ತೂಗುಸೇತುವೆಗಳ ಸರದಾರ’ ಡಾ. ಗಿರೀಶ್ ಭಾರದ್ವಾಜ್ ನಿಧನ: ವಿಜಯೇಂದ್ರ ಸಂತಾಪ

ಬೆಂಗಳೂರು: ‘ತೂಗುಸೇತುವೆಗಳ ಸರದಾರ’ ಎಂದೇ ಖ್ಯಾತರಾಗಿದ್ದ ಪದ್ಮಶ್ರೀ ಪುರಸ್ಕೃತ ಡಾ. ಗಿರೀಶ್ ಭಾರದ್ವಾಜ್ ಅವರ ನಿಧನಕ್ಕೆ ಶಾಸಕ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಡಾ. ಗಿರೀಶ್ ಭಾರದ್ವಾಜ್ ಅವರ ನಿಧನದ ಸುದ್ದಿ ತಿಳಿದು ಅತೀವ ದುಃಖವಾಗಿದೆ. ತಮ್ಮ ಅಪಾರ ತಾಂತ್ರಿಕ ಜ್ಞಾನ ಮತ್ತು ಜನಪರ ಕಾಳಜಿಯಿಂದ ನೂರಾರು ತೂಗುಸೇತುವೆಗಳನ್ನು ನಿರ್ಮಿಸಿ, ಗ್ರಾಮೀಣ ಪ್ರದೇಶದ ಲಕ್ಷಾಂತರ ಜನರ ಬದುಕಿಗೆ ಆಸರೆಯಾಗಿದ್ದರು. ಅವರ ಸಾಧನೆ, ಸೇವಾ ಮನೋಭಾವ ಹಾಗೂ ಸರಳ ವ್ಯಕ್ತಿತ್ವ ಸದಾ…

Read More

ತೂಗುಸೇತುವೆಗಳ ಸರದಾರ’ ಪದ್ಮಶ್ರೀ ಡಾ. ಗಿರೀಶ್ ಭಾರದ್ವಾಜ್ ನಿಧನಕ್ಕೆ ಸಂಸದ ಕ್ಯಾ. ಚೌಟ ತೀವ್ರ ಸಂತಾಪ

ಮಂಗಳೂರು: ವಿಶಿಷ್ಟ ತಂತ್ರಜ್ಞಾನದ ಮೂಲಕ ಪರಿಸರ ಸ್ನೇಹಿ ತೂಗುಸೇತುವೆಗಳನ್ನು ನಿರ್ಮಿಸಿ ದೇಶದ ಗ್ರಾಮೀಣ ಭಾಗಗಳಲ್ಲಿ ಸಂಪರ್ಕ ಕ್ರಾಂತಿಗೆ ಕಾರಣರಾಗಿದ್ದ, ‘ತೂಗುಸೇತುವೆಗಳ ಸರದಾರ’ ಎಂದೇ ಖ್ಯಾತರಾಗಿದ್ದ ತುಳುನಾಡಿನ ಮಹಾನ್ ಸಾಧಕ, ಪದ್ಮಶ್ರೀ ಪುರಸ್ಕೃತ ಡಾ. ಗಿರೀಶ್ ಭಾರದ್ವಾಜ್ ಅವರ ನಿಧನಕ್ಕೆ ಬಿಜೆಪಿ ರಾಜ್ಯ ಕಾರ್ಯದರ್ಶಿ ಹಾಗೂ ದ. ಕ. ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ. ತಮ್ಮ ಶೋಕ ಸಂದೇಶದಲ್ಲಿ , “ಸಾಮಾನ್ಯ ಹಳ್ಳಿಗಳ ಜನಸಾಮಾನ್ಯರ ಹಾಗೂ ಶಾಲಾ ಮಕ್ಕಳ ಕಷ್ಟಗಳಿಗೆ ಸ್ಪಂದಿಸಿ, ತಮ್ಮ…

Read More

ಪದ್ಮಶ್ರೀ ಪುರಸ್ಕೃತ ‘ಬ್ರಿಡ್ಜ್‌ಮ್ಯಾನ್ ಆಫ್ ಇಂಡಿಯಾ’ ಡಾ. ಗಿರೀಶ್ ಭಾರದ್ವಾಜ್ ನಿಧನ …. !

