆ ನಮ್ಮ ವಿರೋಧವಿಲ್ಲ, ಖಂಡಿತವಾಗಿಯೂ ಅವರಿಗೆ ನೀಡಲೇಬೇಕು. ಅದು ರಾಜ್ಯ ಸರ್ಕಾರದ…

Read More

ವಾಹನಕ್ಕೆ ಸೈಡ್ ಕೊಡುವ ವಿಚಾರಕ್ಕೆ ಆಟೋ ಚಾಲಕ ಮತ್ತು ಕಾರು ಪ್ರಯಾಣಿಕರ ಮಧ್ಯೆ ಹೊಡೆದಾಟ

ಮಂಗಳೂರು: ವಾಹನಕ್ಕೆ ಸೈಡ್ ಕೊಡುವ ವಿಚಾರಕ್ಕೆ ಎರಡು ಗುಂಪುಗಳ ನಡುವೆ ಮಂಗಳೂರಿನ ರಸ್ತೆಯೊಂದರಲ್ಲಿ ನಡೆದ ಹೊಡೆದಾಟ ವ್ಯಾಪಕವಾಗಿ ವೈರಲ್ ಆಗುತ್ತಿದೆ. ಟ್ರಾಫಿಕ್ ಜಾಮ್ ವಿಚಾರವಾಗಿ ಎರಡು ಗುಂಪುಗಳ ನಡುವೆ ಹೊಡೆದಾಟ ನಡೆದ ಘಟನೆ ಮಂಗಳೂರಿನ ಪಂಪ್ವೆಲ್ ನಿಂದ ಕಂಕನಾಡಿ ಸಂಪರ್ಕಿಸುವ ರಸ್ತೆಯಲ್ಲಿ ನಡೆದಿದೆ. ವಾಹನಕ್ಕೆ ಸೈಡ್ ಕೊಡುವ ವಿಚಾರಕ್ಕೆ ಆಟೋ ಚಾಲಕ ಮತ್ತು ಕಾರು ಪ್ರಯಾಣಿಕರ ಮಧ್ಯೆ ಹೊಡೆದಾಟ ನಡೆದಿದೆ ಎಂದು ಹೇಳಲಾಗಿದೆ. ಈ ವೇಳೆ ಅದೇ ಮಾರ್ಗವಾಗಿ ಬಂದ ಅಂಬ್ಯುಲೆನ್ಸ್ ಗೂ ದಾರಿ ನೀಡದೆ ಗುಂಪು…

Read More

ಕಾಪು: ಮೀನುಗಾರಿಕೆಗೆ ತೆರಳಿದ್ದ ನಾಡದೋಣಿ ಪಲ್ಟಿ; ಏಳು‌ಮೀನುಗಾರರ ರಕ್ಷಣೆ

ಉಡುಪಿ: ಮೀನುಗಾರಿಕೆಗೆ ತೆರಳಿದ್ದ ನಾಡದೋಣಿಯೊಂದು ಸಮುದ್ರದ ಅಲೆಯ ಹೊಡೆತಕ್ಕೆ ಸಿಲುಕಿ ಪಲ್ಟಿಯಾದ ಘಟನೆ ಕಾಪು ತಾಲೂಕಿನ ಲೈಟ್ ಹೌಸ್ ನಲ್ಲಿ ಇಂದು ಬೆಳಿಗ್ಗೆ ಸಂಭವಿಸಿದೆ. ದೋಣಿಯಲ್ಲಿದ್ದ 7 ಜನ ಮೀನುಗಾರರನ್ನು ರಕ್ಷಣೆ ಮಾಡಲಾಗಿದೆ. ಮಲ್ಪೆಯಿಂದ ಮೀನುಗಾರಿಕೆಗೆ ತೆರಳಿದ್ದ ಟ್ರಾಲ್ ದೋಣಿ ಅಲೆಗಳ ಹೊಡೆತಕ್ಕೆ ಸಿಲುಕಿ ಮಗುಚಿ ಬಿದ್ದಿದೆ. ದೋಣಿಯಲ್ಲಿದ್ದ ಮೀನುಗಾರರನ್ನು ಸ್ಥಳೀಯ ಮೀನುಗಾರರಾದ ಪ್ರಶಾಂತ್ ಮತ್ತು ವಿನೋದ್ ರಕ್ಷಣೆ ಮಾಡಿದ್ದಾರೆ. ಆ ಮೂಲಕ ಜಿಲ್ಲೆಯಲ್ಲಿ ಮತ್ತೊಂದು ದುರಂತ ತಪ್ಪಿದಂತಾಗಿದೆ.

