ಸುಲ್ತಾನ್ ಬತ್ತೇರಿ: ಆಟೋರಿಕ್ಷಾ ನಿಲ್ದಾಣಕ್ಕೆ ಕುಡಿಯುವ ನೀರಿನ ಸೌಲಭ್ಯ
ಪಲ್ಗುಣಿ ನದಿ ತೀರದಲ್ಲಿರುವ ಇತಿಹಾಸ ಪ್ರಸಿದ್ಧ ಸುಲ್ತಾನ್ ಬತ್ತೇರಿ ಪ್ರದೇಶದ ಆಟೋರಿಕ್ಷಾ ನಿಲ್ದಾಣಕ್ಕೆ ನೇತ್ರಾವತಿ ಲೈನ್ಸ್ ವತಿಯಿಂದ ಕುಡಿಯುವ ನೀರಿನ ಸೌಲಭ್ಯ ಒದಗಿಸಲಾಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಜಿಲ್ಲಾ ರಾಜ್ಯಪಾಲ ಕುಡುಪಿ ಅರವಿಂದ ಶೆಣೈ ಅವರು, ಈ ಸೇವೆಯ ಮೂಲಕ ನದಿ ತೀರದಲ್ಲಿಯೂ ನೇತ್ರಾವತಿ ಮತ್ತು ಪಲ್ಗುಣಿಯ ಸಂಗಮದ ಸಾಂಕೇತಿಕ ಅರ್ಥವನ್ನು ನೆನಪಿಸಲಾಗಿದೆ ಎಂದು ಅಭಿಪ್ರಾಯಪಟ್ಟರು. ರಿಕ್ಷಾ ಚಾಲಕರು ಸಮಾಜಕ್ಕೆ ನೀಡುತ್ತಿರುವ ಸೇವೆ ಅನನ್ಯವಾದದ್ದು ಎಂದು ಅವರು ಹೇಳಿದರು. ನೇತ್ರಾವತಿ ಕ್ಲಬ್ ಅಧ್ಯಕ್ಷ ವಿನಯ ಶೆಟ್ಟಿ ಪ್ರಾಸ್ತಾವಿಕವಾಗಿ…