ಸುಳ್ಯ: ಭಾರತದಾದ್ಯಂತ 125ಕ್ಕೂ ಹೆಚ್ಚು ತೂಗುಸೇತುವೆಗಳನ್ನು ನಿರ್ಮಿಸಿ ‘ಬ್ರಿಡ್ಜ್‌ಮ್ಯಾನ್ ಆಫ್ ಇಂಡಿಯಾ’ ಹಾಗೂ ‘ಸೇತುಬಂಧು’ ಎಂದೇ ಖ್ಯಾತಿ ಪಡೆದಿದ್ದ ಪದ್ಮಶ್ರೀ ಪುರಸ್ಕೃತ ಡಾ. ಗಿರೀಶ್ ಭಾರದ್ವಾಜ್ ಅವರು ಮಂಗಳವಾರ ಮುಂಜಾನೆ ಸುಳ್ಯದ ಕೆ.ವಿ.ಜಿ. ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 76 ವರ್ಷ ವಯಸ್ಸಾಗಿತ್ತು. ಹೃದಯ ಸಂಬಂಧಿ ಸಮಸ್ಯೆಯಿಂದಾಗಿ ಕಳೆದ ಕೆಲ ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದರು. 1989ರಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಅರಂಬೂರಿನಲ್ಲಿ ಪಯಸ್ವಿನಿ ನದಿಗೆ ಅಡ್ಡಲಾಗಿ ತಮ್ಮ ಮೊದಲ ತೂಗುಸೇತುವೆಯನ್ನು ನಿರ್ಮಿಸುವ…

Read More

ತುಳು ಕಥಾಸಂಕಲನ ‘ನಾಕೂರು’ ತೆಲುಗು ಅನುವಾದ ಕೃತಿ ಬಿಡುಗಡೆ

ಮಂಗಳೂರು: ಹಿರಿಯ ಕವಿ–ಸಾಹಿತಿ ಡಾ. ವಸಂತಕುಮಾರ ಪೆರ್ಲ ಅವರ ತುಳು ಭಾಷೆಯ ಹತ್ತು ಆಯ್ದ ಸಣ್ಣಕಥೆಗಳನ್ನು ಹೈದರಾಬಾದ್‌ನ ರಂಗನಾಥ ರಾವ್ ಅವರು ತೆಲುಗಿಗೆ ಅನುವಾದಿಸಿರುವ ‘ನಾಕೂರು’ ಕೃತಿಯನ್ನು ನಗರದ ಪತ್ರಿಕಾಭವನದಲ್ಲಿ ಇಂದು ಬಿಡುಗಡೆಗೊಳಿಸಲಾಯಿತು. ತುಳುನಾಡಿನ ಬದುಕು, ಸಂಸ್ಕೃತಿ, ಜಾನಪದ ಹಾಗೂ ಪ್ರಾದೇಶಿಕ ವೈಶಿಷ್ಟ್ಯಗಳನ್ನು ಪ್ರತಿಬಿಂಬಿಸುವ ಈ ಕಥೆಗಳು ಮೊದಲ ಬಾರಿಗೆ ತುಳುವಿನಿಂದ ತೆಲುಗಿಗೆ ಅನುವಾದಗೊಂಡು ಪುಸ್ತಕ ರೂಪದಲ್ಲಿ ಪ್ರಕಟವಾಗಿದ್ದು, ತೆಲುಗು ಓದುಗರಿಗೆ ತುಳುನಾಡಿನ ಜೀವನಶೈಲಿ ಮತ್ತು ಸಂಸ್ಕೃತಿಯನ್ನು ಪರಿಚಯಿಸುವ ಮಹತ್ವದ ಕೃತಿಯಾಗಿದೆ. ಕಾರ್ಯಕ್ರಮದಲ್ಲಿ ಖ್ಯಾತ ಲೇಖಕ ಡಾ….