Read More

ಕುಂದಾಪುರ: ಸ್ಕೂಟರ್ ಗೆ ಬಸ್ ಡಿಕ್ಕಿ: ಸಹಸವಾರೆ ಪತ್ನಿ ಮೃತ್ಯು, ಪತಿ ಗಂಭೀರ

ಉಡುಪಿ: ಬಸ್ಸೊಂದು ಸ್ಕೂಟರ್‌ಗೆ ಢಿಕ್ಕಿ ಹೊಡೆದ ಪರಿಣಾಮ ಹಿಂಬದಿ ಸವಾರೆ ಸ್ಥಳದಲ್ಲೇ ಮೃತಪಟ್ಟ ಘಟನೆ ಕುಂದಾಪುರ ಸಂಗಮ್ ಜಂಕ್ಷನ್ ಸಮೀಪದ ನವಭಾರತ್ ಟಿಂಬರ್ ಎದುರಿನ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ. ಮೃತರನ್ನು ಹೊಸಮಠ ಚಾರುಕೊಟ್ಟಿಗೆ ನಿವಾಸಿ ಜಲಜಾ(64) ಎಂದು ಗುರುತಿಸಲಾಗಿದೆ. ಇವರ ಪತಿ ಸ್ಕೂಟರ್ ಸವಾರ ನಾರಾಯಣ ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇವರು ಆನಗಳ್ಳಿಯಿಂದ ಚಾರುಕೊಟ್ಟಿಗೆ ಕಡೆಗೆ ಸ್ಕೂಟರ್‌ನಲ್ಲಿ ಹೋಗುತ್ತಿದ್ದು, ಆಗ ಹಿಂದಿನಿಂದ ಬಂದ ಬಸ್, ಸ್ಕೂಟರ್‌ಗೆ ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಇದರ ಪರಿಣಾಮ ನಾರಾಯಣ…

Read More

ಮಣಿಪಾಲ: ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ: ಚಾಲಕ ಸ್ಥಳದಿಂದ ಪರಾರಿ

ಉಡುಪಿ: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಮಣಿಪಾಲ ಪೊಲೀಸ್ ಠಾಣೆಯ ಎದುರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸೋಮವಾರ ನಡೆದಿದೆ. ಬೆಂಗಳೂರು ನೋಂದಣಿಯ ಕಾರು ಮಣಿಪಾಲದಿಂದ ಉಡುಪಿ ಕಡೆಗೆ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಅಪಘಾತದ ವೇಳೆ ಕಾರಿನಲ್ಲಿ ಚಾಲಕ ಮಾತ್ರ ಇದ್ದು, ಘಟನೆ ಬಳಿಕ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ ಎನ್ನಲಾಗಿದೆ. ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ತಂತಿಗಳು ರಸ್ತೆಗೆ ಬಿದ್ದಿದ್ದು, ಮಣಿಪಾಲದಲ್ಲಿ ವಿದ್ಯುತ್ ಪೂರೈಕೆಯಲ್ಲಿ…

Read More

ದಕ್ಷಿಣ ಕನ್ನಡ ಎಸ್ಡಿಪಿಐ ಕಾರ್ಯಕರ್ತರ ಮನೆಗಳಿಗೆ NIA ದಾಳಿ ರಾಜಕೀಯ ಪ್ರೇರಿತವಾಗಿದ್ದು ಇದು ಖಂಡನೀಯ-ಎಸ್ಟಿಪಿಐ ದ.ಕ ಜಿಲ್ಲಾ ಅಧ್ಯಕ್ಷ ಜಲೀಲ್ ಕೃಷ್ಣಪುರ

