ಬೋಳೂರು ಶ್ರೀ ಜಾರಂದಾಯ ದೈವಸ್ಥಾನ ಪರಿಸರದ ಒಳಚರಂಡಿ ಸಮಸ್ಯೆಗೆ ಶಾಶ್ವತ ಪರಿಹಾರ: ಕುಡ್ಸೆಂಪ್ಗೆ ಶಾಸಕ ವೇದವ್ಯಾಸ ಕಾಮತ್ ಮನವಿ
ಮಂಗಳೂರು, ಜು. 4: ನಗರದ ಬೋಳೂರಿನ ಶ್ರೀ ಜಾರಂದಾಯ ದೈವಸ್ಥಾನದ ಆಸುಪಾಸಿನ ಪ್ರದೇಶದಲ್ಲಿ ಹಲವು ದಶಕಗಳಿಂದ ಸ್ಥಳೀಯರನ್ನು ಕಾಡುತ್ತಿರುವ ಒಳಚರಂಡಿ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಶಾಸಕ ವೇದವ್ಯಾಸ ಕಾಮತ್ ಅವರು ಜಿಲ್ಲಾಧಿಕಾರಿ ದರ್ಶನ್ ಅವರ ಸಮ್ಮುಖದಲ್ಲಿ ಕುಡ್ಸೆಂಪ್ ವ್ಯವಸ್ಥಾಪಕ ನಿರ್ದೇಶಕ ಭೂಬಾಲನ್ ಟಿ. ಅವರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿದರು. ಸುಮಾರು 75 ವರ್ಷಗಳಿಂದ ಈ ಪ್ರದೇಶದಲ್ಲಿ ಸಮರ್ಪಕ ಡ್ರೈನೇಜ್ ವ್ಯವಸ್ಥೆ ಇಲ್ಲದಿರುವುದು ಸ್ಥಳೀಯರ ಪ್ರಮುಖ ಸಮಸ್ಯೆಯಾಗಿದ್ದು, ಈ ಹಿಂದೆ ಕುಡ್ಸೆಂಪ್ ವತಿಯಿಂದ ಅಗತ್ಯ…