Read More

ಜುಲೈ 12ರಂದು ಪುರಭವನದಲ್ಲಿ ಸಿತಾರ್ ವಾದನ–ಹಿಂದೂಸ್ತಾನಿ ಶಾಸ್ತ್ರೀಯ ಗಾಯನ

ಮಂಗಳೂರು:ಸಂಗೀತ ಭಾರತಿ ಪ್ರತಿಷ್ಠಾನ (ರಿ) ವತಿಯಿಂದ ಜುಲೈ 12, ಭಾನುವಾರ ಸಂಜೆ 5.30ಕ್ಕೆ ನಗರದ ಪುರಭವನದಲ್ಲಿ ಬ್ಯಾಂಕ್ ಆಫ್ ಮಹಾರಾಷ್ಟ್ರ ರಿಸ್ಟ್ರಿಮ್ ಸಹಯೋಗದಲ್ಲಿ ‘ಸಿತಾರ್ ವಾದನ ಮತ್ತು ಹಿಂದೂಸ್ತಾನಿ ಶಾಸ್ತ್ರೀಯ ಗಾಯನ’ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಉಪಾಧ್ಯಕ್ಷ ಪ್ರೊ. ನರೇಂದ್ರ ಎಲ್. ನಾಯಕ್ ತಿಳಿಸಿದರು. ಕಾರ್ಯಕ್ರಮದ ಮೊದಲ ಭಾಗದಲ್ಲಿ ಬೆಂಗಳೂರುದ ಸಂಜೀವ್ ಕೊರ್ತಿ ಅವರಿಂದ ಸಿತಾರ್ ವಾದನ, ಎರಡನೇ ಭಾಗದಲ್ಲಿ ಗೋವಾದ ಪಂ. ಶಶಾಂಕ್ ಮತ್ತೇದಾರ್ ಅವರಿಂದ ಹಿಂದೂಸ್ತಾನಿ ಶಾಸ್ತ್ರೀಯ ಗಾಯನ ನಡೆಯಲಿದೆ. ತಬ್ಲಾದಲ್ಲಿ ಮಯಾಂಕ್ ಬೆಡೆಕರ್…

Read More

ಭಾರೀ ಗಾಳಿ–ಮಳೆ: ಮಾಣಿ–ಮೈಸೂರು ರಸ್ತೆಗೆ ಮರ ಉರುಳಿ ಸಂಚಾರ ಅಸ್ತವ್ಯಸ್ತ

ಬಂಟ್ವಾಳ, ಜು. 7: ಮಂಗಳವಾರ ಬೆಳಿಗ್ಗೆ ಸುರಿದ ಭಾರೀ ಗಾಳಿ–ಮಳೆಯ ಪರಿಣಾಮ ಬಂಟ್ವಾಳ ತಾಲೂಕಿನ ಮಾಣಿ ಸಮೀಪ ಮಾಣಿ–ಮೈಸೂರು ರಸ್ತೆಗೆ ಬೃಹತ್ ಗಾತ್ರದ ಮರವೊಂದು ಉರುಳಿಬಿದ್ದ ಪರಿಣಾಮ ರಸ್ತೆ ಸಂಚಾರ ಕೆಲಕಾಲ ಸಂಪೂರ್ಣ ಅಸ್ತವ್ಯಸ್ತಗೊಂಡಿತು. ಮರ ರಸ್ತೆಗೆ ಅಡ್ಡಲಾಗಿ ಬಿದ್ದಿದ್ದರಿಂದ ವಾಹನಗಳ ಸಂಚಾರಕ್ಕೆ ತೀವ್ರ ಅಡಚಣೆ ಉಂಟಾಯಿತು. ಪರಿಣಾಮ ಶಾಲೆಗೆ ತೆರಳುತ್ತಿದ್ದ ವಿದ್ಯಾರ್ಥಿಗಳು, ಉದ್ಯೋಗಕ್ಕೆ ಹಾಗೂ ವಿವಿಧ ಕೆಲಸಗಳಿಗೆ ತೆರಳುತ್ತಿದ್ದ ಸಾರ್ವಜನಿಕರು ಸಾಕಷ್ಟು ತೊಂದರೆ ಅನುಭವಿಸಿದರು. ಸಂಚಾರ ಸ್ಥಗಿತಗೊಂಡ ಹಿನ್ನೆಲೆಯಲ್ಲಿ ವಾಹನಗಳನ್ನು ಕೊಡಾಜೆ ಗಡಿ–ಬೊಲ್ಲುಕಲ್ಲು ರಸ್ತೆಯ ಮೂಲಕ…