ದಕ್ಷಿಣ ಕನ್ನಡ ಎಸ್ಡಿಪಿಐ ಕಾರ್ಯಕರ್ತರ ಮನೆಗಳಿಗೆ NIA ದಾಳಿ ರಾಜಕೀಯ ಪ್ರೇರಿತವಾಗಿದ್ದು ಇದು ಖಂಡನೀಯ ಎಂದು ಎಸ್ಟಿಪಿಐ ದ.ಕ ಜಿಲ್ಲಾ ಅಧ್ಯಕ್ಷ ಜಲೀಲ್ ಕೃಷ್ಣಪುರ ತಿಳಿಸಿದರು . ಪಕ್ಷದ ಜಿಲ್ಲಾ ಕಛೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಅವರು, ಎಸ್ಡಿಪಿಐ‌ ಕಾರ್ಯಕರ್ತರನ್ನು ಉದ್ದೇಶಪೂರ್ವಕವಾಗಿ ಸಿಲುಕಿಸುವ ಪ್ರಯತ್ನಗಳು ನಡೆಯುತ್ತಿದೆ . ನಮ್ಮ ಕಾರ್ಯಕರ್ತರನ್ನು ವಿಚಲಿತ ಮಾಡಲು ಪ್ರಯತ್ನಿಸಿದರೆ ಕಾನೂನು ಹೋರಾಟ ಮತ್ತು ಬೀದಿಗೆ ಇಳಿದು ಹೋರಾಟ ಮಾಡುತ್ತೇವೆ ಎಂದು ಎಚ್ಚರಿಕೆಯನ್ನು ನೀಡಿದರು. ಕೇಂದ್ರ ಸರಕಾರ ಕೆಲವು ಆಡಳಿತ ಸಂಸ್ಥೆಯನ್ನು ತನ್ನ…

Read More

ಬಂಟ್ವಾಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಆರ್ ಎ ಎಫ್ ಪಡೆಯಿಂದ ಪಥ ಸಂಚಲನ

ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಬಂಟ್ವಾಳ ನಗರ‌ ಪೊಲೀಸ್ ಠಾಣೆ ವ್ಯಾಪ್ತಿಯ ತುಂಬೆ ಜಂಕ್ಷನ್, ಪಾಣೆಮಂಗಳೂರು, ಶಾಂತಿಯಂಗಡಿ, ಬಿ. ಸಿ ರೋಡ್ & ಇತರೆ ಪ್ರಮುಖ ಪ್ರದೇಶಗಳಲ್ಲಿ ಹಾಗೂ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಪರಂಗಿಪೇಟೆ, ಕಂಪನಮಜಲು ಹಾಗೂ ಇತರೆ ಪ್ರಮುಖ ಸ್ಥಳಗಳಲ್ಲಿ ಆರ್. ಎ. ಎಫ್ ಪಡೆಯಿಂದ ಮತ್ತು ಸ್ಥಳೀಯ ಠಾಣಾ ಅಧಿಕಾರಿ/ಸಿಬ್ಬಂದಿಗಳಿಂದ ಪಥಸಂಚಲನ ನಡೆಸಲಾಯಿತು.

Read More

ಜೆಪ್ಪುವಿನ ಪಾಲೇಮಾರ್ ಗಾರ್ಡನ್ ನಲ್ಲಿ ಆಟಿದ ಐಸಿರ ಕಾರ್ಯಕ್ರಮ

ಬಿಜೆಪಿ ಮಂಗಳೂರು ನಗರ ದಕ್ಷಿಣ ವತಿಯಿಂದ ನಗರದ ಜೆಪ್ಪುವಿನ ಪಾಲೇಮಾರ್ ಗಾರ್ಡನ್ ನಲ್ಲಿ ಆಟಿದ ಐಸಿರ ಕಾರ್ಯಕ್ರಮವು ನಡೆಯಿತು. ಉಪಸ್ಥಿತರಿದ್ದ ಹಲವು ಗಣ್ಯರು ತುಳುನಾಡಿನ ಹಿಂದಿನ ಶೈಲಿಯಂತೆ ಕಡೆಯುವ ಕಲ್ಲಿನಲ್ಲಿ ಮಸಾಲೆ ಅರೆಯುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ನಂತರ ಮಾತನಾಡಿದ ಶಾಸಕ ವೇದವ್ಯಾಸ ಕಾಮತ್ ರವರು, ಜಾನಪದ ವೈಶಿಷ್ಟ್ಯಗಳಿಗೆ ಹೆಸರುವಾಸಿಯಾಗಿರುವ ತುಳುನಾಡಿನಲ್ಲಿ ಜುಲೈ-ಆಗಸ್ಟ್ ನಲ್ಲಿ ಆಟಿ ಕಳಂಜದ್ದೇ ಸುದ್ದಿ. ಮನೆ ಮನೆಯ ರೋಗ-ರುಜಿನಗಳನ್ನು ದೂರ ಮಾಡಲೆಂದೇ ಆಟಿ ಕಳಂಜ ಬರುವನೆಂಬ ನಮ್ಮ ಹಿರಿಯರ ನಂಬಿಕೆ ಯಾವುದೇ…

