ಮೈಸೂರಿನ ವ್ಯಕ್ತಿಯೊಬ್ಬರನ್ನು ಮಂಗಳೂರಿನ ಮಂಗಳಮುಖಿಯರು ಅಪಹರಣಗೈದ ಪ್ರಕರಣಕ್ಕೆ ಸಂಬಂಧಿಸಿ ಕೂಲಂಕುಷ ತನಿಖೆ: ತಪ್ಪಿತಸ್ಥರಿಗೆ ಕಾನೂನಿನ ಪ್ರಕಾರ ಶಿಕ್ಷೆ
ಮಂಗಳೂರು: ಮೈಸೂರಿನ ವ್ಯಕ್ತಿಯೊಬ್ಬರನ್ನು ಮಂಗಳೂರಿನ ಮಂಗಳಮುಖಿಯರು ಅಪಹರಣಗೈದ ಪ್ರಕರಣಕ್ಕೆ ಸಂಬಂಧಿಸಿ ಕೂಲಂಕುಷ ತನಿಖೆ ನಡೆಸಿ, ತಪ್ಪಿತಸ್ಥರಿಗೆ ಕಾನೂನಿನ ಪ್ರಕಾರ ಶಿಕ್ಷೆ ವಿಧಿಸಬೇಕೆಂದು ನವಸಹಜ ಸಮುದಾಯ ಸಂಘಟನೆ ಆಗ್ರಹಿಸಿದೆ. ನಗರದ ಪತ್ರಿಕಾಭವನದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಂಘಟನೆಯ ಅಧ್ಯಕ್ಷೆ ನಿಖಿಲಾ, ಸಾಮಾಜಿಕ ಜಾಲತಾಣಗಳ ಮೂಲಕ ಪರಿಚಯವಾದ ಮೈಸೂರಿನ ವ್ಯಕ್ತಿಯನ್ನು ಮಂಗಳೂರಿನ ಕೆಲವರು ಅಪಹರಿಸಿದ್ದು, ಆತನಿಗೆ ಜಿಲ್ಲೆಯಲ್ಲಿ ಆಧಾರ್ ಕಾರ್ಡ್ ಹಾಗೂ ಟ್ರಾನ್ಸ್ಜೆಂಡರ್ ಗುರುತಿನ ಚೀಟಿಯನ್ನು ಮಹಿಳಾ ಅಭಿವೃದ್ಧಿ ನಿಗಮಕ್ಕೆ ಸುಳ್ಳು ದಾಖಲೆಗಳನ್ನು ನೀಡಿ ಮಾಡಿಸಿರುವುದು ಗಂಭೀರ ಅಪರಾಧವಾಗಿದೆ ಎಂದು…