Read More

ಕೊಲ್ಲೂರು: ಮೂಕಾಂಬಿಕಾ ದೇವಸ್ಥಾನದಲ್ಲಿ ಭಕ್ತೆಯ ₹80 ಸಾವಿರ ಕಳವು: 24 ಗಂಟೆಯೊಳಗೆ ಮೂವರು ಅಂತರ್ ಜಿಲ್ಲಾ ಕಳ್ಳಿಯರ ಬಂಧನ

ಉಡುಪಿ: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದಲ್ಲಿ ಭಕ್ತೆಯೊಬ್ಬರ ವ್ಯಾನಿಟಿ ಬ್ಯಾಗ್‌ನಿಂದ ₹80 ಸಾವಿರ ಕಳವು ಮಾಡಿದ ಆರೋಪದಡಿ ಮೂವರು ಮಹಿಳೆಯರನ್ನು ಕೊಲ್ಲೂರು ಪೊಲೀಸರು ಪ್ರಕರಣ ದಾಖಲಾದ 24 ಗಂಟೆಯೊಳಗೆ ಬಂಧಿಸಿದ್ದಾರೆ. ಬಂಧಿತರನ್ನು ಶಿವಮೊಗ್ಗ ಜಿಲ್ಲೆಯ ಭದ್ರಾವತಿ ನಿವಾಸಿಗಳಾದ ನೇತ್ರಾವತಿ (33), ಶಾರದ (50) ಹಾಗೂ ದುರ್ಗಮ್ಮ (44) ಎಂದು ಗುರುತಿಸಲಾಗಿದೆ. ಪೊಲೀಸರ ಮಾಹಿತಿ ಪ್ರಕಾರ, ನಿಮಿಶಾ ಹಾಗೂ ಅವರ ಪತಿ ಪ್ರಜೋಶ್ ಅವರು ಜುಲೈ 5ರಂದು ದೇವಸ್ಥಾನದಲ್ಲಿ ದೇವರ ದರ್ಶನ ಮುಗಿಸಿ ಹೊರಾಂಗಣಕ್ಕೆ ಬಂದಾಗ, ರಾತ್ರಿ ಸುಮಾರು…

Read More

ಉಡುಪಿ ಪತ್ರಿಕಾ ಭವನ ಸಮಿತಿ: ಲೆಕ್ಕಾಚಾರ ಮಂಡನೆ, ನೂತನ ಸಮಿತಿಗೆ ಅಧಿಕಾರ ಹಸ್ತಾಂತರ

ಉಡುಪಿ: ಉಡುಪಿ ಪತ್ರಿಕಾ ಭವನ ಸಮಿತಿಯ ವಾರ್ಷಿಕ ಮಹಾಸಭೆ ಹಾಗೂ ನೂತನ ಸಮಿತಿಗೆ ಅಧಿಕಾರ ಹಸ್ತಾಂತರ ಕಾರ್ಯಕ್ರಮವು ಸಮಿತಿಯ ನಿಕಟಪೂರ್ವ ಸಂಚಾಲಕ ಅಜಿತ್ ಆರಾಡಿ ಅಧ್ಯಕ್ಷತೆಯಲ್ಲಿ ಸೋಮವಾರ ಪತ್ರಿಕಾ ಭವನದಲ್ಲಿ ನಡೆಯಿತು.ನಿಕಟಪೂರ್ವ ಸಂಚಾಲಕ ಅಜಿತ್ ಆರಾಡಿ ವರದಿ ವಾಚಿಸಿ, 2024-2025 ಹಾಗೂ 2025-2026 ನೇ ಸಾಲಿನ ಲೆಕ್ಕಪತ್ರವನ್ನು ಸಭೆಯ ಮುಂದಿಟ್ಟರು.ಲೆಕ್ಕಪರಿಶೋಧಕರಿಂದ ಪರಿಶೋಧನೆಗೆ ಒಳಪಟ್ಟಿರುವ ವರದಿಯನ್ನು ಸದಸ್ಯರು ಚಪ್ಪಾಳೆ ತಟ್ಟುವ ಮೂಲಕ ಅಂಗೀಕರಿಸಿದರು. ಲೆಕ್ಕಪತ್ರವನ್ನು ಅಂಗೀಕರಿಸಲಾಯಿತು. ಉಡುಪಿ ಪತ್ರಿಕಾ ಭವನದಲ್ಲಿ 2022 ರ ಅಕ್ಟೋಬರ್ 19 ರಂದು ಉಡುಪಿ…

