ಉಡುಪಿ ಪತ್ರಿಕಾ ಭವನ ಸಮಿತಿ: ಲೆಕ್ಕಾಚಾರ ಮಂಡನೆ, ನೂತನ ಸಮಿತಿಗೆ ಅಧಿಕಾರ ಹಸ್ತಾಂತರ
ಉಡುಪಿ: ಉಡುಪಿ ಪತ್ರಿಕಾ ಭವನ ಸಮಿತಿಯ ವಾರ್ಷಿಕ ಮಹಾಸಭೆ ಹಾಗೂ ನೂತನ ಸಮಿತಿಗೆ ಅಧಿಕಾರ ಹಸ್ತಾಂತರ ಕಾರ್ಯಕ್ರಮವು ಸಮಿತಿಯ ನಿಕಟಪೂರ್ವ ಸಂಚಾಲಕ ಅಜಿತ್ ಆರಾಡಿ ಅಧ್ಯಕ್ಷತೆಯಲ್ಲಿ ಸೋಮವಾರ ಪತ್ರಿಕಾ ಭವನದಲ್ಲಿ ನಡೆಯಿತು.ನಿಕಟಪೂರ್ವ ಸಂಚಾಲಕ ಅಜಿತ್ ಆರಾಡಿ ವರದಿ ವಾಚಿಸಿ, 2024-2025 ಹಾಗೂ 2025-2026 ನೇ ಸಾಲಿನ ಲೆಕ್ಕಪತ್ರವನ್ನು ಸಭೆಯ ಮುಂದಿಟ್ಟರು.ಲೆಕ್ಕಪರಿಶೋಧಕರಿಂದ ಪರಿಶೋಧನೆಗೆ ಒಳಪಟ್ಟಿರುವ ವರದಿಯನ್ನು ಸದಸ್ಯರು ಚಪ್ಪಾಳೆ ತಟ್ಟುವ ಮೂಲಕ ಅಂಗೀಕರಿಸಿದರು. ಲೆಕ್ಕಪತ್ರವನ್ನು ಅಂಗೀಕರಿಸಲಾಯಿತು. ಉಡುಪಿ ಪತ್ರಿಕಾ ಭವನದಲ್ಲಿ 2022 ರ ಅಕ್ಟೋಬರ್ 19 ರಂದು ಉಡುಪಿ…