Read More

ಅಕ್ರಮವಾಗಿ ಕೆಂಪು ಕಲ್ಲು ಸಾಗಾಟ-ಲಾರಿ ವಶಕ್ಕೆ

ಮಂಗಳೂರು ದಕ್ಷಿಣ ಕನ್ನಡ: ಅಕ್ರಮವಾಗಿ ಕೆಂಪು ಕಲ್ಲನ್ನು ಸಾಗಾಟ ಮಾಡ್ತಿದ್ದ ಲಾರಿಯನ್ನು ವಶಪಡಿಸಿಕೊಂಡ ಘಟನೆ ಸುಳ್ಯ ಆಲೆಟ್ಟಿ ಗ್ರಾಮದ ನಾರ್ಕೊಡು ಎಂಬಲ್ಲಿ ನಿನ್ನೆ ನಡೆದಿದೆ. ಕಾನೂನು ಬಾಹಿರವಾಗಿ ಯಾವುದೇ ಪರವಾನಿಗೆ ಇಲ್ಲದೇ ಕೆಂಪು ಕಲ್ಲನ್ನು ಎಲ್ಲಿಂದಲೋ ಕದ್ದು ಸಾಗಾಟ ಮಾಡುತ್ತಿದ್ದಾಗ ಸುಳ್ಯ ಪೊಲೀಸರು ಪತ್ತೆ ಮಾಡಿ ಲಾರಿ ಹಾಗೂ ಚಾಲಕರನ್ನು ವಶಕ್ಕೆ ಪಡೆದು ಸುಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.

Read More

ಧಾರ್ಮಿಕ ಕೇಂದ್ರದ ಕಾಣಿಕೆ ಹುಂಡಿಯನ್ನು ಒಡೆದು ಹಣ ದೋಚಿದ ಪ್ರಕರಣ

ಮಂಗಳೂರು ದಕ್ಷಿಣ ಕನ್ನಡ: ಧಾರ್ಮಿಕ ಕೇಂದ್ರದ ಕಾಣಿಕೆ ಹುಂಡಿಯನ್ನು ಒಡೆದು ಹಣ ದೋಚಿದ ಪ್ರಕರಣಕ್ಕೆ ಸಂಬಂಧಿಸಿ ಮೂವರು ಯುವಕರನ್ನು ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ಪೊಲೀಸರು ಬಂಧಿಸಿದ್ದಾರೆ‌. ಬಂಧಿತರನ್ನು ತ್ವಾಹಿದ್‌ (19), ಉಮ್ಮರ್‌ ಫಾರೂಕ್‌ (18), ನಬೀಲ್‌( 18) ಎಂದು ಗುರುತಿಸಲಾಗಿದೆ. ಕನ್ಯಾನ ಗ್ರಾಮದ ದೇಲಂತಬೆಟ್ಟು ನಿವಾಸಿ ಡಿ.ನಾರಾಯಣ ರಾವ್ ನೀಡಿದ ದೂರಿನಂತೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ನಾರಾಯಣ ಅವರು ಅಧ್ಯಕ್ಷರಾಗಿದ್ದ ಧಾರ್ಮಿಕ ಶ್ರಧ್ದಾ ಕೇಂದ್ರಕ್ಕೆ ಸಂಬಂಧಿಸಿದ ಕಾಣಿಕೆ ಕಟ್ಟೆಯನ್ನು ಕನ್ಯಾನ ಗ್ರಾಮದ ದೇಲಂತ…

Read More
error: Content is protected !!