Read More

ಸಂಜೀವಿನಿ ಒಕ್ಕೂಟದಲ್ಲಿ ₹23 ಲಕ್ಷ ವಂಚನೆ: ದಂಪತಿ ಬಂಧನ

ಉಡುಪಿ, ಜು. 7: ಹಿರಿಯಡಕ ಪೊಲೀಸ್ ಠಾಣೆ ವ್ಯಾಪ್ತಿಯ ಪೆರ್ಡೂರು ಪದ್ಮಕಮಲ ಸಂಜೀವಿನಿ ಗ್ರಾಮ ಪಂಚಾಯಿತಿ ಮಟ್ಟದ ಒಕ್ಕೂಟದಲ್ಲಿ ₹23 ಲಕ್ಷ ಹಣ ದುರ್ಬಳಕೆ ಹಾಗೂ ವಂಚನೆ ನಡೆಸಿದ ಆರೋಪದಡಿ ಇಬ್ಬರನ್ನು ಹಿರಿಯಡಕ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಒಕ್ಕೂಟದ ಮಾಜಿ ಮುಖ್ಯ ಪುಸ್ತಕ ಬರಹಗಾರ್ತಿ ಸುಗಂಧಿ ಹಾಗೂ ಅವರ ಪತಿ ಸಂತೋಷ ಎಂದು ಗುರುತಿಸಲಾಗಿದೆ. ಪೊಲೀಸರ ಮಾಹಿತಿ ಪ್ರಕಾರ, ಸುಗಂಧಿ ಅವರು 2023ರಿಂದ 2025ರ ಅವಧಿಯಲ್ಲಿ ಸದಸ್ಯರಿಂದ ಸಂಗ್ರಹಿಸಿದ ಸಾಲ ಮರುಪಾವತಿ ಹಣವನ್ನು ರಿಜಿಸ್ಟರ್‌ನಲ್ಲಿ ದಾಖಲಿಸಿದ್ದರೂ, ಅದನ್ನು…

Read More

ರಸ್ತೆ ಗುಂಡಿಗಳಲ್ಲಿ ಬಾಳೆ ಗಿಡ ನೆಟ್ಟು ಸಾರ್ವಜನಿಕರ ವಿನೂತನ ಪ್ರತಿಭಟನೆ

ಉಡುಪಿ, ಜು. 7: ರಸ್ತೆ ಸಂಪೂರ್ಣ ಹದಗೆಟ್ಟು ವಾಹನ ಸಂಚಾರ ದುಸ್ತರವಾಗಿರುವ ಹಿನ್ನೆಲೆಯಲ್ಲಿ ಹಲವು ಬಾರಿ ಪುರಸಭೆ ಹಾಗೂ ಜನಪ್ರತಿನಿಧಿಗಳಿಗೆ ಮನವಿ ಸಲ್ಲಿಸಿದರೂ ಯಾವುದೇ ಕ್ರಮ ಕೈಗೊಳ್ಳದ ಕಾರಣ ಸಾರ್ವಜನಿಕರು ರಸ್ತೆ ಮಧ್ಯದ ಗುಂಡಿಗಳಲ್ಲಿ ಬಾಳೆ ಗಿಡ ನೆಟ್ಟು ವಿನೂತನ ರೀತಿಯಲ್ಲಿ ಪ್ರತಿಭಟನೆ ನಡೆಸಿದ ಘಟನೆ ಕಾರ್ಕಳ ಪುರಸಭೆ ವ್ಯಾಪ್ತಿಯ ಕಲ್ಲೊಟ್ಟೆ–ಬಂಡಿಮಠ ರಸ್ತೆಯಲ್ಲಿ ನಡೆದಿದೆ. ಕಾರ್ಕಳ ಮಾರುಕಟ್ಟೆ ರಸ್ತೆಯಿಂದ ಪೆರ್ವಾಜೆ, ಕಲ್ಲೊಟ್ಟೆ ಮೂಲಕ ಬಂಡಿಮಠಕ್ಕೆ ಸಂಪರ್ಕ ಕಲ್ಪಿಸುವ ಈ ರಸ್ತೆ ತೀವ್ರ ಹದಗೆಟ್ಟಿದ್ದು, ವಾಹನಗಳಷ್ಟೇ ಅಲ್ಲದೆ ಪಾದಚಾರಿಗಳ…

Read More
error: Content is protected !!